ETV Bharat / bharat

ಎರಡು ಪ್ರತ್ಯೇಕ ಅಪಘಾತ.. 10 ಮಂದಿ ಸಾವು

author img

By ETV Bharat Karnataka Team

Published : Sep 6, 2023, 5:55 PM IST

ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮತ್ತೊಂದು ಕಡೆ ಗೂಡ್ಸ್​ ವಾಹನವೊಂದು ನದಿಗೆ ಉರುಳಿ ಮಹಿಳೆ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಛತ್ತೀಸ್​ಗಢದ ದುರ್ಗ್​ ಜಿಲ್ಲೆಯಲ್ಲಿ ನಡೆದಿದೆ

6-persons-died-when-a-van-collided-with-a-truck-near-salem
ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಆರು ಮಂದಿ ಸ್ಥಳದಲ್ಲೇ ಸಾವು

ಸೇಲಂ (ತಮಿಳುನಾಡು) : ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಈರೋಡ್​ ಜಿಲ್ಲೆಯ ಎಂಗೂರು ಗುಟ್ಟಪಾಲಯಂ ನಿವಾಸಿಗಳಾದ ಪಳನಿಸ್ವಾಮಿ, ಪತ್ನಿ ಪಾಪಪತಿ, ಪಾಪಪತಿ ಸೋದರಳಿಯ ಆರ್ಮುಗಂ, ಆರ್ಮುಗಂ ಪತ್ನಿ ಮಂಜುಳಾ, ಸೋದರ ಸಂಬಂಧಿ ಸೆಲ್ವರಾಜ್​, ಮಗು ಸಂಜನಾ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಪ್ರಿಯಾ ರಾಜದೊರೈ ಮತ್ತು ವಿಘ್ನೇಶ್​ ಎಂಬವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೆಪ್ಟೆಂಬರ್​ 5ರಂದು ಪಳನಿಸ್ವಾಮಿ ಮತ್ತು ಕುಟುಂಬಸ್ಥರು ಸೇಲಂನಲ್ಲಿರುವ ತನ್ನ ಮಗಳ ಮನೆಗೆ ತೆರಳಿದ್ದರು. ಬಳಿಕ ಇಂದು ಬೆಳಗ್ಗೆ ಸೇಲಂನಿಂದ ಪೆರುಂದುರೈಗೆ ಮಗಳು ಮತ್ತು ಮೊಮ್ಮಗಳೊಂದಿಗೆ ಹಿಂತಿರುಗುತ್ತಿದ್ದರು. ಈ ವೇಳೆ ಸೇಲಂ - ಕೊಯಂಬತ್ತೂರು ರಾಷ್ಟ್ರೀಯ ಹೆದ್ದಾರಿಯ ಕೌಂಡನೂರು ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಹಿಂದಿನಿಂದ ಬಂದು ಗುದ್ದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸಂಗಕಿರಿ ಪೊಲೀಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹಗಳನ್ನು ಸಂಗಕಿರಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಗೂಡ್ಸ್​ ವಾಹನ ನದಿಗೆ ಉರುಳಿ ನಾಲ್ವರು ಸಾವು : ಗೂಡ್ಸ್​ ವಾಹನವೊಂದು ನದಿಗೆ ಉರುಳಿ ಮಹಿಳೆ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಛತ್ತೀಸ್​ಗಢದ ದುರ್ಗ್​ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಶಿವನಾಥ್​ ನದಿಗೆ ಗೂಡ್ಸ್​ ವಾಹನ ಉರುಳಿಬಿದ್ದ ಪರಿಣಾಮ ಒಬ್ಬ ಮಹಿಳೆ, ಒಬ್ಬ ಪುರುಷ ಮತ್ತು ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಎಸ್​ಡಿಆರ್​ಎಫ್​ ತಂಡವು ಆರು ಘಂಟೆಗಳ ಕಾರ್ಯಾಚರಣೆ ನಡೆಸಿ ವಾಹನವನ್ನು ಮತ್ತು ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಕ್ರೇನ್​ನ ಸಹಾಯದಿಂದ ವಾಹನವನ್ನು ಮೇಲೆತ್ತಲಾಯಿತು.

ಈ ಬಗ್ಗೆ ಮಾಹಿತಿ ನೀಡಿದ ಪುಲ್ಗಾಂವ್​ ಪೊಲೀಸ್​ ಅಧಿಕಾರಿ, ಈ ಘಟನೆಯು ಮಂಗಳವಾರ ರಾತ್ರಿ ನಡೆದಿರುವ ಸಾಧ್ಯತೆ ಇದೆ. ಶಿವನಾಥ್​ ನದಿಯ ಹಳೆ ಸೇತುವೆಯಿಂದ ಗೂಡ್ಸ್​ ವಾಹನ ನೀರಿಗೆ ಬಿದ್ದಿದೆ. ಈ ಗೂಡ್ಸ್​ ವಾಹನವು ಅಂಜೋರಾದಿಂದ ದುರ್ಗ ಕಡೆಗೆ ಬರುತ್ತಿತ್ತು. ವಾಹನದಲ್ಲಿ ಒಟ್ಟು ಐವರು ಇದ್ದರು ಎಂದು ತಿಳಿದು ಬಂದಿದೆ. ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಹೇಳಿದರು.

ಇದನ್ನೂ ಓದಿ : ಮುಂಡಗೋಡದಲ್ಲಿ ಇಬ್ಬರು ಟಿಬೆಟಿಯನ್ ವ್ಯಕ್ತಿಗಳ ನಡುವೆ ಮಾರಾಮಾರಿ: ಓರ್ವ ಸಾವು, ಮಾಜಿ ಸೈನಿಕನಿಗೆ ಗಂಭೀರ ಗಾಯ

ಸೇಲಂ (ತಮಿಳುನಾಡು) : ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಈರೋಡ್​ ಜಿಲ್ಲೆಯ ಎಂಗೂರು ಗುಟ್ಟಪಾಲಯಂ ನಿವಾಸಿಗಳಾದ ಪಳನಿಸ್ವಾಮಿ, ಪತ್ನಿ ಪಾಪಪತಿ, ಪಾಪಪತಿ ಸೋದರಳಿಯ ಆರ್ಮುಗಂ, ಆರ್ಮುಗಂ ಪತ್ನಿ ಮಂಜುಳಾ, ಸೋದರ ಸಂಬಂಧಿ ಸೆಲ್ವರಾಜ್​, ಮಗು ಸಂಜನಾ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಪ್ರಿಯಾ ರಾಜದೊರೈ ಮತ್ತು ವಿಘ್ನೇಶ್​ ಎಂಬವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೆಪ್ಟೆಂಬರ್​ 5ರಂದು ಪಳನಿಸ್ವಾಮಿ ಮತ್ತು ಕುಟುಂಬಸ್ಥರು ಸೇಲಂನಲ್ಲಿರುವ ತನ್ನ ಮಗಳ ಮನೆಗೆ ತೆರಳಿದ್ದರು. ಬಳಿಕ ಇಂದು ಬೆಳಗ್ಗೆ ಸೇಲಂನಿಂದ ಪೆರುಂದುರೈಗೆ ಮಗಳು ಮತ್ತು ಮೊಮ್ಮಗಳೊಂದಿಗೆ ಹಿಂತಿರುಗುತ್ತಿದ್ದರು. ಈ ವೇಳೆ ಸೇಲಂ - ಕೊಯಂಬತ್ತೂರು ರಾಷ್ಟ್ರೀಯ ಹೆದ್ದಾರಿಯ ಕೌಂಡನೂರು ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಹಿಂದಿನಿಂದ ಬಂದು ಗುದ್ದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸಂಗಕಿರಿ ಪೊಲೀಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹಗಳನ್ನು ಸಂಗಕಿರಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಗೂಡ್ಸ್​ ವಾಹನ ನದಿಗೆ ಉರುಳಿ ನಾಲ್ವರು ಸಾವು : ಗೂಡ್ಸ್​ ವಾಹನವೊಂದು ನದಿಗೆ ಉರುಳಿ ಮಹಿಳೆ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಛತ್ತೀಸ್​ಗಢದ ದುರ್ಗ್​ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಶಿವನಾಥ್​ ನದಿಗೆ ಗೂಡ್ಸ್​ ವಾಹನ ಉರುಳಿಬಿದ್ದ ಪರಿಣಾಮ ಒಬ್ಬ ಮಹಿಳೆ, ಒಬ್ಬ ಪುರುಷ ಮತ್ತು ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಎಸ್​ಡಿಆರ್​ಎಫ್​ ತಂಡವು ಆರು ಘಂಟೆಗಳ ಕಾರ್ಯಾಚರಣೆ ನಡೆಸಿ ವಾಹನವನ್ನು ಮತ್ತು ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಕ್ರೇನ್​ನ ಸಹಾಯದಿಂದ ವಾಹನವನ್ನು ಮೇಲೆತ್ತಲಾಯಿತು.

ಈ ಬಗ್ಗೆ ಮಾಹಿತಿ ನೀಡಿದ ಪುಲ್ಗಾಂವ್​ ಪೊಲೀಸ್​ ಅಧಿಕಾರಿ, ಈ ಘಟನೆಯು ಮಂಗಳವಾರ ರಾತ್ರಿ ನಡೆದಿರುವ ಸಾಧ್ಯತೆ ಇದೆ. ಶಿವನಾಥ್​ ನದಿಯ ಹಳೆ ಸೇತುವೆಯಿಂದ ಗೂಡ್ಸ್​ ವಾಹನ ನೀರಿಗೆ ಬಿದ್ದಿದೆ. ಈ ಗೂಡ್ಸ್​ ವಾಹನವು ಅಂಜೋರಾದಿಂದ ದುರ್ಗ ಕಡೆಗೆ ಬರುತ್ತಿತ್ತು. ವಾಹನದಲ್ಲಿ ಒಟ್ಟು ಐವರು ಇದ್ದರು ಎಂದು ತಿಳಿದು ಬಂದಿದೆ. ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಹೇಳಿದರು.

ಇದನ್ನೂ ಓದಿ : ಮುಂಡಗೋಡದಲ್ಲಿ ಇಬ್ಬರು ಟಿಬೆಟಿಯನ್ ವ್ಯಕ್ತಿಗಳ ನಡುವೆ ಮಾರಾಮಾರಿ: ಓರ್ವ ಸಾವು, ಮಾಜಿ ಸೈನಿಕನಿಗೆ ಗಂಭೀರ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.