ETV Bharat / bharat

ಟಿಎಂಸಿ -ಬಿಜೆಪಿ ನಡುವೆ ಮಾರಾಮಾರಿ: 15 ಕೇಸರಿ ಕಾರ್ಯಕರ್ತರು ಆಸ್ಪತ್ರೆಗೆ ದಾಖಲು - ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಕಾರ್ಯಕರ್ತರ ಹಲ್ಲೆ

ಟಿಎಂಸಿ ಕಾರ್ಯಕರ್ತರು ನಡೆಸಿದ ಹಲ್ಲೆಯಿಂದಾಗಿ ಸುಮಾರು 15 ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

assault
assault
author img

By

Published : Jan 11, 2021, 6:24 AM IST

ಮಿಡ್ನಾಪುರ( ಪಶ್ಚಿಮ ಬಂಗಾಳ): ಪೂರ್ವ ಮಿಡ್ನಾಪುರ ಜಿಲ್ಲೆಯ ಕಾಂಟೈನಲ್ಲಿ ನಿನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರಿಂದ ಹಲ್ಲೆಗೊಳಗಾಗಿ ಸುಮಾರು 15 ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪೂರ್ವ ಮಿಡ್ನಾಪುರದ ಕಾಂಟೈ -3 ಬ್ಲಾಕ್ ಪ್ರದೇಶದ ಭಜಾ ಚೌಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಬಿಜೆಪಿಯ ಕಾಂಟೈ ಅಧ್ಯಕ್ಷ ಅನುಪ್ ಚಕ್ರವರ್ತಿ ಹೇಳಿದ್ದಾರೆ. ಧ್ವಜಾರೋಹಣ ಮಾಡುವಾಗ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

"ನಾಚಿಕೆಯಿಲ್ಲದ ಸರ್ಕಾರ ಆಡಳಿತ ನಡೆಸುತ್ತಿರುವುದು ಸೂಕ್ತವಲ್ಲ. ನಮ್ಮ ಕಾರ್ಯಕರ್ತರ ಮೇಲೆ ಟಿಎಂಸಿ ದಾಳಿ ನಡೆಸುತ್ತಿದ್ದು, ಇದು ರಾಜ್ಯಾದ್ಯಂತ ನಡೆಯುತ್ತಿದೆ" ಎಂದು ಅನೂಪ್ ಚಕ್ರವರ್ತಿ ಹೇಳಿದರು.

"ಬಂಗಾಳದಲ್ಲಿ ಸುಮಾರು 130 ಬಿಜೆಪಿ ಅಧಿಕಾರಿಗಳು ಮತ್ತು 300 ಪಕ್ಷದ ಬೆಂಬಲಿಗರು ಪ್ರಾಣ ಕಳೆದುಕೊಂಡಿದ್ದಾರೆ. ಇದು ಅತಿರೇಕವಾಗಿದೆ. ಒಂದು ತಿಂಗಳ ಅವಧಿಯಲ್ಲಿ 6-7 ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದು, ರಾಜಕೀಯ ದುರುದ್ದೇಶದಿಂದಾಗಿ ಟಿಎಂಸಿ ಕಾರ್ಯಕರ್ತರು ಇದನ್ನು ಮಾಡಿದ್ದಾರೆ" ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆರೋಪಿಸಿದ್ದಾರೆ.

ಮಿಡ್ನಾಪುರ( ಪಶ್ಚಿಮ ಬಂಗಾಳ): ಪೂರ್ವ ಮಿಡ್ನಾಪುರ ಜಿಲ್ಲೆಯ ಕಾಂಟೈನಲ್ಲಿ ನಿನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರಿಂದ ಹಲ್ಲೆಗೊಳಗಾಗಿ ಸುಮಾರು 15 ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪೂರ್ವ ಮಿಡ್ನಾಪುರದ ಕಾಂಟೈ -3 ಬ್ಲಾಕ್ ಪ್ರದೇಶದ ಭಜಾ ಚೌಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಬಿಜೆಪಿಯ ಕಾಂಟೈ ಅಧ್ಯಕ್ಷ ಅನುಪ್ ಚಕ್ರವರ್ತಿ ಹೇಳಿದ್ದಾರೆ. ಧ್ವಜಾರೋಹಣ ಮಾಡುವಾಗ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

"ನಾಚಿಕೆಯಿಲ್ಲದ ಸರ್ಕಾರ ಆಡಳಿತ ನಡೆಸುತ್ತಿರುವುದು ಸೂಕ್ತವಲ್ಲ. ನಮ್ಮ ಕಾರ್ಯಕರ್ತರ ಮೇಲೆ ಟಿಎಂಸಿ ದಾಳಿ ನಡೆಸುತ್ತಿದ್ದು, ಇದು ರಾಜ್ಯಾದ್ಯಂತ ನಡೆಯುತ್ತಿದೆ" ಎಂದು ಅನೂಪ್ ಚಕ್ರವರ್ತಿ ಹೇಳಿದರು.

"ಬಂಗಾಳದಲ್ಲಿ ಸುಮಾರು 130 ಬಿಜೆಪಿ ಅಧಿಕಾರಿಗಳು ಮತ್ತು 300 ಪಕ್ಷದ ಬೆಂಬಲಿಗರು ಪ್ರಾಣ ಕಳೆದುಕೊಂಡಿದ್ದಾರೆ. ಇದು ಅತಿರೇಕವಾಗಿದೆ. ಒಂದು ತಿಂಗಳ ಅವಧಿಯಲ್ಲಿ 6-7 ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದು, ರಾಜಕೀಯ ದುರುದ್ದೇಶದಿಂದಾಗಿ ಟಿಎಂಸಿ ಕಾರ್ಯಕರ್ತರು ಇದನ್ನು ಮಾಡಿದ್ದಾರೆ" ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆರೋಪಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.