ETV Bharat / bharat

ಬಾರಾಬಂಕಿ ಅಪಘಾತದಲ್ಲಿ 18 ಮಂದಿ ಸಾವು: ಪರಿಹಾರ ಘೋಷಿಸಿದ ಪಿಎಂ ಮೋದಿ

ಉತ್ತರ ಪ್ರದೇಶದ ಲಖನೌ - ಅಯೋಧ್ಯಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 18 ಜನರು ಸಾವನ್ನಪ್ಪಿದ್ದರೆ, 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

author img

By

Published : Jul 28, 2021, 6:42 AM IST

Updated : Jul 28, 2021, 10:21 AM IST

Uttar pradesh
ಉತ್ತರ ಪ್ರದೇಶ

ಬಾರಾಬಂಕಿ(ಉತ್ತರಪ್ರದೇಶ): ಇಲ್ಲಿನ ರಾಮ್‌ಸ್ನೇಹಿಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯ ಲಖನೌ - ಅಯೋಧ್ಯಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 18 ಜನರು ದಾರುಣವಾಗಿ ಮೃತಪಟ್ಟಿದ್ದಾರೆ.

  • PM Narendra Modi announced an ex-gratia of Rs 2 lakhs each from PMNRF for the next of kin of those who lost their lives in the tragic accident in Barabanki, UP. The injured would be given Rs 50,000 each: PMO https://t.co/UOAcVeySHk pic.twitter.com/fC17CFKF6C

    — ANI UP (@ANINewsUP) July 28, 2021 " class="align-text-top noRightClick twitterSection" data=" ">

ಕೆಟ್ಟು ನಿಂತಿದ್ದ ಡಬಲ್ ಡೆಕ್ಕರ್ ಬಸ್​ಗೆ ವೇಗವಾಗಿ ಬಂದ ಟ್ರಕ್​ ಡಿಕ್ಕಿ ಹೊಡೆದಿದ್ದು, ಪರಿಣಾಮ 18 ಜನರು ಸಾವನ್ನಪ್ಪಿದ್ದರೆ, 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಲಖನೌದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಜುಲೈ 27ರ ಮಧ್ಯಾಹ್ನ 1.30ರ ಸುಮಾರಿಗೆ ಅವಘಡ ಸಂಭವಿಸಿದ್ದು, ಬಸ್ ಹರಿಯಾಣದಿಂದ ಬಿಹಾರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.

ಪರಿಹಾರ ಘೋಷಿಸಿದ ಪಿಎಂ: ದುರಂತದ ಬಗ್ಗೆ ತೀವ್ರ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ ಪಿಎಂಎನ್​ಆರ್​ಎಫ್​ನಿಂದ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಧನ ಘೋಷಿಸಿದ್ದಾರೆ.

ಘಟನೆ ವಿವರ: ಅಯೋಧ್ಯೆಯ ಗಡಿಯಲ್ಲಿರುವ ಕಲ್ಯಾಣಿ ನದಿ ಸೇತುವೆಯ ಮೂಲಕ ಹಾದು ಹೋಗುವಾಗ ರಾತ್ರಿ 1 ಗಂಟೆ ಸುಮಾರಿಗೆ ಬಸ್ ಕೆಟ್ಟುನಿಂತಿದೆ. ಈ ಸಂದರ್ಭದಲ್ಲಿ ಚಾಲಕ ಮತ್ತು ಆಪರೇಟರ್ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ರಿಪೇರಿ ಮಾಡುತ್ತಿದ್ದರು. ಕೆಲವು ಪ್ರಯಾಣಿಕರು ಬಸ್​​​ನ ಹೊರಗೆ ನಿಂತಿದ್ದರೆ, ಇನ್ನೂ ಕೆಲವರು ಒಳಗೆ ಕುಳಿತಿದ್ದರು. ಆದರೆ ಈ ಸಂದರ್ಭದಲ್ಲಿ ವೇಗವಾಗಿ ಹಿಂದಿನಿಂದ ಬಂದ ಟ್ರಕ್ ಬಸ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ 18 ಜನರು ಸಾವನ್ನಪ್ಪಿದ್ದು 15 ಮಂದಿಗೆ ಗಾಯಗಳಾಗಿವೆ.

ಬಾರಾಬಂಕಿ(ಉತ್ತರಪ್ರದೇಶ): ಇಲ್ಲಿನ ರಾಮ್‌ಸ್ನೇಹಿಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯ ಲಖನೌ - ಅಯೋಧ್ಯಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 18 ಜನರು ದಾರುಣವಾಗಿ ಮೃತಪಟ್ಟಿದ್ದಾರೆ.

  • PM Narendra Modi announced an ex-gratia of Rs 2 lakhs each from PMNRF for the next of kin of those who lost their lives in the tragic accident in Barabanki, UP. The injured would be given Rs 50,000 each: PMO https://t.co/UOAcVeySHk pic.twitter.com/fC17CFKF6C

    — ANI UP (@ANINewsUP) July 28, 2021 " class="align-text-top noRightClick twitterSection" data=" ">

ಕೆಟ್ಟು ನಿಂತಿದ್ದ ಡಬಲ್ ಡೆಕ್ಕರ್ ಬಸ್​ಗೆ ವೇಗವಾಗಿ ಬಂದ ಟ್ರಕ್​ ಡಿಕ್ಕಿ ಹೊಡೆದಿದ್ದು, ಪರಿಣಾಮ 18 ಜನರು ಸಾವನ್ನಪ್ಪಿದ್ದರೆ, 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಲಖನೌದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಜುಲೈ 27ರ ಮಧ್ಯಾಹ್ನ 1.30ರ ಸುಮಾರಿಗೆ ಅವಘಡ ಸಂಭವಿಸಿದ್ದು, ಬಸ್ ಹರಿಯಾಣದಿಂದ ಬಿಹಾರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.

ಪರಿಹಾರ ಘೋಷಿಸಿದ ಪಿಎಂ: ದುರಂತದ ಬಗ್ಗೆ ತೀವ್ರ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ ಪಿಎಂಎನ್​ಆರ್​ಎಫ್​ನಿಂದ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಧನ ಘೋಷಿಸಿದ್ದಾರೆ.

ಘಟನೆ ವಿವರ: ಅಯೋಧ್ಯೆಯ ಗಡಿಯಲ್ಲಿರುವ ಕಲ್ಯಾಣಿ ನದಿ ಸೇತುವೆಯ ಮೂಲಕ ಹಾದು ಹೋಗುವಾಗ ರಾತ್ರಿ 1 ಗಂಟೆ ಸುಮಾರಿಗೆ ಬಸ್ ಕೆಟ್ಟುನಿಂತಿದೆ. ಈ ಸಂದರ್ಭದಲ್ಲಿ ಚಾಲಕ ಮತ್ತು ಆಪರೇಟರ್ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ರಿಪೇರಿ ಮಾಡುತ್ತಿದ್ದರು. ಕೆಲವು ಪ್ರಯಾಣಿಕರು ಬಸ್​​​ನ ಹೊರಗೆ ನಿಂತಿದ್ದರೆ, ಇನ್ನೂ ಕೆಲವರು ಒಳಗೆ ಕುಳಿತಿದ್ದರು. ಆದರೆ ಈ ಸಂದರ್ಭದಲ್ಲಿ ವೇಗವಾಗಿ ಹಿಂದಿನಿಂದ ಬಂದ ಟ್ರಕ್ ಬಸ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ 18 ಜನರು ಸಾವನ್ನಪ್ಪಿದ್ದು 15 ಮಂದಿಗೆ ಗಾಯಗಳಾಗಿವೆ.

Last Updated : Jul 28, 2021, 10:21 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.