ETV Bharat / bharat

ರೈತರ ದಂಗಲ್​: ಆಸ್ಪತ್ರೆಯಲ್ಲಿರುವ ಪೊಲೀಸರ ಭೇಟಿಯಾದ ಅಮಿತ್​ ಶಾ

author img

By

Published : Jan 28, 2021, 10:55 AM IST

Updated : Jan 28, 2021, 2:35 PM IST

ಗಣರಾಜ್ಯೋತ್ಸವ ದಿನದಂದು ನಡೆದಿದ್ದ ಹಿಂಸಾತ್ಮಕ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಸುಮಾರು 394 ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದು, ದೆಹಲಿಯ ಎರಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳು ಪೊಲೀಸರನ್ನು ಅಮಿತ್​ ಶಾ ಭೇಟಿಯಾಗಿದ್ದಾರೆ.

Union Home Minister Amit Shah
ಕೇಂದ್ರ ಗೃಹ ಸಚಿವ ಅಮಿತ್​ ಶಾ

ನವದೆಹಲಿ: ಜನವರಿ 26ರಂದು ನಡೆದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಪೊಲೀಸರ ಯೋಗಕ್ಷೇಮ ವಿಚಾರಿಸಲು ಕೇಂದ್ರ ಗೃಹ ಸಚಿವ ಅಮಿತ್​ ಶಾ ಇಂದು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ.

ಆಸ್ಪತ್ರೆಯಲ್ಲಿರುವ ಪೊಲೀಸರ ಭೇಟಿಯಾದ ಅಮಿತ್​ ಶಾ

ಗಣರಾಜ್ಯೋತ್ಸವ ದಿನದಂದು ನಡೆದಿದ್ದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾತ್ಮಕ ರೂಪ ಪಡೆದಿತ್ತು. ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದ ಪ್ರತಿಭಟನಾನಿರತ ರೈತರು, ಕೋಟೆ ಮೇಲೆ ಧ್ವಜ ಹಾರಿಸಿದ್ದರು. ಪರಿಸ್ಥಿತಿ ನಿಯಂತ್ರಿಸುತ್ತಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದರು. ಈ ಹಿಂಸಾಚಾರದಲ್ಲಿ ಸುಮಾರು 394 ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದು, ಇವರನ್ನು ಉತ್ತರ ದೆಹಲಿಯ ಎರಡು ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕ (ಐಸಿಯು)ದಲ್ಲಿರಿಸಲಾಗಿದೆ.

ಇದನ್ನೂ ಓದಿ: ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರ: ಮೇಧಾ ಪಾಟ್ಕರ್​, ಯೋಗೇಂದ್ರ ಯಾದವ್​ ಸೇರಿ 37 ಮಂದಿ ವಿರುದ್ಧ FIR

ಘಟನೆ ಸಂಬಂಧ ಈವರೆಗೆ 19 ಮಂದಿಯನ್ನು ಅರೆಸ್ಟ್​ ಮಾಡಲಾಗಿದ್ದು, 50 ಮಂದಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್​, ಸ್ವರಾಜ್​ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್​​ ಸೇರಿ 37 ಮಂದಿ ವಿರುದ್ಧ ದೆಹಲಿ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.

ನವದೆಹಲಿ: ಜನವರಿ 26ರಂದು ನಡೆದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಪೊಲೀಸರ ಯೋಗಕ್ಷೇಮ ವಿಚಾರಿಸಲು ಕೇಂದ್ರ ಗೃಹ ಸಚಿವ ಅಮಿತ್​ ಶಾ ಇಂದು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ.

ಆಸ್ಪತ್ರೆಯಲ್ಲಿರುವ ಪೊಲೀಸರ ಭೇಟಿಯಾದ ಅಮಿತ್​ ಶಾ

ಗಣರಾಜ್ಯೋತ್ಸವ ದಿನದಂದು ನಡೆದಿದ್ದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾತ್ಮಕ ರೂಪ ಪಡೆದಿತ್ತು. ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದ ಪ್ರತಿಭಟನಾನಿರತ ರೈತರು, ಕೋಟೆ ಮೇಲೆ ಧ್ವಜ ಹಾರಿಸಿದ್ದರು. ಪರಿಸ್ಥಿತಿ ನಿಯಂತ್ರಿಸುತ್ತಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದರು. ಈ ಹಿಂಸಾಚಾರದಲ್ಲಿ ಸುಮಾರು 394 ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದು, ಇವರನ್ನು ಉತ್ತರ ದೆಹಲಿಯ ಎರಡು ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕ (ಐಸಿಯು)ದಲ್ಲಿರಿಸಲಾಗಿದೆ.

ಇದನ್ನೂ ಓದಿ: ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರ: ಮೇಧಾ ಪಾಟ್ಕರ್​, ಯೋಗೇಂದ್ರ ಯಾದವ್​ ಸೇರಿ 37 ಮಂದಿ ವಿರುದ್ಧ FIR

ಘಟನೆ ಸಂಬಂಧ ಈವರೆಗೆ 19 ಮಂದಿಯನ್ನು ಅರೆಸ್ಟ್​ ಮಾಡಲಾಗಿದ್ದು, 50 ಮಂದಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್​, ಸ್ವರಾಜ್​ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್​​ ಸೇರಿ 37 ಮಂದಿ ವಿರುದ್ಧ ದೆಹಲಿ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.

Last Updated : Jan 28, 2021, 2:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.