ETV Bharat / bharat

Pegasus raw... ನಾಳೆ ಪ್ರತಿಪಕ್ಷಗಳ ಸಭೆ: ಆ.4ಕ್ಕೆ ಕೇಂದ್ರ ಕ್ಯಾಬಿನೆಟ್​ ಮೀಟ್​​ ನಿಗದಿ

ದೆಹಲಿಯ ಕಾನ್ಸಿಟಿಟ್ಯೂಟ್​​​ ಕ್ಲಬ್​ನಲ್ಲಿ ನಾಳೆ ಪ್ರತಿಪಕ್ಷಗಳ ನಾಯಕರ ಸಭೆ ನಡೆಯಲಿದೆ ಎಂದು ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಹೇಳಿದ್ದಾರೆ. ಈ ನಡುವೆ ಆಗಸ್ಟ್​ 4 ರಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ.

author img

By

Published : Aug 2, 2021, 4:18 PM IST

ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್​ ಖರ್ಗೆ
ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್​ ಖರ್ಗೆ

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮುರಿದುಕೊಂಡು ಬಿದ್ದಿವೆ. ಸತತ ಎರಡು ವಾರಗಳಿಂದ ಸಂಸತ್​​ನ ಉಭಯ ಕಲಾಪಗಳು ಬರೀ ಗದ್ದಲ- ಗೊಂದಲದಲ್ಲೇ ಮುಂದುವರಿದಿದ್ದು, ಸತ್ವಯುತ ಚರ್ಚೆ ಎಂಬುದು ಮರೀಚಿಕೆ ಆಗಿದೆ.

ಈ ನಡುವೆ ಪ್ರತಿಪಕ್ಷ ಕಾಂಗ್ರೆಸ್​ ನೇತೃತ್ವದಲ್ಲಿ ನಾಳೆ ಪ್ರತಿಪಕ್ಷಗಳ ನಾಯಕರ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾಹಿತಿ ನೀಡಿದ್ದಾರೆ. ದೆಹಲಿಯ ಕಾನ್ಸಿಟಿಟ್ಯೂಟ್​​​ ಕ್ಲಬ್​ನಲ್ಲಿ ಈ ಸಭೆ ನಡೆಯಲಿದೆ.

ನಾಳಿನ ಸಭೆಗೆ ರಾಹುಲ್​ ಗಾಂಧಿ ಎಲ್ಲ ಪ್ರತಿಪಕ್ಷಗಳ ನಾಯಕರು ಬಂದು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಪೆಗಾಸಸ್​ ಸ್ಪೈ ವೇರ್​ ಬಳಕೆ ಹಾಗೂ ಕೇಂದ್ರ ಸರ್ಕಾರದ ಪಾತ್ರದ ವಿರುದ್ಧ ಉಗ್ರ ಹೋರಾಟಕ್ಕೆ ಕಾಂಗ್ರೆಸ್​ ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ನಾಳಿನ ಸಭೆಯಲ್ಲಿ ಎಲ್ಲ ನಾಯಕರು ಪಾಲ್ಗೊಳ್ಳಬೇಕು ಎಂದು ರಾಹುಲ್​ ಗಾಂಧಿ ಕರೆ ನೀಡಿದ್ದಾರೆ.

ಪ್ರತಿಪಕ್ಷದ ಎಲ್ಲ ಸಂಸದರು ಹಾಗೂ ಎರಡೂ ಸದನಗಳ ಪ್ರಮುಖ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಲಾಗಿದೆ. ಪ್ರತಿಪಕ್ಷಗಳು ಪೆಗಾಸಸ್​ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ನಿಲುವಳಿ ಸೂಚನೆಯನ್ನು ಮಂಡಿಸಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಮಣಿದಿಲ್ಲ. ಪರಿಣಾಮ ಸದನವೂ ನಡೆಯುತ್ತಿಲ್ಲ.

ಈ ಸಂಬಂಧ ಪ್ರತಿಕ್ರಿಯೆ ನೀಡುತ್ತಿರುವ ಕೇಂದ್ರ ಸರ್ಕಾರ, ಈ ಸಂಬಂಧ ಮಾಹಿತಿ ಹಾಗೂ ತಂತ್ರಜ್ಞಾನ ಸಚಿವರು ಉತ್ತರ ನೀಡಿದ್ದಾರೆ ಎಂದು ಸಮಜಾಯಿಷಿ ನೀಡಿದೆ.

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮುರಿದುಕೊಂಡು ಬಿದ್ದಿವೆ. ಸತತ ಎರಡು ವಾರಗಳಿಂದ ಸಂಸತ್​​ನ ಉಭಯ ಕಲಾಪಗಳು ಬರೀ ಗದ್ದಲ- ಗೊಂದಲದಲ್ಲೇ ಮುಂದುವರಿದಿದ್ದು, ಸತ್ವಯುತ ಚರ್ಚೆ ಎಂಬುದು ಮರೀಚಿಕೆ ಆಗಿದೆ.

ಈ ನಡುವೆ ಪ್ರತಿಪಕ್ಷ ಕಾಂಗ್ರೆಸ್​ ನೇತೃತ್ವದಲ್ಲಿ ನಾಳೆ ಪ್ರತಿಪಕ್ಷಗಳ ನಾಯಕರ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾಹಿತಿ ನೀಡಿದ್ದಾರೆ. ದೆಹಲಿಯ ಕಾನ್ಸಿಟಿಟ್ಯೂಟ್​​​ ಕ್ಲಬ್​ನಲ್ಲಿ ಈ ಸಭೆ ನಡೆಯಲಿದೆ.

ನಾಳಿನ ಸಭೆಗೆ ರಾಹುಲ್​ ಗಾಂಧಿ ಎಲ್ಲ ಪ್ರತಿಪಕ್ಷಗಳ ನಾಯಕರು ಬಂದು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಪೆಗಾಸಸ್​ ಸ್ಪೈ ವೇರ್​ ಬಳಕೆ ಹಾಗೂ ಕೇಂದ್ರ ಸರ್ಕಾರದ ಪಾತ್ರದ ವಿರುದ್ಧ ಉಗ್ರ ಹೋರಾಟಕ್ಕೆ ಕಾಂಗ್ರೆಸ್​ ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ನಾಳಿನ ಸಭೆಯಲ್ಲಿ ಎಲ್ಲ ನಾಯಕರು ಪಾಲ್ಗೊಳ್ಳಬೇಕು ಎಂದು ರಾಹುಲ್​ ಗಾಂಧಿ ಕರೆ ನೀಡಿದ್ದಾರೆ.

ಪ್ರತಿಪಕ್ಷದ ಎಲ್ಲ ಸಂಸದರು ಹಾಗೂ ಎರಡೂ ಸದನಗಳ ಪ್ರಮುಖ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಲಾಗಿದೆ. ಪ್ರತಿಪಕ್ಷಗಳು ಪೆಗಾಸಸ್​ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ನಿಲುವಳಿ ಸೂಚನೆಯನ್ನು ಮಂಡಿಸಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಮಣಿದಿಲ್ಲ. ಪರಿಣಾಮ ಸದನವೂ ನಡೆಯುತ್ತಿಲ್ಲ.

ಈ ಸಂಬಂಧ ಪ್ರತಿಕ್ರಿಯೆ ನೀಡುತ್ತಿರುವ ಕೇಂದ್ರ ಸರ್ಕಾರ, ಈ ಸಂಬಂಧ ಮಾಹಿತಿ ಹಾಗೂ ತಂತ್ರಜ್ಞಾನ ಸಚಿವರು ಉತ್ತರ ನೀಡಿದ್ದಾರೆ ಎಂದು ಸಮಜಾಯಿಷಿ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.