ETV Bharat / bharat

ಮಾನವ ಕಳ್ಳಸಾಗಣೆ, ಮಾಂಸ ವ್ಯಾಪಾರ: 41 ಆರೋಪಿಗಳಿಗೆ ಕಠಿಣ ಕಾರಾಗೃಹ ಶಿಕ್ಷೆ! - ಪ್ರಯಾಗ್‌ರಾಜ್‌ನ ಮೀರಗಂಜ್‌ನಲ್ಲಿ ಮಾನವ ಕಳ್ಳಸಾಗಣೆ ಪ್ರಕರಣ

ಪ್ರಯಾಗ್‌ರಾಜ್‌ನ ಮೀರಗಂಜ್‌ನಲ್ಲಿ ಮಾನವ ಕಳ್ಳಸಾಗಣೆ ಮತ್ತು ಮಾಂಸದ ವ್ಯಾಪಾರದ ದಂಧೆಯಲ್ಲಿ ತೊಡಗಿದ್ದ 41 ಆರೋಪಿಗಳಿಗೆ ಪ್ರಯಾಗ್‌ರಾಜ್‌ ಸೆಷನ್ಸ್ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
author img

By

Published : Jan 26, 2022, 2:19 PM IST

ಪ್ರಯಾಗರಾಜ್ (ಯುಪಿ): ಮೇ 1, 2016 ರಂದು ನಡೆಸಿದ ಪ್ರಮುಖ ಪೊಲೀಸ್ ಕಾರ್ಯಾಚರಣೆಯಲ್ಲಿ ಪ್ರಯಾಗರಾಜ್‌ನ ಮೀರಗಂಜ್‌ನಲ್ಲಿ ಮಾನವ ಕಳ್ಳಸಾಗಣೆ ಮತ್ತು ಮಾಂಸದ ವ್ಯಾಪಾರದ ದಂಧೆಯಲ್ಲಿ ಭಾಗಿಯಾಗಿದ್ದ 41 ಆರೋಪಿಗಳಿಗೆ ಪ್ರಯಾಗ್‌ರಾಜ್‌ನ ಸೆಷನ್ಸ್ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ (ಎಎಸ್‌ಜೆ) ರಚನಾ ಸಿಂಗ್ ಅವರು ಮಾನವ ಕಳ್ಳಸಾಗಣೆಯ ಎಲ್ಲ 15 ಆರೋಪಿಗಳಿಗೆ 14 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಮಾಂಸ ಕಳ್ಳಸಾಗಣೆ ಆರೋಪದ 26 ಆರೋಪಿಗಳಿಗೆ 10 ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಜನವರಿ 18, 2022 ರಂದು, ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು 41 ಜನರನ್ನು ದೋಷಿ ಎಂದು ಘೋಷಿಸಿದ್ದರು. ಎಎಸ್‌ಜೆ ಆರೋಪಿಗಳ ವಿರುದ್ಧ ಲಭ್ಯವಿರುವ ಸತ್ಯ ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಹಾಜರಾದ ಪ್ರತಿವಾದಿ ವಕೀಲರು ಮತ್ತು ಜಿಲ್ಲಾ ಸರ್ಕಾರಿ ವಕೀಲ (ಕ್ರಿಮಿನಲ್) ಗುಲಾಬ್ ಚಂದ್ರ ಅಗ್ರಹರಿ ಅವರ ವಾದ ಆಲಿಸಿದ ನಂತರ ಶಿಕ್ಷೆ ಪ್ರಕಟಿಸಲಾಯಿತು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಪ್ರಕರಣದ ವಿವರ: ಈ ಆರೋಪಿಗಳು ಹೆಣ್ಣು ಮಕ್ಕಳ ಬಡತನದ ಲಾಭ ಪಡೆದುಕೊಂಡು ಆಮಿಷ ಒಡ್ಡುತ್ತಿದ್ದರು. ಬಳಿಕ ಅವರನ್ನು ಮೀರ್‌ಗಂಜ್‌ನ ರೆಡ್ - ಲೈಟ್ ಪ್ರದೇಶದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಕೆಲವು ಸಾಮಾಜಿಕ ಸಂಘಟನೆಗಳು ಮತ್ತು ಕಾರ್ಯಕರ್ತರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಿದ್ದು, ನಗರದ ಹೃದಯಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮಾಂಸದ ವ್ಯಾಪಾರ ಮತ್ತು ಮಾನವ ಕಳ್ಳಸಾಗಣೆ ತೆಗೆದುಹಾಕಲು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು.

ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ 2016ರ ಮೇ 1ರಂದು ಕಾರ್ಮಿಕರ ದಿನಾಚರಣೆಯಂದು ಬೃಹತ್ ಕಾರ್ಯಾಚರಣೆ ನಡೆಸಿ ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟ ಹಲವು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದರು. ಅಲ್ಲದೇ ಪ್ರಕರಣ ಸಂಬಂಧ 48 ಮಂದಿಯನ್ನು ಬಂಧಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಚುನಾವಣೆ ಬಿರುಸಿರುವ ಉತ್ತರ ಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ ನಾಲ್ವರು ಮೃತ, ಹಲವರು ಅಸ್ವಸ್ಥ

ಪ್ರಯಾಗರಾಜ್ (ಯುಪಿ): ಮೇ 1, 2016 ರಂದು ನಡೆಸಿದ ಪ್ರಮುಖ ಪೊಲೀಸ್ ಕಾರ್ಯಾಚರಣೆಯಲ್ಲಿ ಪ್ರಯಾಗರಾಜ್‌ನ ಮೀರಗಂಜ್‌ನಲ್ಲಿ ಮಾನವ ಕಳ್ಳಸಾಗಣೆ ಮತ್ತು ಮಾಂಸದ ವ್ಯಾಪಾರದ ದಂಧೆಯಲ್ಲಿ ಭಾಗಿಯಾಗಿದ್ದ 41 ಆರೋಪಿಗಳಿಗೆ ಪ್ರಯಾಗ್‌ರಾಜ್‌ನ ಸೆಷನ್ಸ್ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ (ಎಎಸ್‌ಜೆ) ರಚನಾ ಸಿಂಗ್ ಅವರು ಮಾನವ ಕಳ್ಳಸಾಗಣೆಯ ಎಲ್ಲ 15 ಆರೋಪಿಗಳಿಗೆ 14 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಮಾಂಸ ಕಳ್ಳಸಾಗಣೆ ಆರೋಪದ 26 ಆರೋಪಿಗಳಿಗೆ 10 ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಜನವರಿ 18, 2022 ರಂದು, ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು 41 ಜನರನ್ನು ದೋಷಿ ಎಂದು ಘೋಷಿಸಿದ್ದರು. ಎಎಸ್‌ಜೆ ಆರೋಪಿಗಳ ವಿರುದ್ಧ ಲಭ್ಯವಿರುವ ಸತ್ಯ ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಹಾಜರಾದ ಪ್ರತಿವಾದಿ ವಕೀಲರು ಮತ್ತು ಜಿಲ್ಲಾ ಸರ್ಕಾರಿ ವಕೀಲ (ಕ್ರಿಮಿನಲ್) ಗುಲಾಬ್ ಚಂದ್ರ ಅಗ್ರಹರಿ ಅವರ ವಾದ ಆಲಿಸಿದ ನಂತರ ಶಿಕ್ಷೆ ಪ್ರಕಟಿಸಲಾಯಿತು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಪ್ರಕರಣದ ವಿವರ: ಈ ಆರೋಪಿಗಳು ಹೆಣ್ಣು ಮಕ್ಕಳ ಬಡತನದ ಲಾಭ ಪಡೆದುಕೊಂಡು ಆಮಿಷ ಒಡ್ಡುತ್ತಿದ್ದರು. ಬಳಿಕ ಅವರನ್ನು ಮೀರ್‌ಗಂಜ್‌ನ ರೆಡ್ - ಲೈಟ್ ಪ್ರದೇಶದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಕೆಲವು ಸಾಮಾಜಿಕ ಸಂಘಟನೆಗಳು ಮತ್ತು ಕಾರ್ಯಕರ್ತರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಿದ್ದು, ನಗರದ ಹೃದಯಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮಾಂಸದ ವ್ಯಾಪಾರ ಮತ್ತು ಮಾನವ ಕಳ್ಳಸಾಗಣೆ ತೆಗೆದುಹಾಕಲು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು.

ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ 2016ರ ಮೇ 1ರಂದು ಕಾರ್ಮಿಕರ ದಿನಾಚರಣೆಯಂದು ಬೃಹತ್ ಕಾರ್ಯಾಚರಣೆ ನಡೆಸಿ ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟ ಹಲವು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದರು. ಅಲ್ಲದೇ ಪ್ರಕರಣ ಸಂಬಂಧ 48 ಮಂದಿಯನ್ನು ಬಂಧಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಚುನಾವಣೆ ಬಿರುಸಿರುವ ಉತ್ತರ ಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ ನಾಲ್ವರು ಮೃತ, ಹಲವರು ಅಸ್ವಸ್ಥ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.