ETV Bharat / assembly-elections

ರಾಷ್ಟ್ರ ವಿರೋಧಿ ಶಕ್ತಿಗಳೊಂದಿಗೆ ಕಾಂಗ್ರೆಸ್ ನಂಟು: ಸುಧಾಂಶು ದ್ವಿವೇದಿ ಆರೋಪ - ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ದ್ವಿವೇದಿ

ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ದ್ವಿವೇದಿ ಅವರು ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು.

Sudhanshu Dwivedi
ಸುಧಾಂಶು ದ್ವಿವೇದಿ
author img

By

Published : Apr 15, 2023, 4:20 PM IST

ಬೆಂಗಳೂರು: ನಿಷೇಧಿತ ಪಿಎಫ್‍ಐ ಮತ್ತು ಎಸ್‍ಡಿಪಿಐ ನಂತಹ ಶಕ್ತಿಗಳೊಂದಿಗೆ ತಾವು ಹೊಂದಿರುವ ಸಂಬಂಧವೇನು ಎಂಬುದನ್ನು ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಸ್ಪಷ್ಟಪಡಿಸಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ದ್ವಿವೇದಿ ಆಗ್ರಹಿಸಿದರು.

ಬೆಂಗಳೂರಿನ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರ ಸಾಕ್ಷ್ಯಾಧಾರ ಕೊರತೆ ಇದೆ ಎಂದು ಹೇಳಿ ಪಿಎಫ್‍ಐ, ಎಸ್‍ಡಿಪಿಐ ಕಾರ್ಯಕರ್ತರ ಮೇಲಿನ 1,700 ಪ್ರಕರಣಗಳನ್ನು ಹಿಂತೆಗೆದುಕೊಂಡಿತ್ತು. ಇದು ಆ ಸಂಘಟನೆಗಳ ಮೇಲೆ ಕಾಂಗ್ರೆಸ್​ಗೆ ಇರುವ ಪ್ರೀತಿ ಮತ್ತು ಸಂಬಂಧವನ್ನು ತೋರುತ್ತದೆ. ತಮ್ಮ ಅಭ್ಯರ್ಥಿಗಳನ್ನು ಚುನಾವಣಾ ಕಣದಿಂದ ಹಿಂತೆಗೆದುಕೊಳ್ಳುವಂತೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂದು ಎಸ್‍ಡಿಪಿಐ ಅಧ್ಯಕ್ಷ ಹೇಳಿದ್ದಾರೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್‍ನೊಂದಿಗೆ ಸಂಬಂಧವಿತ್ತು ಎಂದು ಎಸ್‍ಡಿಪಿಐನ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ. ಕಾಂಗ್ರೆಸ್, ಇಂತಹ ಶಕ್ತಿಗಳೊಂದಿಗೆ ಹೊಂದಿರುವ ಸಂಬಂಧ ರಾಷ್ಟ್ರೀಯವಾಗಿ ಅಂತಾರಾಷ್ಟ್ರೀಯವಾಗಿ ಪರಿಣಾಮ ಬೀರಲಿದೆ ಎಂದು ಹೇಳಿದರು.

ಕಾಂಗ್ರೆಸ್​ನಿಂದ ಹಂಪಿ ಉತ್ಸವದ ಬಗ್ಗೆ ನಿರ್ಲಕ್ಷ್ಯ: ರಾಜ್ಯದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರ ಹಂಪಿ ಉತ್ಸವ ನಿರ್ಲಕ್ಷಿಸಿ, ಟಿಪ್ಪು ಜಯಂತಿ ಆಚರಣೆಗೆ ಆಸಕ್ತಿ ತೋರಿತು. 2019ರಲ್ಲಿ ಅಂದಿನ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸಹ ಟಿಪ್ಪುಗೆ ಗೌರವ ನಮನ ಸಲ್ಲಿಸಿದ್ದರು. ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಗಳಿಗೆ ಪಿಎಫ್‍ಐ, ಎಸ್‍ಡಿಪಿಐ ಸಂಘಟನೆಗಳು ಕುಮ್ಮಕ್ಕು ನೀಡಿದ್ದವು. ಹಿಜಾಬ್ ವಿವಾದವನ್ನು ಸಹ ಇದೇ ಸಂಘಟನೆಗಳು ಹುಟ್ಟು ಹಾಕಿದ್ದವು ಎಂದು ಆರೋಪಿಸಿದರು.

ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳೂರು ಸ್ಫೋಟ ಪ್ರಕರಣವನ್ನು ಹೇಗೆ ಭಯೋತ್ಪಾದಕ ಕೃತ್ಯ ಎನ್ನಲಾಗುತ್ತದೆ. ಈ ಪ್ರಕರಣದ ಆರೋಪಿ ಅಮಾಯಕ ಎಂದು ಹೇಳಿದ್ದರು. ಇದು ಆ ಸಂಘಟನೆಯ ಮೇಲೆ ಡಿ.ಕೆ. ಶಿವಕಕುಮಾರ್​ಗೆ ಇರುವ ಪ್ರೀತಿಯನ್ನು ತೋರುತ್ತದೆ. ಈ ಚುನಾವಣೆಯಲ್ಲಿ ರಾಷ್ಟ್ರ ವಿರೋಧಿಗಳು ಮತ್ತು ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವ ಪಕ್ಷಗಳಿಗೆ ಮತದಾರರು ತಕ್ಕ ಉತ್ತರವನ್ನು ನೀಡಲಿದ್ದು, ಶಾಂತಿ ಮತ್ತು ಪ್ರಗತಿಯೊಂದಿಗೆ ರಾಜ್ಯವನ್ನು ಕೊಂಡೊಯ್ಯುವ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದರು.

ಕಾಂಗ್ರೆಸ್ ರಾಷ್ಟ್ರ ವಿರೋಧಿ ಚಟುವಟಿಕೆ ಬೆಂಬಲಿಸುತ್ತೆ-ಭಾಸ್ಕರ್ ರಾವ್: ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ಮಾತನಾಡಿ, ಕಾಂಗ್ರೆಸ್ ಪಕ್ಷ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಬೆಂಬಲಿಸುತ್ತಿದೆ. ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಸಿಮಿಯನ್ನು ನಿಷೇಧಿಸಿದ ನಂತರ 2016ರಲ್ಲಿ ಅದೇ ಸಂಘಟನೆಯ ಮುಂದಿನ ಭಾಗವಾಗಿ ಪಿಎಫ್‍ಐ ಹುಟ್ಟಿಕೊಂಡಿತು. ಪಿಎಫ್‍ಐಯನ್ನು ನಿಷೇಧಿಸಿದ ನಂತರ ಅದರ ಚಟುವಟಿಕೆಗಳು ಎಸ್‍ಡಿಪಿಐ ಮೂಲಕ ನಡೆಯುತ್ತಿವೆ'' ಎಂದರು.

ಕಾಲದಿಂದ ಕಾಲಕ್ಕೆ ಒಂದೇ ಉದ್ದೇಶದ ಶಕ್ತಿ ಬೇರೆ, ಬೇರೆ ರೂಪ ಪಡೆಯುತ್ತಿದೆ. ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳ ಹೆಸರಿನಲ್ಲಿ ಎಸ್‍ಡಿಪಿಐನಂತಹ ಸಂಘಟನೆಗಳು ಮಧ್ಯ ಏಷ್ಯಾ ದೇಶಗಳಿಂದ ಅಪಾರ ಮೊತ್ತದ ದೇಣಿಗೆ ಪಡೆಯುತ್ತಿವೆ. ಈ ಹಣವನ್ನು ಕೇರಳದ ಮೂಲಕ ಇಡೀ ದೇಶಕ್ಕೆ ರಾಷ್ಟ್ರ ವಿರೋಧಿ, ಭಯೋತ್ಪಾದನೆ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಪಿಎಫ್‍ಐ ಮೇಲೆ 19 ಕೊಲೆ ಪ್ರಕರಣಗಳು ದೃಢ: ಕೆಲವೇ ಬಡವರ ಖಾತೆಗಳಲ್ಲಿ ವಿದೇಶಿ ಹಣವನ್ನು ತುಂಬಲಾಗುತ್ತಿದೆ. ಅವರಿಗೆ ಸುಳ್ಳು ಆಶ್ವಾಸನೆ ನೀಡಿ ಮೂಲಭೂತವಾದ ಬಿತ್ತಲಾಗುತ್ತಿದೆ. ಬಾಂಗ್ಲಾದೇಶದಿಂದಲೂ ಜನರನ್ನು ಕರೆ ತಂದು ಆಶ್ರಯ ನೀಡಿ, ತಮ್ಮ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಭಯೋತ್ಪಾದನೆಗೆ ಹಣಕಾಸು ನೆರವು ಗಂಭೀರ ವಿಷಯವಾಗಿದೆ. ಎಸ್‍ಡಿಪಿಎಐ ನಂತಹ ಸಂಘಟನೆಗಳು ಇತರ ಅಂಗ ಸಂಸ್ಥೆಗಳ ಮೂಲಕವೂ ಹಲವು ಮಾರ್ಗಗಳಿಂದ ವಿದೇಶಗಳಿಂದ ಹಣ ಪಡೆಯುತ್ತಿವೆ. ಪಿಎಫ್‍ಐ ಮೇಲೆ 19 ಕೊಲೆ ಪ್ರಕರಣಗಳು ಧೃಡಪಟ್ಟಿದ್ದು, ಇದರ 160ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಹಾಗೆಯೇ ಈ ಸಂಘಟನೆಯ ನೂರಾರು ಸದಸ್ಯರ ಮೇಲೆ ಕೊಲೆ ಯತ್ನ ಪ್ರಕರಣಗಳಿವೆ ಎಂದು ಭಾಸ್ಕರ್​ ರಾವ್​ ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ ಮೂರನೇ ಪಟ್ಟಿ ರಿಲೀಸ್​: ಲಕ್ಷ್ಮಣ್​ ಸವದಿಗೆ ಟಿಕೆಟ್​.. ಸಿದ್ದರಾಮಯ್ಯಗೆ ಕೋಲಾರ ಮಿಸ್​

ಬೆಂಗಳೂರು: ನಿಷೇಧಿತ ಪಿಎಫ್‍ಐ ಮತ್ತು ಎಸ್‍ಡಿಪಿಐ ನಂತಹ ಶಕ್ತಿಗಳೊಂದಿಗೆ ತಾವು ಹೊಂದಿರುವ ಸಂಬಂಧವೇನು ಎಂಬುದನ್ನು ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಸ್ಪಷ್ಟಪಡಿಸಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ದ್ವಿವೇದಿ ಆಗ್ರಹಿಸಿದರು.

ಬೆಂಗಳೂರಿನ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರ ಸಾಕ್ಷ್ಯಾಧಾರ ಕೊರತೆ ಇದೆ ಎಂದು ಹೇಳಿ ಪಿಎಫ್‍ಐ, ಎಸ್‍ಡಿಪಿಐ ಕಾರ್ಯಕರ್ತರ ಮೇಲಿನ 1,700 ಪ್ರಕರಣಗಳನ್ನು ಹಿಂತೆಗೆದುಕೊಂಡಿತ್ತು. ಇದು ಆ ಸಂಘಟನೆಗಳ ಮೇಲೆ ಕಾಂಗ್ರೆಸ್​ಗೆ ಇರುವ ಪ್ರೀತಿ ಮತ್ತು ಸಂಬಂಧವನ್ನು ತೋರುತ್ತದೆ. ತಮ್ಮ ಅಭ್ಯರ್ಥಿಗಳನ್ನು ಚುನಾವಣಾ ಕಣದಿಂದ ಹಿಂತೆಗೆದುಕೊಳ್ಳುವಂತೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂದು ಎಸ್‍ಡಿಪಿಐ ಅಧ್ಯಕ್ಷ ಹೇಳಿದ್ದಾರೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್‍ನೊಂದಿಗೆ ಸಂಬಂಧವಿತ್ತು ಎಂದು ಎಸ್‍ಡಿಪಿಐನ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ. ಕಾಂಗ್ರೆಸ್, ಇಂತಹ ಶಕ್ತಿಗಳೊಂದಿಗೆ ಹೊಂದಿರುವ ಸಂಬಂಧ ರಾಷ್ಟ್ರೀಯವಾಗಿ ಅಂತಾರಾಷ್ಟ್ರೀಯವಾಗಿ ಪರಿಣಾಮ ಬೀರಲಿದೆ ಎಂದು ಹೇಳಿದರು.

ಕಾಂಗ್ರೆಸ್​ನಿಂದ ಹಂಪಿ ಉತ್ಸವದ ಬಗ್ಗೆ ನಿರ್ಲಕ್ಷ್ಯ: ರಾಜ್ಯದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರ ಹಂಪಿ ಉತ್ಸವ ನಿರ್ಲಕ್ಷಿಸಿ, ಟಿಪ್ಪು ಜಯಂತಿ ಆಚರಣೆಗೆ ಆಸಕ್ತಿ ತೋರಿತು. 2019ರಲ್ಲಿ ಅಂದಿನ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸಹ ಟಿಪ್ಪುಗೆ ಗೌರವ ನಮನ ಸಲ್ಲಿಸಿದ್ದರು. ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಗಳಿಗೆ ಪಿಎಫ್‍ಐ, ಎಸ್‍ಡಿಪಿಐ ಸಂಘಟನೆಗಳು ಕುಮ್ಮಕ್ಕು ನೀಡಿದ್ದವು. ಹಿಜಾಬ್ ವಿವಾದವನ್ನು ಸಹ ಇದೇ ಸಂಘಟನೆಗಳು ಹುಟ್ಟು ಹಾಕಿದ್ದವು ಎಂದು ಆರೋಪಿಸಿದರು.

ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳೂರು ಸ್ಫೋಟ ಪ್ರಕರಣವನ್ನು ಹೇಗೆ ಭಯೋತ್ಪಾದಕ ಕೃತ್ಯ ಎನ್ನಲಾಗುತ್ತದೆ. ಈ ಪ್ರಕರಣದ ಆರೋಪಿ ಅಮಾಯಕ ಎಂದು ಹೇಳಿದ್ದರು. ಇದು ಆ ಸಂಘಟನೆಯ ಮೇಲೆ ಡಿ.ಕೆ. ಶಿವಕಕುಮಾರ್​ಗೆ ಇರುವ ಪ್ರೀತಿಯನ್ನು ತೋರುತ್ತದೆ. ಈ ಚುನಾವಣೆಯಲ್ಲಿ ರಾಷ್ಟ್ರ ವಿರೋಧಿಗಳು ಮತ್ತು ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವ ಪಕ್ಷಗಳಿಗೆ ಮತದಾರರು ತಕ್ಕ ಉತ್ತರವನ್ನು ನೀಡಲಿದ್ದು, ಶಾಂತಿ ಮತ್ತು ಪ್ರಗತಿಯೊಂದಿಗೆ ರಾಜ್ಯವನ್ನು ಕೊಂಡೊಯ್ಯುವ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದರು.

ಕಾಂಗ್ರೆಸ್ ರಾಷ್ಟ್ರ ವಿರೋಧಿ ಚಟುವಟಿಕೆ ಬೆಂಬಲಿಸುತ್ತೆ-ಭಾಸ್ಕರ್ ರಾವ್: ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ಮಾತನಾಡಿ, ಕಾಂಗ್ರೆಸ್ ಪಕ್ಷ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಬೆಂಬಲಿಸುತ್ತಿದೆ. ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಸಿಮಿಯನ್ನು ನಿಷೇಧಿಸಿದ ನಂತರ 2016ರಲ್ಲಿ ಅದೇ ಸಂಘಟನೆಯ ಮುಂದಿನ ಭಾಗವಾಗಿ ಪಿಎಫ್‍ಐ ಹುಟ್ಟಿಕೊಂಡಿತು. ಪಿಎಫ್‍ಐಯನ್ನು ನಿಷೇಧಿಸಿದ ನಂತರ ಅದರ ಚಟುವಟಿಕೆಗಳು ಎಸ್‍ಡಿಪಿಐ ಮೂಲಕ ನಡೆಯುತ್ತಿವೆ'' ಎಂದರು.

ಕಾಲದಿಂದ ಕಾಲಕ್ಕೆ ಒಂದೇ ಉದ್ದೇಶದ ಶಕ್ತಿ ಬೇರೆ, ಬೇರೆ ರೂಪ ಪಡೆಯುತ್ತಿದೆ. ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳ ಹೆಸರಿನಲ್ಲಿ ಎಸ್‍ಡಿಪಿಐನಂತಹ ಸಂಘಟನೆಗಳು ಮಧ್ಯ ಏಷ್ಯಾ ದೇಶಗಳಿಂದ ಅಪಾರ ಮೊತ್ತದ ದೇಣಿಗೆ ಪಡೆಯುತ್ತಿವೆ. ಈ ಹಣವನ್ನು ಕೇರಳದ ಮೂಲಕ ಇಡೀ ದೇಶಕ್ಕೆ ರಾಷ್ಟ್ರ ವಿರೋಧಿ, ಭಯೋತ್ಪಾದನೆ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಪಿಎಫ್‍ಐ ಮೇಲೆ 19 ಕೊಲೆ ಪ್ರಕರಣಗಳು ದೃಢ: ಕೆಲವೇ ಬಡವರ ಖಾತೆಗಳಲ್ಲಿ ವಿದೇಶಿ ಹಣವನ್ನು ತುಂಬಲಾಗುತ್ತಿದೆ. ಅವರಿಗೆ ಸುಳ್ಳು ಆಶ್ವಾಸನೆ ನೀಡಿ ಮೂಲಭೂತವಾದ ಬಿತ್ತಲಾಗುತ್ತಿದೆ. ಬಾಂಗ್ಲಾದೇಶದಿಂದಲೂ ಜನರನ್ನು ಕರೆ ತಂದು ಆಶ್ರಯ ನೀಡಿ, ತಮ್ಮ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಭಯೋತ್ಪಾದನೆಗೆ ಹಣಕಾಸು ನೆರವು ಗಂಭೀರ ವಿಷಯವಾಗಿದೆ. ಎಸ್‍ಡಿಪಿಎಐ ನಂತಹ ಸಂಘಟನೆಗಳು ಇತರ ಅಂಗ ಸಂಸ್ಥೆಗಳ ಮೂಲಕವೂ ಹಲವು ಮಾರ್ಗಗಳಿಂದ ವಿದೇಶಗಳಿಂದ ಹಣ ಪಡೆಯುತ್ತಿವೆ. ಪಿಎಫ್‍ಐ ಮೇಲೆ 19 ಕೊಲೆ ಪ್ರಕರಣಗಳು ಧೃಡಪಟ್ಟಿದ್ದು, ಇದರ 160ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಹಾಗೆಯೇ ಈ ಸಂಘಟನೆಯ ನೂರಾರು ಸದಸ್ಯರ ಮೇಲೆ ಕೊಲೆ ಯತ್ನ ಪ್ರಕರಣಗಳಿವೆ ಎಂದು ಭಾಸ್ಕರ್​ ರಾವ್​ ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ ಮೂರನೇ ಪಟ್ಟಿ ರಿಲೀಸ್​: ಲಕ್ಷ್ಮಣ್​ ಸವದಿಗೆ ಟಿಕೆಟ್​.. ಸಿದ್ದರಾಮಯ್ಯಗೆ ಕೋಲಾರ ಮಿಸ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.