ETV Bharat / bharat

ಜ. 6ರ ಡಿಎಂಕೆ ಪಕ್ಷದ ಸಮಾವೇಶಕ್ಕೆ ಓವೈಸಿ ಅವರನ್ನು ಆಹ್ವಾನಿಸಿದ ಡಿಎಂಕೆ - ತಮಿಳುನಾಡು ವಿಧಾನಸಭಾ ಚುನಾವಣೆ

ಡಿಎಂಕೆ ಅಲ್ಪಸಂಖ್ಯಾತ ವಿಭಾಗದ ಕಾರ್ಯದರ್ಶಿ ಡಾ. ಮಸ್ತಾನ್ ಅವರು ಶುಕ್ರವಾರ ಹೈದರಾಬಾದ್‌ನ ಒವೈಸಿ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಸಮ್ಮೇಳನಕ್ಕೆ ಆಹ್ವಾನಿಸಿದ್ದಾರೆ.

AIMIM chief invited for DMK's conference on January 6
ಜ. 6ರ ಡಿಎಂಕೆ ಪಕ್ಷದ ಸಮಾವೇಶಕ್ಕೆ ಓವೈಸಿ ಅವರನ್ನು ಆಹ್ವಾನಿಸಿದ ಡಿಎಂಕೆ
author img

By

Published : Jan 2, 2021, 6:49 AM IST

ಹೈದರಾಬಾದ್: 2021 ರ ತಮಿಳುನಾಡು ವಿಧಾನಸಭಾ ಚುನಾವಣೆಯ ಮುನ್ನ, ಡಿಎಂಕೆ ಪಕ್ಷವು ಜನವರಿ 6 ರಂದು ಚೆನ್ನೈನಲ್ಲಿ ನಡೆಯಲಿರುವ ಪಕ್ಷದ ಸಮಾವೇಶಕ್ಕೆ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಅವರನ್ನು ಆಹ್ವಾನಿಸಿದೆ.

ಡಿಎಂಕೆ ಅಲ್ಪಸಂಖ್ಯಾತ ವಿಭಾಗದ ಕಾರ್ಯದರ್ಶಿ ಡಾ. ಮಸ್ತಾನ್ ಅವರು ಶುಕ್ರವಾರ ಹೈದರಾಬಾದ್‌ನ ಒವೈಸಿ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಸಮ್ಮೇಳನಕ್ಕೆ ಆಹ್ವಾನಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: ತಮಿಳುನಾಡು ವಿಧಾನಸಭೆ ಚುನಾವಣೆ: ಸಿಎಂ ಅಭ್ಯರ್ಥಿಯಾಗಿ ಹಾಲಿ ಸಿಎಂ ಹೆಸರು ಘೋಷಣೆ

2021 ರ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಎಐಐಎಂಐಎಂ ನವೆಂಬರ್​ ತಿಂಗಳಲ್ಲಿ ಘೋಷಿಸಿತ್ತು. ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಯು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ವಿರುದ್ಧ ಸ್ಪರ್ಧಿಸಲಿರುವ ಪ್ರಮುಖ ವಿರೋಧ ಪಕ್ಷವಾಗಿದೆ.

ಈ ಸುದ್ದಿಯನ್ನೂ ಓದಿ: 2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ ನಟ ಕಮಲ್​ ಹಾಸನ್​

ಇನ್ನೂ ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ಇತ್ತೀಚೆಗೆ ರಜನಿಕಾಂತ್ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ನಟ, ರಾಜಕಾರಣಿ ಕಮಲ್ ಹಾಸನ್ ಕೂಡ ಚುನಾವಣೆಗೆ ಮುನ್ನ ತಮ್ಮ ಪಕ್ಷದ ಮಕ್ಕಲ್​ ನೀಧಿ ಮಾಯಂ (ಎಂಎನ್​ಎಂ) ಪರ ಪ್ರಚಾರ ನಡೆಸುತ್ತಿದ್ದಾರೆ.

ಹೈದರಾಬಾದ್: 2021 ರ ತಮಿಳುನಾಡು ವಿಧಾನಸಭಾ ಚುನಾವಣೆಯ ಮುನ್ನ, ಡಿಎಂಕೆ ಪಕ್ಷವು ಜನವರಿ 6 ರಂದು ಚೆನ್ನೈನಲ್ಲಿ ನಡೆಯಲಿರುವ ಪಕ್ಷದ ಸಮಾವೇಶಕ್ಕೆ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಅವರನ್ನು ಆಹ್ವಾನಿಸಿದೆ.

ಡಿಎಂಕೆ ಅಲ್ಪಸಂಖ್ಯಾತ ವಿಭಾಗದ ಕಾರ್ಯದರ್ಶಿ ಡಾ. ಮಸ್ತಾನ್ ಅವರು ಶುಕ್ರವಾರ ಹೈದರಾಬಾದ್‌ನ ಒವೈಸಿ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಸಮ್ಮೇಳನಕ್ಕೆ ಆಹ್ವಾನಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: ತಮಿಳುನಾಡು ವಿಧಾನಸಭೆ ಚುನಾವಣೆ: ಸಿಎಂ ಅಭ್ಯರ್ಥಿಯಾಗಿ ಹಾಲಿ ಸಿಎಂ ಹೆಸರು ಘೋಷಣೆ

2021 ರ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಎಐಐಎಂಐಎಂ ನವೆಂಬರ್​ ತಿಂಗಳಲ್ಲಿ ಘೋಷಿಸಿತ್ತು. ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಯು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ವಿರುದ್ಧ ಸ್ಪರ್ಧಿಸಲಿರುವ ಪ್ರಮುಖ ವಿರೋಧ ಪಕ್ಷವಾಗಿದೆ.

ಈ ಸುದ್ದಿಯನ್ನೂ ಓದಿ: 2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ ನಟ ಕಮಲ್​ ಹಾಸನ್​

ಇನ್ನೂ ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ಇತ್ತೀಚೆಗೆ ರಜನಿಕಾಂತ್ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ನಟ, ರಾಜಕಾರಣಿ ಕಮಲ್ ಹಾಸನ್ ಕೂಡ ಚುನಾವಣೆಗೆ ಮುನ್ನ ತಮ್ಮ ಪಕ್ಷದ ಮಕ್ಕಲ್​ ನೀಧಿ ಮಾಯಂ (ಎಂಎನ್​ಎಂ) ಪರ ಪ್ರಚಾರ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.