ETV Bharat / bharat

ತಿರುಪತಿಯಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ.. ತಂದೆ, ಇಬ್ಬರು ಮಕ್ಕಳ ದುರ್ಮರಣ

author img

By

Published : Sep 25, 2022, 5:13 PM IST

ಇಬ್ಬರು ಮಕ್ಕಳು ಸೇರಿ ಮೂವರು ಬೆಂಕಿಯ ಕೆನ್ನಾಲಿಗೆಗೆ ಬಲಿಯಾದ ದುರ್ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ap-three-dead-as-fire-breaks-out-at-a-house-in-tirupati
ಶಾರ್ಟ್​ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ

ತಿರುಪತಿ(ಆಂಧ್ರಪ್ರದೇಶ): ಶಾರ್ಟ್ ​ಸರ್ಕ್ಯೂಟ್​ ಉಂಟಾಗಿ ಮನೆಗೆ ಬೆಂಕಿ ಹೊತ್ತಿಕೊಂಡು ಇಬ್ಬರು ಮಕ್ಕಳು ಸೇರಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ಇಂದು ನಡೆದಿದೆ.

ತಿರುಪತಿ ಜಿಲ್ಲೆಯ ರೇಣಿಗುಂಟದ ನಿವಾಸಿಯಾಗಿದ್ದ 49 ವರ್ಷದ ರೇಡಿಯಾಲಜಿಸ್ಟ್​ ಮತ್ತು ಅವರ 7 ಮತ್ತು 11 ವರ್ಷದ ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. ಮನೆಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ರೇಡಿಯಾಲಜಿಸ್ಟ್​, ಪತ್ನಿ, ತಾಯಿ ಮತ್ತು ಮಕ್ಕಳು ಮನೆಯೊಳಗಿದ್ದರು.

ಮಕ್ಕಳನ್ನು ಉಳಿಸಲು ತಂದೆ ಇಬ್ಬರನ್ನೂ ಬಾತ್​ರೂಮಿನ ಒಳಗೆ ಕಳುಹಿಸಿ ಬಾಗಿಲು ಹಾಕಿದ್ದಾನೆ. ಈ ವೇಳೆ ಆತನಿಗೆ ಬೆಂಕಿ ತಗುಲಿ ಸುಟ್ಟು ಹೋಗಿದ್ದಾರೆ. ಪತ್ನಿ ಮತ್ತು ತಾಯಿ ಅದೃಷ್ಟವಶಾತ್​ ಮನೆಯಿಂದ ಹೊರಬಿದ್ದು, ಪ್ರಾಣ ಉಳಿಸಿಕೊಂಡಿದ್ದಾರೆ. ಬಾತ್​ರೂಮಿನಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳು ಉಸಿರುಗಟ್ಟಿ ಅಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.

ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬಳಿಕ ರೇಡಿಯಾಲಜಿಸ್ಟ್​ ಮತ್ತು ಇಬ್ಬರು ಮಕ್ಕಳ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಶಾರ್ಟ್ ​ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ತಗುಲಿರಬಹುದು. ಗ್ಯಾಸ್​ ಸಿಲಿಂಡರ್​ ಸೋರಿಕೆಯಾದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿ ಇಡೀ ಮನೆ ಸುಟ್ಟು ಕರಕಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಓದಿ: ಪೊಲೀಸರಿಗೆ ತಲೆ‌ ನೋವಾದ ಪಿಎಫ್ಐ ಬಂಧಿತ ಕಾರ್ಯಕರ್ತರ ಕೋಡ್​ ವರ್ಡ್​ಗಳು

ತಿರುಪತಿ(ಆಂಧ್ರಪ್ರದೇಶ): ಶಾರ್ಟ್ ​ಸರ್ಕ್ಯೂಟ್​ ಉಂಟಾಗಿ ಮನೆಗೆ ಬೆಂಕಿ ಹೊತ್ತಿಕೊಂಡು ಇಬ್ಬರು ಮಕ್ಕಳು ಸೇರಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ಇಂದು ನಡೆದಿದೆ.

ತಿರುಪತಿ ಜಿಲ್ಲೆಯ ರೇಣಿಗುಂಟದ ನಿವಾಸಿಯಾಗಿದ್ದ 49 ವರ್ಷದ ರೇಡಿಯಾಲಜಿಸ್ಟ್​ ಮತ್ತು ಅವರ 7 ಮತ್ತು 11 ವರ್ಷದ ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. ಮನೆಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ರೇಡಿಯಾಲಜಿಸ್ಟ್​, ಪತ್ನಿ, ತಾಯಿ ಮತ್ತು ಮಕ್ಕಳು ಮನೆಯೊಳಗಿದ್ದರು.

ಮಕ್ಕಳನ್ನು ಉಳಿಸಲು ತಂದೆ ಇಬ್ಬರನ್ನೂ ಬಾತ್​ರೂಮಿನ ಒಳಗೆ ಕಳುಹಿಸಿ ಬಾಗಿಲು ಹಾಕಿದ್ದಾನೆ. ಈ ವೇಳೆ ಆತನಿಗೆ ಬೆಂಕಿ ತಗುಲಿ ಸುಟ್ಟು ಹೋಗಿದ್ದಾರೆ. ಪತ್ನಿ ಮತ್ತು ತಾಯಿ ಅದೃಷ್ಟವಶಾತ್​ ಮನೆಯಿಂದ ಹೊರಬಿದ್ದು, ಪ್ರಾಣ ಉಳಿಸಿಕೊಂಡಿದ್ದಾರೆ. ಬಾತ್​ರೂಮಿನಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳು ಉಸಿರುಗಟ್ಟಿ ಅಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.

ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬಳಿಕ ರೇಡಿಯಾಲಜಿಸ್ಟ್​ ಮತ್ತು ಇಬ್ಬರು ಮಕ್ಕಳ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಶಾರ್ಟ್ ​ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ತಗುಲಿರಬಹುದು. ಗ್ಯಾಸ್​ ಸಿಲಿಂಡರ್​ ಸೋರಿಕೆಯಾದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿ ಇಡೀ ಮನೆ ಸುಟ್ಟು ಕರಕಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಓದಿ: ಪೊಲೀಸರಿಗೆ ತಲೆ‌ ನೋವಾದ ಪಿಎಫ್ಐ ಬಂಧಿತ ಕಾರ್ಯಕರ್ತರ ಕೋಡ್​ ವರ್ಡ್​ಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.