ETV Bharat / bharat

ಪಶ್ಚಿಮ ಬಂಗಾಳ ಕೋರ್ಟ್​ನಿಂದ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಮನ್ಸ್ ಜಾರಿ.. ಕಾರಣ!?

ತೃಣಮೂಲ ಕಾಂಗ್ರೆಸ್​ ಸಂಸದ ಅಭಿಷೇಕ್​ ಬ್ಯಾನರ್ಜಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ.

author img

By

Published : Feb 19, 2021, 6:46 PM IST

Amith Sha
Amith Sha

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಶೇಷ ಕೋರ್ಟ್​ನಿಂದ ಕೇಂದ್ರ ಗೃಹ ಸಚಿವ ಅಮಿತ್​​ ಶಾ ವಿರುದ್ಧ ಸಮನ್ಸ್ ಜಾರಿಯಾಗಿದ್ದು, ಫೆ. 22ರೊಳಗೆ ಖುದ್ದಾಗಿ ಕೋರ್ಟ್​ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್​ ಬ್ಯಾನರ್ಜಿ ಪರ ವಕೀಲ ಸಂಜಯ್​ ಬಸು ಮಾನನಷ್ಟ ಮೊಕದ್ದಮೆ ಹೂಡಿರುವ ಕಾರಣ ಇದೀಗ ಸಮನ್ಸ್​ ಜಾರಿಗೊಳಿಸಲಾಗಿದೆ. ಬಿಧಾನ್​ ನಗರದಲ್ಲಿರುವ ವಿಶೇಷ ನ್ಯಾಯಾಲಯದಿಂದ ಇದೀಗ ಸಮನ್ಸ್​ ಜಾರಿಯಾಗಿದ್ದು, ಭಾರತೀಯ ದಂಡ ಸಹಿತೆ ಸೆಕ್ಷನ್​ 500ರ ಅಡಿ ಅವರ ಮೇಲೆ ಮಾನಹಾನಿ ಪ್ರಕರಣ ದಾಖಲಾಗಿದೆ.

ಓದಿ: ರಾಜಕೀಯ ಬಿಕ್ಕಟ್ಟು, ಚುನಾವಣೆ ಕಾವು; ಫೆ. 25ಕ್ಕೆ ಪುದುಚೇರಿಗೆ ನಮೋ!

2018ರ ಆಗಸ್ಟ್​ 11ರಂದು ಪಶ್ಚಿಮ ಬಂಗಾಳದಲ್ಲಿ ರೋಡ್​ ಶೋ ನಡೆಸಿದ್ದ ಅಮಿತ್​ ಶಾ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್​ ಬ್ಯಾನರ್ಜಿ ವಿರುದ್ಧ ಮಾನನಷ್ಟ ಹೇಳಿಕೆ ನೀಡಿದ್ದರು. ಇದೇ ವಿಚಾರವಾಗಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಗಿದೆ. ಇನ್ನು ಪಶ್ಚಿಮ ಬಂಗಾಳದಲ್ಲಿ ಇದೇ ವರ್ಷ ವಿಧಾನಸಭೆ ಚುನಾವಣೆ ಕೂಡ ನಡೆಯಲಿದ್ದು, ಬಿಜೆಪಿ-ತೃಣಮೂಲ ಕಾಂಗ್ರೆಸ್ ನಡುವಿನ ಮುಸುಕಿನ ಗುದ್ದಾಟ ಜೋರಾಗಿದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಶೇಷ ಕೋರ್ಟ್​ನಿಂದ ಕೇಂದ್ರ ಗೃಹ ಸಚಿವ ಅಮಿತ್​​ ಶಾ ವಿರುದ್ಧ ಸಮನ್ಸ್ ಜಾರಿಯಾಗಿದ್ದು, ಫೆ. 22ರೊಳಗೆ ಖುದ್ದಾಗಿ ಕೋರ್ಟ್​ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್​ ಬ್ಯಾನರ್ಜಿ ಪರ ವಕೀಲ ಸಂಜಯ್​ ಬಸು ಮಾನನಷ್ಟ ಮೊಕದ್ದಮೆ ಹೂಡಿರುವ ಕಾರಣ ಇದೀಗ ಸಮನ್ಸ್​ ಜಾರಿಗೊಳಿಸಲಾಗಿದೆ. ಬಿಧಾನ್​ ನಗರದಲ್ಲಿರುವ ವಿಶೇಷ ನ್ಯಾಯಾಲಯದಿಂದ ಇದೀಗ ಸಮನ್ಸ್​ ಜಾರಿಯಾಗಿದ್ದು, ಭಾರತೀಯ ದಂಡ ಸಹಿತೆ ಸೆಕ್ಷನ್​ 500ರ ಅಡಿ ಅವರ ಮೇಲೆ ಮಾನಹಾನಿ ಪ್ರಕರಣ ದಾಖಲಾಗಿದೆ.

ಓದಿ: ರಾಜಕೀಯ ಬಿಕ್ಕಟ್ಟು, ಚುನಾವಣೆ ಕಾವು; ಫೆ. 25ಕ್ಕೆ ಪುದುಚೇರಿಗೆ ನಮೋ!

2018ರ ಆಗಸ್ಟ್​ 11ರಂದು ಪಶ್ಚಿಮ ಬಂಗಾಳದಲ್ಲಿ ರೋಡ್​ ಶೋ ನಡೆಸಿದ್ದ ಅಮಿತ್​ ಶಾ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್​ ಬ್ಯಾನರ್ಜಿ ವಿರುದ್ಧ ಮಾನನಷ್ಟ ಹೇಳಿಕೆ ನೀಡಿದ್ದರು. ಇದೇ ವಿಚಾರವಾಗಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಗಿದೆ. ಇನ್ನು ಪಶ್ಚಿಮ ಬಂಗಾಳದಲ್ಲಿ ಇದೇ ವರ್ಷ ವಿಧಾನಸಭೆ ಚುನಾವಣೆ ಕೂಡ ನಡೆಯಲಿದ್ದು, ಬಿಜೆಪಿ-ತೃಣಮೂಲ ಕಾಂಗ್ರೆಸ್ ನಡುವಿನ ಮುಸುಕಿನ ಗುದ್ದಾಟ ಜೋರಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.