ETV Bharat / bharat

ರಾಜ್ಯಸಭೆಗೆ ಪಂಜಾಬ್​ನಿಂದ ಹರ್ಭಜನ್ ಸಿಂಗ್​ ಸೇರಿ ಐವರ ನಾಮ ನಿರ್ದೇಶನ

author img

By

Published : Mar 21, 2022, 11:58 AM IST

ಇತ್ತೀಚಿಗೆ ನಡೆದ ಪಂಜಾಬ್​ ವಿಧಾನಸಭೆ ಚುನಾವಣೆಯಲ್ಲಿ 117 ಸ್ಥಾನಗಳ ಪೈಕಿ 92 ಸ್ಥಾನಗಳಲ್ಲಿ ಆಪ್ ಗೆಲುವು ಸಾಧಿಸುವುದರೊಂದಿಗೆ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿದೆ. ಇತ್ತ, ಪಂಜಾಬ್​ನ ಐದು ರಾಜ್ಯಸಭೆ ಸದಸ್ಯ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

harbhajan singh
harbhajan singh

ನವದೆಹಲಿ: ಪಂಜಾಬ್​ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿರುವ ಆಮ್​ ಆದ್ಮಿ ಪಕ್ಷವು ಮುಂಬರುವ ರಾಜ್ಯಸಭಾ ಚುನಾವಣೆಗೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್​ ಸೇರಿ ಐವರನ್ನು ನಾಮನಿರ್ದೇಶನ ಮಾಡಲು ಉದ್ದೇಶಿಸಿದೆ.

ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ 117 ಸ್ಥಾನಗಳ ಪೈಕಿ 92 ಸ್ಥಾನಗಳಲ್ಲಿ ಆಪ್ ಗೆಲುವು ಸಾಧಿಸುವುದರೊಂದಿಗೆ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿದೆ. ಇತ್ತ, ಪಂಜಾಬ್​ನ ಐದು ರಾಜ್ಯಸಭೆ ಸದಸ್ಯ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಹೀಗಾಗಿ ರಾಜ್ಯಸಭೆಯ ಐದು ಸ್ಥಾನಗಳು ಆಮ್​ ಆದ್ಮಿ ಪಕ್ಷಕ್ಕೆ ಬೋನಸ್​​ ರೂಪದಲ್ಲಿ ಸಿಕ್ಕಿವೆ. ಆದ್ದರಿಂದ ಪಂಜಾಬ್‌ನಿಂದ ಕ್ರಿಕೆಟಿಗ ಹರ್ಭಜನ್ ಸಿಂಗ್, ದೆಹಲಿ ಶಾಸಕ ರಾಘವ್ ಚಡ್ಡಾ ಮತ್ತು ಡಾ.ಸಂದೀಪ್ ಪಾಠಕ್, ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ ಕುಲಪತಿ ಅಶೋಕ್ ಮಿತ್ತಲ್ ಹಾಗೂ ಸಂಜೀವ್ ಅರೋರಾ ಅವರನ್ನು ನಾಮನಿರ್ದೇಶನ ಮಾಡಲು ಆಮ್ ಆದ್ಮಿ ಪಕ್ಷ ತೀರ್ಮಾನಿಸಿದೆ.

  • Aam Aadmi Party to nominate cricketer Harbhajan Singh and Delhi MLA Raghav Chadha to Rajya Sabha, from Punjab

    — ANI (@ANI) March 21, 2022 " class="align-text-top noRightClick twitterSection" data=" ">

ಪ್ರಸ್ತುತ ಪಂಜಾಬ್​ನಿಂದ ಆಯ್ಕೆಯಾಗಿರುವ ಕಾಂಗ್ರೆಸ್​ನ ರಾಜ್ಯಸಭಾ ಸದಸ್ಯರಾದ ಪ್ರತಾಪ್​ ಸಿಂಗ್​ ಬಜ್ವಾ ಮತ್ತು ಸಮ್ಶೇರ ಸಿಂಗ್​ ದುಲ್ಲೋ, ಶಿರೋಮಣಿ ಅಕಾಲಿ ದಳದ ಸದಸ್ಯರಾದ ಸುಖ್​ದೇವ್​ ಸಿಂಗ್​ ಧಿಂಡ್ಸಾ ಮತ್ತು ನರೇಶ್ ಗುಜ್ರಾಲ್ ಹಾಗೂ ಬಿಜೆಪಿಯ ಶ್ವೈತ್ ಮಲಿಕ್ ನಿವೃತ್ತಿ ಹೊಂದುತ್ತಿದ್ದಾರೆ. ಈ ಸ್ಥಾನಗಳಿಗೆ ಆಪ್ ತನ್ನ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಲಿದೆ.

ಇದನ್ನೂ ಓದಿ: ಮಾ.24ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ.. 25ರಂದು ಯೋಗಿ ಆದಿತ್ಯನಾಥ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ಪಂಜಾಬ್​ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿರುವ ಆಮ್​ ಆದ್ಮಿ ಪಕ್ಷವು ಮುಂಬರುವ ರಾಜ್ಯಸಭಾ ಚುನಾವಣೆಗೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್​ ಸೇರಿ ಐವರನ್ನು ನಾಮನಿರ್ದೇಶನ ಮಾಡಲು ಉದ್ದೇಶಿಸಿದೆ.

ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ 117 ಸ್ಥಾನಗಳ ಪೈಕಿ 92 ಸ್ಥಾನಗಳಲ್ಲಿ ಆಪ್ ಗೆಲುವು ಸಾಧಿಸುವುದರೊಂದಿಗೆ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿದೆ. ಇತ್ತ, ಪಂಜಾಬ್​ನ ಐದು ರಾಜ್ಯಸಭೆ ಸದಸ್ಯ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಹೀಗಾಗಿ ರಾಜ್ಯಸಭೆಯ ಐದು ಸ್ಥಾನಗಳು ಆಮ್​ ಆದ್ಮಿ ಪಕ್ಷಕ್ಕೆ ಬೋನಸ್​​ ರೂಪದಲ್ಲಿ ಸಿಕ್ಕಿವೆ. ಆದ್ದರಿಂದ ಪಂಜಾಬ್‌ನಿಂದ ಕ್ರಿಕೆಟಿಗ ಹರ್ಭಜನ್ ಸಿಂಗ್, ದೆಹಲಿ ಶಾಸಕ ರಾಘವ್ ಚಡ್ಡಾ ಮತ್ತು ಡಾ.ಸಂದೀಪ್ ಪಾಠಕ್, ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ ಕುಲಪತಿ ಅಶೋಕ್ ಮಿತ್ತಲ್ ಹಾಗೂ ಸಂಜೀವ್ ಅರೋರಾ ಅವರನ್ನು ನಾಮನಿರ್ದೇಶನ ಮಾಡಲು ಆಮ್ ಆದ್ಮಿ ಪಕ್ಷ ತೀರ್ಮಾನಿಸಿದೆ.

  • Aam Aadmi Party to nominate cricketer Harbhajan Singh and Delhi MLA Raghav Chadha to Rajya Sabha, from Punjab

    — ANI (@ANI) March 21, 2022 " class="align-text-top noRightClick twitterSection" data=" ">

ಪ್ರಸ್ತುತ ಪಂಜಾಬ್​ನಿಂದ ಆಯ್ಕೆಯಾಗಿರುವ ಕಾಂಗ್ರೆಸ್​ನ ರಾಜ್ಯಸಭಾ ಸದಸ್ಯರಾದ ಪ್ರತಾಪ್​ ಸಿಂಗ್​ ಬಜ್ವಾ ಮತ್ತು ಸಮ್ಶೇರ ಸಿಂಗ್​ ದುಲ್ಲೋ, ಶಿರೋಮಣಿ ಅಕಾಲಿ ದಳದ ಸದಸ್ಯರಾದ ಸುಖ್​ದೇವ್​ ಸಿಂಗ್​ ಧಿಂಡ್ಸಾ ಮತ್ತು ನರೇಶ್ ಗುಜ್ರಾಲ್ ಹಾಗೂ ಬಿಜೆಪಿಯ ಶ್ವೈತ್ ಮಲಿಕ್ ನಿವೃತ್ತಿ ಹೊಂದುತ್ತಿದ್ದಾರೆ. ಈ ಸ್ಥಾನಗಳಿಗೆ ಆಪ್ ತನ್ನ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಲಿದೆ.

ಇದನ್ನೂ ಓದಿ: ಮಾ.24ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ.. 25ರಂದು ಯೋಗಿ ಆದಿತ್ಯನಾಥ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.