ETV Bharat / bharat

ನಾಲ್ಕು ವಿಧಾನಸಭೆಗಳ ಫಲಿತಾಂಶ: 2024ರ ಚುನಾವಣೆಗೂ ಮುನ್ನ ಬಿಜೆಪಿ, ಕಾಂಗ್ರೆಸ್‌ಗೆ ಅಗ್ನಿಪರೀಕ್ಷೆ

author img

By ETV Bharat Karnataka Team

Published : Dec 2, 2023, 11:06 PM IST

Updated : Dec 3, 2023, 6:22 AM IST

Assembly Election Results in 4 states: ಡಿ.3ರಂದು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ, ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಇದು 2024ರ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ, ಕಾಂಗ್ರೆಸ್‌ಗೆ ಅಗ್ನಿಪರೀಕ್ಷೆಯಾಗಿದೆ.

assembly-election-results-in-4-states-on-sunday-crucial-electoral-test-for-bjp-congress-ahead-of-2024
ನಾಲ್ಕು ವಿಧಾನಸಭೆಗಳ ಫಲಿತಾಂಶ ನಾಳೆ: 2024ರ ಚುನಾವಣೆಗೂ ಮುನ್ನ ಬಿಜೆಪಿ, ಕಾಂಗ್ರೆಸ್‌ಗೆ ಅಗ್ನಿಪರೀಕ್ಷೆ

ನವದೆಹಲಿ: ಕೇಂದ್ರದ ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್​ಗೆ ಮಹತ್ವವಾಗಿರುವ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಡಿ.3ರಂದು ಹೊರಬರಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಕೇಸರಿ ಪಾಳಯ ಹಾಗೂ ಕೈ ಪಡೆ ಮಧ್ಯೆ ನೇರ ಪೈಪೋಟಿ ಇದ್ದರೆ, ತೆಲಂಗಾಣದಲ್ಲಿ ಆಡಳಿತ ಪಕ್ಷ ಬಿಆರ್​ಎಸ್​ ವಿರುದ್ಧ ಗೆಲುವಿಗಾಗಿ ಕಾಂಗ್ರೆಸ್​ ತೀವ್ರ ಹಣಾಹಣಿಗೆ ಇಳಿದಿದೆ.

ಇತ್ತೀಚೆಗೆ ಮತದಾನ ಪೂರ್ಣಗೊಂಡ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ. ಈ ರಾಜ್ಯ ಚುನಾವಣೆಗಳು ಮುಂಬರುವ ಸಾರ್ವತ್ರಿಕ ಚುನಾವಣೆಗೆ ನಿರ್ಣಾಯಕ ಸ್ಪರ್ಧೆ ಎಂದು ಪರಿಗಣಿಸಲಾಗಿದೆ. ಪ್ರಸ್ತುತ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಮತ್ತು ಮಧ್ಯಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ, ಈ ಮೂರು ರಾಜ್ಯಗಳಲ್ಲಿ ನೇರ ಸ್ಪರ್ಧೆಯಲ್ಲಿ ತೊಡಗಿವೆ.

ಇದನ್ನೂ ಓದಿ: Exit Poll Result: ರಾಜಸ್ಥಾನದಲ್ಲಿ ಬಿಜೆಪಿ, ಛತ್ತೀಸ್‌ಗಢದಲ್ಲಿ ಮತ್ತೆ ಕಾಂಗ್ರೆಸ್‌, ತೆಲಂಗಾಣದಲ್ಲಿ ಬಿಆರ್​ಎಸ್​ಗೆ ಹಿನ್ನಡೆ, ಮಧ್ಯಪ್ರದೇಶದಲ್ಲಿ ನೇರ ಹಣಾಹಣಿ

ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ ವಿರುದ್ಧ ಸಂಪೂರ್ಣ ಬಹುಮತದೊಂದಿಗೆ ಗೆದ್ದಿರುವ ಕಾಂಗ್ರೆಸ್ ಮಧ್ಯಪ್ರದೇಶ ಮತ್ತು ತೆಲಂಗಾಣದ ಮೇಲೆ ಕಣ್ಣಿಟ್ಟಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. ಮತ್ತೊಂದೆಡೆ, ತೆಲಂಗಾಣದಲ್ಲಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಹ್ಯಾಟ್ರಿಕ್ ಗೆಲುವಿನ ಗುರಿ ಹೊಂದಿದೆ. ಆದರೆ, ಕಾಂಗ್ರೆಸ್ ಮತ್ತು ಬಿಜೆಪಿಯಿಂದ ತೀವ್ರ ಪೈಪೋಟಿ ಎದುರಿಸುತ್ತಿದೆ. ಹೀಗಾಗಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದತ್ತ ಇಡೀ ದೇಶದ ಚಿತ್ತ ನೆಟ್ಟಿದೆ.

ನಿಜವಾಗುವುದೇ ಎಕ್ಸಿಟ್​ ಪೋಲ್​ ಭವಿಷ್ಯ?: ನ.30ರಂದು ಎಲ್ಲ ರಾಜ್ಯಗಳಲ್ಲಿ ಮತದಾನದ ಪ್ರಕ್ರಿಯೆಗಳು ಪೂರ್ಣವಾದ ವಿವಿಧ ಸಂಸ್ಥೆಗಳು ಚುನಾವಣೋತ್ತರ ಪರೀಕ್ಷೆಗಳನ್ನು ಪ್ರಕಟಿಸಿವೆ. ಇವುಗಳ ಪ್ರಕಾರ, ಬಿಜೆಪಿ ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಉಳಿಸಿಕೊಳ್ಳುವುದರ ಜೊತೆಗೆ ರಾಜಸ್ಥಾನದಲ್ಲಿ ಗೆಲ್ಲುವ ಸಾಧ್ಯತೆ ಇದೆ. ಇದೇ ವೇಳೆ, ಮಧ್ಯಪ್ರದೇಶದಲ್ಲಿ ಬಿಜೆಪಿ - ಕಾಂಗ್ರೆಸ್ ನೇರ ಹಣಾಹಣಿ ನಡೆಯಲಿದೆ ಎಂದು ಕೆಲ ಸಮೀಕ್ಷೆಗಳು ಹೇಳಿವೆ.

ಮತ್ತೊಂದೆಡೆ, ರಾಜಸ್ಥಾನದಲ್ಲಿ ಕಾಂಗ್ರೆಸ್​ಗೆ ಅಧಿಕಾರ ಕೈತಪ್ಪಿದರೂ, ಛತ್ತೀಸ್‌ಗಢದಲ್ಲಿ ಅಧಿಕಾರದಲ್ಲಿ ಮುಂದುವರೆಯಲಿದೆ. ಜೊತೆಗೆ ತೆಲಂಗಾಣದಲ್ಲಿ ಬಿಆರ್‌ಎಸ್ ಹಿಂದಿಕ್ಕಿ ಆಡಳಿತಕ್ಕೆ ಬರಲಿದೆ ಎಂದು ಎಕ್ಸಿಟ್​ ಪೋಲ್​ಗಳು ಭವಿಷ್ಯ ನುಡಿದಿವೆ. ಹೀಗಾಗಿ ಎಲ್ಲ ರಾಜಕೀಯ ಪಕ್ಷಗಳಲ್ಲಿ ಹೊಸ ಲೆಕ್ಕಾಚಾರಗಳು ಶುರುವಾಗಿವೆ. ಆದರೆ, ಇವುಗಳಿಗೆ ಇಂದು ಪ್ರಕಟವಾಗಲಿರುವ ಅಧಿಕೃತ ಫಲಿತಾಂಶಗಳು ಮಧ್ಯಾಹ್ನದ ವೇಳೆಗೆ ಸಂಪೂರ್ಣ ಉತ್ತರ ನೀಡಲಿದೆ.

ಚುನಾವಣಾ ಕಣದಲ್ಲಿ ಪ್ರಮುಖರು: ನಾಲ್ಕು ರಾಜ್ಯಗಳಲ್ಲಿ ರಾಷ್ಟ್ರ ಹಾಗೂ ರಾಜ್ಯಗಳ ಮಟ್ಟದಲ್ಲಿ ಗುರುತಿಸಿಕೊಂಡ ಘಟಾನುಘಟಿ ನಾಯಕರು ಚುನಾವಣಾ ಅಗ್ನಿಪರೀಕ್ಷೆ ಎದುರಿಸಿದ್ದಾರೆ. ಮತದಾರ ಪ್ರಭು ಈಗಾಗಲೇ ಎಲ್ಲ ನಾಯಕರ ರಾಜಕೀಯ ಭವಿಷ್ಯ ಬರೆದಿದ್ದು, ಅದು ಭಾನುವಾರ ಹೊರಬರಲಿದೆ.

ಶಿವರಾಜ - ಕಮಲನಾಥ್: ಮಧ್ಯಪ್ರದೇಶದಲ್ಲಿ ಬಿಜೆಪಿಯಿಂದ ಸಿಎಂ ಶಿವರಾಜ ಸಿಂಗ್ ಚೌಹಾಣ್ (ಬುಧ್ನಿ ಕ್ಷೇತ್ರ), ಮೂವರು ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಪಟೇಲ್ ಮತ್ತು ಫಗ್ಗನ್ ಸಿಂಗ್ ಕುಲಸ್ತೆ ಹಾಗೂ ಕಾಂಗ್ರೆಸ್​ ಪಕ್ಷದಿಂದ ರಾಜ್ಯ ಘಟಕದ ಅಧ್ಯಕ್ಷ ಕಮಲನಾಥ್ (ಚಿಂದ್ವಾರ) ಅವರ ರಾಜಕೀಯ ಭವಿಷ್ಯ ಇವಿಎಂಗಳಲ್ಲಿ ಅಡಗಿದೆ.

ಬಘೇಲ್ - ರಮಣ್ ಸಿಂಗ್: ಛತ್ತೀಸ್​ಗಢದಲ್ಲಿ ಕಾಂಗ್ರೆಸ್​ನಿಂದ ಸಿಎಂ ಭೂಪೇಶ್ ಬಘೇಲ್, ಡಿಸಿಎಂ ಟಿಎಸ್ ಸಿಂಗ್ ದೇವ್ ಮತ್ತು ಬಿಜೆಪಿಯಿಂದ ಮಾಜಿ ಸಿಎಂ ರಮಣ್ ಸಿಂಗ್ ಸೇರಿದಂತೆ 1,181 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಾಘೇಲ್ ಪ್ರತಿನಿಧಿಸುವ ಪಟಾನ್ ಕ್ಷೇತ್ರವು ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಿದೆ. ಬಿಜೆಪಿಯು ಸಿಎಂ ದೂರದ ಸೋದರಳಿಯ ಮತ್ತು ಲೋಕಸಭಾ ಸಂಸದ ವಿಜಯ್ ಬಾಘೇಲ್ ಅವರನ್ನು ಅಖಾಡಕ್ಕೆ ಇಳಿಸಿದೆ. ಜನತಾ ಕಾಂಗ್ರೆಸ್ ಛತ್ತೀಸ್‌ಗಢ (ಜೆ) ರಾಜ್ಯಾಧ್ಯಕ್ಷ ಅಮಿತ್ ಜೋಗಿ ಕೂಡ ಪಟಾನ್‌ನಿಂದ ಸ್ಪರ್ಧೆ ಮಾಡಿದ್ದಾರೆ.

ಕೆಸಿಆರ್​ - ರೇವಂತ್ ರೆಡ್ಡಿ- ಬಂಡಿ ಸಂಜಯ್: ತೆಲಂಗಾಣದಲ್ಲಿ ಬಿಆರ್‌ಎಸ್ ನಾಯಕ, ಸಿಎಂ ಚಂದ್ರಶೇಖರ್ ರಾವ್, ಅವರ ಮಗ, ಸಚಿವ ಕೆಟಿ ರಾಮರಾವ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಎ.ರೇವಂತ್ ರೆಡ್ಡಿ ಮತ್ತು ಬಿಜೆಪಿ ಲೋಕಸಭಾ ಸದಸ್ಯರಾದ ಬಂಡಿ ಸಂಜಯ್ ಕುಮಾರ್, ಡಿ.ಅರವಿಂದ್ ಮತ್ತು ಸೋಯಂ ಬಾಪು ರಾವ್ ಸೇರಿದಂತೆ 2,290 ಸ್ಪರ್ಧಿಗಳ ಭವಿಷ್ಯ ಪ್ರಟಕವಾಗಲಿದೆ.

ಗೆಹ್ಲೋಟ್ - ಪೈಲಟ್ - ರಾಜೇ: ರಾಜಸ್ಥಾನದಲ್ಲಿ ಕಾಂಗ್ರೆಸ್​ನಿಂದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಕಣದಲ್ಲಿದ್ದಾರೆ. ಬಿಜೆಪಿಯಿಂದ ಮಾಜಿ ಸಿಎಂ ವಸುಂಧರಾ ರಾಜೇ, ಕೇಂದ್ರದ ಮಾಜಿ ಸಚಿವ, ಸಂಸದ ರಾಜ್ಯವರ್ಧನ್ ರಾಥೋಡ್ ಅವರು ಚುನಾವಣಾ ಭವಿಷ್ಯ ಇವಿಎಂಗಳಲ್ಲಿ ಅಡಗಿದೆ.

ಇದನ್ನೂ ಓದಿ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ, ತೆಲಂಗಾಣದಲ್ಲಿ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ: ಮತ ಎಣಿಕೆಗೆ ಸಕಲ ಸಿದ್ಧತೆ

ನವದೆಹಲಿ: ಕೇಂದ್ರದ ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್​ಗೆ ಮಹತ್ವವಾಗಿರುವ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಡಿ.3ರಂದು ಹೊರಬರಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಕೇಸರಿ ಪಾಳಯ ಹಾಗೂ ಕೈ ಪಡೆ ಮಧ್ಯೆ ನೇರ ಪೈಪೋಟಿ ಇದ್ದರೆ, ತೆಲಂಗಾಣದಲ್ಲಿ ಆಡಳಿತ ಪಕ್ಷ ಬಿಆರ್​ಎಸ್​ ವಿರುದ್ಧ ಗೆಲುವಿಗಾಗಿ ಕಾಂಗ್ರೆಸ್​ ತೀವ್ರ ಹಣಾಹಣಿಗೆ ಇಳಿದಿದೆ.

ಇತ್ತೀಚೆಗೆ ಮತದಾನ ಪೂರ್ಣಗೊಂಡ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ. ಈ ರಾಜ್ಯ ಚುನಾವಣೆಗಳು ಮುಂಬರುವ ಸಾರ್ವತ್ರಿಕ ಚುನಾವಣೆಗೆ ನಿರ್ಣಾಯಕ ಸ್ಪರ್ಧೆ ಎಂದು ಪರಿಗಣಿಸಲಾಗಿದೆ. ಪ್ರಸ್ತುತ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಮತ್ತು ಮಧ್ಯಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ, ಈ ಮೂರು ರಾಜ್ಯಗಳಲ್ಲಿ ನೇರ ಸ್ಪರ್ಧೆಯಲ್ಲಿ ತೊಡಗಿವೆ.

ಇದನ್ನೂ ಓದಿ: Exit Poll Result: ರಾಜಸ್ಥಾನದಲ್ಲಿ ಬಿಜೆಪಿ, ಛತ್ತೀಸ್‌ಗಢದಲ್ಲಿ ಮತ್ತೆ ಕಾಂಗ್ರೆಸ್‌, ತೆಲಂಗಾಣದಲ್ಲಿ ಬಿಆರ್​ಎಸ್​ಗೆ ಹಿನ್ನಡೆ, ಮಧ್ಯಪ್ರದೇಶದಲ್ಲಿ ನೇರ ಹಣಾಹಣಿ

ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ ವಿರುದ್ಧ ಸಂಪೂರ್ಣ ಬಹುಮತದೊಂದಿಗೆ ಗೆದ್ದಿರುವ ಕಾಂಗ್ರೆಸ್ ಮಧ್ಯಪ್ರದೇಶ ಮತ್ತು ತೆಲಂಗಾಣದ ಮೇಲೆ ಕಣ್ಣಿಟ್ಟಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. ಮತ್ತೊಂದೆಡೆ, ತೆಲಂಗಾಣದಲ್ಲಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಹ್ಯಾಟ್ರಿಕ್ ಗೆಲುವಿನ ಗುರಿ ಹೊಂದಿದೆ. ಆದರೆ, ಕಾಂಗ್ರೆಸ್ ಮತ್ತು ಬಿಜೆಪಿಯಿಂದ ತೀವ್ರ ಪೈಪೋಟಿ ಎದುರಿಸುತ್ತಿದೆ. ಹೀಗಾಗಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದತ್ತ ಇಡೀ ದೇಶದ ಚಿತ್ತ ನೆಟ್ಟಿದೆ.

ನಿಜವಾಗುವುದೇ ಎಕ್ಸಿಟ್​ ಪೋಲ್​ ಭವಿಷ್ಯ?: ನ.30ರಂದು ಎಲ್ಲ ರಾಜ್ಯಗಳಲ್ಲಿ ಮತದಾನದ ಪ್ರಕ್ರಿಯೆಗಳು ಪೂರ್ಣವಾದ ವಿವಿಧ ಸಂಸ್ಥೆಗಳು ಚುನಾವಣೋತ್ತರ ಪರೀಕ್ಷೆಗಳನ್ನು ಪ್ರಕಟಿಸಿವೆ. ಇವುಗಳ ಪ್ರಕಾರ, ಬಿಜೆಪಿ ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಉಳಿಸಿಕೊಳ್ಳುವುದರ ಜೊತೆಗೆ ರಾಜಸ್ಥಾನದಲ್ಲಿ ಗೆಲ್ಲುವ ಸಾಧ್ಯತೆ ಇದೆ. ಇದೇ ವೇಳೆ, ಮಧ್ಯಪ್ರದೇಶದಲ್ಲಿ ಬಿಜೆಪಿ - ಕಾಂಗ್ರೆಸ್ ನೇರ ಹಣಾಹಣಿ ನಡೆಯಲಿದೆ ಎಂದು ಕೆಲ ಸಮೀಕ್ಷೆಗಳು ಹೇಳಿವೆ.

ಮತ್ತೊಂದೆಡೆ, ರಾಜಸ್ಥಾನದಲ್ಲಿ ಕಾಂಗ್ರೆಸ್​ಗೆ ಅಧಿಕಾರ ಕೈತಪ್ಪಿದರೂ, ಛತ್ತೀಸ್‌ಗಢದಲ್ಲಿ ಅಧಿಕಾರದಲ್ಲಿ ಮುಂದುವರೆಯಲಿದೆ. ಜೊತೆಗೆ ತೆಲಂಗಾಣದಲ್ಲಿ ಬಿಆರ್‌ಎಸ್ ಹಿಂದಿಕ್ಕಿ ಆಡಳಿತಕ್ಕೆ ಬರಲಿದೆ ಎಂದು ಎಕ್ಸಿಟ್​ ಪೋಲ್​ಗಳು ಭವಿಷ್ಯ ನುಡಿದಿವೆ. ಹೀಗಾಗಿ ಎಲ್ಲ ರಾಜಕೀಯ ಪಕ್ಷಗಳಲ್ಲಿ ಹೊಸ ಲೆಕ್ಕಾಚಾರಗಳು ಶುರುವಾಗಿವೆ. ಆದರೆ, ಇವುಗಳಿಗೆ ಇಂದು ಪ್ರಕಟವಾಗಲಿರುವ ಅಧಿಕೃತ ಫಲಿತಾಂಶಗಳು ಮಧ್ಯಾಹ್ನದ ವೇಳೆಗೆ ಸಂಪೂರ್ಣ ಉತ್ತರ ನೀಡಲಿದೆ.

ಚುನಾವಣಾ ಕಣದಲ್ಲಿ ಪ್ರಮುಖರು: ನಾಲ್ಕು ರಾಜ್ಯಗಳಲ್ಲಿ ರಾಷ್ಟ್ರ ಹಾಗೂ ರಾಜ್ಯಗಳ ಮಟ್ಟದಲ್ಲಿ ಗುರುತಿಸಿಕೊಂಡ ಘಟಾನುಘಟಿ ನಾಯಕರು ಚುನಾವಣಾ ಅಗ್ನಿಪರೀಕ್ಷೆ ಎದುರಿಸಿದ್ದಾರೆ. ಮತದಾರ ಪ್ರಭು ಈಗಾಗಲೇ ಎಲ್ಲ ನಾಯಕರ ರಾಜಕೀಯ ಭವಿಷ್ಯ ಬರೆದಿದ್ದು, ಅದು ಭಾನುವಾರ ಹೊರಬರಲಿದೆ.

ಶಿವರಾಜ - ಕಮಲನಾಥ್: ಮಧ್ಯಪ್ರದೇಶದಲ್ಲಿ ಬಿಜೆಪಿಯಿಂದ ಸಿಎಂ ಶಿವರಾಜ ಸಿಂಗ್ ಚೌಹಾಣ್ (ಬುಧ್ನಿ ಕ್ಷೇತ್ರ), ಮೂವರು ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಪಟೇಲ್ ಮತ್ತು ಫಗ್ಗನ್ ಸಿಂಗ್ ಕುಲಸ್ತೆ ಹಾಗೂ ಕಾಂಗ್ರೆಸ್​ ಪಕ್ಷದಿಂದ ರಾಜ್ಯ ಘಟಕದ ಅಧ್ಯಕ್ಷ ಕಮಲನಾಥ್ (ಚಿಂದ್ವಾರ) ಅವರ ರಾಜಕೀಯ ಭವಿಷ್ಯ ಇವಿಎಂಗಳಲ್ಲಿ ಅಡಗಿದೆ.

ಬಘೇಲ್ - ರಮಣ್ ಸಿಂಗ್: ಛತ್ತೀಸ್​ಗಢದಲ್ಲಿ ಕಾಂಗ್ರೆಸ್​ನಿಂದ ಸಿಎಂ ಭೂಪೇಶ್ ಬಘೇಲ್, ಡಿಸಿಎಂ ಟಿಎಸ್ ಸಿಂಗ್ ದೇವ್ ಮತ್ತು ಬಿಜೆಪಿಯಿಂದ ಮಾಜಿ ಸಿಎಂ ರಮಣ್ ಸಿಂಗ್ ಸೇರಿದಂತೆ 1,181 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಾಘೇಲ್ ಪ್ರತಿನಿಧಿಸುವ ಪಟಾನ್ ಕ್ಷೇತ್ರವು ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಿದೆ. ಬಿಜೆಪಿಯು ಸಿಎಂ ದೂರದ ಸೋದರಳಿಯ ಮತ್ತು ಲೋಕಸಭಾ ಸಂಸದ ವಿಜಯ್ ಬಾಘೇಲ್ ಅವರನ್ನು ಅಖಾಡಕ್ಕೆ ಇಳಿಸಿದೆ. ಜನತಾ ಕಾಂಗ್ರೆಸ್ ಛತ್ತೀಸ್‌ಗಢ (ಜೆ) ರಾಜ್ಯಾಧ್ಯಕ್ಷ ಅಮಿತ್ ಜೋಗಿ ಕೂಡ ಪಟಾನ್‌ನಿಂದ ಸ್ಪರ್ಧೆ ಮಾಡಿದ್ದಾರೆ.

ಕೆಸಿಆರ್​ - ರೇವಂತ್ ರೆಡ್ಡಿ- ಬಂಡಿ ಸಂಜಯ್: ತೆಲಂಗಾಣದಲ್ಲಿ ಬಿಆರ್‌ಎಸ್ ನಾಯಕ, ಸಿಎಂ ಚಂದ್ರಶೇಖರ್ ರಾವ್, ಅವರ ಮಗ, ಸಚಿವ ಕೆಟಿ ರಾಮರಾವ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಎ.ರೇವಂತ್ ರೆಡ್ಡಿ ಮತ್ತು ಬಿಜೆಪಿ ಲೋಕಸಭಾ ಸದಸ್ಯರಾದ ಬಂಡಿ ಸಂಜಯ್ ಕುಮಾರ್, ಡಿ.ಅರವಿಂದ್ ಮತ್ತು ಸೋಯಂ ಬಾಪು ರಾವ್ ಸೇರಿದಂತೆ 2,290 ಸ್ಪರ್ಧಿಗಳ ಭವಿಷ್ಯ ಪ್ರಟಕವಾಗಲಿದೆ.

ಗೆಹ್ಲೋಟ್ - ಪೈಲಟ್ - ರಾಜೇ: ರಾಜಸ್ಥಾನದಲ್ಲಿ ಕಾಂಗ್ರೆಸ್​ನಿಂದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಕಣದಲ್ಲಿದ್ದಾರೆ. ಬಿಜೆಪಿಯಿಂದ ಮಾಜಿ ಸಿಎಂ ವಸುಂಧರಾ ರಾಜೇ, ಕೇಂದ್ರದ ಮಾಜಿ ಸಚಿವ, ಸಂಸದ ರಾಜ್ಯವರ್ಧನ್ ರಾಥೋಡ್ ಅವರು ಚುನಾವಣಾ ಭವಿಷ್ಯ ಇವಿಎಂಗಳಲ್ಲಿ ಅಡಗಿದೆ.

ಇದನ್ನೂ ಓದಿ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ, ತೆಲಂಗಾಣದಲ್ಲಿ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ: ಮತ ಎಣಿಕೆಗೆ ಸಕಲ ಸಿದ್ಧತೆ

Last Updated : Dec 3, 2023, 6:22 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.