ETV Bharat / bharat

ಅಮರಾವತಿಯೇ ಆಂಧ್ರಪ್ರದೇಶದ ರಾಜಧಾನಿ: ಹೈಕೋರ್ಟ್​

author img

By

Published : Mar 3, 2022, 11:09 AM IST

Updated : Mar 3, 2022, 11:25 AM IST

ಆಂಧ್ರಪ್ರದೇಶ ರಾಜಧಾನಿ ವಿಚಾರದಲ್ಲಿ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಆಂಧ್ರ ಹೈಕೋರ್ಟ್​ ಇತಿಶ್ರೀ ಹಾಡಿದ್ದು, ಅಮರಾವತಿಯೇ ರಾಜಧಾನಿಯಾಗಿರಲಿದೆ ಎಂದು ತೀರ್ಪು ನೀಡಿದೆ.

COURT
ಆಂಧ್ರಪ್ರದೇಶ

ಅಮರಾವತಿ: ಆಂಧ್ರಪ್ರದೇಶ ರಾಜಧಾನಿ ವಿಚಾರದಲ್ಲಿ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಆಂಧ್ರ ಹೈಕೋರ್ಟ್​ ಇತಿಶ್ರೀ ಹಾಡಿದ್ದು, ಅಮರಾವತಿಯೇ ರಾಜಧಾನಿಯಾಗಿರಲಿದೆ ಎಂದು ತೀರ್ಪು ನೀಡಿದೆ. ಅಲ್ಲದೇ ಒಂದು ರಾಜ್ಯಕ್ಕೆ ಮೂರು ರಾಜಧಾನಿಗಳಿರಲು ಸಾಧ್ಯವಿಲ್ಲ ಎಂದಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ಮೋಹನ್​ ರೆಡ್ಡಿ ಅವರ ಮೂರು ರಾಜಧಾನಿ ಕಲ್ಪನೆಯನ್ನು ಕೈಬಿಟ್ಟಿರುವ ಆಂಧ್ರ ಹೈಕೋರ್ಟ್​ ಅಮರಾವತಿಯನ್ನೇ ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸಿ ಎಂದು ಸೂಚಿಸಿದೆ. ಮೂರು ರಾಜಧಾನಿ ಮತ್ತು ಸಿಆರ್​ಡಿಪಿ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಪೀಠ, ಸಿಆರ್​ಡಿಪಿ ಕಾಯ್ದೆ ಪ್ರಕಾರವೇ ಸರ್ಕಾರ ಆಡಳಿತ ನಡೆಸಬೇಕು. ಪ್ರಣಾಳಿಕೆಯಲ್ಲಿ ನೀಡಿದಂತೆ 6 ತಿಂಗಳಲ್ಲಿ ಅಮರಾವತಿ ಅಭಿವೃದ್ಧಿಗೊಳಿಸಬೇಕು. ಭೂಮಿ ನೀಡಿದ ರೈತರಿಗೆ 3 ತಿಂಗಳಲ್ಲಿ ಪರ್ಯಾಯ ಭೂಮಿ ನೀಡಿ ಎಂದು ಸರ್ಕಾರಕ್ಕೆ ತಾಕೀತು ಮಾಡಿದೆ.

ಅಲ್ಲದೇ, ಅಮರಾವತಿ ರಾಜಧಾನಿ ಮಾಡಲು ಭೂಮಿ ನೀಡಿದ ರೈತರಿಗೆ ಮೂಲಸೌಕರ್ಯ ಒದಗಿಸಿದ ನಿವೇಶನಗಳನ್ನು ನೀಡಬೇಕು. ಅಧೀನಕ್ಕೆ ಪಡೆದ ಭೂಮಿಯನ್ನು ರಾಜಧಾನಿ ಅಭಿವೃದ್ಧಿಗಾಗಿ ಮಾತ್ರ ಬಳಕೆ ಮಾಡಬೇಕು. ಇತರ ಕಾರಣಗಳಿಗಾಗಿ ಯಾವುದೇ ಕಾರಣಕ್ಕಾಗಿ ಉಪಯೋಗಿಸುವಂತಿಲ್ಲ. ಈ ಬಗ್ಗೆ ಕಾಲಕಾಲಕ್ಕೆ ಕೋರ್ಟ್​ಗೆ ಸರ್ಕಾರ ಮಾಹಿತಿ ನೀಡಬೇಕು ಎಂದು ಸೂಚಿಸಿದೆ.

ಅಮರಾವತಿ ರಾಜಧಾನಿಗಾಗಿ ಈ ಹಿಂದೆಯೇ ರೂಪಿಸಿದ ಯೋಜನೆಯನ್ನೇ ಮುಂದುವರಿಸಬೇಕು. ರಾಜಧಾನಿ ವಿಚಾರದಲ್ಲಿ ನಿರ್ಣಯಿಸುವ ಅಧಿಕಾರ ಶಾಸಕಾಂಗಕ್ಕೆ ಇಲ್ಲ. ಸಿಆರ್​ಡಿಪಿ ಕಾಯ್ದೆ ಪ್ರಕಾರವೇ ಸರ್ಕಾರ ಆಡಳಿತ ನಡೆಸಬೇಕು ಎಂದು ಹೇಳಿದೆ.

ಓದಿ: ನಾವಿನ್ನೂ ಕೀವ್​ನಲ್ಲಿ ಸಿಲುಕಿದ್ದೇವೆ, ದಯವಿಟ್ಟು ಸಹಾಯ ಮಾಡಿ: ಭಾರತೀಯ ವೈದ್ಯ ಕುಟುಂಬದ ಮನವಿ

ಅಮರಾವತಿ: ಆಂಧ್ರಪ್ರದೇಶ ರಾಜಧಾನಿ ವಿಚಾರದಲ್ಲಿ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಆಂಧ್ರ ಹೈಕೋರ್ಟ್​ ಇತಿಶ್ರೀ ಹಾಡಿದ್ದು, ಅಮರಾವತಿಯೇ ರಾಜಧಾನಿಯಾಗಿರಲಿದೆ ಎಂದು ತೀರ್ಪು ನೀಡಿದೆ. ಅಲ್ಲದೇ ಒಂದು ರಾಜ್ಯಕ್ಕೆ ಮೂರು ರಾಜಧಾನಿಗಳಿರಲು ಸಾಧ್ಯವಿಲ್ಲ ಎಂದಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ಮೋಹನ್​ ರೆಡ್ಡಿ ಅವರ ಮೂರು ರಾಜಧಾನಿ ಕಲ್ಪನೆಯನ್ನು ಕೈಬಿಟ್ಟಿರುವ ಆಂಧ್ರ ಹೈಕೋರ್ಟ್​ ಅಮರಾವತಿಯನ್ನೇ ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸಿ ಎಂದು ಸೂಚಿಸಿದೆ. ಮೂರು ರಾಜಧಾನಿ ಮತ್ತು ಸಿಆರ್​ಡಿಪಿ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಪೀಠ, ಸಿಆರ್​ಡಿಪಿ ಕಾಯ್ದೆ ಪ್ರಕಾರವೇ ಸರ್ಕಾರ ಆಡಳಿತ ನಡೆಸಬೇಕು. ಪ್ರಣಾಳಿಕೆಯಲ್ಲಿ ನೀಡಿದಂತೆ 6 ತಿಂಗಳಲ್ಲಿ ಅಮರಾವತಿ ಅಭಿವೃದ್ಧಿಗೊಳಿಸಬೇಕು. ಭೂಮಿ ನೀಡಿದ ರೈತರಿಗೆ 3 ತಿಂಗಳಲ್ಲಿ ಪರ್ಯಾಯ ಭೂಮಿ ನೀಡಿ ಎಂದು ಸರ್ಕಾರಕ್ಕೆ ತಾಕೀತು ಮಾಡಿದೆ.

ಅಲ್ಲದೇ, ಅಮರಾವತಿ ರಾಜಧಾನಿ ಮಾಡಲು ಭೂಮಿ ನೀಡಿದ ರೈತರಿಗೆ ಮೂಲಸೌಕರ್ಯ ಒದಗಿಸಿದ ನಿವೇಶನಗಳನ್ನು ನೀಡಬೇಕು. ಅಧೀನಕ್ಕೆ ಪಡೆದ ಭೂಮಿಯನ್ನು ರಾಜಧಾನಿ ಅಭಿವೃದ್ಧಿಗಾಗಿ ಮಾತ್ರ ಬಳಕೆ ಮಾಡಬೇಕು. ಇತರ ಕಾರಣಗಳಿಗಾಗಿ ಯಾವುದೇ ಕಾರಣಕ್ಕಾಗಿ ಉಪಯೋಗಿಸುವಂತಿಲ್ಲ. ಈ ಬಗ್ಗೆ ಕಾಲಕಾಲಕ್ಕೆ ಕೋರ್ಟ್​ಗೆ ಸರ್ಕಾರ ಮಾಹಿತಿ ನೀಡಬೇಕು ಎಂದು ಸೂಚಿಸಿದೆ.

ಅಮರಾವತಿ ರಾಜಧಾನಿಗಾಗಿ ಈ ಹಿಂದೆಯೇ ರೂಪಿಸಿದ ಯೋಜನೆಯನ್ನೇ ಮುಂದುವರಿಸಬೇಕು. ರಾಜಧಾನಿ ವಿಚಾರದಲ್ಲಿ ನಿರ್ಣಯಿಸುವ ಅಧಿಕಾರ ಶಾಸಕಾಂಗಕ್ಕೆ ಇಲ್ಲ. ಸಿಆರ್​ಡಿಪಿ ಕಾಯ್ದೆ ಪ್ರಕಾರವೇ ಸರ್ಕಾರ ಆಡಳಿತ ನಡೆಸಬೇಕು ಎಂದು ಹೇಳಿದೆ.

ಓದಿ: ನಾವಿನ್ನೂ ಕೀವ್​ನಲ್ಲಿ ಸಿಲುಕಿದ್ದೇವೆ, ದಯವಿಟ್ಟು ಸಹಾಯ ಮಾಡಿ: ಭಾರತೀಯ ವೈದ್ಯ ಕುಟುಂಬದ ಮನವಿ

Last Updated : Mar 3, 2022, 11:25 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.