ETV Bharat / bharat

ಜ್ಞಾನವಾಪಿ- ಕಾಶಿ ವಿವಾದ: ಮುಂಸ್ಲಿ ಸಂಘಟನೆಗಳ ಐದೂ ಅರ್ಜಿಗಳನ್ನು ವಜಾ ಮಾಡಿದ ಅಲಹಾಬಾದ್ ಹೈಕೋರ್ಟ್

author img

By PTI

Published : Dec 19, 2023, 11:04 AM IST

Updated : Dec 19, 2023, 11:49 AM IST

Gyanvapi Mosque Case: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಂಘಟನೆಗಳಿಂದ ಸಲ್ಲಿಕೆ ಮಾಡಲಾಗಿದ್ದ ಐದು ಅರ್ಜಿಗಳನ್ನು ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ.

Etv Bharat
Etv Bharat

ಪ್ರಯಾಗರಾಜ್ (ಉತ್ತರ ಪ್ರದೇಶ): ಅಲಹಾಬಾದ್ ಹೈಕೋರ್ಟ್ ಇಂದು ಕಾಶಿ ವಿಶ್ವನಾಥ್-ಜ್ಞಾನವಾಪಿ ಭೂ ಹಕ್ಕು ವಿವಾದ ಪ್ರಕರಣಗಳ ತೀರ್ಪನ್ನು ಪ್ರಕಟಿಸಿದೆ. ಮಸೀದಿ ಸಮಿತಿಯ ಎಲ್ಲಾ ಐದು ಅರ್ಜಿಗಳನ್ನು ವಜಾಗೊಳಿಸಿದೆ.

ವಿವಾದಿತ ಸ್ಥಳದಲ್ಲಿ ಪೂಜಿಸುವ ಹಕ್ಕನ್ನು ಕೋರಿ ಹಿಂದೂ ಸಮುದಾಯ ಸಲ್ಲಿಸಿದ ಅರ್ಜಿಯನ್ನು ಹಾಗೂ ಬಾಕಿ ಉಳಿದಿರುವ ಸಿವಿಲ್ ಮೊಕದ್ದಮೆಯ ನಿರ್ವಹಣೆಯನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಮತ್ತು ಯುಪಿ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಸಲ್ಲಿಸಿದ ಐದು ಅರ್ಜಿಗಳನ್ನು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ. ಇಂದಿನ ತೀರ್ಪಿನಲ್ಲಿ, 1991ರ ವಿವಾದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್​ ಅನುಮೋದಿಸಿದೆ. ಸಿವಿಲ್ ಮೊಕದ್ದಮೆಯು ವಾರಣಾಸಿ ನ್ಯಾಯಾಲಯದಲ್ಲಿ ಬಾಕಿ ಉಳಿದಿದೆ.

ಏನಿದು ಪ್ರಕರಣ?: ಜುಲೈ 21ರ 2023ರಂದು ವಾರಣಾಸಿ ಕೋರ್ಟ್​, ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿ, ಆದೇಶಿಸಿತ್ತು. ಅದರಂತೆ ಮಸೀದಿಯಲ್ಲಿ ಐಎಸ್‌ಐ ಜುಲೈ 24ರ 2023ರಂದು ಸಮೀಕ್ಷೆ ಆರಂಭಿಸಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಸುಪ್ರೀಂ ಕೋರ್ಟ್‌ ಸಮೀಕ್ಷೆಗೆ ತಡೆಯಾಜ್ಞೆ ನೀಡಿತ್ತು. ಮಸೀದಿ ಪರ ಅರ್ಜಿದಾರರು ಅಲಹಾಬಾದ್‌ ಉಚ್ಚನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಸೂಚನೆ ನೀಡಿತ್ತು. ಅದರಂತೆ ಅಂಜುಮನ್‌ ಇಂತೇಜಾಮಿಯಾ ಮಸೀದಿ ಸಲ್ಲಿಸಿದ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿದ್ದ ಅಲಹಾಬಾದ್‌ ಹೈಕೋರ್ಟ್‌, ಸಮೀಕ್ಷೆಗೆ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿತ್ತು.

ಬಳಿಕ, ಅಲಹಾಬಾದ್‌ ಹೈಕೋರ್ಟ್‌ ಸಮೀಕ್ಷೆ ನಡೆಸಲು ಅನುಮತಿಸಿತ್ತು. ಅಲಹಾಬಾದ್‌ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ, ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ಅಂತಿಮವಾಗಿ, ಸುಪ್ರೀಂ ಕೋರ್ಟ್‌ ವೈಜ್ಞಾನಿಕ ಸಮೀಕ್ಷೆ ನಡೆಸಲು ಅನುಮತಿ ನೀಡಿತ್ತು. ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಕೋರಿ ಹಿಂದೂ ಆರಾಧಕರು 2021ರಲ್ಲಿ ವಾರಣಾಸಿ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ಸಲ್ಲಿಸಿದ ಬಳಿಕ ನ್ಯಾಯಾಲಯವು ಮಸೀದಿಯಲ್ಲಿ ವಿಡಿಯೋ ಸಮೀಕ್ಷೆಗೆ ಅನುವು ಮಾಡಿಕೊಟ್ಟಿತ್ತು. ಈಗಾಗಲೇ, ಜ್ಞಾನವಾಪಿ ಮಸೀದಿಯ ವಿಡಿಯೋ ಸಮೀಕ್ಷೆ ಕೂಡ ಮುಗಿದಿದೆ. ಶಿವಲಿಂಗ ಪತ್ತೆಯಾದ ಕಾರಣ ವೈಜ್ಞಾನಿಕ ಸಮೀಕ್ಷೆಗೆ ಮನವಿಯನ್ನು ಮಾಡಲಾಗಿತ್ತು.

ವಾರಣಾಸಿ ನ್ಯಾಯಾಲಯದ ಮುಂದೆ ಸಲ್ಲಿಸಿದ ಮೊಕದ್ದಮೆಯಲ್ಲಿ, ಹಿಂದೂ ಅರ್ಜಿದಾರರು ಪ್ರಸ್ತುತ ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಪುನಃಸ್ಥಾಪಿಸಲು ಕೋರಿದ್ದರು. ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ನಿರ್ವಹಣೆಯನ್ನು ನೋಡಿಕೊಳ್ಳುವ ಎಐಎಂಸಿ (ಅಂಜುಮನ್‌ ಇಂತೇಜಾಮಿಯಾ ಮಸೀದಿ ಸಮಿತಿ) ಈ ಮನವಿಗೆ ವಿರೋಧ ವ್ಯಕ್ತಪಡಿಸಿತ್ತು.

ವಾರಣಾಸಿಯ ನ್ಯಾಯಾಲಯವೊಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್​ಐ) ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಿ "ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ಮಸೀದಿಯನ್ನು ನಿರ್ಮಿಸಿದ್ದರೆ" ಡಿಸೆಂಬರ್ 18 ರಂದು, ASI ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ನಡೆಸಿದ ವೈಜ್ಞಾನಿಕ ಮೌಲ್ಯಮಾಪನದ ಮೇಲೆ ತನ್ನ ಸಂಶೋಧನೆಗಳನ್ನು ನೀಡಿತು.

ವಾರಣಾಸಿಯ ನ್ಯಾಯಾಲಯದಲ್ಲಿ ಡಿ.21ಕ್ಕೆ ವಿಚಾರಣೆ: ''ನಾವು ವಾರಣಾಸಿಯ ನ್ಯಾಯಾಲಯಕ್ಕೆ ಮುಚ್ಚಿದ ಕವರ್‌ನಲ್ಲಿ ವರದಿಯನ್ನು ಸಲ್ಲಿಸಿದ್ದೇವೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ(ಎಎಸ್​ಐ) ವೈಜ್ಞಾನಿಕ ಸಮೀಕ್ಷೆ ವರದಿಯನ್ನು ಪರಿಶೀಲಿಸಲು ನ್ಯಾಯಾಲಯವು ಡಿಸೆಂಬರ್ 21 ಎಂದು ಮುಂದಿನ ವಿಚಾರಣೆಯನ್ನು ನಡೆಸಲಿದೆ'' ಎಂದು ಎಎಸ್‌ಐ ಪರ ವಕೀಲ ಅಮಿತ್ ಶ್ರೀವಾಸ್ತವ್​ ತಿಳಿಸಿದರು.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ: ಅಲಹಾಬಾದ್ ಹೈಕೋರ್ಟ್​ನಿಂದ ಇಂದು ತೀರ್ಪು ಪ್ರಕಟ ಸಾಧ್ಯತೆ

ಪ್ರಯಾಗರಾಜ್ (ಉತ್ತರ ಪ್ರದೇಶ): ಅಲಹಾಬಾದ್ ಹೈಕೋರ್ಟ್ ಇಂದು ಕಾಶಿ ವಿಶ್ವನಾಥ್-ಜ್ಞಾನವಾಪಿ ಭೂ ಹಕ್ಕು ವಿವಾದ ಪ್ರಕರಣಗಳ ತೀರ್ಪನ್ನು ಪ್ರಕಟಿಸಿದೆ. ಮಸೀದಿ ಸಮಿತಿಯ ಎಲ್ಲಾ ಐದು ಅರ್ಜಿಗಳನ್ನು ವಜಾಗೊಳಿಸಿದೆ.

ವಿವಾದಿತ ಸ್ಥಳದಲ್ಲಿ ಪೂಜಿಸುವ ಹಕ್ಕನ್ನು ಕೋರಿ ಹಿಂದೂ ಸಮುದಾಯ ಸಲ್ಲಿಸಿದ ಅರ್ಜಿಯನ್ನು ಹಾಗೂ ಬಾಕಿ ಉಳಿದಿರುವ ಸಿವಿಲ್ ಮೊಕದ್ದಮೆಯ ನಿರ್ವಹಣೆಯನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಮತ್ತು ಯುಪಿ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಸಲ್ಲಿಸಿದ ಐದು ಅರ್ಜಿಗಳನ್ನು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ. ಇಂದಿನ ತೀರ್ಪಿನಲ್ಲಿ, 1991ರ ವಿವಾದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್​ ಅನುಮೋದಿಸಿದೆ. ಸಿವಿಲ್ ಮೊಕದ್ದಮೆಯು ವಾರಣಾಸಿ ನ್ಯಾಯಾಲಯದಲ್ಲಿ ಬಾಕಿ ಉಳಿದಿದೆ.

ಏನಿದು ಪ್ರಕರಣ?: ಜುಲೈ 21ರ 2023ರಂದು ವಾರಣಾಸಿ ಕೋರ್ಟ್​, ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿ, ಆದೇಶಿಸಿತ್ತು. ಅದರಂತೆ ಮಸೀದಿಯಲ್ಲಿ ಐಎಸ್‌ಐ ಜುಲೈ 24ರ 2023ರಂದು ಸಮೀಕ್ಷೆ ಆರಂಭಿಸಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಸುಪ್ರೀಂ ಕೋರ್ಟ್‌ ಸಮೀಕ್ಷೆಗೆ ತಡೆಯಾಜ್ಞೆ ನೀಡಿತ್ತು. ಮಸೀದಿ ಪರ ಅರ್ಜಿದಾರರು ಅಲಹಾಬಾದ್‌ ಉಚ್ಚನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಸೂಚನೆ ನೀಡಿತ್ತು. ಅದರಂತೆ ಅಂಜುಮನ್‌ ಇಂತೇಜಾಮಿಯಾ ಮಸೀದಿ ಸಲ್ಲಿಸಿದ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿದ್ದ ಅಲಹಾಬಾದ್‌ ಹೈಕೋರ್ಟ್‌, ಸಮೀಕ್ಷೆಗೆ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿತ್ತು.

ಬಳಿಕ, ಅಲಹಾಬಾದ್‌ ಹೈಕೋರ್ಟ್‌ ಸಮೀಕ್ಷೆ ನಡೆಸಲು ಅನುಮತಿಸಿತ್ತು. ಅಲಹಾಬಾದ್‌ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ, ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ಅಂತಿಮವಾಗಿ, ಸುಪ್ರೀಂ ಕೋರ್ಟ್‌ ವೈಜ್ಞಾನಿಕ ಸಮೀಕ್ಷೆ ನಡೆಸಲು ಅನುಮತಿ ನೀಡಿತ್ತು. ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಕೋರಿ ಹಿಂದೂ ಆರಾಧಕರು 2021ರಲ್ಲಿ ವಾರಣಾಸಿ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ಸಲ್ಲಿಸಿದ ಬಳಿಕ ನ್ಯಾಯಾಲಯವು ಮಸೀದಿಯಲ್ಲಿ ವಿಡಿಯೋ ಸಮೀಕ್ಷೆಗೆ ಅನುವು ಮಾಡಿಕೊಟ್ಟಿತ್ತು. ಈಗಾಗಲೇ, ಜ್ಞಾನವಾಪಿ ಮಸೀದಿಯ ವಿಡಿಯೋ ಸಮೀಕ್ಷೆ ಕೂಡ ಮುಗಿದಿದೆ. ಶಿವಲಿಂಗ ಪತ್ತೆಯಾದ ಕಾರಣ ವೈಜ್ಞಾನಿಕ ಸಮೀಕ್ಷೆಗೆ ಮನವಿಯನ್ನು ಮಾಡಲಾಗಿತ್ತು.

ವಾರಣಾಸಿ ನ್ಯಾಯಾಲಯದ ಮುಂದೆ ಸಲ್ಲಿಸಿದ ಮೊಕದ್ದಮೆಯಲ್ಲಿ, ಹಿಂದೂ ಅರ್ಜಿದಾರರು ಪ್ರಸ್ತುತ ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಪುನಃಸ್ಥಾಪಿಸಲು ಕೋರಿದ್ದರು. ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ನಿರ್ವಹಣೆಯನ್ನು ನೋಡಿಕೊಳ್ಳುವ ಎಐಎಂಸಿ (ಅಂಜುಮನ್‌ ಇಂತೇಜಾಮಿಯಾ ಮಸೀದಿ ಸಮಿತಿ) ಈ ಮನವಿಗೆ ವಿರೋಧ ವ್ಯಕ್ತಪಡಿಸಿತ್ತು.

ವಾರಣಾಸಿಯ ನ್ಯಾಯಾಲಯವೊಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್​ಐ) ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಿ "ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ಮಸೀದಿಯನ್ನು ನಿರ್ಮಿಸಿದ್ದರೆ" ಡಿಸೆಂಬರ್ 18 ರಂದು, ASI ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ನಡೆಸಿದ ವೈಜ್ಞಾನಿಕ ಮೌಲ್ಯಮಾಪನದ ಮೇಲೆ ತನ್ನ ಸಂಶೋಧನೆಗಳನ್ನು ನೀಡಿತು.

ವಾರಣಾಸಿಯ ನ್ಯಾಯಾಲಯದಲ್ಲಿ ಡಿ.21ಕ್ಕೆ ವಿಚಾರಣೆ: ''ನಾವು ವಾರಣಾಸಿಯ ನ್ಯಾಯಾಲಯಕ್ಕೆ ಮುಚ್ಚಿದ ಕವರ್‌ನಲ್ಲಿ ವರದಿಯನ್ನು ಸಲ್ಲಿಸಿದ್ದೇವೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ(ಎಎಸ್​ಐ) ವೈಜ್ಞಾನಿಕ ಸಮೀಕ್ಷೆ ವರದಿಯನ್ನು ಪರಿಶೀಲಿಸಲು ನ್ಯಾಯಾಲಯವು ಡಿಸೆಂಬರ್ 21 ಎಂದು ಮುಂದಿನ ವಿಚಾರಣೆಯನ್ನು ನಡೆಸಲಿದೆ'' ಎಂದು ಎಎಸ್‌ಐ ಪರ ವಕೀಲ ಅಮಿತ್ ಶ್ರೀವಾಸ್ತವ್​ ತಿಳಿಸಿದರು.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ: ಅಲಹಾಬಾದ್ ಹೈಕೋರ್ಟ್​ನಿಂದ ಇಂದು ತೀರ್ಪು ಪ್ರಕಟ ಸಾಧ್ಯತೆ

Last Updated : Dec 19, 2023, 11:49 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.