ETV Bharat / bharat

ಮೋದಿ ಸರ್ಕಾರ ಉರುಳಿಸಲು ಅಹ್ಮದ್ ಪಟೇಲ್ ಸಂಚು ರೂಪಿಸಿದ್ದರು: ಎಸ್‌ಐಟಿ ಸ್ಫೋಟಕ ಮಾಹಿತಿ

author img

By

Published : Jul 16, 2022, 12:38 PM IST

2002ರ ಗುಜರಾತ್ ಗಲಭೆ ಹಿಂದೆ ಅಹ್ಮದ್ ಪಟೇಲ್ ಕೈವಾಡವಿದೆ. ಅಂದಿನ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸುವುದರ ಜೊತೆಗೆ ಅಮಾಯಕರನ್ನು ಈ ಗಲಭೆಯಲ್ಲಿ ಸಿಲುಕಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಎಸ್‌ಐಟಿ ತಂಡ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್​ನಲ್ಲಿ ಹೇಳಿಕೊಂಡಿದೆ.

ಅಹ್ಮದ್ ಪಟೇಲ್
ಅಹ್ಮದ್ ಪಟೇಲ್

ಅಹಮದಾಬಾದ್: ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದೆ. ಯೋಜಿತ ರೀತಿಯಲ್ಲಿ ಗುಜರಾತ್‌ಗೆ ಮಾನಹಾನಿ ಮಾಡುವ ಪ್ರಯತ್ನ ನಡೆದಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದೆ. ಇದರ ಹಿಂದೆ ದಿವಂಗತ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಕೈವಾಡವಿದೆ ಜೊತೆಗೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದೆ.

2002ರ ಗುಜರಾತ್ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಜಾಮೀನು ನೀಡದಂತೆ ಗುಜರಾತ್ ಪೊಲೀಸರು ಕೋರ್ಟ್​ಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವನ್ನು ಉರುಳಿಸುವ ದೊಡ್ಡ ಪಿತೂರಿಯಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.

2002ರ ಗಲಭೆಯ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಉರುಳಿಸಲು ದಿವಂಗತ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಸೂಚನೆಯ ಮೇರೆಗೆ ಸೆಟಲ್ವಾಡ್ ಪಿತೂರಿ ನಡೆಸಿದ್ದರು ಎಂದು ಗುಜರಾತ್ ಪೊಲೀಸರ ವಿಶೇಷ ತನಿಖಾ ತಂಡವು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್​ನಲ್ಲಿ ಹೇಳಿಕೊಂಡಿದೆ.

ಇದನ್ನೂ ಓದಿ: Gujarat riots case: 'ನಾನು ಅಪರಾಧಿ ಅಲ್ಲ' ಎಂದು ಕೂಗಿ ಕೂಗಿ ಹೇಳಿದ ತೀಸ್ತಾ ಸೆಟಲ್ವಾಡ್

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಿಡಿ ಠಕ್ಕರ್ ಅವರು ವಿಶೇಷ ತನಿಖಾ ತಂಡದ (ಎಸ್‌ಐಟಿ) ಪ್ರತಿಕ್ರಿಯೆಯನ್ನು ದಾಖಲಿಸಿಕೊಂಡು ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದಾರೆ. ಗುಜರಾತ್ ಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಬಂಧಿಸಲು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದಲ್ಲಿ ಎಂಎಸ್ ಸೆಟಲ್ವಾಡ್ ಜೊತೆ ಮಾಜಿ ಐಪಿಎಸ್ ಅಧಿಕಾರಿಗಳಾದ ಆರ್ ಬಿ ಶ್ರೀಕುಮಾರ್ ಮತ್ತು ಸಂಜೀವ್ ಭಟ್ ಅವರನ್ನು ಬಂಧಿಸಲಾಗಿದೆ.

ಜಾಮೀನು ಅರ್ಜಿದಾರ ಸೆಟಲ್ವಾಡ್ ಈ ದೊಡ್ಡ ಪಿತೂರಿ ನಡೆಸಲು ಚುನಾಯಿತ ಸರ್ಕಾರವನ್ನು ಉರುಳಿಸುವುದು ಅಥವಾ ಅಸ್ಥಿರಗೊಳಿಸುವುದು ರಾಜಕೀಯ ಉದ್ದೇಶವಾಗಿತ್ತು ಎಂದು ಗುಜರಾತ್ ಪೊಲೀಸ್ ವಿಶೇಷ ತನಿಖಾ ತಂಡ ಸಲ್ಲಿಸಿದ ಅಫಿಡವಿಟ್ ಹೇಳುತ್ತದೆ.

ಅಮಾಯಕರನ್ನು ತಪ್ಪಾಗಿ ಸಿಲುಕಿಸುವ ಪ್ರಯತ್ನಕ್ಕೆ ಪ್ರತಿಯಾಗಿ ಸೆಟಲ್ವಾಡ್ ಅವರು ಬಿಜೆಪಿಯ ಪ್ರತಿಸ್ಪರ್ಧಿ ರಾಜಕೀಯ ಪಕ್ಷದಿಂದ ಅಕ್ರಮ ಹಣಕಾಸು ಮತ್ತು ಇತರ ಪ್ರಯೋಜನಗಳನ್ನು ಮತ್ತು ಬಹುಮಾನಗಳನ್ನು ಪಡೆದಿದ್ದಾರೆ ಎಂದು ಅಫಿಡವಿಟ್​ನಲ್ಲಿ ಆರೋಪಿಸಿದೆ.

ಇದನ್ನೂ ಓದಿ: ಸುಳ್ಳು ಸಾಕ್ಷ್ಯ ಸೃಷ್ಟಿ: ಮತ್ತೆ ಬಂಧನಕ್ಕೊಳಗಾದ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್

ಅಹಮದಾಬಾದ್: ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದೆ. ಯೋಜಿತ ರೀತಿಯಲ್ಲಿ ಗುಜರಾತ್‌ಗೆ ಮಾನಹಾನಿ ಮಾಡುವ ಪ್ರಯತ್ನ ನಡೆದಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದೆ. ಇದರ ಹಿಂದೆ ದಿವಂಗತ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಕೈವಾಡವಿದೆ ಜೊತೆಗೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದೆ.

2002ರ ಗುಜರಾತ್ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಜಾಮೀನು ನೀಡದಂತೆ ಗುಜರಾತ್ ಪೊಲೀಸರು ಕೋರ್ಟ್​ಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವನ್ನು ಉರುಳಿಸುವ ದೊಡ್ಡ ಪಿತೂರಿಯಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.

2002ರ ಗಲಭೆಯ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಉರುಳಿಸಲು ದಿವಂಗತ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಸೂಚನೆಯ ಮೇರೆಗೆ ಸೆಟಲ್ವಾಡ್ ಪಿತೂರಿ ನಡೆಸಿದ್ದರು ಎಂದು ಗುಜರಾತ್ ಪೊಲೀಸರ ವಿಶೇಷ ತನಿಖಾ ತಂಡವು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್​ನಲ್ಲಿ ಹೇಳಿಕೊಂಡಿದೆ.

ಇದನ್ನೂ ಓದಿ: Gujarat riots case: 'ನಾನು ಅಪರಾಧಿ ಅಲ್ಲ' ಎಂದು ಕೂಗಿ ಕೂಗಿ ಹೇಳಿದ ತೀಸ್ತಾ ಸೆಟಲ್ವಾಡ್

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಿಡಿ ಠಕ್ಕರ್ ಅವರು ವಿಶೇಷ ತನಿಖಾ ತಂಡದ (ಎಸ್‌ಐಟಿ) ಪ್ರತಿಕ್ರಿಯೆಯನ್ನು ದಾಖಲಿಸಿಕೊಂಡು ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದಾರೆ. ಗುಜರಾತ್ ಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಬಂಧಿಸಲು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದಲ್ಲಿ ಎಂಎಸ್ ಸೆಟಲ್ವಾಡ್ ಜೊತೆ ಮಾಜಿ ಐಪಿಎಸ್ ಅಧಿಕಾರಿಗಳಾದ ಆರ್ ಬಿ ಶ್ರೀಕುಮಾರ್ ಮತ್ತು ಸಂಜೀವ್ ಭಟ್ ಅವರನ್ನು ಬಂಧಿಸಲಾಗಿದೆ.

ಜಾಮೀನು ಅರ್ಜಿದಾರ ಸೆಟಲ್ವಾಡ್ ಈ ದೊಡ್ಡ ಪಿತೂರಿ ನಡೆಸಲು ಚುನಾಯಿತ ಸರ್ಕಾರವನ್ನು ಉರುಳಿಸುವುದು ಅಥವಾ ಅಸ್ಥಿರಗೊಳಿಸುವುದು ರಾಜಕೀಯ ಉದ್ದೇಶವಾಗಿತ್ತು ಎಂದು ಗುಜರಾತ್ ಪೊಲೀಸ್ ವಿಶೇಷ ತನಿಖಾ ತಂಡ ಸಲ್ಲಿಸಿದ ಅಫಿಡವಿಟ್ ಹೇಳುತ್ತದೆ.

ಅಮಾಯಕರನ್ನು ತಪ್ಪಾಗಿ ಸಿಲುಕಿಸುವ ಪ್ರಯತ್ನಕ್ಕೆ ಪ್ರತಿಯಾಗಿ ಸೆಟಲ್ವಾಡ್ ಅವರು ಬಿಜೆಪಿಯ ಪ್ರತಿಸ್ಪರ್ಧಿ ರಾಜಕೀಯ ಪಕ್ಷದಿಂದ ಅಕ್ರಮ ಹಣಕಾಸು ಮತ್ತು ಇತರ ಪ್ರಯೋಜನಗಳನ್ನು ಮತ್ತು ಬಹುಮಾನಗಳನ್ನು ಪಡೆದಿದ್ದಾರೆ ಎಂದು ಅಫಿಡವಿಟ್​ನಲ್ಲಿ ಆರೋಪಿಸಿದೆ.

ಇದನ್ನೂ ಓದಿ: ಸುಳ್ಳು ಸಾಕ್ಷ್ಯ ಸೃಷ್ಟಿ: ಮತ್ತೆ ಬಂಧನಕ್ಕೊಳಗಾದ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.