ವಿಜಯವಾಡ: ಮಹಾಮಾರಿ ಕೊರೊನಾ ನಿಯಂತ್ರಿಸಲು ಎಲ್ಲ ಸರ್ಕಾರಗಳು, ಸಂಘಸಂಸ್ಥೆಗಳು ಮತ್ತು ಕೊರೊನಾ ವಾರಿಯರ್ಸ್ ಕಳೆದ ಒಂದು ವರ್ಷದಿಂದ ಜಾಗೃತಿ ಮೂಡಿಸುತ್ತಿದ್ದಾರೆ. ಆಂಧ್ರಪ್ರದೇಶದಲ್ಲಿ ನಹೀದ್ ಚೌದರಿ ಎಂಬ 2 ನೇ ತರಗತಿಯ ವಿದ್ಯಾರ್ಥಿ ವಿಜಯವಾಡದಲ್ಲಿ ಕೋವಿಡ್ -19 ಬಗ್ಗೆ ಜನರಿಗೆ ಅರಿವು ಮೂಡಿಸುವ ಮೂಲಕ ಗಮನ ಸೆಳೆದಿದ್ದಾನೆ.
ಮಾರಣಾಂತಿಕ ವೈರಸ್ ಹರಡುವುದನ್ನು ತಡೆಯಲು ಮಾಸ್ಕ್ ಧರಿಸುವುದು, ಸ್ವಚ್ಛವಾಗಿರುವುದು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವುದು. ಕೋವಿಡ್ ನಿಯಮಾವಳಿಗಳನ್ನು ಅನುಸರಿಸುವಂತೆ ಬಾಲಕ ಎಲ್ಲರಲ್ಲೂ ಮನವಿ ಮಾಡಿದ್ದಾರೆ.
ಕೋವಿಡ್ ಪ್ರಕರಣಗಳು ಕಡಿಮೆಯಾದ ತಕ್ಷಣ ಯಾರು ಲಘುವಾಗಿ ತೆಗೆದುಕೊಳ್ಳಬಾರದು. ಕೋವಿಡ್ ನಿಯಮಗಳನ್ನು ಅನುಸರಿಸುವುದನ್ನು ಮರೆತುಬಿಡಬಿಡಬಾರದು ಎಂದು ಜಾಗೃತಿ ಮೂಡಿಸಿದ್ದಾನೆ.
ಓದಿ: ಫ್ಲ್ಯಾಟ್ ವಿಚಾರಕ್ಕಾಗಿ ಶಾಸಕ ಜಮೀರ್ - ನಿಖಿಲ್ ಬೆಂಬಲಿಗರ ನಡುವೆ ಗಲಾಟೆ