ETV Bharat / bharat

ಮುಂದಿನ 3 ದಿನ, 26 ವಿಮಾನ: ಉಕ್ರೇನ್‌ನಿಂದ ಸಾವಿರಾರು ಭಾರತೀಯರ ಕರೆತರಲು ಕೇಂದ್ರದ ನಿರ್ಧಾರ

author img

By

Published : Mar 1, 2022, 10:02 PM IST

Updated : Mar 1, 2022, 10:07 PM IST

ಯುದ್ಧಪೀಡಿತ ಉಕ್ರೇನ್​​ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಕ್ಕೆ ಕೈಗೊಂಡಿದೆ.

Indians from Ukraine
Indians from Ukraine

ನವದೆಹಲಿ: ಉಕ್ರೇನ್​ ವಿರುದ್ಧ ರಷ್ಯಾ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಉಕ್ರೇನ್​​ನಲ್ಲಿರುವ ಸಾವಿರಾರು ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್​ ಆಗಲಿದ್ದಾರೆ.

ಇಂದು ಉಕ್ರೇನ್​​ನ ಖಾರ್ಕಿವ್ ನಗರಿಯ​​ ಮೇಲೆ ರಷ್ಯಾ ಶೆಲ್ ದಾಳಿ ನಡೆಸಿದ್ದು ಕರ್ನಾಟಕದ ವಿದ್ಯಾರ್ಥಿ ನವೀನ್​ ಸಾವನ್ನಪ್ಪಿದ್ದಾನೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಉನ್ನತ ಮಟ್ಟದ ಸಭೆ ನಡೆಸಿದರು. ಈ ವೇಳೆ ಉಕ್ರೇನ್​​ನ ವಿವಿಧ ನಗರಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆತರಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಪ್ರಕಾರ, ಮುಂದಿನ ಮೂರು ದಿನಗಳಲ್ಲಿ ಭಾರತದಿಂದ 26 ವಿಮಾನಗಳು ಉಕ್ರೇನ್​ಗೆ ತೆರಳಲಿದ್ದು, ಸಾವಿರಾರು ವಿದ್ಯಾರ್ಥಿಗಳು/ ನಾಗರಿಕರನ್ನು ಹೊತ್ತು ತರಲಿವೆ.

ಉಕ್ರೇನ್​ ಮೇಲೆ ರಷ್ಯಾ ಕಳೆದ ಆರು ದಿನಗಳಿಂದ ಮಿಲಿಟರಿ ದಾಳಿ ನಡೆಸುತ್ತಿದ್ದು, ಈ ವಿಚಾರವಾಗಿ ಅನೇಕ ಸಲ ಪ್ರಧಾನಿ ಪ್ರಮುಖ ಸಚಿವರು, ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ನಿನ್ನೆ ಕೂಡ ಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ, ಕೇಂದ್ರದ ನಾಲ್ವರು ಸಚಿವರನ್ನು ಉಕ್ರೇನ್​​ ನೆರೆ ದೇಶಗಳಿಗೆ ಕಳುಹಿಸಿ, ಭಾರತೀಯರ ತೆರವು ಕಾರ್ಯಾಚರಣೆಯಲ್ಲಿ ಭಾಗಿಯಾಗುವಂತೆ ಸೂಚನೆ ನೀಡಿದ್ದರು.

  • #WATCH | In United Nations we take positions that are based on certain careful considerations & certainly, we do regard the merits of each& every case that comes before us...take decisions in our best interest: Foreign Secy Harsh V Shringla on reconsidering India's stand at UNSC pic.twitter.com/0iAuSKeUFG

    — ANI (@ANI) March 1, 2022 " class="align-text-top noRightClick twitterSection" data=" ">

ಈ ಕುರಿತು ವಿವರವಾದ ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಬುಕಾರೆಸ್ಟ್​ ಮತ್ತು ಬುಡಾಪೆಸ್ಟ್​ ಹೊರತುಪಡಿಸಿ ಮುಂದಿನ ಮೂರು ದಿನಗಳಲ್ಲಿ ಭಾರತೀಯ ನಾಗರಿಕರನ್ನು ಕರೆತರಲು 26 ವಿಮಾನ ನಿಯೋಜನೆ ಮಾಡಲಾಗಿದೆ. ಇದಕ್ಕಾಗಿ ಪೋಲೆಂಡ್​​ ಮತ್ತು ಸ್ಲೊವಾಕ್​ ಗಣರಾಜ್ಯದ ವಿಮಾನ ನಿಲ್ದಾಣಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಇದನ್ನೂ ಓದಿ: ನವೀನ್​ ಸಾವಿನ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಎಲ್ಲ ಭಾರತೀಯ ಪ್ರಜೆಗಳು ಈಗಾಗಲೇ ಕೀವ್​ ನಗರ ತೊರೆದಿದ್ದಾರೆ. ಉಕ್ರೇನ್​ನಲ್ಲಿ ಉಳಿದುಕೊಂಡಿರುವ ಶೇ. 40ರಷ್ಟು ಜನರಲ್ಲಿ ಅರ್ಧದಷ್ಟು ಜನರು ಖಾರ್ಕಿವ್​​, ಸಮಿ ಪ್ರದೇಶದಲ್ಲಿದ್ದಾರೆ. ಅವರನ್ನು ಕರೆತರಲು ನಿರ್ಧರಿಸಲಾಗಿದೆ ಎಂದರು.

ನವದೆಹಲಿ: ಉಕ್ರೇನ್​ ವಿರುದ್ಧ ರಷ್ಯಾ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಉಕ್ರೇನ್​​ನಲ್ಲಿರುವ ಸಾವಿರಾರು ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್​ ಆಗಲಿದ್ದಾರೆ.

ಇಂದು ಉಕ್ರೇನ್​​ನ ಖಾರ್ಕಿವ್ ನಗರಿಯ​​ ಮೇಲೆ ರಷ್ಯಾ ಶೆಲ್ ದಾಳಿ ನಡೆಸಿದ್ದು ಕರ್ನಾಟಕದ ವಿದ್ಯಾರ್ಥಿ ನವೀನ್​ ಸಾವನ್ನಪ್ಪಿದ್ದಾನೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಉನ್ನತ ಮಟ್ಟದ ಸಭೆ ನಡೆಸಿದರು. ಈ ವೇಳೆ ಉಕ್ರೇನ್​​ನ ವಿವಿಧ ನಗರಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆತರಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಪ್ರಕಾರ, ಮುಂದಿನ ಮೂರು ದಿನಗಳಲ್ಲಿ ಭಾರತದಿಂದ 26 ವಿಮಾನಗಳು ಉಕ್ರೇನ್​ಗೆ ತೆರಳಲಿದ್ದು, ಸಾವಿರಾರು ವಿದ್ಯಾರ್ಥಿಗಳು/ ನಾಗರಿಕರನ್ನು ಹೊತ್ತು ತರಲಿವೆ.

ಉಕ್ರೇನ್​ ಮೇಲೆ ರಷ್ಯಾ ಕಳೆದ ಆರು ದಿನಗಳಿಂದ ಮಿಲಿಟರಿ ದಾಳಿ ನಡೆಸುತ್ತಿದ್ದು, ಈ ವಿಚಾರವಾಗಿ ಅನೇಕ ಸಲ ಪ್ರಧಾನಿ ಪ್ರಮುಖ ಸಚಿವರು, ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ನಿನ್ನೆ ಕೂಡ ಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ, ಕೇಂದ್ರದ ನಾಲ್ವರು ಸಚಿವರನ್ನು ಉಕ್ರೇನ್​​ ನೆರೆ ದೇಶಗಳಿಗೆ ಕಳುಹಿಸಿ, ಭಾರತೀಯರ ತೆರವು ಕಾರ್ಯಾಚರಣೆಯಲ್ಲಿ ಭಾಗಿಯಾಗುವಂತೆ ಸೂಚನೆ ನೀಡಿದ್ದರು.

  • #WATCH | In United Nations we take positions that are based on certain careful considerations & certainly, we do regard the merits of each& every case that comes before us...take decisions in our best interest: Foreign Secy Harsh V Shringla on reconsidering India's stand at UNSC pic.twitter.com/0iAuSKeUFG

    — ANI (@ANI) March 1, 2022 " class="align-text-top noRightClick twitterSection" data=" ">

ಈ ಕುರಿತು ವಿವರವಾದ ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಬುಕಾರೆಸ್ಟ್​ ಮತ್ತು ಬುಡಾಪೆಸ್ಟ್​ ಹೊರತುಪಡಿಸಿ ಮುಂದಿನ ಮೂರು ದಿನಗಳಲ್ಲಿ ಭಾರತೀಯ ನಾಗರಿಕರನ್ನು ಕರೆತರಲು 26 ವಿಮಾನ ನಿಯೋಜನೆ ಮಾಡಲಾಗಿದೆ. ಇದಕ್ಕಾಗಿ ಪೋಲೆಂಡ್​​ ಮತ್ತು ಸ್ಲೊವಾಕ್​ ಗಣರಾಜ್ಯದ ವಿಮಾನ ನಿಲ್ದಾಣಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಇದನ್ನೂ ಓದಿ: ನವೀನ್​ ಸಾವಿನ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಎಲ್ಲ ಭಾರತೀಯ ಪ್ರಜೆಗಳು ಈಗಾಗಲೇ ಕೀವ್​ ನಗರ ತೊರೆದಿದ್ದಾರೆ. ಉಕ್ರೇನ್​ನಲ್ಲಿ ಉಳಿದುಕೊಂಡಿರುವ ಶೇ. 40ರಷ್ಟು ಜನರಲ್ಲಿ ಅರ್ಧದಷ್ಟು ಜನರು ಖಾರ್ಕಿವ್​​, ಸಮಿ ಪ್ರದೇಶದಲ್ಲಿದ್ದಾರೆ. ಅವರನ್ನು ಕರೆತರಲು ನಿರ್ಧರಿಸಲಾಗಿದೆ ಎಂದರು.

Last Updated : Mar 1, 2022, 10:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.