ETV Bharat / assembly-elections

ಮಾಗಡಿ ವಿಧಾನಸಭಾ ಮತಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಸಂಭವ: ಪಕ್ಷಗಳ ಬಲಾಬಲ ಹೀಗಿದೆ..

author img

By

Published : Apr 14, 2023, 6:45 PM IST

ಮಾಗಡಿ ವಿಧಾನಸಭಾ ಮತಕ್ಷೇತ್ರದಲ್ಲಿ ಚುನಾವಣೆ ಕಾವೇರತೊಡಗಿದೆ. ಇಲ್ಲಿ ಪಕ್ಷ ಹಾಗೂ ಅಭ್ಯರ್ಥಿಗಳ ಬಲಾಬಲ ಒಂದೇ ಆಗಿದ್ದು ಕ್ಷೇತ್ರದಲ್ಲಿ ಹೆಚ್ಚೂ ಕಡಿಮೆ ತ್ರಿಕೋನ ಸ್ಪರ್ಧೆ ಖಚಿತ ಎನ್ನುತ್ತಿದ್ದಾರೆ ಇಲ್ಲಿನ ರಾಜಕೀಯ ಚಿಂತಕರು.

2023 Karnataka Legislative Assembly election
2023 Karnataka Legislative Assembly election

ರಾಮನಗರ: ಮಾಗಡಿ ತಾಲೂಕು ನಾಡಪ್ರಭು ಕೆಂಪೇಗೌಡರು ಹುಟ್ಟಿದ ಐತಿಹಾಸಿಕ ಸ್ಥಳ ಒಳಗೊಂಡಿರುವ ವಿಧಾನಸಭಾ ಮತಕ್ಷೇತ್ರ. ಬೆಂಗಳೂರಿನಿಂದ ಕೂಗಳತೆ ದೂರದಲ್ಲಿದೆ. ಜೆಡಿಎಸ್​ ಭದ್ರಕೋಟೆಯೂ ಹೌದು. ಕಾಂಗ್ರೆಸ್​ ಮತ್ತು ಬಿಜೆಪಿ ಈ ಸೀಟಿಗಾಗಿ ಪೈಪೋಟಿ ನಡೆಸುತ್ತಿವೆ. ಸದ್ಯ ಮಾಗಡಿ ವಿಧಾನಸಭಾ ಮತಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು ಪ್ರತಿಷ್ಠಿತ ರಾಜಕೀಯ ಕಣವಾಗಿದೆ.

ಕೇಂಪೇಗೌಡ ನಗರಿ ಎಂದೇ ಖ್ಯಾತಿ ಗಳಿಸಿರುವ ಮಾಗಡಿ ಕಳೆದ ಹಲವು ವರ್ಷಗಳಿಂದ ಜೆಡಿಎಸ್​ನ ಭದ್ರಕೋಟೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರ ತನ್ನದೇ ರಾಜಕೀಯ ಇತಿಹಾಸವನ್ನೂ ಹೊಂದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಬದಲಾದ ರಾಜಕೀಯ ಸನ್ನಿವೇಶದಿಂದ ಜೆಡಿಎಸ್​ನಲ್ಲಿದ್ದ ಶಾಸಕರಾಗಿದ್ದ ಬಾಲಕೃಷ್ಣ ಜೆಡಿಎಸ್ ತೊರೆದು ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಎ.‌ಮಂಜುನಾಥ್ ಜೆಡಿಎಸ್​ನಿಂದ ಸ್ಪರ್ಧೆ ಮಾಡಿ ದಾಖಲೆಯ 50 ಸಾವಿರಕ್ಕೂ ಮತಗಳ ಅಂತರದಿಂದ ಬಾಲಕೃಷ್ಣ ವಿರುದ್ಧ ಗೆಲುವು ಸಾಧಿಸಿದ್ದರು. ತಾಲೂಕಿನಲ್ಲಿ ಬಿಜೆಪಿಯ ಸಾವಿರಾರು ಮತಗಳಿದ್ದರೂ ಕೂಡ ಸೂಕ್ತ ಅಭ್ಯರ್ಥಿಯಿಲ್ಲದ ಕಾರಣ ಈ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ಕುಸಿಯಬೇಕಾಯಿತು.

2023 Karnataka Legislative Assembly election
ಬಿಜೆಪಿ ಅಭ್ಯರ್ಥಿ ಪ್ರಸಾದ್ ಗೌಡ

ಜೆಡಿಎಸ್-ಕಾಂಗ್ರೆಸ್ ನಡುವೆ ಬಿಜೆಪಿ ಪಾಲು: ಸಚಿವ ಅಶ್ವತ್ಥನಾರಾಯಣ ಅವರಿಗೆ ಪ್ರತಿಷ್ಠೆಯ ಕಣವಾಗಿದ್ದರಿಂದ ಕ್ಷೇತ್ರದ ಗೆಲುವು ಬಿಜೆಪಿಗೆ ಅನಿವಾರ್ಯ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮಾಗಡಿ ಕ್ಷೇತ್ರಕ್ಕೆ ವಿಶೇಷ ಅನುದಾನ ತರುವ ಮೂಲಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಆದರೂ ಅಭಿವೃದ್ಧಿ ವಿಚಾರದಲ್ಲಿ ಅಪಸ್ವರ ಕೇಳಿ ಬರುತ್ತದೆ. ಕಳೆದ ಹಲವು ವರ್ಷಗಳಿಂದ ಜೆಡಿಎಸ್-ಕಾಂಗ್ರೆಸ್ ನಡುವೆ ನೇರಾನೇರ ಹಣಾಹಣಿ ನಡೆಯುತ್ತಿತ್ತು. ಆದರೆ, 2023ರ ಚುನಾವಣೆಯನ್ನು ಗಮನಿಸಿದರೆ ಬಿಜೆಪಿ ಕೂಡ ಸ್ಪರ್ಧೆಯೊಡ್ಡಬಲ್ಲ ಸ್ಥಾನದಲ್ಲಿದೆ. ಬಿಜೆಪಿ ಅಭ್ಯರ್ಥಿಯ ಪ್ರಭಾವಕ್ಕಿಂತ ಅಶ್ವತ್ಥನಾರಾಯಣ ಪ್ರಭಾವವೇ ಕ್ಷೇತ್ರದಲ್ಲಿ ಹೆಚ್ಚು ಎಂದು ಹೇಳಲಾಗುತ್ತಿದೆ.

Details of Magadi Assembly Constituency
ಜೆಡಿಎಸ್ ಅಭ್ಯರ್ಥಿ ಎ ಮಂಜುನಾಥ್

ಪಕ್ಷಗಳ ಬಲಾಬಲ: ಈ ಮೊದಲು ಹೇಳಿದಂತೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದೆ. ಪಕ್ಷಗಳು ಈಗಾಗಲೇ ತಮ್ಮ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಅವರು ಪ್ರಚಾರ ಕೂಡ ಆರಂಭಿಸಿದ್ದಾರೆ. ಜೆಡಿಎಸ್​ನಿಂದ ಹಾಲಿ ಶಾಸಕ ಎ.ಮಂಜುನಾಥ್ ಕಣಕ್ಕಿಳಿಯುವ ಮೂಲಕ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕಾಂಗ್ರೆಸ್​ ಪಕ್ಷದಿಂದ ಹೆಚ್.ಸಿ.ಬಾಲಕೃಷ್ಣ ಅವರಿಗೆ ಮಣೆ ಹಾಕಿದೆ. ಬಿಜೆಪಿ ಪಕ್ಷ ಪ್ರಸಾದ್‌ ಗೌಡ ಅವರಿಗೆ ಟಿಕೆಟ್ ಘೊಷಣೆ ಮಾಡಿದೆ. ರವಿಕಿರಣ್ ಎಂ.ಎನ್ ಎನ್ನುವವರು ಆಪ್​ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಪಕ್ಷ ಹಾಗೂ ಅಭ್ಯರ್ಥಿಗಳ ಬಲಬಲ ಒಂದೇ ಆಗಿದ್ದರಿಂದ ಕ್ಷೇತ್ರದಲ್ಲಿ ಈ ಬಾರಿ ಹೆಚ್ಚು ಕಡಿಮೆ ತ್ರಿಕೋನ ಸ್ಪರ್ಧೆ ಖಚಿತ ಅಂತಿದಾರೆ ಇಲ್ಲಿನ ರಾಜಕೀಯ ಚಿಂತಕರು.

Details of Magadi Assembly Constituency
ಕಾಂಗ್ರೆಸ್​ ಅಭ್ಯರ್ಥಿ ಹೆಚ್ ಸಿ ಬಾಲಕೃಷ್ಣ

ಹಾಲಿ ಶಾಸಕ ಎ.‌ಮಂಜುನಾಥ್ ಶಾಸಕರಾದ ನಂತರ ಕ್ಷೇತ್ರದಲ್ಲಿ ಸಂಚರಿಸಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರಿಗೆ ಕುಮಾರಸ್ವಾಮಿಯ ಹೆಸರೇ ಶ್ರೀರಕ್ಷೆ. ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿರುವ ಮಾಜಿ ಶಾಸಕ ಬಾಲಕೃಷ್ಣಗೆ ಈ ಬಾರಿ ಶತಾಯಗತಾಯ ಗೆಲ್ಲಲ್ಲೇಬೇಕಾದ ಅನಿವಾರ್ಯತೆಯಿದೆ. ಕಳೆದ ಬಾರಿ ಚುನಾವಣೆಯಲ್ಲಿ ಸೋತ ನಂತರ ಕೊರೊನಾ ಸಮಯದಲ್ಲಿ ಜನರಿಗೆ ಹತ್ತಿರವಾಗಿದ್ದು ಗೆಲ್ಲಲು ಸಾಕಷ್ಟು ರಣತಂತ್ರಗಳನ್ನು ರೂಪಿಸಿಕೊಂಡಿದ್ದಾರೆ. ಪ್ರಾಬಲ್ಯ ಸಾಧಿಸುವಲ್ಲಿ ಹಿಂದೆ ಬೀಳದ ಬಿಜೆಪಿ ಕೂಡ ಗೆಲ್ಲುವ ಉತ್ಸಾಹದಲ್ಲಿದೆ. ಬಿಜೆಪಿ ಅಭ್ಯರ್ಥಿ ಪ್ರಸಾದ್ ಗೌಡ ಅವರು ಅಶ್ವತ್ಥನಾರಾಯಣ ಬಳಗದಲ್ಲಿ ಗುರುತಿಸಿಕೊಂಡಿದ್ದರಿಂದ ಇವರಿಗೂ ಕೂಡ ಗೆಲುವು ಅನಿವಾರ್ಯ.

Details of Magadi Assembly Constituency
ಕಾಂಗ್ರೆಸ್​ ಅಭ್ಯರ್ಥಿ ಹೆಚ್ ಸಿ ಬಾಲಕೃಷ್ಣ

ಕ್ಷೇತ್ರದ ಒಟ್ಟು ಮತದಾರರು: ಕ್ಷೇತ್ರದಲ್ಲಿ ಒಟ್ಟು 2,30,174 ಮತದಾರರಿದ್ದಾರೆ. ಇದರಲ್ಲಿ ಪುರುಷ ಮತದಾರರು 1,15,067, ಮಹಿಳಾ ಮತದಾರರು 1,15,107 ಇದ್ದಾರೆ. ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯ ನಿರ್ಣಾಯಕವಾಗಿದ್ದರೂ ಉಳಿದ ಮತದಾರನ್ನು ನಿರ್ಲಕ್ಷ್ಯ ಮಾಡುವಂತಿಲ್ಲ.

2023 Karnataka Legislative Assembly election
ಮಾಗಡಿ ವಿಧಾನಸಭಾ ಮತಕ್ಷೇತ್ರದ ವಿವರ

ಕೊನೆಯ ಚುನಾವಣೆಯ ಫಲಿತಾಂಶ: 1,19,493 ಮತ ಪಡೆದ ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ ಗೆಲುವು ಸಾಧಿಸುವ ಮೂಲಕ ಕ್ಷೇತ್ರದ ಶಾಸಕರಾದರು. ಪ್ರತಿಸ್ಪರ್ಧಿ ಕಾಂಗ್ರೆಸ್​ ಅಭ್ಯರ್ಥಿ ಹೆಚ್.ಸಿ.ಬಾಲಕೃಷ್ಣ 68,067 ಮತ ಪಡೆದು ಸೋಲುಂಡಿದ್ದಾರೆ. ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಹನುಮಂತರಾಜು 4,410 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನಕ್ಕೆ ಕುಸಿದಿದ್ದರು. ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ ದಾಖಲೆಯ 51,445 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಕಳೆದ 5 ವರ್ಷದಲ್ಲಿ ನಡೆದ ಚುನಾವಣೆ, ಉಪಚುನಾವಣೆ; ಗೆದ್ದವರ‍್ಯಾರು, ಸೋತವರ‍್ಯಾರು?

ರಾಮನಗರ: ಮಾಗಡಿ ತಾಲೂಕು ನಾಡಪ್ರಭು ಕೆಂಪೇಗೌಡರು ಹುಟ್ಟಿದ ಐತಿಹಾಸಿಕ ಸ್ಥಳ ಒಳಗೊಂಡಿರುವ ವಿಧಾನಸಭಾ ಮತಕ್ಷೇತ್ರ. ಬೆಂಗಳೂರಿನಿಂದ ಕೂಗಳತೆ ದೂರದಲ್ಲಿದೆ. ಜೆಡಿಎಸ್​ ಭದ್ರಕೋಟೆಯೂ ಹೌದು. ಕಾಂಗ್ರೆಸ್​ ಮತ್ತು ಬಿಜೆಪಿ ಈ ಸೀಟಿಗಾಗಿ ಪೈಪೋಟಿ ನಡೆಸುತ್ತಿವೆ. ಸದ್ಯ ಮಾಗಡಿ ವಿಧಾನಸಭಾ ಮತಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು ಪ್ರತಿಷ್ಠಿತ ರಾಜಕೀಯ ಕಣವಾಗಿದೆ.

ಕೇಂಪೇಗೌಡ ನಗರಿ ಎಂದೇ ಖ್ಯಾತಿ ಗಳಿಸಿರುವ ಮಾಗಡಿ ಕಳೆದ ಹಲವು ವರ್ಷಗಳಿಂದ ಜೆಡಿಎಸ್​ನ ಭದ್ರಕೋಟೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರ ತನ್ನದೇ ರಾಜಕೀಯ ಇತಿಹಾಸವನ್ನೂ ಹೊಂದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಬದಲಾದ ರಾಜಕೀಯ ಸನ್ನಿವೇಶದಿಂದ ಜೆಡಿಎಸ್​ನಲ್ಲಿದ್ದ ಶಾಸಕರಾಗಿದ್ದ ಬಾಲಕೃಷ್ಣ ಜೆಡಿಎಸ್ ತೊರೆದು ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಎ.‌ಮಂಜುನಾಥ್ ಜೆಡಿಎಸ್​ನಿಂದ ಸ್ಪರ್ಧೆ ಮಾಡಿ ದಾಖಲೆಯ 50 ಸಾವಿರಕ್ಕೂ ಮತಗಳ ಅಂತರದಿಂದ ಬಾಲಕೃಷ್ಣ ವಿರುದ್ಧ ಗೆಲುವು ಸಾಧಿಸಿದ್ದರು. ತಾಲೂಕಿನಲ್ಲಿ ಬಿಜೆಪಿಯ ಸಾವಿರಾರು ಮತಗಳಿದ್ದರೂ ಕೂಡ ಸೂಕ್ತ ಅಭ್ಯರ್ಥಿಯಿಲ್ಲದ ಕಾರಣ ಈ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ಕುಸಿಯಬೇಕಾಯಿತು.

2023 Karnataka Legislative Assembly election
ಬಿಜೆಪಿ ಅಭ್ಯರ್ಥಿ ಪ್ರಸಾದ್ ಗೌಡ

ಜೆಡಿಎಸ್-ಕಾಂಗ್ರೆಸ್ ನಡುವೆ ಬಿಜೆಪಿ ಪಾಲು: ಸಚಿವ ಅಶ್ವತ್ಥನಾರಾಯಣ ಅವರಿಗೆ ಪ್ರತಿಷ್ಠೆಯ ಕಣವಾಗಿದ್ದರಿಂದ ಕ್ಷೇತ್ರದ ಗೆಲುವು ಬಿಜೆಪಿಗೆ ಅನಿವಾರ್ಯ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮಾಗಡಿ ಕ್ಷೇತ್ರಕ್ಕೆ ವಿಶೇಷ ಅನುದಾನ ತರುವ ಮೂಲಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಆದರೂ ಅಭಿವೃದ್ಧಿ ವಿಚಾರದಲ್ಲಿ ಅಪಸ್ವರ ಕೇಳಿ ಬರುತ್ತದೆ. ಕಳೆದ ಹಲವು ವರ್ಷಗಳಿಂದ ಜೆಡಿಎಸ್-ಕಾಂಗ್ರೆಸ್ ನಡುವೆ ನೇರಾನೇರ ಹಣಾಹಣಿ ನಡೆಯುತ್ತಿತ್ತು. ಆದರೆ, 2023ರ ಚುನಾವಣೆಯನ್ನು ಗಮನಿಸಿದರೆ ಬಿಜೆಪಿ ಕೂಡ ಸ್ಪರ್ಧೆಯೊಡ್ಡಬಲ್ಲ ಸ್ಥಾನದಲ್ಲಿದೆ. ಬಿಜೆಪಿ ಅಭ್ಯರ್ಥಿಯ ಪ್ರಭಾವಕ್ಕಿಂತ ಅಶ್ವತ್ಥನಾರಾಯಣ ಪ್ರಭಾವವೇ ಕ್ಷೇತ್ರದಲ್ಲಿ ಹೆಚ್ಚು ಎಂದು ಹೇಳಲಾಗುತ್ತಿದೆ.

Details of Magadi Assembly Constituency
ಜೆಡಿಎಸ್ ಅಭ್ಯರ್ಥಿ ಎ ಮಂಜುನಾಥ್

ಪಕ್ಷಗಳ ಬಲಾಬಲ: ಈ ಮೊದಲು ಹೇಳಿದಂತೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದೆ. ಪಕ್ಷಗಳು ಈಗಾಗಲೇ ತಮ್ಮ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಅವರು ಪ್ರಚಾರ ಕೂಡ ಆರಂಭಿಸಿದ್ದಾರೆ. ಜೆಡಿಎಸ್​ನಿಂದ ಹಾಲಿ ಶಾಸಕ ಎ.ಮಂಜುನಾಥ್ ಕಣಕ್ಕಿಳಿಯುವ ಮೂಲಕ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕಾಂಗ್ರೆಸ್​ ಪಕ್ಷದಿಂದ ಹೆಚ್.ಸಿ.ಬಾಲಕೃಷ್ಣ ಅವರಿಗೆ ಮಣೆ ಹಾಕಿದೆ. ಬಿಜೆಪಿ ಪಕ್ಷ ಪ್ರಸಾದ್‌ ಗೌಡ ಅವರಿಗೆ ಟಿಕೆಟ್ ಘೊಷಣೆ ಮಾಡಿದೆ. ರವಿಕಿರಣ್ ಎಂ.ಎನ್ ಎನ್ನುವವರು ಆಪ್​ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಪಕ್ಷ ಹಾಗೂ ಅಭ್ಯರ್ಥಿಗಳ ಬಲಬಲ ಒಂದೇ ಆಗಿದ್ದರಿಂದ ಕ್ಷೇತ್ರದಲ್ಲಿ ಈ ಬಾರಿ ಹೆಚ್ಚು ಕಡಿಮೆ ತ್ರಿಕೋನ ಸ್ಪರ್ಧೆ ಖಚಿತ ಅಂತಿದಾರೆ ಇಲ್ಲಿನ ರಾಜಕೀಯ ಚಿಂತಕರು.

Details of Magadi Assembly Constituency
ಕಾಂಗ್ರೆಸ್​ ಅಭ್ಯರ್ಥಿ ಹೆಚ್ ಸಿ ಬಾಲಕೃಷ್ಣ

ಹಾಲಿ ಶಾಸಕ ಎ.‌ಮಂಜುನಾಥ್ ಶಾಸಕರಾದ ನಂತರ ಕ್ಷೇತ್ರದಲ್ಲಿ ಸಂಚರಿಸಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರಿಗೆ ಕುಮಾರಸ್ವಾಮಿಯ ಹೆಸರೇ ಶ್ರೀರಕ್ಷೆ. ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿರುವ ಮಾಜಿ ಶಾಸಕ ಬಾಲಕೃಷ್ಣಗೆ ಈ ಬಾರಿ ಶತಾಯಗತಾಯ ಗೆಲ್ಲಲ್ಲೇಬೇಕಾದ ಅನಿವಾರ್ಯತೆಯಿದೆ. ಕಳೆದ ಬಾರಿ ಚುನಾವಣೆಯಲ್ಲಿ ಸೋತ ನಂತರ ಕೊರೊನಾ ಸಮಯದಲ್ಲಿ ಜನರಿಗೆ ಹತ್ತಿರವಾಗಿದ್ದು ಗೆಲ್ಲಲು ಸಾಕಷ್ಟು ರಣತಂತ್ರಗಳನ್ನು ರೂಪಿಸಿಕೊಂಡಿದ್ದಾರೆ. ಪ್ರಾಬಲ್ಯ ಸಾಧಿಸುವಲ್ಲಿ ಹಿಂದೆ ಬೀಳದ ಬಿಜೆಪಿ ಕೂಡ ಗೆಲ್ಲುವ ಉತ್ಸಾಹದಲ್ಲಿದೆ. ಬಿಜೆಪಿ ಅಭ್ಯರ್ಥಿ ಪ್ರಸಾದ್ ಗೌಡ ಅವರು ಅಶ್ವತ್ಥನಾರಾಯಣ ಬಳಗದಲ್ಲಿ ಗುರುತಿಸಿಕೊಂಡಿದ್ದರಿಂದ ಇವರಿಗೂ ಕೂಡ ಗೆಲುವು ಅನಿವಾರ್ಯ.

Details of Magadi Assembly Constituency
ಕಾಂಗ್ರೆಸ್​ ಅಭ್ಯರ್ಥಿ ಹೆಚ್ ಸಿ ಬಾಲಕೃಷ್ಣ

ಕ್ಷೇತ್ರದ ಒಟ್ಟು ಮತದಾರರು: ಕ್ಷೇತ್ರದಲ್ಲಿ ಒಟ್ಟು 2,30,174 ಮತದಾರರಿದ್ದಾರೆ. ಇದರಲ್ಲಿ ಪುರುಷ ಮತದಾರರು 1,15,067, ಮಹಿಳಾ ಮತದಾರರು 1,15,107 ಇದ್ದಾರೆ. ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯ ನಿರ್ಣಾಯಕವಾಗಿದ್ದರೂ ಉಳಿದ ಮತದಾರನ್ನು ನಿರ್ಲಕ್ಷ್ಯ ಮಾಡುವಂತಿಲ್ಲ.

2023 Karnataka Legislative Assembly election
ಮಾಗಡಿ ವಿಧಾನಸಭಾ ಮತಕ್ಷೇತ್ರದ ವಿವರ

ಕೊನೆಯ ಚುನಾವಣೆಯ ಫಲಿತಾಂಶ: 1,19,493 ಮತ ಪಡೆದ ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ ಗೆಲುವು ಸಾಧಿಸುವ ಮೂಲಕ ಕ್ಷೇತ್ರದ ಶಾಸಕರಾದರು. ಪ್ರತಿಸ್ಪರ್ಧಿ ಕಾಂಗ್ರೆಸ್​ ಅಭ್ಯರ್ಥಿ ಹೆಚ್.ಸಿ.ಬಾಲಕೃಷ್ಣ 68,067 ಮತ ಪಡೆದು ಸೋಲುಂಡಿದ್ದಾರೆ. ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಹನುಮಂತರಾಜು 4,410 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನಕ್ಕೆ ಕುಸಿದಿದ್ದರು. ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ ದಾಖಲೆಯ 51,445 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಕಳೆದ 5 ವರ್ಷದಲ್ಲಿ ನಡೆದ ಚುನಾವಣೆ, ಉಪಚುನಾವಣೆ; ಗೆದ್ದವರ‍್ಯಾರು, ಸೋತವರ‍್ಯಾರು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.