ETV Bharat / bharat

ರಸ್ತೆ ಅಪಘಾತದಲ್ಲಿ ಆರು, ಉಗ್ರರ ಗ್ರೆನೇಡ್ ದಾಳಿಯಲ್ಲಿ ಓರ್ವ CRPF ಯೋಧನಿಗೆ ಗಾಯ

author img

By

Published : Aug 13, 2022, 10:49 PM IST

Updated : Aug 13, 2022, 10:58 PM IST

ಯೋಧರು ಪ್ರಯಾಣಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಕಾರಣ ಆರು ಮಂದಿ ಸಿಆರ್​ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ.

CRPF jawans injured
CRPF jawans injured

ಬಂಡಿಪೋರಾ(ಶ್ರೀನಗರ): ಬಂಡಿಪೋರಾ ಜಿಲ್ಲೆಯ ಸುಂಬಲ್ ಪ್ರದೇಶದಲ್ಲಿ ಇಂದು ಸಂಜೆ ನಡೆದ ರಸ್ತೆ ಅಪಘಾತವೊಂದರಲ್ಲಿ ಆರು ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. 164 BN e-coy ಬೆಟಾಲಿಯನ್​​ಗೆ ಸೇರಿದ್ದ ಯೋಧರು ಗಾಯಗೊಂಡಿದ್ದಾರೆ.

ರಸ್ತೆ ಅಪಘಾತದಲ್ಲಿ ಆರು ಯೋಧರಿಗೆ ಗಾಯ

ಯೋಧರು​ ಪ್ರಯಾಣಿಸುತ್ತಿದ್ದ ವಾಹನ ವಸ್ಕುರಾ ಬಳಿ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಯೋಧರನ್ನು ಚಿಕಿತ್ಸೆಗೋಸ್ಕರ ಜೆವಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಆತ್ಮಾಹುತಿ ದಾಳಿ: ಇಬ್ಬರು ಉಗ್ರರು ಖತಂ, ಮೂವರು ಯೋಧರು ಹುತಾತ್ಮ

ಮತ್ತೊಂದೆಡೆ ಶ್ರೀನಗರದಲ್ಲಿ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದಿರುವ ಪರಿಣಾಮ ಓರ್ವ ಸಿಆರ್​ಪಿಎಫ್​ ಸಿಬ್ಬಂದಿ ಗಾಯಗೊಂಡಿದ್ದಾರೆ. ಜಮ್ಮು- ಕಾಶ್ಮೀರದ ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಶ್ರೀನಗರ ಪೊಲೀಸರು ಟ್ವೀಟ್ ಮಾಡಿದ್ದಾರೆ.

  • One grenade was lobbed by terrorist(s) towards security forces on Ali jan road, Eidgah. This caused minor splinter injuries to one CRPF personnel. Cordon and Search operations have been launched to nab culprit(s)

    — Srinagar Police (@SrinagarPolice) August 13, 2022 " class="align-text-top noRightClick twitterSection" data=" ">

ಎರಡು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದರು.

ಬಂಡಿಪೋರಾ(ಶ್ರೀನಗರ): ಬಂಡಿಪೋರಾ ಜಿಲ್ಲೆಯ ಸುಂಬಲ್ ಪ್ರದೇಶದಲ್ಲಿ ಇಂದು ಸಂಜೆ ನಡೆದ ರಸ್ತೆ ಅಪಘಾತವೊಂದರಲ್ಲಿ ಆರು ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. 164 BN e-coy ಬೆಟಾಲಿಯನ್​​ಗೆ ಸೇರಿದ್ದ ಯೋಧರು ಗಾಯಗೊಂಡಿದ್ದಾರೆ.

ರಸ್ತೆ ಅಪಘಾತದಲ್ಲಿ ಆರು ಯೋಧರಿಗೆ ಗಾಯ

ಯೋಧರು​ ಪ್ರಯಾಣಿಸುತ್ತಿದ್ದ ವಾಹನ ವಸ್ಕುರಾ ಬಳಿ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಯೋಧರನ್ನು ಚಿಕಿತ್ಸೆಗೋಸ್ಕರ ಜೆವಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಆತ್ಮಾಹುತಿ ದಾಳಿ: ಇಬ್ಬರು ಉಗ್ರರು ಖತಂ, ಮೂವರು ಯೋಧರು ಹುತಾತ್ಮ

ಮತ್ತೊಂದೆಡೆ ಶ್ರೀನಗರದಲ್ಲಿ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದಿರುವ ಪರಿಣಾಮ ಓರ್ವ ಸಿಆರ್​ಪಿಎಫ್​ ಸಿಬ್ಬಂದಿ ಗಾಯಗೊಂಡಿದ್ದಾರೆ. ಜಮ್ಮು- ಕಾಶ್ಮೀರದ ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಶ್ರೀನಗರ ಪೊಲೀಸರು ಟ್ವೀಟ್ ಮಾಡಿದ್ದಾರೆ.

  • One grenade was lobbed by terrorist(s) towards security forces on Ali jan road, Eidgah. This caused minor splinter injuries to one CRPF personnel. Cordon and Search operations have been launched to nab culprit(s)

    — Srinagar Police (@SrinagarPolice) August 13, 2022 " class="align-text-top noRightClick twitterSection" data=" ">

ಎರಡು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದರು.

Last Updated : Aug 13, 2022, 10:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.