ETV Bharat / bharat

ತೆಲಂಗಾಣ 20,000 ಜನರಿಗೆ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರ

author img

By

Published : Jul 15, 2022, 2:38 PM IST

ರಾಜ್ಯದಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಪ್ರವಾಹ ಉಂಟಾಗಿದ್ದು, ಒಟ್ಟು 20,000 ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

20,000 people shifted
ತೆಲಂಗಾಣ 20,000 ಜನರಿಗೆ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರ

ಹೈದರಬಾದ್​: ರಾಜ್ಯದಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಪ್ರವಾಹ ಉಂಟಾಗಿದ್ದು ಒಟ್ಟು 20,000 ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಇನ್ನು ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಭದ್ರಾದ್ರಿ ಮತ್ತು ಕೊತ್ತಗೂಡೆಮ್​ ಜಿಲ್ಲೆಯ ಕೆಲವು ಭಾಗಗಳು ಜಲಾವೃತ್ತಗೊಂಡಿವೆ.

ಒಟ್ಟು 19,071 ಜನರನ್ನು 223 ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿದು ಬಂದಿದೆ. ಇನ್ನೂ ನಿರ್ಮಲ ಜಿಲ್ಲೆಯ ಮಹಿಳೆಯೊಬ್ಬರು ನದಿಯ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ.

ರಾಜ್ಯದ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್​ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಇನ್ನೂ ಗೋದಾವರಿ ನದಿ ತುಂಬಿ ಹರಿಯುತ್ತಿರುವುದರಿಂದ ಮುಳುಗು, ಭೂಪಾಲಪಲ್ಲಿ ಮತ್ತು ಭದ್ರಾದ್ರಿ - ಕೊತಗುಡೆಂ ಜಿಲ್ಲೆಗಳ ಮೇಲೆ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇನ್ನೂ ಸಭೆಯಲ್ಲಿ ಭಾಗವಹಿಸಿದ್ದ ಸಾರಿಗೆ ಸಚಿವ ಪಿ ಅಜಯ್ ಕುಮಾರ್, ಗೋದಾವರಿಯಲ್ಲಿ ನೀರಿನ ಮಟ್ಟವು ಹೆಚ್ಚಾಗಿದ್ದು ಅಪಾಯದ ಮಟ್ಟ ತಲುಪಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಹೆಚ್ಚಿಸಲು ಹೆಚ್ಚುವರಿ ತುರ್ತು ಯೋಜನೆಗಳನ್ನು ರೂಪಿಸಬೇಕು ಎಂದು ಹೇಳಿದರು.

ಇದನ್ನೂ ಓದಿ:ಪತ್ನಿಯಾದವಳು 'ತಾಳಿ' ತೆಗೆದಿಡುವುದು ಪತಿಗೆ ನೀಡುವ ಅತ್ಯುನ್ನತ ಮಾನಸಿಕ ಕ್ರೌರ್ಯ: ಮದ್ರಾಸ್ ಹೈಕೋರ್ಟ್

ಹೈದರಬಾದ್​: ರಾಜ್ಯದಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಪ್ರವಾಹ ಉಂಟಾಗಿದ್ದು ಒಟ್ಟು 20,000 ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಇನ್ನು ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಭದ್ರಾದ್ರಿ ಮತ್ತು ಕೊತ್ತಗೂಡೆಮ್​ ಜಿಲ್ಲೆಯ ಕೆಲವು ಭಾಗಗಳು ಜಲಾವೃತ್ತಗೊಂಡಿವೆ.

ಒಟ್ಟು 19,071 ಜನರನ್ನು 223 ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿದು ಬಂದಿದೆ. ಇನ್ನೂ ನಿರ್ಮಲ ಜಿಲ್ಲೆಯ ಮಹಿಳೆಯೊಬ್ಬರು ನದಿಯ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ.

ರಾಜ್ಯದ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್​ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಇನ್ನೂ ಗೋದಾವರಿ ನದಿ ತುಂಬಿ ಹರಿಯುತ್ತಿರುವುದರಿಂದ ಮುಳುಗು, ಭೂಪಾಲಪಲ್ಲಿ ಮತ್ತು ಭದ್ರಾದ್ರಿ - ಕೊತಗುಡೆಂ ಜಿಲ್ಲೆಗಳ ಮೇಲೆ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇನ್ನೂ ಸಭೆಯಲ್ಲಿ ಭಾಗವಹಿಸಿದ್ದ ಸಾರಿಗೆ ಸಚಿವ ಪಿ ಅಜಯ್ ಕುಮಾರ್, ಗೋದಾವರಿಯಲ್ಲಿ ನೀರಿನ ಮಟ್ಟವು ಹೆಚ್ಚಾಗಿದ್ದು ಅಪಾಯದ ಮಟ್ಟ ತಲುಪಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಹೆಚ್ಚಿಸಲು ಹೆಚ್ಚುವರಿ ತುರ್ತು ಯೋಜನೆಗಳನ್ನು ರೂಪಿಸಬೇಕು ಎಂದು ಹೇಳಿದರು.

ಇದನ್ನೂ ಓದಿ:ಪತ್ನಿಯಾದವಳು 'ತಾಳಿ' ತೆಗೆದಿಡುವುದು ಪತಿಗೆ ನೀಡುವ ಅತ್ಯುನ್ನತ ಮಾನಸಿಕ ಕ್ರೌರ್ಯ: ಮದ್ರಾಸ್ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.