ETV Bharat / bharat

ತೀಸ್ತಾ ಸೆಟಲ್ವಾಡ್ ಡಿಸ್ಚಾರ್ಜ್ ಅರ್ಜಿಯ ವಿಚಾರಣೆ: ಜುಲೈ 6ಕ್ಕೆ ಮುಂದೂಡಿದ ಅಹಮದಾಬಾದ್ ಸೆಷನ್ಸ್ ಕೋರ್ಟ್

author img

By

Published : Jul 3, 2023, 10:29 PM IST

ಅಹಮದಾಬಾದ್ ಸೆಷನ್ಸ್ ಕೋರ್ಟ್ ಇಂದು ತೀಸ್ತಾ ಸೆಟಲ್ವಾಡ್ ಡಿಸ್ಚಾರ್ಜ್ ಅರ್ಜಿ ವಿಚಾರಣೆ ನಡೆಸಿದ್ದು, ಹೆಚ್ಚಿನ ವಿಚಾರಣೆಯನ್ನು ಜುಲೈ 6ಕ್ಕೆ ಮುಂದೂಡಿದೆ.

ತೀಸ್ತಾ ಸೆಟಲ್ವಾಡ್ ಡಿಸ್ಚಾರ್ಜ್
ತೀಸ್ತಾ ಸೆಟಲ್ವಾಡ್ ಡಿಸ್ಚಾರ್ಜ್

ಅಹಮದಾಬಾದ್: 2018ರಲ್ಲಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಗುಜರಾತ್‌ಗೆ ಮಾನಹಾನಿ ಮಾಡಿದ ಪ್ರಕರಣದಲ್ಲಿ ತೀಸ್ತಾ ಸೆಟಲ್ವಾಡ್, ಮಾಜಿ ಡಿಜಿಪಿ ಆರ್ ಬಿ ಶ್ರೀ ಕುಮಾರ್ ಮತ್ತು ಮಾಜಿ ಐಪಿಎಸ್ ಸಂಜೀವ್ ಭಟ್ ಅವರ ಅರ್ಜಿ ವಿಚಾರಣೆ ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈ ಮೂವರು ಆರೋಪಿಗಳ ವಿರುದ್ಧ ಎಸ್‌ಐಟಿ ತನಿಖೆ ನಡೆಯುತ್ತಿದೆ. ಇಂದು ಸೆಷನ್ಸ್ ನ್ಯಾಯಾಲಯದಲ್ಲಿ ಈ ವಿಚಾರಣೆ ನಡೆಯಿತು. ಜುಲೈ 6ಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿದೆ.

ಜುಲೈ 6 ರಂದು ಹೆಚ್ಚಿನ ವಿಚಾರಣೆ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಸಲ್ಲಿಸಿದ ಡಿಸ್ಚಾರ್ಜ್ ಅರ್ಜಿಯನ್ನು ಸರ್ಕಾರ ವಿರೋಧಿಸಿದೆ. ಇಂದಿನ ವಿಚಾರಣೆ ವೇಳೆ, ಸಾಕ್ಷ್ಯಾಧಾರಗಳು ಮತ್ತು ಅಪರಾಧದ ಗಂಭೀರತೆ ಪರಿಗಣಿಸಿ ಆರೋಪಿಗಳನ್ನು ಪ್ರಕರಣದಿಂದ ಬಿಡುಗಡೆ ಮಾಡಬಾರದು ಎಂದು ಸರ್ಕಾರವು ಅರ್ಜಿ ಸಲ್ಲಿಸಿತು. ಜೂನ್ 26 ರಂದು ತೀಸ್ತಾ ಸೆಟಲ್ವಾಡ್ ಅವರು ಜಾಮೀನಿಗಾಗಿ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಜುಲೈ 6 ರಂದು ಹೆಚ್ಚಿನ ವಿಚಾರಣೆ ನಡೆಸಿ ತೀಸ್ತಾಗೆ ರಿಲೀಫ್ ನೀಡುತ್ತದೆಯೇ ಅಥವಾ ಮುಂದಿನ ಪ್ರಕ್ರಿಯೆಗಳು ನಡೆಯಲಿವೆಯೇ ಎಂಬುದು ತಿಳಿದು ಬರಬೇಕಿದೆ.

ಅರ್ಜಿ ತಿರಸ್ಕರಿಸಿದ್ದ ಗುಜರಾತ್ ಹೈಕೋರ್ಟ್ : ತೀಸ್ತಾ ಸೆಟಲ್ವಾಡ್ ಅವರು ಗುಜರಾತ್ ಹೈಕೋರ್ಟ್​ನಲ್ಲಿ ನಿಯಮಿತ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿತ್ತು. ಈ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಕೂಡಲೇ ಶರಣಾಗುವಂತೆ ಪೊಲೀಸರಿಗೆ ಸೂಚಿಸಿತ್ತು. ಅಲ್ಲದೆ, ಸೆಷನ್ಸ್ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಕ್ಕೆ ಸಹಕರಿಸುವಂತೆ ನ್ಯಾಯಾಲಯ ಆದೇಶಿಸಿತ್ತು.

ವಿಚಾರಣೆ ವಿಳಂಬ ಮಾಡದಂತೆ ನಿರ್ದೇಶನ: 2002ರ ಕೋಮುಗಲಭೆ ಪ್ರಕರಣದಲ್ಲಿ ಗುಜರಾತ್ ಸರ್ಕಾರದ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ತೀಸ್ತಾ ಸೆಟಲ್‌ವಾಡ್ ಅವರು ಸೆಷನ್ಸ್ ಕೋರ್ಟ್‌ನಲ್ಲಿ ಡಿಸ್ಚಾರ್ಜ್ ಅರ್ಜಿ ಸಲ್ಲಿಸಿದ್ದರು. ನಂತರ ಮುಂದಿನ ನಿಗದಿತ ಅವಧಿಯಲ್ಲಿ ಕಡ್ಡಾಯವಾಗಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಟಿಸ್ಟಾಗೆ ಆದೇಶಿಸಿದೆ. ಪ್ರಕರಣದ ವಿಚಾರಣೆಯನ್ನು ವಿಳಂಬ ಮಾಡದಂತೆ ಸೆಷನ್ಸ್ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತ್ತು.

ತಡೆ ನೀಡಿದ ಸುಪ್ರೀಂ ಕೋರ್ಟ್: ಗುಜರಾತ್ ಹೈಕೋರ್ಟ್ ನೀಡಿದ ಈ ತೀರ್ಪಿನ ವಿರುದ್ಧ ತಕ್ಷಣವೇ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ತಕ್ಷಣದ ವಿಚಾರಣೆಯನ್ನು ಸಹ ನಡೆಸಲಾಯಿತು. ಅಲ್ಲಿ ವಿಚಾರಣೆ ವೇಳೆ ಗುಜರಾತ್ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಸುಪ್ರೀಂ ಕೋರ್ಟ್ ನಿಂದ ರಿಲೀಫ್ ಸಿಕ್ಕಿದೆ. ಈಗ ಈ ಪ್ರಕರಣದ ಮುಂದಿನ ವಿಚಾರಣೆಯ ನಂತರ ಆರೋಪದ ವಿಚಾರಣೆ ನಡೆಸಬಹುದು.

ಏನಿದು ಪ್ರಕರಣ?: 2002ರ ಗೋಧ್ರಾ ನಂತರದ ಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಸಿಲುಕಿಸಲು ನಕಲಿ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪವನ್ನು ತೀಸ್ತಾ ಸೆಟಲ್ವಾಡ್ ಎದುರಿಸುತ್ತಿದ್ದಾರೆ. ಈ ಸಂಬಂಧ ಎಫ್​ಐಆರ್​ ದಾಖಲಿಸಿಕೊಂಡಿರುವ ಗುಜರಾತ್​ ಪೊಲೀಸರು ಕಳೆದ ವರ್ಷ ಜೂನ್ 25ರಂದು ಬಂಧಿಸಿದ್ದರು. ನಂತರ ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯ ಹಾಗೂ ಹೈಕೋರ್ಟ್​ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಆಗ ಮಧ್ಯಂತರ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸೆಪ್ಟೆಂಬರ್ 2ರಂದು ಸುಪ್ರೀಂ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದರಿಂದ ಸೆಪ್ಟೆಂಬರ್​ 3ರಂದು ಸಬರಮತಿ ಜೈಲಿನಿಂದ ತೀಸ್ತಾ ಬಿಡುಗಡೆಗೊಂಡಿದ್ದರು. ಇಂದು ಮತ್ತೆ ತೀಸ್ತಾ ಸೆಟಲ್ವಾಡ್ ಅರ್ಜಿ ಗುಜರಾತ್​ ಹೈಕೋರ್ಟ್​ ಮುಂದೆ ಬಂದಿತ್ತು. ಇದರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಿರ್ಜರ್ ದೇಸಾಯಿ ಅವರ ಪೀಠ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ತೀಸ್ತಾ ಸೆಟಲ್ವಾಡ್ ಮತ್ತೆ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದರು.

ಇದನ್ನೂ ಓದಿ: ತೀಸ್ತಾ ಸೆಟಲ್ವಾಡ್ ಶರಣಾಗತಿಗೆ ಸೂಚಿಸಿದ್ದ ಗುಜರಾತ್​ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಅಹಮದಾಬಾದ್: 2018ರಲ್ಲಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಗುಜರಾತ್‌ಗೆ ಮಾನಹಾನಿ ಮಾಡಿದ ಪ್ರಕರಣದಲ್ಲಿ ತೀಸ್ತಾ ಸೆಟಲ್ವಾಡ್, ಮಾಜಿ ಡಿಜಿಪಿ ಆರ್ ಬಿ ಶ್ರೀ ಕುಮಾರ್ ಮತ್ತು ಮಾಜಿ ಐಪಿಎಸ್ ಸಂಜೀವ್ ಭಟ್ ಅವರ ಅರ್ಜಿ ವಿಚಾರಣೆ ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈ ಮೂವರು ಆರೋಪಿಗಳ ವಿರುದ್ಧ ಎಸ್‌ಐಟಿ ತನಿಖೆ ನಡೆಯುತ್ತಿದೆ. ಇಂದು ಸೆಷನ್ಸ್ ನ್ಯಾಯಾಲಯದಲ್ಲಿ ಈ ವಿಚಾರಣೆ ನಡೆಯಿತು. ಜುಲೈ 6ಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿದೆ.

ಜುಲೈ 6 ರಂದು ಹೆಚ್ಚಿನ ವಿಚಾರಣೆ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಸಲ್ಲಿಸಿದ ಡಿಸ್ಚಾರ್ಜ್ ಅರ್ಜಿಯನ್ನು ಸರ್ಕಾರ ವಿರೋಧಿಸಿದೆ. ಇಂದಿನ ವಿಚಾರಣೆ ವೇಳೆ, ಸಾಕ್ಷ್ಯಾಧಾರಗಳು ಮತ್ತು ಅಪರಾಧದ ಗಂಭೀರತೆ ಪರಿಗಣಿಸಿ ಆರೋಪಿಗಳನ್ನು ಪ್ರಕರಣದಿಂದ ಬಿಡುಗಡೆ ಮಾಡಬಾರದು ಎಂದು ಸರ್ಕಾರವು ಅರ್ಜಿ ಸಲ್ಲಿಸಿತು. ಜೂನ್ 26 ರಂದು ತೀಸ್ತಾ ಸೆಟಲ್ವಾಡ್ ಅವರು ಜಾಮೀನಿಗಾಗಿ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಜುಲೈ 6 ರಂದು ಹೆಚ್ಚಿನ ವಿಚಾರಣೆ ನಡೆಸಿ ತೀಸ್ತಾಗೆ ರಿಲೀಫ್ ನೀಡುತ್ತದೆಯೇ ಅಥವಾ ಮುಂದಿನ ಪ್ರಕ್ರಿಯೆಗಳು ನಡೆಯಲಿವೆಯೇ ಎಂಬುದು ತಿಳಿದು ಬರಬೇಕಿದೆ.

ಅರ್ಜಿ ತಿರಸ್ಕರಿಸಿದ್ದ ಗುಜರಾತ್ ಹೈಕೋರ್ಟ್ : ತೀಸ್ತಾ ಸೆಟಲ್ವಾಡ್ ಅವರು ಗುಜರಾತ್ ಹೈಕೋರ್ಟ್​ನಲ್ಲಿ ನಿಯಮಿತ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿತ್ತು. ಈ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಕೂಡಲೇ ಶರಣಾಗುವಂತೆ ಪೊಲೀಸರಿಗೆ ಸೂಚಿಸಿತ್ತು. ಅಲ್ಲದೆ, ಸೆಷನ್ಸ್ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಕ್ಕೆ ಸಹಕರಿಸುವಂತೆ ನ್ಯಾಯಾಲಯ ಆದೇಶಿಸಿತ್ತು.

ವಿಚಾರಣೆ ವಿಳಂಬ ಮಾಡದಂತೆ ನಿರ್ದೇಶನ: 2002ರ ಕೋಮುಗಲಭೆ ಪ್ರಕರಣದಲ್ಲಿ ಗುಜರಾತ್ ಸರ್ಕಾರದ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ತೀಸ್ತಾ ಸೆಟಲ್‌ವಾಡ್ ಅವರು ಸೆಷನ್ಸ್ ಕೋರ್ಟ್‌ನಲ್ಲಿ ಡಿಸ್ಚಾರ್ಜ್ ಅರ್ಜಿ ಸಲ್ಲಿಸಿದ್ದರು. ನಂತರ ಮುಂದಿನ ನಿಗದಿತ ಅವಧಿಯಲ್ಲಿ ಕಡ್ಡಾಯವಾಗಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಟಿಸ್ಟಾಗೆ ಆದೇಶಿಸಿದೆ. ಪ್ರಕರಣದ ವಿಚಾರಣೆಯನ್ನು ವಿಳಂಬ ಮಾಡದಂತೆ ಸೆಷನ್ಸ್ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತ್ತು.

ತಡೆ ನೀಡಿದ ಸುಪ್ರೀಂ ಕೋರ್ಟ್: ಗುಜರಾತ್ ಹೈಕೋರ್ಟ್ ನೀಡಿದ ಈ ತೀರ್ಪಿನ ವಿರುದ್ಧ ತಕ್ಷಣವೇ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ತಕ್ಷಣದ ವಿಚಾರಣೆಯನ್ನು ಸಹ ನಡೆಸಲಾಯಿತು. ಅಲ್ಲಿ ವಿಚಾರಣೆ ವೇಳೆ ಗುಜರಾತ್ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಸುಪ್ರೀಂ ಕೋರ್ಟ್ ನಿಂದ ರಿಲೀಫ್ ಸಿಕ್ಕಿದೆ. ಈಗ ಈ ಪ್ರಕರಣದ ಮುಂದಿನ ವಿಚಾರಣೆಯ ನಂತರ ಆರೋಪದ ವಿಚಾರಣೆ ನಡೆಸಬಹುದು.

ಏನಿದು ಪ್ರಕರಣ?: 2002ರ ಗೋಧ್ರಾ ನಂತರದ ಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಸಿಲುಕಿಸಲು ನಕಲಿ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪವನ್ನು ತೀಸ್ತಾ ಸೆಟಲ್ವಾಡ್ ಎದುರಿಸುತ್ತಿದ್ದಾರೆ. ಈ ಸಂಬಂಧ ಎಫ್​ಐಆರ್​ ದಾಖಲಿಸಿಕೊಂಡಿರುವ ಗುಜರಾತ್​ ಪೊಲೀಸರು ಕಳೆದ ವರ್ಷ ಜೂನ್ 25ರಂದು ಬಂಧಿಸಿದ್ದರು. ನಂತರ ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯ ಹಾಗೂ ಹೈಕೋರ್ಟ್​ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಆಗ ಮಧ್ಯಂತರ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸೆಪ್ಟೆಂಬರ್ 2ರಂದು ಸುಪ್ರೀಂ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದರಿಂದ ಸೆಪ್ಟೆಂಬರ್​ 3ರಂದು ಸಬರಮತಿ ಜೈಲಿನಿಂದ ತೀಸ್ತಾ ಬಿಡುಗಡೆಗೊಂಡಿದ್ದರು. ಇಂದು ಮತ್ತೆ ತೀಸ್ತಾ ಸೆಟಲ್ವಾಡ್ ಅರ್ಜಿ ಗುಜರಾತ್​ ಹೈಕೋರ್ಟ್​ ಮುಂದೆ ಬಂದಿತ್ತು. ಇದರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಿರ್ಜರ್ ದೇಸಾಯಿ ಅವರ ಪೀಠ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ತೀಸ್ತಾ ಸೆಟಲ್ವಾಡ್ ಮತ್ತೆ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದರು.

ಇದನ್ನೂ ಓದಿ: ತೀಸ್ತಾ ಸೆಟಲ್ವಾಡ್ ಶರಣಾಗತಿಗೆ ಸೂಚಿಸಿದ್ದ ಗುಜರಾತ್​ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.