ETV Bharat / bharat

ನಿಶ್ಚಿತಾರ್ಥದ ಹಿಂದಿನ ದಿನ ಆತ್ಮಹತ್ಯೆಗೆ ಶರಣಾದ ಪೊಲೀಸ್‌ ಕಾನ್ಸ್​​ಟೇಬಲ್

author img

By

Published : Jan 10, 2022, 5:47 PM IST

ನಿಶ್ಚಿತಾರ್ಥ ಮಾಡಿಕೊಳ್ಳಬೇಕಾದ ಹಿಂದಿನ ದಿನವೇ ಪೊಲೀಸ್​ ಕಾನ್ಸ್​ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

AR Constable Suicide in AP
AR Constable Suicide in AP

ಖಮ್ಮಂ(ಆಂಧ್ರಪ್ರದೇಶ): ಕಾನ್ಸ್​ಟೇಬಲ್​​ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕ ನಿಶ್ಚಿತಾರ್ಥದ ಹಿಂದಿನ ದಿನ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಂಧ್ರಪ್ರದೇಶದ ಖಮ್ಮಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಅಶೋಕ್‌ ಕುಮಾರ್ ಎಂದು ಗುರುತಿಸಲಾಗಿದೆ.

2020ರಲ್ಲಿ ಅಶೋಕ್​ ಕುಮಾರ್​ ಆಂಧ್ರಪ್ರದೇಶ ಪೊಲೀಸ್ ಇಲಾಖೆಗೆ ಕಾನ್ಸ್​ಟೇಬಲ್​ ಆಗಿ ನೇಮಕಗೊಂಡಿದ್ದರು. ಮೂಲತ ಖಮ್ಮಂ ಜಿಲ್ಲೆಯ ಯಜ್ಞನಾರಾಯಣಪುರದ ಇವರು ಆರಂಭದಲ್ಲಿ ಕೊಟ್ಟಗುಡೆಂ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇದಾದ ಬಳಿಕ ಬೇರೊಂದು ಜಿಲ್ಲೆಗೆ ವರ್ಗಾವಣೆಯಾಗಿದ್ದರು.

ಇದನ್ನೂ ಓದಿ: ನಟ ಸೋನು ಸೂದ್​ ಸಹೋದರಿ ಕಾಂಗ್ರೆಸ್​ ಸೇರ್ಪಡೆ.. ಪಂಜಾಬ್​ ಚುನಾವಣೆಗೆ ಸ್ಪರ್ಧೆ!

ಅಶೋಕ್​ ಕುಮಾರ್​ಗೆ ಇಂದು ನಿಶ್ಚಿತಾರ್ಥ ನಡೆಯಬೇಕಾಗಿತ್ತು. ಆದರೆ, ಲಾಡ್ಜ್​​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಲಾಡ್ಜ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಮೃತದೇಹವನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಖಮ್ಮಂ(ಆಂಧ್ರಪ್ರದೇಶ): ಕಾನ್ಸ್​ಟೇಬಲ್​​ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕ ನಿಶ್ಚಿತಾರ್ಥದ ಹಿಂದಿನ ದಿನ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಂಧ್ರಪ್ರದೇಶದ ಖಮ್ಮಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಅಶೋಕ್‌ ಕುಮಾರ್ ಎಂದು ಗುರುತಿಸಲಾಗಿದೆ.

2020ರಲ್ಲಿ ಅಶೋಕ್​ ಕುಮಾರ್​ ಆಂಧ್ರಪ್ರದೇಶ ಪೊಲೀಸ್ ಇಲಾಖೆಗೆ ಕಾನ್ಸ್​ಟೇಬಲ್​ ಆಗಿ ನೇಮಕಗೊಂಡಿದ್ದರು. ಮೂಲತ ಖಮ್ಮಂ ಜಿಲ್ಲೆಯ ಯಜ್ಞನಾರಾಯಣಪುರದ ಇವರು ಆರಂಭದಲ್ಲಿ ಕೊಟ್ಟಗುಡೆಂ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇದಾದ ಬಳಿಕ ಬೇರೊಂದು ಜಿಲ್ಲೆಗೆ ವರ್ಗಾವಣೆಯಾಗಿದ್ದರು.

ಇದನ್ನೂ ಓದಿ: ನಟ ಸೋನು ಸೂದ್​ ಸಹೋದರಿ ಕಾಂಗ್ರೆಸ್​ ಸೇರ್ಪಡೆ.. ಪಂಜಾಬ್​ ಚುನಾವಣೆಗೆ ಸ್ಪರ್ಧೆ!

ಅಶೋಕ್​ ಕುಮಾರ್​ಗೆ ಇಂದು ನಿಶ್ಚಿತಾರ್ಥ ನಡೆಯಬೇಕಾಗಿತ್ತು. ಆದರೆ, ಲಾಡ್ಜ್​​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಲಾಡ್ಜ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಮೃತದೇಹವನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.