ETV Bharat / bharat

ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಅಡ್ವಾಣಿ: ವಿಹೆಚ್‌ಪಿ

ಬಿಜೆಪಿಯ ಭೀಷ್ಮ ಲಾಲ್​ಕೃಷ್ಣ ಅಡ್ವಾಣಿ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್​ ತಿಳಿಸಿದೆ.

author img

By ANI

Published : Jan 11, 2024, 9:13 AM IST

Updated : Jan 11, 2024, 10:55 AM IST

bjp-veteran-lk-advani-to-attend-ram-temple-pran-pratishtha-ceremony-on-jan-22
ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಅಡ್ವಾಣಿ

ನವದೆಹಲಿ: ಅಯೋಧ್ಯೆ ಶ್ರೀರಾಮಮಂದಿರಕ್ಕಾಗಿ ರಾಮರಥ ಯಾತ್ರೆ ನಡೆಸಿ, ದೇಶಾದ್ಯಂತ ಸಂಚಲನ ಉಂಟು ಮಾಡಿದ್ದ ಬಿಜೆಪಿಯ ಭೀಷ್ಮ ಎಂದೇ ಖ್ಯಾತರಾದ ಲಾಲ್​ಕೃಷ್ಣ ಅಡ್ವಾಣಿ ಅವರು ಜನವರಿ 22ರಂದು ನಡೆಯುವ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್​ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್​ ಕುಮಾರ್ ತಿಳಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರಾದ ಕೃಷ್ಣ ಗೋಪಾಲ್​, ರಾಮ್​ ಲಾಲ್​​ ಹಾಗೂ ಅಲೋಕ್​ ಕುಮಾರ್​ ಅವರು ಅಡ್ವಾಣಿ ಅವರನ್ನು ಭೇಟಿ ಮಾಡಿ ಪ್ರತಿಷ್ಠಾಪನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಅಲೋಕ್​ ಕುಮಾರ್​, "ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಗಮಿಸುವ ಎಲ್.ಕೆ.ಅಡ್ವಾಣಿ ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯ ಮತ್ತು ಇತರ ಸೌಲಭ್ಯವನ್ನು ಒದಗಿಸಲಾಗುವುದು" ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಭವ್ಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಗಣ್ಯಾತಿಗಣ್ಯರಿಗೆ ಆಮಂತ್ರಣ ಪತ್ರಿಕೆ ನೀಡಲಾಗಿದೆ. ಇದರ ಜೊತೆಗೆ ಎಲ್ಲಾ ಸಮುದಾಯದ ಸಾಧು-ಸಂತರಿಗೂ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಲಾಗಿದೆ.

ಅಡ್ವಾಣಿಗೆ ತಡವಾಗಿ ಬಂದಿದ್ದ ಆಹ್ವಾನ: ರಾಮಮಂದಿರಕ್ಕಾಗಿ ಹೋರಾಡಿದ ಧೀಮಂತ ನಾಯಕರಲ್ಲಿ ಮುಂಚೂಣಿಯಲ್ಲಿರುವ ಅಡ್ವಾಣಿ ಅವರಿಗೆ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ತಡವಾಗಿ ಬಂದಿದ್ದು, ಟೀಕೆಗೆ ಗುರಿಯಾಗಿತ್ತು. ಬಳಿಕ ವಿಶ್ವಹಿಂದೂ ಪರಿಷತ್​ ಖುದ್ದಾಗಿ ಅವರ ನಿವಾಸಕ್ಕೆ ತೆರಳಿ ಆಹ್ವಾನ ನೀಡಿತ್ತು. ವಯೋಸಹಜ ಕಾರಣಕ್ಕಾಗಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿರಲಿಲ್ಲ ಎಂದು ಟ್ರಸ್ಟ್​ ಹೇಳಿಕೊಂಡಿತ್ತು.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​​ ಮಾಹಿತಿ ಪ್ರಕಾರ, ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 16ರಂದು ಪ್ರಾರಂಭವಾಗಿ ಜನವರಿ 22ರವರೆಗೆ ನಡೆಯಲಿದೆ. ಸುಮಾರು ಏಳು ದಿನಗಳ ಕಾಲ ಹಲವು ವೈದಿಕ ವಿಧಿ, ವಿಧಾನಗಳು ನಡೆಯಲಿವೆ. ಜನವರಿ 22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದೆ. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ವಾರಣಾಸಿಯ ಮುಖ್ಯ ವೈದಿಕರಾದ ಲಕ್ಷ್ಮಿಕಾಂತ್​ ದೀಕ್ಷಿತ್​ ನಡೆಸಿಕೊಡಲಿದ್ದಾರೆ. ಜನವರಿ 14ರಿಂದ ಜನವರಿ 22ರತನಕ ಅಯೋಧ್ಯೆ ಅಮೃತ ಮಹೋತ್ಸವ ಆಚರಿಸಲಿದೆ.

ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್​: ಅಯೋಧ್ಯೆಯಲ್ಲಿ ನಡೆಯಲಿರುವ ಪ್ರಾಣಪ್ರತಿಷ್ಠಾ ಕಾರ್ಯಕ್ರಮದ ಆಹ್ವಾನವನ್ನು ಕಾಂಗ್ರೆಸ್​​ ತಿರಸ್ಕರಿಸಿದೆ. ಪಕ್ಷದ​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ​ ನಾಯಕಿ ಸೋನಿಯಾ ಗಾಂಧಿ, ಅಧೀರ್​ ರಂಜನ್​ ಚೌಧರಿ ಸೇರಿದಂತೆ ಹಲವು ನಾಯಕರು ಪ್ರಾಣಪ್ರತಿಷ್ಠಾ ಕಾರ್ಯಕ್ರಮದ ಆಹ್ವಾನವನ್ನು ತಿರಸ್ಕರಿಸಿದ್ದಾರೆ. ಮಂದಿರ ಉದ್ಘಾಟನಾ ಕಾರ್ಯಕ್ರಮವನ್ನು "ಆರ್​ಎಸ್​ಎಸ್​-ಬಿಜೆಪಿಯ ರಾಜಕೀಯ ಕಾರ್ಯಕ್ರಮ" ಎಂದು ಟೀಕಿಸಿದ್ದಾರೆ.

ನೂರಾರು ವರ್ಷಗಳ ಹೋರಾಟದ ಬಳಿಕ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ತಲೆ ಎತ್ತಿದೆ. ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ರಾಮಭಕ್ತರು ಕಾಯುತ್ತಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್​​

ನವದೆಹಲಿ: ಅಯೋಧ್ಯೆ ಶ್ರೀರಾಮಮಂದಿರಕ್ಕಾಗಿ ರಾಮರಥ ಯಾತ್ರೆ ನಡೆಸಿ, ದೇಶಾದ್ಯಂತ ಸಂಚಲನ ಉಂಟು ಮಾಡಿದ್ದ ಬಿಜೆಪಿಯ ಭೀಷ್ಮ ಎಂದೇ ಖ್ಯಾತರಾದ ಲಾಲ್​ಕೃಷ್ಣ ಅಡ್ವಾಣಿ ಅವರು ಜನವರಿ 22ರಂದು ನಡೆಯುವ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್​ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್​ ಕುಮಾರ್ ತಿಳಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರಾದ ಕೃಷ್ಣ ಗೋಪಾಲ್​, ರಾಮ್​ ಲಾಲ್​​ ಹಾಗೂ ಅಲೋಕ್​ ಕುಮಾರ್​ ಅವರು ಅಡ್ವಾಣಿ ಅವರನ್ನು ಭೇಟಿ ಮಾಡಿ ಪ್ರತಿಷ್ಠಾಪನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಅಲೋಕ್​ ಕುಮಾರ್​, "ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಗಮಿಸುವ ಎಲ್.ಕೆ.ಅಡ್ವಾಣಿ ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯ ಮತ್ತು ಇತರ ಸೌಲಭ್ಯವನ್ನು ಒದಗಿಸಲಾಗುವುದು" ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಭವ್ಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಗಣ್ಯಾತಿಗಣ್ಯರಿಗೆ ಆಮಂತ್ರಣ ಪತ್ರಿಕೆ ನೀಡಲಾಗಿದೆ. ಇದರ ಜೊತೆಗೆ ಎಲ್ಲಾ ಸಮುದಾಯದ ಸಾಧು-ಸಂತರಿಗೂ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಲಾಗಿದೆ.

ಅಡ್ವಾಣಿಗೆ ತಡವಾಗಿ ಬಂದಿದ್ದ ಆಹ್ವಾನ: ರಾಮಮಂದಿರಕ್ಕಾಗಿ ಹೋರಾಡಿದ ಧೀಮಂತ ನಾಯಕರಲ್ಲಿ ಮುಂಚೂಣಿಯಲ್ಲಿರುವ ಅಡ್ವಾಣಿ ಅವರಿಗೆ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ತಡವಾಗಿ ಬಂದಿದ್ದು, ಟೀಕೆಗೆ ಗುರಿಯಾಗಿತ್ತು. ಬಳಿಕ ವಿಶ್ವಹಿಂದೂ ಪರಿಷತ್​ ಖುದ್ದಾಗಿ ಅವರ ನಿವಾಸಕ್ಕೆ ತೆರಳಿ ಆಹ್ವಾನ ನೀಡಿತ್ತು. ವಯೋಸಹಜ ಕಾರಣಕ್ಕಾಗಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿರಲಿಲ್ಲ ಎಂದು ಟ್ರಸ್ಟ್​ ಹೇಳಿಕೊಂಡಿತ್ತು.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​​ ಮಾಹಿತಿ ಪ್ರಕಾರ, ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 16ರಂದು ಪ್ರಾರಂಭವಾಗಿ ಜನವರಿ 22ರವರೆಗೆ ನಡೆಯಲಿದೆ. ಸುಮಾರು ಏಳು ದಿನಗಳ ಕಾಲ ಹಲವು ವೈದಿಕ ವಿಧಿ, ವಿಧಾನಗಳು ನಡೆಯಲಿವೆ. ಜನವರಿ 22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದೆ. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ವಾರಣಾಸಿಯ ಮುಖ್ಯ ವೈದಿಕರಾದ ಲಕ್ಷ್ಮಿಕಾಂತ್​ ದೀಕ್ಷಿತ್​ ನಡೆಸಿಕೊಡಲಿದ್ದಾರೆ. ಜನವರಿ 14ರಿಂದ ಜನವರಿ 22ರತನಕ ಅಯೋಧ್ಯೆ ಅಮೃತ ಮಹೋತ್ಸವ ಆಚರಿಸಲಿದೆ.

ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್​: ಅಯೋಧ್ಯೆಯಲ್ಲಿ ನಡೆಯಲಿರುವ ಪ್ರಾಣಪ್ರತಿಷ್ಠಾ ಕಾರ್ಯಕ್ರಮದ ಆಹ್ವಾನವನ್ನು ಕಾಂಗ್ರೆಸ್​​ ತಿರಸ್ಕರಿಸಿದೆ. ಪಕ್ಷದ​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ​ ನಾಯಕಿ ಸೋನಿಯಾ ಗಾಂಧಿ, ಅಧೀರ್​ ರಂಜನ್​ ಚೌಧರಿ ಸೇರಿದಂತೆ ಹಲವು ನಾಯಕರು ಪ್ರಾಣಪ್ರತಿಷ್ಠಾ ಕಾರ್ಯಕ್ರಮದ ಆಹ್ವಾನವನ್ನು ತಿರಸ್ಕರಿಸಿದ್ದಾರೆ. ಮಂದಿರ ಉದ್ಘಾಟನಾ ಕಾರ್ಯಕ್ರಮವನ್ನು "ಆರ್​ಎಸ್​ಎಸ್​-ಬಿಜೆಪಿಯ ರಾಜಕೀಯ ಕಾರ್ಯಕ್ರಮ" ಎಂದು ಟೀಕಿಸಿದ್ದಾರೆ.

ನೂರಾರು ವರ್ಷಗಳ ಹೋರಾಟದ ಬಳಿಕ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ತಲೆ ಎತ್ತಿದೆ. ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ರಾಮಭಕ್ತರು ಕಾಯುತ್ತಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್​​

Last Updated : Jan 11, 2024, 10:55 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.