ETV Bharat / bharat

ಜಾನುವಾರು ಮೇಯಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ: 5 ಸಾವು, 8 ಮಂದಿ ಗಾಯ

author img

By PTI

Published : Sep 13, 2023, 8:24 PM IST

ಜಾನುವಾರು ಮೇಯಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದು ಐವರು ಸಾವನ್ನಪ್ಪಿ, 8 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

5-killed-several-injured-in-clash-between-2-groups-in-datia
ಜಾನುವಾರು ಮೇಯಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ : 5 ಸಾವು, 8 ಮಂದಿ ಗಾಯ

ದಾಟಿಯಾ (ಮಧ್ಯಪ್ರದೇಶ): ಜಾನುವಾರು ಮೇಯಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದು 5 ಮಂದಿ ಸಾವನ್ನಪ್ಪಿ, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದಾಟಿಯಾ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರೆಂಡಾ ಗ್ರಾಮದಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಡಾಂಗಿ ಮತ್ತು ಪಾಲ್​ ಸಮುದಾಯದ ನಡುವೆ ಗುಂಡಿನ ಚಕಮಕಿ ನಡೆದಿದೆ. ಗೃಹ ಸಚಿವ ನರೋತ್ತಮ್​ ಮಿಶ್ರಾ ಅವರ ತವರು ಕ್ಷೇತ್ರದಲ್ಲಿ ಈ ಘಟನೆ ನಡೆದಿದೆ.

ಈ ಬಗ್ಗೆ ಮಾಹಿತಿ ನೀಡಿ ದಾಟಿಯಾ ಎಸ್ಪಿ ಪ್ರದೀಪ್​ ಶರ್ಮಾ, ಕಳೆದ ಮೂರು ದಿನಗಳ ಹಿಂದೆ ಜಾನುವಾರುಗಳನ್ನು ಮೇಯಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕಾಶ್​ ಡಾಂಗಿ ಮತ್ತು ಪ್ರೀತಮ್​ ಪಾಲ್​ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ, ಇಬ್ಬರ ಜಗಳ ತಾರಕ್ಕೇರಿದ್ದು, ಈ ವೇಳೆ ಪ್ರಕಾಶ್​ ಪ್ರೀತಮ್​ಗೆ ಕಪಾಳಮೋಕ್ಷ ಮಾಡಿದ್ದ. ಈ ಸಂಬಂಧ ಎರಡು ಕಡೆಯಿಂದಲೂ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು ಎಂದು ಮಾಹಿತಿ ನೀಡಿದರು.

ಬುಧವಾರ ಬೆಳಗ್ಗೆ ಮತ್ತೆ ಎರಡು ಸಮುದಾಯದವರು ಮುಖಾಮುಖಿಯಾಗಿ ಈ ವೇಳೆ ಎರಡೂ ಕಡೆಯಿಂದ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಗೆ 5 ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿಸಿದರು. ಮೃತರನ್ನು ಪ್ರಕಾಶ್​ ಡಾಂಗಿ, ರಾಮ್​ ನರೇಶ್​ ಡಾಂಗಿ, ಸುರೇಂದ್ರ ಡಾಂಗಿ, ರಾಜೇಂದ್ರ ಪಾಲ್​, ರಾಘವೇಂದ್ರ ಪಾಲ್​ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ 30 ವಯಸ್ಸಿಗಿಂತ ಮೇಲ್ಪಟ್ಟವರು. ಗಾಯಾಳುಗಳನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರೆದಿದೆ ಎಂದು ಎಸ್​ಪಿ ಪ್ರದೀಪ್​ ಶರ್ಮಾ ಮಾಹಿತಿ ನೀಡಿದರು.

ಹೋಟೆಲ್​ ಮ್ಯಾನೇಜರ್​ ಗುಂಡಿಕ್ಕಿ ಹತ್ಯೆ : ಕೆಲಸದಿಂದ ಕಿತ್ತು ಹಾಕಿದ ದ್ವೇಷದ ಹಿನ್ನೆಲೆ ಮಾಜಿ ಉದ್ಯೋಗಿಯೊಬ್ಬ ರೆಸ್ಟೋರೆಂಟ್ ಮ್ಯಾನೇಜರ್​ನನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಕಳೆದ ಆಗಸ್ಟ್​ ತಿಂಗಳಲ್ಲಿ ತೆಲಂಗಾಣದ ಹೈದರಾಬಾದ್​ನಲ್ಲಿ ನಡೆದಿತ್ತು. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಜಾಗೊಂಡ ಉದ್ಯೋಗಿ ನಾಡಬಂದೂಕು ಬಳಸಿ ಮ್ಯಾನೇಜರ್​ನನ್ನು ಹತ್ಯೆ ಮಾಡಿದ್ದ. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದರು.

ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡಿನ ದಾಳಿ ನಡೆದಿತ್ತು. ಮದೀನಗುಡಾದ ಸಂದರ್ಶಿನಿ ಎಲೈಟ್ ರೆಸ್ಟೋರೆಂಟ್‌ನಲ್ಲಿ ಜನರಲ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ದೇವೇಂದ್ರ ಗಯಾನ್ (35) ಮೃತ ವ್ಯಕ್ತಿ. ಇವರ ಮೇಲೆ ಅಪರಿಚಿತ ವ್ಯಕ್ತಿಗಳು ರಾತ್ರಿ ವೇಳೆ ಏಕಾಏಕಿ ರೆಸ್ಟೋರೆಂಟ್​ಗೆ ನುಗ್ಗಿ ಗುಂಡು ಹಾರಿಸಿದ್ದರು. ಒಟ್ಟು ಆರು ಗುಂಡುಗಳು ದೇವೇಂದ್ರ ಅವರ ದೇಹವನ್ನು ಹೊಕ್ಕಿತ್ತು. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದರು.

ಇದನ್ನೂ ಓದಿ : ಬಿಹಾರದ ಅರಾರಿಯಾದಲ್ಲಿ ಪತ್ರಕರ್ತನ ಹತ್ಯೆ: ಮನೆಗೆ ನುಗ್ಗಿದ ದುಷ್ಕರ್ಮಿಗಳಿಂದ ಗುಂಡಿನ ದಾಳಿ..!

ದಾಟಿಯಾ (ಮಧ್ಯಪ್ರದೇಶ): ಜಾನುವಾರು ಮೇಯಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದು 5 ಮಂದಿ ಸಾವನ್ನಪ್ಪಿ, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದಾಟಿಯಾ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರೆಂಡಾ ಗ್ರಾಮದಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಡಾಂಗಿ ಮತ್ತು ಪಾಲ್​ ಸಮುದಾಯದ ನಡುವೆ ಗುಂಡಿನ ಚಕಮಕಿ ನಡೆದಿದೆ. ಗೃಹ ಸಚಿವ ನರೋತ್ತಮ್​ ಮಿಶ್ರಾ ಅವರ ತವರು ಕ್ಷೇತ್ರದಲ್ಲಿ ಈ ಘಟನೆ ನಡೆದಿದೆ.

ಈ ಬಗ್ಗೆ ಮಾಹಿತಿ ನೀಡಿ ದಾಟಿಯಾ ಎಸ್ಪಿ ಪ್ರದೀಪ್​ ಶರ್ಮಾ, ಕಳೆದ ಮೂರು ದಿನಗಳ ಹಿಂದೆ ಜಾನುವಾರುಗಳನ್ನು ಮೇಯಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕಾಶ್​ ಡಾಂಗಿ ಮತ್ತು ಪ್ರೀತಮ್​ ಪಾಲ್​ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ, ಇಬ್ಬರ ಜಗಳ ತಾರಕ್ಕೇರಿದ್ದು, ಈ ವೇಳೆ ಪ್ರಕಾಶ್​ ಪ್ರೀತಮ್​ಗೆ ಕಪಾಳಮೋಕ್ಷ ಮಾಡಿದ್ದ. ಈ ಸಂಬಂಧ ಎರಡು ಕಡೆಯಿಂದಲೂ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು ಎಂದು ಮಾಹಿತಿ ನೀಡಿದರು.

ಬುಧವಾರ ಬೆಳಗ್ಗೆ ಮತ್ತೆ ಎರಡು ಸಮುದಾಯದವರು ಮುಖಾಮುಖಿಯಾಗಿ ಈ ವೇಳೆ ಎರಡೂ ಕಡೆಯಿಂದ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಗೆ 5 ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿಸಿದರು. ಮೃತರನ್ನು ಪ್ರಕಾಶ್​ ಡಾಂಗಿ, ರಾಮ್​ ನರೇಶ್​ ಡಾಂಗಿ, ಸುರೇಂದ್ರ ಡಾಂಗಿ, ರಾಜೇಂದ್ರ ಪಾಲ್​, ರಾಘವೇಂದ್ರ ಪಾಲ್​ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ 30 ವಯಸ್ಸಿಗಿಂತ ಮೇಲ್ಪಟ್ಟವರು. ಗಾಯಾಳುಗಳನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರೆದಿದೆ ಎಂದು ಎಸ್​ಪಿ ಪ್ರದೀಪ್​ ಶರ್ಮಾ ಮಾಹಿತಿ ನೀಡಿದರು.

ಹೋಟೆಲ್​ ಮ್ಯಾನೇಜರ್​ ಗುಂಡಿಕ್ಕಿ ಹತ್ಯೆ : ಕೆಲಸದಿಂದ ಕಿತ್ತು ಹಾಕಿದ ದ್ವೇಷದ ಹಿನ್ನೆಲೆ ಮಾಜಿ ಉದ್ಯೋಗಿಯೊಬ್ಬ ರೆಸ್ಟೋರೆಂಟ್ ಮ್ಯಾನೇಜರ್​ನನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಕಳೆದ ಆಗಸ್ಟ್​ ತಿಂಗಳಲ್ಲಿ ತೆಲಂಗಾಣದ ಹೈದರಾಬಾದ್​ನಲ್ಲಿ ನಡೆದಿತ್ತು. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಜಾಗೊಂಡ ಉದ್ಯೋಗಿ ನಾಡಬಂದೂಕು ಬಳಸಿ ಮ್ಯಾನೇಜರ್​ನನ್ನು ಹತ್ಯೆ ಮಾಡಿದ್ದ. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದರು.

ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡಿನ ದಾಳಿ ನಡೆದಿತ್ತು. ಮದೀನಗುಡಾದ ಸಂದರ್ಶಿನಿ ಎಲೈಟ್ ರೆಸ್ಟೋರೆಂಟ್‌ನಲ್ಲಿ ಜನರಲ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ದೇವೇಂದ್ರ ಗಯಾನ್ (35) ಮೃತ ವ್ಯಕ್ತಿ. ಇವರ ಮೇಲೆ ಅಪರಿಚಿತ ವ್ಯಕ್ತಿಗಳು ರಾತ್ರಿ ವೇಳೆ ಏಕಾಏಕಿ ರೆಸ್ಟೋರೆಂಟ್​ಗೆ ನುಗ್ಗಿ ಗುಂಡು ಹಾರಿಸಿದ್ದರು. ಒಟ್ಟು ಆರು ಗುಂಡುಗಳು ದೇವೇಂದ್ರ ಅವರ ದೇಹವನ್ನು ಹೊಕ್ಕಿತ್ತು. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದರು.

ಇದನ್ನೂ ಓದಿ : ಬಿಹಾರದ ಅರಾರಿಯಾದಲ್ಲಿ ಪತ್ರಕರ್ತನ ಹತ್ಯೆ: ಮನೆಗೆ ನುಗ್ಗಿದ ದುಷ್ಕರ್ಮಿಗಳಿಂದ ಗುಂಡಿನ ದಾಳಿ..!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.