ETV Bharat / bharat

ಕೋವಿಡ್​ಗೆ ತಂದೆ-ತಾಯಿ ಕಳೆದುಕೊಂಡ ಮಗು ಹೆಸರಲ್ಲಿ 10 ಲಕ್ಷ ರೂ. ಎಫ್​ಡಿ: ಆಂಧ್ರ ಸರ್ಕಾರ ನಿರ್ಧಾರ

author img

By

Published : May 18, 2021, 7:49 AM IST

ಕೋವಿಡ್-19 ಸೋಂಕಿನಿಂದ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಪ್ರತಿ ಮಗುವಿನ ಹೆಸರಲ್ಲಿ 10 ಲಕ್ಷ ರೂಪಾಯಿ ಹಣವನ್ನು ಬ್ಯಾಂಕ್‌ನಲ್ಲಿ ಸ್ಥಿರ ಠೇವಣಿ ಇಡುವ ಮಹತ್ವದ ನಿರ್ಧಾರವನ್ನು ಆಂಧ್ರಪ್ರದೇಶದ ಸರ್ಕಾರ ಪ್ರಕಟಿಸಿದೆ.

Jagan mohan reddy
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ

ಅಮರಾವತಿ (ಆಂಧ್ರಪ್ರದೇಶ): ಕೊರೊನಾ ಮೃತ್ಯುಕೇಕೆಯಲ್ಲಿ ಅದೆಷ್ಟೋ ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಪುಟ್ಟ ವಯಸ್ಸಿನಲ್ಲಿ ಹೆತ್ತವರನ್ನು ಕಳೆದುಕೊಂಡು ತಬ್ಬಲಿಗಳಾದ ಮಕ್ಕಳ ಭವಿಷ್ಯಕ್ಕೆ ಆಂಧ್ರಪ್ರದೇಶ ಸರ್ಕಾರ ಮಾನವೀಯ ನೆಲೆಗಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಮಧ್ಯಪ್ರದೇಶ ಮತ್ತು ದೆಹಲಿ ಸರ್ಕಾರಗಳ ಹೆಜ್ಜೆಗಳನ್ನು ಅನುಸರಿಸಿರುವ ಸಿಎಂ ವೈ.ಎಸ್.ಜಗನ್ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ, ಕೋವಿಡ್ ಸೋಂಕಿನಿಂದ ಅಪ್ಪ-ಅಮ್ಮನನ್ನು ಕಳೆದುಕೊಂಡಿರುವ ಪ್ರತಿ ಮಗುವಿನ ಹೆಸರಿನಲ್ಲಿ 10 ಲಕ್ಷ ರೂ. ಹಣವನ್ನು ಬ್ಯಾಂಕ್‌ನಲ್ಲಿ ಫಿಕ್ಸೆಡ್‌ ಡೆಪಾಸಿಟ್‌ (ಎಫ್​ಡಿ) ಇಡುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯ ವಿರುದ್ಧದ ಹೋರಾಟವು ಅನೇಕ ಮಕ್ಕಳನ್ನು ಅಸುರಕ್ಷಿತ ಮತ್ತು ದುರ್ಬಲರನ್ನಾಗಿ ಮಾಡಿದೆ. ವಿಶೇಷವಾಗಿ ಮಾರಣಾಂತಿಕ ವೈರಸ್‌ನಿಂದಾಗಿ ಹೆತ್ತವರನ್ನು ಕಳೆದುಕೊಂಡ ಮಕ್ಕಳ ಭವಿಷ್ಯ ಅಪಾಯದಲ್ಲಿದೆ ಎಂದು ಅರ್ಥಮಾಡಿಕೊಂಡ ಸರ್ಕಾರ, ಪ್ರತಿ ಮಗುವಿಗೆ 10 ಲಕ್ಷ ರೂ.ಗಳ ಸ್ಥಿರ ಠೇವಣಿಯ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ನಿರ್ಧಾರ ತೆಗೆದುಕೊಂಡಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಈ ಕುರಿತು ಬ್ಯಾಂಕ್​ಗಳ​ ಜತೆ ಮಾತುಕತೆ ನಡೆಸಿ ಹಣಕಾಸಿನ ಪ್ಯಾಕೇಜ್ ರೂಪಿಸಲು ಸಿಎಂ ಜಗನ್ ಮೋಹನ್ ರೆಡ್ಡಿ ತಿಳಿಸಿದ್ದು, ಮಗುವಿಗೆ 25 ವರ್ಷ ತುಂಬುವವರೆಗೆ ಈ ಮೊತ್ತವು ಫಿಕ್ಸೆಡ್ ಡೆಪಾಸಿಟ್ ಇರುತ್ತದೆ. ಈ ಠೇವಣಿಯಯಿಂದ ಆ ಮಗುವನ್ನು ಸಾಕುವವರಿಗೆ/ಪಾಲಕರಿಗೆ ಹೆಚ್ಚಿನ ಬಡ್ಡಿ ಒದಗಿಸುವ ವ್ಯವಸ್ಥೆ ಮಾಡುವಂತೆ ಮತ್ತು ಇದಕ್ಕಾಗಿ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ಆಂಧ್ರದಲ್ಲಿ ಕೋವಿಡ್‌

ರಾಜ್ಯದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆಯನ್ನು ಹತೋಟಿಗೆ ತರಲು ಆಂಧ್ರ ಸರ್ಕಾರವು ರಾಜ್ಯದಲ್ಲಿ ಭಾಗಶಃ ಕರ್ಫ್ಯೂ ಅನ್ನು ಮೇ ಅಂತ್ಯದವರೆಗೆ ವಿಸ್ತರಿಸಿದೆ. ಗ್ರಾಮೀಣ ಪ್ರದೇಶದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ವೈರಸ್ ಹರಡುವುದನ್ನು ತಡೆಯಲು ಹೆಚ್ಚಿನ ಗಮನಹರಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ತಿಳಿಸಿದ್ದಾರೆ. ರಾಜ್ಯವು ಈವರೆಗೆ 9 ಕಪ್ಪು ಶಿಲೀಂಧ್ರ ಪ್ರಕರಣಗಳು ವರದಿಯಾಗಿವೆ. ಈವರೆಗೆ ಸುಮಾರು 21.74 ಲಕ್ಷ ಜನರು ಎರಡೂ ಡೋಸ್ ಕೋವಿಡ್ ಲಸಿಕೆಗಳನ್ನು ಪಡೆದಿದ್ದರೆ, 31.59 ಲಕ್ಷ ಜನರು ಮೊದಲ ಡೋಸ್ ಪಡೆದಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಪ್ರಸ್ತುತ, ಆಂಧ್ರಪ್ರದೇಶದಲ್ಲಿ 2,10,436 ಸಕ್ರಿಯ ಕೊರೊನಾ ಪ್ರಕರಣಗಳಿವೆ.

ಅಮರಾವತಿ (ಆಂಧ್ರಪ್ರದೇಶ): ಕೊರೊನಾ ಮೃತ್ಯುಕೇಕೆಯಲ್ಲಿ ಅದೆಷ್ಟೋ ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಪುಟ್ಟ ವಯಸ್ಸಿನಲ್ಲಿ ಹೆತ್ತವರನ್ನು ಕಳೆದುಕೊಂಡು ತಬ್ಬಲಿಗಳಾದ ಮಕ್ಕಳ ಭವಿಷ್ಯಕ್ಕೆ ಆಂಧ್ರಪ್ರದೇಶ ಸರ್ಕಾರ ಮಾನವೀಯ ನೆಲೆಗಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಮಧ್ಯಪ್ರದೇಶ ಮತ್ತು ದೆಹಲಿ ಸರ್ಕಾರಗಳ ಹೆಜ್ಜೆಗಳನ್ನು ಅನುಸರಿಸಿರುವ ಸಿಎಂ ವೈ.ಎಸ್.ಜಗನ್ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ, ಕೋವಿಡ್ ಸೋಂಕಿನಿಂದ ಅಪ್ಪ-ಅಮ್ಮನನ್ನು ಕಳೆದುಕೊಂಡಿರುವ ಪ್ರತಿ ಮಗುವಿನ ಹೆಸರಿನಲ್ಲಿ 10 ಲಕ್ಷ ರೂ. ಹಣವನ್ನು ಬ್ಯಾಂಕ್‌ನಲ್ಲಿ ಫಿಕ್ಸೆಡ್‌ ಡೆಪಾಸಿಟ್‌ (ಎಫ್​ಡಿ) ಇಡುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯ ವಿರುದ್ಧದ ಹೋರಾಟವು ಅನೇಕ ಮಕ್ಕಳನ್ನು ಅಸುರಕ್ಷಿತ ಮತ್ತು ದುರ್ಬಲರನ್ನಾಗಿ ಮಾಡಿದೆ. ವಿಶೇಷವಾಗಿ ಮಾರಣಾಂತಿಕ ವೈರಸ್‌ನಿಂದಾಗಿ ಹೆತ್ತವರನ್ನು ಕಳೆದುಕೊಂಡ ಮಕ್ಕಳ ಭವಿಷ್ಯ ಅಪಾಯದಲ್ಲಿದೆ ಎಂದು ಅರ್ಥಮಾಡಿಕೊಂಡ ಸರ್ಕಾರ, ಪ್ರತಿ ಮಗುವಿಗೆ 10 ಲಕ್ಷ ರೂ.ಗಳ ಸ್ಥಿರ ಠೇವಣಿಯ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ನಿರ್ಧಾರ ತೆಗೆದುಕೊಂಡಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಈ ಕುರಿತು ಬ್ಯಾಂಕ್​ಗಳ​ ಜತೆ ಮಾತುಕತೆ ನಡೆಸಿ ಹಣಕಾಸಿನ ಪ್ಯಾಕೇಜ್ ರೂಪಿಸಲು ಸಿಎಂ ಜಗನ್ ಮೋಹನ್ ರೆಡ್ಡಿ ತಿಳಿಸಿದ್ದು, ಮಗುವಿಗೆ 25 ವರ್ಷ ತುಂಬುವವರೆಗೆ ಈ ಮೊತ್ತವು ಫಿಕ್ಸೆಡ್ ಡೆಪಾಸಿಟ್ ಇರುತ್ತದೆ. ಈ ಠೇವಣಿಯಯಿಂದ ಆ ಮಗುವನ್ನು ಸಾಕುವವರಿಗೆ/ಪಾಲಕರಿಗೆ ಹೆಚ್ಚಿನ ಬಡ್ಡಿ ಒದಗಿಸುವ ವ್ಯವಸ್ಥೆ ಮಾಡುವಂತೆ ಮತ್ತು ಇದಕ್ಕಾಗಿ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ಆಂಧ್ರದಲ್ಲಿ ಕೋವಿಡ್‌

ರಾಜ್ಯದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆಯನ್ನು ಹತೋಟಿಗೆ ತರಲು ಆಂಧ್ರ ಸರ್ಕಾರವು ರಾಜ್ಯದಲ್ಲಿ ಭಾಗಶಃ ಕರ್ಫ್ಯೂ ಅನ್ನು ಮೇ ಅಂತ್ಯದವರೆಗೆ ವಿಸ್ತರಿಸಿದೆ. ಗ್ರಾಮೀಣ ಪ್ರದೇಶದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ವೈರಸ್ ಹರಡುವುದನ್ನು ತಡೆಯಲು ಹೆಚ್ಚಿನ ಗಮನಹರಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ತಿಳಿಸಿದ್ದಾರೆ. ರಾಜ್ಯವು ಈವರೆಗೆ 9 ಕಪ್ಪು ಶಿಲೀಂಧ್ರ ಪ್ರಕರಣಗಳು ವರದಿಯಾಗಿವೆ. ಈವರೆಗೆ ಸುಮಾರು 21.74 ಲಕ್ಷ ಜನರು ಎರಡೂ ಡೋಸ್ ಕೋವಿಡ್ ಲಸಿಕೆಗಳನ್ನು ಪಡೆದಿದ್ದರೆ, 31.59 ಲಕ್ಷ ಜನರು ಮೊದಲ ಡೋಸ್ ಪಡೆದಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಪ್ರಸ್ತುತ, ಆಂಧ್ರಪ್ರದೇಶದಲ್ಲಿ 2,10,436 ಸಕ್ರಿಯ ಕೊರೊನಾ ಪ್ರಕರಣಗಳಿವೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.