ETV Bharat / bharat

ಜಮ್ಮುವಿಗೆ ಸೇನಾ ಮುಖ್ಯಸ್ಥ ಭೇಟಿ: ಭದ್ರತಾ ಪರಿಸ್ಥಿತಿಯ ಪರಿಶೀಲನೆ

author img

By

Published : Nov 3, 2021, 8:00 PM IST

ಸೇನಾ ಸಿಬ್ಬಂದಿಯ ಮುಖ್ಯಸ್ಥ ನರವಾಣೆ ಜಮ್ಮು ಪ್ರದೇಶಕ್ಕೆ ಭೇಟಿ ನೀಡಿದ್ದು, ಇದಕ್ಕೂ ಮೊದಲು ಅಕ್ಟೋಬರ್ 18 ಮತ್ತು 19ರಂದು ಭೇಟಿ ನೀಡಿ, ಭದ್ರತಾ ಸ್ಥಿತಿಗತಿಗಳ ಪರಿಶೀಲನೆ ನಡೆಸಿದ್ದರು.

Army chief in Jammu to review security situation, operational preparedness
ಜಮ್ಮುವಿಗೆ ಸೇನಾ ಮುಖ್ಯಸ್ಥ ಭೇಟಿ: ಭದ್ರತಾ ಪರಿಸ್ಥಿತಿಯ ಪರಿಶೀಲನೆ

ಶ್ರೀನಗರ(ಜಮ್ಮು ಕಾಶ್ಮೀರ): ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಾಣೆ ಅವರು ಬುಧವಾರದಿಂದ ಎರಡು ದಿನಗಳ ಜಮ್ಮುವಿಗೆ ಭೇಟಿ ನೀಡಿದ್ದು, ಅಲ್ಲಿನ ಭದ್ರತಾ ಪರಿಸ್ಥಿತಿ ಮತ್ತು ಸೇನಾ ಕಾರ್ಯಾಚರಣೆಗಳ ಸಿದ್ಧತೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೂಂಚ್ ಮತ್ತು ರಜೌರಿಯ ಜಿಲ್ಲೆಗಳ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ಸೇನೆ ಕಾರ್ಯಾಚರಣೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ನರವಾಣೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಕಳೆದ ಎರಡು ವಾರಗಳಲ್ಲಿ ನರವಾಣೆ ಇದು ಎರಡನೇ ಬಾರಿಗೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.

ಸೇನಾ ಸಿಬ್ಬಂದಿಯ ಮುಖ್ಯಸ್ಥ ನರವಾಣೆ ಜಮ್ಮು ಪ್ರದೇಶಕ್ಕೆ ಭೇಟಿ ನೀಡಿದ್ದು, ಮುಂದಿನ ದಿನಗಳಲ್ಲಿ ಸೇನೆ ಮತ್ತು ಕಮಾಂಡರ್​ಗಳೊಂದಿಗೆ ಅವರು ಸಂವಾದ ನಡೆಸಲಿದ್ದಾರೆ ಎಂದು ಭಾರತೀಯ ಸೇನೆ ಟ್ವೀಟ್ ಮಾಡಿದೆ. ಇದಕ್ಕೂ ಮೊದಲು ಅಕ್ಟೋಬರ್ 18 ಮತ್ತು 19ರಂದು ನರವಾಣೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು.

ಎರಡು ದಿನಗಳ ಭೇಟಿಯ ವೇಳೆ ಅಲ್ಲಿನ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿ ಮತ್ತು ಭಯೋತ್ಪಾದಕರ ಒಳನುಸುಳುವಿಕೆ ವಿರುದ್ಧ ಸೇನಾ ಕಾರ್ಯಾಚರಣೆ ಬಗ್ಗೆಯೂ ಮೇಲ್ವಿಚಾರಣೆ ನಡೆಸಿದ್ದರು. ಇದರೊಂದಿಗೆ ಗಡಿ ಜಿಲ್ಲೆಗಳಾದ ರಜೌರಿ ಮತ್ತು ಪೂಂಚ್‌ಗೂ ಭೇಟಿ ನೀಡಿದ್ದರು.

ಮೆಂಧಾರ್, ಸುರನ್‌ಕೋಟೆ ಮತ್ತು ಥಾನಮಂಡಿ ಅರಣ್ಯ ಪ್ರದೇಶದಲ್ಲಿ ಅಡಗಿರುವ ಭಯೋತ್ಪಾದಕರ ಪತ್ತೆಗೆ ಅಕ್ಟೋಬರ್ 11ರಿಂದ ಭಾರೀ ಕಾರ್ಯಾಚರಣೆ ನಡೆಯುತ್ತಿದ್ದು, ಈ ವೇಳೆಯೇ ನರವಾಣೆ ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ.

ಅಕ್ಟೋಬರ್ 11ರಂದು ಭಯೋತ್ಪಾದಕರ ದಾಳಿಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಐವರು ಸೈನಿಕರ ಹತ್ಯೆಯ ನಂತರ ಭಾರತೀಯ ಸೇನೆ ಬೃಹತ್ ಕಾರ್ಯಾಚರಣೆ ಕೈಗೊಂಡಿತ್ತು. ಇದರ ಜೊತೆಗೆ ಜಮ್ಮು ಪ್ರದೇಶದ ರಜೌರಿ ಮತ್ತು ಪೂಂಚ್​ನಲ್ಲಿ ಒಳನುಸುಳುವವರ ಪ್ರಮಾಣವೂ ಹೆಚ್ಚಾಗಿದೆ.

ಇದನ್ನೂ ಓದಿ: ನಾನು ದಲಿತರ ಬಗ್ಗೆ ಎಲ್ಲಿಯೂ ಅವಹೇಳನಕಾರಿಯಾಗಿ ಮಾತನಾಡಿಲ್ಲ: ಸಿದ್ದರಾಮಯ್ಯ

ಶ್ರೀನಗರ(ಜಮ್ಮು ಕಾಶ್ಮೀರ): ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಾಣೆ ಅವರು ಬುಧವಾರದಿಂದ ಎರಡು ದಿನಗಳ ಜಮ್ಮುವಿಗೆ ಭೇಟಿ ನೀಡಿದ್ದು, ಅಲ್ಲಿನ ಭದ್ರತಾ ಪರಿಸ್ಥಿತಿ ಮತ್ತು ಸೇನಾ ಕಾರ್ಯಾಚರಣೆಗಳ ಸಿದ್ಧತೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೂಂಚ್ ಮತ್ತು ರಜೌರಿಯ ಜಿಲ್ಲೆಗಳ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ಸೇನೆ ಕಾರ್ಯಾಚರಣೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ನರವಾಣೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಕಳೆದ ಎರಡು ವಾರಗಳಲ್ಲಿ ನರವಾಣೆ ಇದು ಎರಡನೇ ಬಾರಿಗೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.

ಸೇನಾ ಸಿಬ್ಬಂದಿಯ ಮುಖ್ಯಸ್ಥ ನರವಾಣೆ ಜಮ್ಮು ಪ್ರದೇಶಕ್ಕೆ ಭೇಟಿ ನೀಡಿದ್ದು, ಮುಂದಿನ ದಿನಗಳಲ್ಲಿ ಸೇನೆ ಮತ್ತು ಕಮಾಂಡರ್​ಗಳೊಂದಿಗೆ ಅವರು ಸಂವಾದ ನಡೆಸಲಿದ್ದಾರೆ ಎಂದು ಭಾರತೀಯ ಸೇನೆ ಟ್ವೀಟ್ ಮಾಡಿದೆ. ಇದಕ್ಕೂ ಮೊದಲು ಅಕ್ಟೋಬರ್ 18 ಮತ್ತು 19ರಂದು ನರವಾಣೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು.

ಎರಡು ದಿನಗಳ ಭೇಟಿಯ ವೇಳೆ ಅಲ್ಲಿನ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿ ಮತ್ತು ಭಯೋತ್ಪಾದಕರ ಒಳನುಸುಳುವಿಕೆ ವಿರುದ್ಧ ಸೇನಾ ಕಾರ್ಯಾಚರಣೆ ಬಗ್ಗೆಯೂ ಮೇಲ್ವಿಚಾರಣೆ ನಡೆಸಿದ್ದರು. ಇದರೊಂದಿಗೆ ಗಡಿ ಜಿಲ್ಲೆಗಳಾದ ರಜೌರಿ ಮತ್ತು ಪೂಂಚ್‌ಗೂ ಭೇಟಿ ನೀಡಿದ್ದರು.

ಮೆಂಧಾರ್, ಸುರನ್‌ಕೋಟೆ ಮತ್ತು ಥಾನಮಂಡಿ ಅರಣ್ಯ ಪ್ರದೇಶದಲ್ಲಿ ಅಡಗಿರುವ ಭಯೋತ್ಪಾದಕರ ಪತ್ತೆಗೆ ಅಕ್ಟೋಬರ್ 11ರಿಂದ ಭಾರೀ ಕಾರ್ಯಾಚರಣೆ ನಡೆಯುತ್ತಿದ್ದು, ಈ ವೇಳೆಯೇ ನರವಾಣೆ ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ.

ಅಕ್ಟೋಬರ್ 11ರಂದು ಭಯೋತ್ಪಾದಕರ ದಾಳಿಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಐವರು ಸೈನಿಕರ ಹತ್ಯೆಯ ನಂತರ ಭಾರತೀಯ ಸೇನೆ ಬೃಹತ್ ಕಾರ್ಯಾಚರಣೆ ಕೈಗೊಂಡಿತ್ತು. ಇದರ ಜೊತೆಗೆ ಜಮ್ಮು ಪ್ರದೇಶದ ರಜೌರಿ ಮತ್ತು ಪೂಂಚ್​ನಲ್ಲಿ ಒಳನುಸುಳುವವರ ಪ್ರಮಾಣವೂ ಹೆಚ್ಚಾಗಿದೆ.

ಇದನ್ನೂ ಓದಿ: ನಾನು ದಲಿತರ ಬಗ್ಗೆ ಎಲ್ಲಿಯೂ ಅವಹೇಳನಕಾರಿಯಾಗಿ ಮಾತನಾಡಿಲ್ಲ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.