ಹಿಂಗಲಗಂಜ್ (ಪಶ್ಚಿಮ ಬಂಗಾಳ): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಪಶ್ಚಿಮ ಬಂಗಾಳದಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿಗಾಗಿ ಆರು ವಾಟರ್ ಆ್ಯಂಬುಲೆನ್ಸ್ಗಳಿಗೆ ಚಾಲನೆ ನೀಡಿದರು.
ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಗೃಹ ಸಚಿವರು ಹಿಂಗಲಗಂಜ್ನಲ್ಲಿ ಈ ವಾಟರ್ ಆ್ಯಂಬುಲೆನ್ಸ್ಗಳನ್ನು ಉದ್ಘಾಟಿಸಿದರು. ಈ ಆ್ಯಂಬುಲೆನ್ಸ್ಗಳು ನೀರಿದಲ್ಲಿ ಸಂಚರಿಸಿದ್ದು, ತಕ್ಷಣಕ್ಕೆ ಬಿಎಸ್ಎಫ್ ಯೋಧರಿಗೆ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ.
ಭಾರತ - ಬಾಂಗ್ಲಾದೇಶದ ಗಡಿಯಲ್ಲಿ ಜಲದಲ್ಲೇ ಕರ್ತವ್ಯಕ್ಕೆ ನಿಯೋಜನೆಯಾದ ಯೋಧರು ಅನಾರೋಗ್ಯಕ್ಕೊಳಗಾದರೆ ಅವರಿಗೆ ಪ್ರಥಮ ಚಿಕಿತ್ಸೆ ಸೇರಿ ಅಗತ್ಯ ವೈದ್ಯಕೀಯ ನೆರವು ಒದಗಿಸುವ ಉದ್ದೇಶದಿಂದ ಆ್ಯಂಬುಲೆನ್ಸ್ಗಳಿಗೆ ಚಾಲನೆ ನೀಡಲಾಗಿದೆ.
ಇದನ್ನೂ ಓದಿ: ಕೋವಿಡ್ ಹಾವಳಿ ಮುಗಿದ ಬಳಿಕ ಸಿಎಎ ಅನುಷ್ಠಾನ ಖಚಿತ: ಕೇಂದ್ರ ಗೃಹ ಸಚಿವ ಅಮಿತ್ ಶಾ