ETV Bharat / bharat

ನಕ್ಸಲ್‌ರಿಂದ ನೆಲ ಬಾಂಬ್‌ ಸ್ಫೋಟ : ಒಡಿಶಾದಲ್ಲಿ ಪತ್ರಕರ್ತ ಬಲಿ

author img

By

Published : Feb 5, 2022, 3:59 PM IST

ಸೇತುವೆ ಬಳಿ ನೆಲಬಾಂಬ್‌ಗಳನ್ನು ಅಡಗಿಸಿಡಲಾಗಿತ್ತು. ಆಕಸ್ಮಿಕವಾಗಿ ಬಿಸ್ವಾಲ್ ಅದರ ಮೇಲೆ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಬಂದ ಕಲಹಂಡಿ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ತನಿಖೆ ಆರಂಭಿಸಿದ್ದಾರೆ..

A journalist in Odisha killed in an explosion by maoist
ಒಡಿಶಾದಲ್ಲಿ ಪತ್ರಕರ್ತ ಬಲಿ

ಕಲಹಂಡಿ (ಒಡಿಶಾ): ಒಡಿಶಾದ ನಕ್ಸಲ್​ ಪೀಡಿತ ಕಲಹಂಡಿ ಜಿಲ್ಲೆಯ ಕರ್ಲಕುಂಟಾ ಸೇತುವೆಯ ಬಳಿ ಮಾವೋವಾದಿಗಳು ಅಡಗಿಸಿಟ್ಟಿದ್ದ ನೆಲಬಾಂಬ್‌ ಸ್ಫೋಟದಿಂದಾಗಿ ಪತ್ರಕರ್ತರೊಬ್ಬರು ಸಾವನ್ನಪ್ಪಿದ್ದಾರೆ.

ಕಲಹಂಡಿ ಜಿಲ್ಲೆಯಲ್ಲಿ ಇಂದು ನಡೆಯುತ್ತಿದ್ದ ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸುವಂತೆ ನಕ್ಸಲರು ಸ್ಥಳೀಯರಿಗೆ ಎಚ್ಚರಿಕೆ ನೀಡಿ ಕೆಲವು ಪೋಸ್ಟರ್‌ಗಳನ್ನು ಅಂಟಿಸಿದ್ದರು.

ಈ ಬಗ್ಗೆ ಸ್ಥಳೀಯ ಪತ್ರಿಕೆಯೊಂದರಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ರೋಹಿತ್ ಕುಮಾರ್ ಬಿಸ್ವಾಲ್ ಅವರಿಗೆ ಮಾಹಿತಿ ದೊರೆತಿದ್ದು, ಮಾಹಿತಿಯ ಸತ್ಯಾಸತ್ಯತೆ ಪರಿಶೀಲಿಸಲು ಅವರು ಸ್ಥಳಕ್ಕೆ ಧಾವಿಸಿದರು. ಬಿಸ್ವಾಲ್ ಅವರು ಪೋಸ್ಟರ್‌ಗಳ ಚಿತ್ರಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದಾಗ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ.

A journalist in Odisha killed in an explosion by maoist
ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸುವಂತೆ ನಕ್ಸಲರ ಪೋಸ್ಟರ್​

ಇದನ್ನೂ ಓದಿ: ಕುಖ್ಯಾತ ರೌಡಿಯ ಹಂತಕ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಅನುಮಾನಾಸ್ಪದ ಸಾವು!

ಸೇತುವೆ ಬಳಿ ನೆಲಬಾಂಬ್‌ಗಳನ್ನು ಅಡಗಿಸಿಡಲಾಗಿತ್ತು. ಆಕಸ್ಮಿಕವಾಗಿ ಬಿಸ್ವಾಲ್ ಅದರ ಮೇಲೆ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಬಂದ ಕಲಹಂಡಿ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ತನಿಖೆ ಆರಂಭಿಸಿದ್ದಾರೆ.

ಕಲಹಂಡಿ (ಒಡಿಶಾ): ಒಡಿಶಾದ ನಕ್ಸಲ್​ ಪೀಡಿತ ಕಲಹಂಡಿ ಜಿಲ್ಲೆಯ ಕರ್ಲಕುಂಟಾ ಸೇತುವೆಯ ಬಳಿ ಮಾವೋವಾದಿಗಳು ಅಡಗಿಸಿಟ್ಟಿದ್ದ ನೆಲಬಾಂಬ್‌ ಸ್ಫೋಟದಿಂದಾಗಿ ಪತ್ರಕರ್ತರೊಬ್ಬರು ಸಾವನ್ನಪ್ಪಿದ್ದಾರೆ.

ಕಲಹಂಡಿ ಜಿಲ್ಲೆಯಲ್ಲಿ ಇಂದು ನಡೆಯುತ್ತಿದ್ದ ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸುವಂತೆ ನಕ್ಸಲರು ಸ್ಥಳೀಯರಿಗೆ ಎಚ್ಚರಿಕೆ ನೀಡಿ ಕೆಲವು ಪೋಸ್ಟರ್‌ಗಳನ್ನು ಅಂಟಿಸಿದ್ದರು.

ಈ ಬಗ್ಗೆ ಸ್ಥಳೀಯ ಪತ್ರಿಕೆಯೊಂದರಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ರೋಹಿತ್ ಕುಮಾರ್ ಬಿಸ್ವಾಲ್ ಅವರಿಗೆ ಮಾಹಿತಿ ದೊರೆತಿದ್ದು, ಮಾಹಿತಿಯ ಸತ್ಯಾಸತ್ಯತೆ ಪರಿಶೀಲಿಸಲು ಅವರು ಸ್ಥಳಕ್ಕೆ ಧಾವಿಸಿದರು. ಬಿಸ್ವಾಲ್ ಅವರು ಪೋಸ್ಟರ್‌ಗಳ ಚಿತ್ರಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದಾಗ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ.

A journalist in Odisha killed in an explosion by maoist
ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸುವಂತೆ ನಕ್ಸಲರ ಪೋಸ್ಟರ್​

ಇದನ್ನೂ ಓದಿ: ಕುಖ್ಯಾತ ರೌಡಿಯ ಹಂತಕ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಅನುಮಾನಾಸ್ಪದ ಸಾವು!

ಸೇತುವೆ ಬಳಿ ನೆಲಬಾಂಬ್‌ಗಳನ್ನು ಅಡಗಿಸಿಡಲಾಗಿತ್ತು. ಆಕಸ್ಮಿಕವಾಗಿ ಬಿಸ್ವಾಲ್ ಅದರ ಮೇಲೆ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಬಂದ ಕಲಹಂಡಿ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ತನಿಖೆ ಆರಂಭಿಸಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.