ಕರ್ನಾಟಕ

karnataka

ETV Bharat / snippets

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ: ವರದಕ್ಷಿಣೆ ಕಿರುಕುಳ ಆರೋಪ

By ETV Bharat Karnataka Team

Published : Jul 5, 2024, 11:24 AM IST

ಪೂಜಾ
ಪೂಜಾ (ETV Bharat)

ಬೆಂಗಳೂರು: ಗೃಹಿಣಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೂಜಾ (22) ಮೃತರು. ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ದೊರೆತಿದೆ. ಪತಿ ಸುನೀಲ್, ಮೈದುನ ಅನಿಲ್ ವಿರುದ್ಧ ಮೃತಳ ಪೋಷಕರು ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ.

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಮೂಲದ ಪೂಜಾಗೆ 2022ರಲ್ಲಿ ಸುನೀಲ್ ಜೊತೆ ವಿವಾಹವಾಗಿತ್ತು. ದಂಪತಿಗಳು ಬೆಂಗಳೂರಿನ ಗಂಗಮ್ಮನಗುಡಿ ಮುಖ್ಯರಸ್ತೆಯಲ್ಲಿ ವಾಸವಿದ್ದರು. ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಪೂಜಾ ಗುರುವಾರ ಮನೆಯಲ್ಲಿ ಯಾರೂ ಇರದಿದ್ದಾಗ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರಲ್ಲಿ 3 ವರ್ಷದ ಬಾಲಕಿ ಮೇಲೆ ನರ್ಸರಿ ಶಿಕ್ಷಕಿಯಿಂದ ಲೈಂಗಿಕ ದೌರ್ಜನ್ಯ - Sexual Assault On 3 Year Old Girl

ABOUT THE AUTHOR

...view details