ETV Bharat / bharat

ಕೇರಳದಲ್ಲಿ ಕೋವಿಡ್ ಹೆಚ್ಚಳ: ಕರ್ನಾಟಕ, ತಮಿಳುನಾಡಿಗೆ ಕೇಂದ್ರ ಆರೋಗ್ಯ ಸಚಿವರ ಎಚ್ಚರಿಕೆ

author img

By

Published : Sep 1, 2021, 10:47 PM IST

ಕೇರಳ ರಾಜ್ಯದಲ್ಲಿ ಅತಿ ಹೆಚ್ಚು ಕೋವಿಡ್ ಸೋಂಕಿತರು ಕಂಡುಬರುತ್ತಿದ್ದರೂ ಕೂಡಾ ಲಾಕ್‌ಡೌನ್ ಹೇರಲು ಮತ್ತು ಕೋವಿಡ್ ಹರಡುವಿಕೆ ಪ್ರಮಾಣ ಕಡಿಮೆ ಮಾಡಲು ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಎಂಬ ಆರೋಪಗಳೂ ಕೇಳಿ ಬರುತ್ತಿವೆ.

Amid surging cases in Kerala, Mandaviya urges Karnataka, TN to take tough measures
ಕೇರಳದಲ್ಲಿ ಕೋವಿಡ್ ಹೆಚ್ಚಳ: ಕರ್ನಾಟಕ, ತಮಿಳುನಾಡಿಗೆ ಕೇಂದ್ರ ಆರೋಗ್ಯ ಸಚಿವರ ಎಚ್ಚರಿಕೆ

ನವದೆಹಲಿ: ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಎರಡೂ ರಾಜ್ಯಗಳು ಗಡಿ ಜಿಲ್ಲೆಗಳಲ್ಲಿ ವ್ಯಾಕ್ಸಿನೇಷನ್ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ತಮಿಳುನಾಡು ಮತ್ತು ಕರ್ನಾಟಕದ ಆರೋಗ್ಯ ಸಚಿವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸೂಚನೆ ನೀಡಿದ್ದಾರೆ.

ಕೇರಳದಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಹೆಚ್ಚಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಶೇಕಡಾ 20ಕ್ಕಿಂತ ಹೆಚ್ಚಿದೆ. ಇದು ವೈರಸ್ ವೇಗವಾಗಿ ಹರಡುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಕೋವಿಡ್ ಪ್ರಕರಣಗಳನ್ನು ತಗ್ಗಿಸಲು ಕಠಿಣ ಕ್ರಮಗಳನ್ನು ಮತ್ತು ಲಾಕ್​ಡೌನ್ ಜಾರಿಗೊಳಿಸಲು ಸರ್ಕಾರಿ ಮೂಲಗಳು ಒತ್ತುನೀಡುತ್ತಿವೆ.

ಕೇರಳ ರಾಜ್ಯವು ದೇಶದಲ್ಲಿ ದಿನವೊಂದರಲ್ಲಿ ಒಟ್ಟು ಕಾಣಿಸಿಕೊಳ್ಳುವ ಪ್ರಕರಣಗಳಲ್ಲಿ ಮೂರನೇ ಒಂದು ಭಾಗದಷ್ಟು ಕೋವಿಡ್ ಪ್ರಕರಣಗಳನ್ನು ಹೊಂದಿದೆ. ಆದರೂ ಕೂಡಾ ಲಾಕ್‌ಡೌನ್ ಹೇರಲು ಮತ್ತು ಕೋವಿಡ್ ಹರಡುವಿಕೆ ಪ್ರಮಾಣ ಕಡಿಮೆ ಮಾಡಲು ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಎಂಬ ಆರೋಪಗಳೂ ಕೇಳಿಬರುತ್ತಿವೆ.

ಶೇಕಡಾ 85ಕ್ಕಿಂತಲೂ ಕೊರೊನಾ ರೋಗಿಗಳನ್ನು ಹೋಂ ಐಸೋಲೇಷನ್​ನಲ್ಲಿ ಇಡಬೇಕು. ಹಲವಾರು ಪ್ರದೇಶಗಳಲ್ಲಿ ಹೋಮ್ ಐಸೋಲೇಷನ್ ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎಂಬ ಆರೋಪವಿದೆ. ಇದೂ ಕೂಡಾ ಸೋಂಕಿನ ಹೆಚ್ಚಳಕ್ಕೆ ಕಾರಣವಾಗಿದೆ. ವೈರಸ್ ಹರಡದಂತೆ ತಡೆಯಲು ಕಠಿಣ ಕ್ರಮಗಳ ಜೊತೆಗೆ ವಿಶೇಷವಾಗಿ ಹಬ್ಬಗಳ ಮೇಲೆ ಗಮನವಿಡಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ.

ಕೇರಳದ ಕೋವಿಡ್ ವರದಿ

ಕೇರಳದಲ್ಲಿ ಬುಧವಾರ 32,803 ಹೊಸ ಕೋವಿಡ್ ಪ್ರಕರಣಗಳು ಮತ್ತು 173 ಸಾವು ವರದಿಯಾಗಿವೆ. ಈಗ ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 40,90,036ಕ್ಕೆ ಒಟ್ಟು ಸಾವಿನ ಸಂಖ್ಯೆ 20,961ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 1,74,854 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, ಶೇಕಡಾ 18.76 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈವರೆಗೆ 3,17,27,535 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಮಂಗಳವಾರದಿಂದ ಸುಮಾರು 21,610 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ 38,38,614 ಮಂದಿ ಚೇತರಿಕೆ ಕಂಡಿದ್ದಾರೆ. ಸದ್ಯಕ್ಕೆ 2,29,912 ಚಿಕಿತ್ಸೆ ಪಡೆಯುತ್ತಿದ್ದಾರೆ.

ನವದೆಹಲಿ: ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಎರಡೂ ರಾಜ್ಯಗಳು ಗಡಿ ಜಿಲ್ಲೆಗಳಲ್ಲಿ ವ್ಯಾಕ್ಸಿನೇಷನ್ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ತಮಿಳುನಾಡು ಮತ್ತು ಕರ್ನಾಟಕದ ಆರೋಗ್ಯ ಸಚಿವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸೂಚನೆ ನೀಡಿದ್ದಾರೆ.

ಕೇರಳದಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಹೆಚ್ಚಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಶೇಕಡಾ 20ಕ್ಕಿಂತ ಹೆಚ್ಚಿದೆ. ಇದು ವೈರಸ್ ವೇಗವಾಗಿ ಹರಡುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಕೋವಿಡ್ ಪ್ರಕರಣಗಳನ್ನು ತಗ್ಗಿಸಲು ಕಠಿಣ ಕ್ರಮಗಳನ್ನು ಮತ್ತು ಲಾಕ್​ಡೌನ್ ಜಾರಿಗೊಳಿಸಲು ಸರ್ಕಾರಿ ಮೂಲಗಳು ಒತ್ತುನೀಡುತ್ತಿವೆ.

ಕೇರಳ ರಾಜ್ಯವು ದೇಶದಲ್ಲಿ ದಿನವೊಂದರಲ್ಲಿ ಒಟ್ಟು ಕಾಣಿಸಿಕೊಳ್ಳುವ ಪ್ರಕರಣಗಳಲ್ಲಿ ಮೂರನೇ ಒಂದು ಭಾಗದಷ್ಟು ಕೋವಿಡ್ ಪ್ರಕರಣಗಳನ್ನು ಹೊಂದಿದೆ. ಆದರೂ ಕೂಡಾ ಲಾಕ್‌ಡೌನ್ ಹೇರಲು ಮತ್ತು ಕೋವಿಡ್ ಹರಡುವಿಕೆ ಪ್ರಮಾಣ ಕಡಿಮೆ ಮಾಡಲು ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಎಂಬ ಆರೋಪಗಳೂ ಕೇಳಿಬರುತ್ತಿವೆ.

ಶೇಕಡಾ 85ಕ್ಕಿಂತಲೂ ಕೊರೊನಾ ರೋಗಿಗಳನ್ನು ಹೋಂ ಐಸೋಲೇಷನ್​ನಲ್ಲಿ ಇಡಬೇಕು. ಹಲವಾರು ಪ್ರದೇಶಗಳಲ್ಲಿ ಹೋಮ್ ಐಸೋಲೇಷನ್ ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎಂಬ ಆರೋಪವಿದೆ. ಇದೂ ಕೂಡಾ ಸೋಂಕಿನ ಹೆಚ್ಚಳಕ್ಕೆ ಕಾರಣವಾಗಿದೆ. ವೈರಸ್ ಹರಡದಂತೆ ತಡೆಯಲು ಕಠಿಣ ಕ್ರಮಗಳ ಜೊತೆಗೆ ವಿಶೇಷವಾಗಿ ಹಬ್ಬಗಳ ಮೇಲೆ ಗಮನವಿಡಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ.

ಕೇರಳದ ಕೋವಿಡ್ ವರದಿ

ಕೇರಳದಲ್ಲಿ ಬುಧವಾರ 32,803 ಹೊಸ ಕೋವಿಡ್ ಪ್ರಕರಣಗಳು ಮತ್ತು 173 ಸಾವು ವರದಿಯಾಗಿವೆ. ಈಗ ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 40,90,036ಕ್ಕೆ ಒಟ್ಟು ಸಾವಿನ ಸಂಖ್ಯೆ 20,961ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 1,74,854 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, ಶೇಕಡಾ 18.76 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈವರೆಗೆ 3,17,27,535 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಮಂಗಳವಾರದಿಂದ ಸುಮಾರು 21,610 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ 38,38,614 ಮಂದಿ ಚೇತರಿಕೆ ಕಂಡಿದ್ದಾರೆ. ಸದ್ಯಕ್ಕೆ 2,29,912 ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.