ETV Bharat / bharat

ಅಂಬೇಡ್ಕರ್, ಅಬ್ದುಲ್ ಕಲಾಂ ಯಾವ ವರ್ಣಕ್ಕೆ ಸೇರಿದವರು.. ಮತ್ತೊಂದು ಪಠ್ಯಪುಸ್ತಕ ವಿವಾದ ಮುನ್ನಲೆಗೆ - ambedkar and abdul kalam

ಚಿನ್ಮಯ ಮಿಷನ್ ಉತ್ಪಾದಿಸಿ ಪೂರೈಸುತ್ತಿರುವ 6ನೇ ತರಗತಿ ಇತಿಹಾಸ ಪಠ್ಯಪುಸ್ತಕದಲ್ಲಿ ಅಂಬೇಡ್ಕರ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಯಾವ ಜಾತಿಗೆ ಸೇರಿದವರು ಎಂಬ ಪ್ರಶ್ನೆಯನ್ನು ಕೇಳಲಾಗಿದ್ದು, ಮಕ್ಕಳಲ್ಲಿ ಜಾತಿ ಮತ್ತು ವರ್ಣಭೇದ ನೀತಿ ಹುಟ್ಟುಹಾಕಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

textbook
ಪಠ್ಯಪುಸ್ತಕ ಪ್ರಶ್ನೆ ವಿವಾದ
author img

By

Published : Oct 3, 2022, 9:47 AM IST

ಚೆನ್ನೈ(ತಮಿಳುನಾಡು): ಹಿಂದೂ ಧಾರ್ಮಿಕ ಸಂಸ್ಥೆಯಾದ ಚಿನ್ಮಯ ಮಿಷನ್ ದೇಶಾದ್ಯಂತ ಹಲವು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದು, ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ಉತ್ಪಾದಿಸಿ ಪೂರೈಸುವ ಕಾರ್ಯ ಮಾಡುತ್ತಿದೆ. ಆದ್ರೆ, 6 ನೇ ತರಗತಿಯ ಇತಿಹಾಸ ಪುಸ್ತಕದಲ್ಲಿ ಮಕ್ಕಳ ಮನಸ್ಸಿನಲ್ಲಿ ವರ್ಣಭೇದ ನೀತಿ ಹುಟ್ಟುಹಾಕುವಂತಹ ಪ್ರಶ್ನೆಗಳನ್ನು ಕೇಳಲಾಗಿದೆ ಎಂಬ ಆರೋಪವಿದೆ.

textbook
ಮಕ್ಕಳಲ್ಲಿ ಜಾತಿ ಮತ್ತು ವರ್ಣಭೇದ ನೀತಿ ಹುಟ್ಟುಹಾಕುವ ಪ್ರಶ್ನೆ

ಚೆನ್ನೈನ ಕ್ರೋಮ್‌ಪೇಟ್‌ನಲ್ಲಿರುವ ವಿವೇಕಾನಂದ ವಿದ್ಯಾಲಯ ಶಾಲೆಯಲ್ಲಿ ಚಿನ್ಮಯ ಮಿಷನ್ ತಯಾರಿಸಿದ ಪುಸ್ತಕಗಳನ್ನು ಬಳಸಲಾಗುತ್ತಿದೆ. 6ನೇ ತರಗತಿ ಇತಿಹಾಸ ಪುಸ್ತಕ 'ರೇಡಿಯಂಟ್ ಭಾರತ್'ದಲ್ಲಿ ವೃತ್ತಿಯ ಆಧಾರದ ಮೇಲೆ ಜನರನ್ನು ಬ್ರಾಹ್ಮಣ, ಕ್ಷತ್ರಿಯ ವೈಶ್ಯ, ಶೂದ್ರ ಎಂದು 4 ವರ್ಗಗಳಾಗಿ ವಿಂಗಡಿಸಲಾಗಿದೆ ಎಂದು ಹೇಳಲಾಗಿದೆ. ಜೊತೆಗೆ ಅಂಬೇಡ್ಕರ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಮುಂತಾದವರು ಯಾವ ಜಾತಿಗೆ ಸೇರಿದವರು ಎಂಬ ಪ್ರಶ್ನೆಯನ್ನು ಕೇಳಲಾಗಿದೆ.

textbook
ಮಕ್ಕಳಲ್ಲಿ ಜಾತಿ ಮತ್ತು ವರ್ಣಭೇದ ನೀತಿ ಹುಟ್ಟುಹಾಕುವ ಪ್ರಶ್ನೆ

ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಿಗೆ ಸಮಾನತೆಯ ಪಾಠವನ್ನು ಕಲಿಸುವ ಬದಲು ಜಾತಿ ಮತ್ತು ವರ್ಣಭೇದ ನೀತಿಗೆ ಸಂಬಂಧಿಸಿದ ಅಂಶಗಳ ಆಧಾರದಲ್ಲಿ ಪ್ರಶ್ನೆಗಳನ್ನು ಕೇಳಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗುತ್ತಿದೆ.

textbook
ಮಕ್ಕಳಲ್ಲಿ ಜಾತಿ ಮತ್ತು ವರ್ಣಭೇದ ನೀತಿ ಹುಟ್ಟುಹಾಕುವ ಪ್ರಶ್ನೆ

ಈ ಹಿಂದೆ ಕರ್ನಾಟಕದಲ್ಲಿ ಶಾಲಾ ಪಠ್ಯಗಳಲ್ಲಿ ಹಲವು ಸಾಹಿತಿಗಳ ಪಾಠಗಳನ್ನು ಕೈಬಿಟ್ಟಿದ್ದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ, ಸರಣಿ ತಪ್ಪುಗಳನ್ನು ಪಠ್ಯ ಪುಸ್ತಕ ರಚನಾ ಸಮಿತಿ ಎಸಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಚೆನ್ನೈ(ತಮಿಳುನಾಡು): ಹಿಂದೂ ಧಾರ್ಮಿಕ ಸಂಸ್ಥೆಯಾದ ಚಿನ್ಮಯ ಮಿಷನ್ ದೇಶಾದ್ಯಂತ ಹಲವು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದು, ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ಉತ್ಪಾದಿಸಿ ಪೂರೈಸುವ ಕಾರ್ಯ ಮಾಡುತ್ತಿದೆ. ಆದ್ರೆ, 6 ನೇ ತರಗತಿಯ ಇತಿಹಾಸ ಪುಸ್ತಕದಲ್ಲಿ ಮಕ್ಕಳ ಮನಸ್ಸಿನಲ್ಲಿ ವರ್ಣಭೇದ ನೀತಿ ಹುಟ್ಟುಹಾಕುವಂತಹ ಪ್ರಶ್ನೆಗಳನ್ನು ಕೇಳಲಾಗಿದೆ ಎಂಬ ಆರೋಪವಿದೆ.

textbook
ಮಕ್ಕಳಲ್ಲಿ ಜಾತಿ ಮತ್ತು ವರ್ಣಭೇದ ನೀತಿ ಹುಟ್ಟುಹಾಕುವ ಪ್ರಶ್ನೆ

ಚೆನ್ನೈನ ಕ್ರೋಮ್‌ಪೇಟ್‌ನಲ್ಲಿರುವ ವಿವೇಕಾನಂದ ವಿದ್ಯಾಲಯ ಶಾಲೆಯಲ್ಲಿ ಚಿನ್ಮಯ ಮಿಷನ್ ತಯಾರಿಸಿದ ಪುಸ್ತಕಗಳನ್ನು ಬಳಸಲಾಗುತ್ತಿದೆ. 6ನೇ ತರಗತಿ ಇತಿಹಾಸ ಪುಸ್ತಕ 'ರೇಡಿಯಂಟ್ ಭಾರತ್'ದಲ್ಲಿ ವೃತ್ತಿಯ ಆಧಾರದ ಮೇಲೆ ಜನರನ್ನು ಬ್ರಾಹ್ಮಣ, ಕ್ಷತ್ರಿಯ ವೈಶ್ಯ, ಶೂದ್ರ ಎಂದು 4 ವರ್ಗಗಳಾಗಿ ವಿಂಗಡಿಸಲಾಗಿದೆ ಎಂದು ಹೇಳಲಾಗಿದೆ. ಜೊತೆಗೆ ಅಂಬೇಡ್ಕರ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಮುಂತಾದವರು ಯಾವ ಜಾತಿಗೆ ಸೇರಿದವರು ಎಂಬ ಪ್ರಶ್ನೆಯನ್ನು ಕೇಳಲಾಗಿದೆ.

textbook
ಮಕ್ಕಳಲ್ಲಿ ಜಾತಿ ಮತ್ತು ವರ್ಣಭೇದ ನೀತಿ ಹುಟ್ಟುಹಾಕುವ ಪ್ರಶ್ನೆ

ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಿಗೆ ಸಮಾನತೆಯ ಪಾಠವನ್ನು ಕಲಿಸುವ ಬದಲು ಜಾತಿ ಮತ್ತು ವರ್ಣಭೇದ ನೀತಿಗೆ ಸಂಬಂಧಿಸಿದ ಅಂಶಗಳ ಆಧಾರದಲ್ಲಿ ಪ್ರಶ್ನೆಗಳನ್ನು ಕೇಳಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗುತ್ತಿದೆ.

textbook
ಮಕ್ಕಳಲ್ಲಿ ಜಾತಿ ಮತ್ತು ವರ್ಣಭೇದ ನೀತಿ ಹುಟ್ಟುಹಾಕುವ ಪ್ರಶ್ನೆ

ಈ ಹಿಂದೆ ಕರ್ನಾಟಕದಲ್ಲಿ ಶಾಲಾ ಪಠ್ಯಗಳಲ್ಲಿ ಹಲವು ಸಾಹಿತಿಗಳ ಪಾಠಗಳನ್ನು ಕೈಬಿಟ್ಟಿದ್ದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ, ಸರಣಿ ತಪ್ಪುಗಳನ್ನು ಪಠ್ಯ ಪುಸ್ತಕ ರಚನಾ ಸಮಿತಿ ಎಸಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.