ETV Bharat / bharat

ಪಶ್ಚಿಮ ಬಂಗಾಳದಲ್ಲಿ ಇಡಿ ಅಧಿಕಾರಿಗಳ ಮೇಲೆ ದಾಳಿ: ಕ್ರಮದ ಎಚ್ಚರಿಕೆ ನೀಡಿದ ರಾಜ್ಯಪಾಲ - ಕಾನೂನು ಸುವ್ಯವಸ್ಥೆ

ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ ರಾಜ್ಯಪಾಲ ಬೋಸ್​, ಸರ್ಕಾರದ ವಿರುದ್ಧ ತನ್ನ ಅಧಿಕಾರ ಬಳಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

Attack on ED officers deplorable: Bengal Guv Bose
Attack on ED officers deplorable: Bengal Guv Bose
author img

By PTI

Published : Jan 5, 2024, 4:45 PM IST

ಕೋಲ್ಕತಾ: ಟಿಎಂಸಿ ನಾಯಕರೊಬ್ಬರ ಬೆಂಬಲಿಗರು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮೇಲೆ ನಡೆಸಿದ ದಾಳಿಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಡಾ. ಸಿ.ವಿ.ಆನಂದ ಬೋಸ್ ಶುಕ್ರವಾರ ತೀವ್ರವಾಗಿ ಖಂಡಿಸಿದ್ದಾರೆ. ಟಿಎಂಸಿ ನಾಯಕನ ಸಂದೇಶಖಾಲಿ ನಿವಾಸದಲ್ಲಿ ಪರಿಶೀಲನೆಗೆ ತೆರಳಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಹಲ್ಲೆ ನಡೆದಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದರ ಸಂಕೇತವಾಗಿದೆ ಎಂದು ರಾಜ್ಯಪಾಲರು ಕಿಡಿ ಕಾರಿದ್ದಾರೆ.

ರಾಜ್ಯದ ತೃಣಮೂಲ ಕಾಂಗ್ರೆಸ್ ಸರ್ಕಾರಕ್ಕೆ ಕಠಿಣ ಸಂದೇಶ ರವಾನಿಸಿರುವ ಬೋಸ್, ತಮ್ಮ ಸಾಂವಿಧಾನಿಕ ಅಧಿಕಾರಗಳನ್ನು ಅನ್ವೇಷಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

"ಸಂದೇಶಖಾಲಿಯಲ್ಲಿ ನಡೆದ ಘಟನೆ ಆತಂಕಕಾರಿ ಮತ್ತು ಶೋಚನೀಯವಾಗಿದೆ. ಪ್ರಜಾಪ್ರಭುತ್ವದಲ್ಲಿ ಅನಾಗರಿಕತೆ ಮತ್ತು ವಿಧ್ವಂಸಕತೆಯನ್ನು ನಿಲ್ಲಿಸುವುದು ನಾಗರಿಕ ಸರ್ಕಾರದ ಕರ್ತವ್ಯವಾಗಿದೆ. ರಾಜ್ಯಪಾಲರಾಗಿ ಸೂಕ್ತ ರೀತಿಯಲ್ಲಿ ಸೂಕ್ತ ಕ್ರಮಕ್ಕಾಗಿ ನನ್ನ ಎಲ್ಲಾ ಸಾಂವಿಧಾನಿಕ ಆಯ್ಕೆಗಳನ್ನು ನಾನು ಪರಿಶೀಲನೆ ಮಾಡಲಿದ್ದೇನೆ" ಎಂದು ಬೋಸ್ ರಾಜಭವನದಿಂದ ಬಿಡುಗಡೆ ಮಾಡಿದ ಧ್ವನಿ ಸಂದೇಶದಲ್ಲಿ ತಿಳಿಸಿದ್ದಾರೆ. ಬಂಗಾಳವು ಬನಾನಾ ರಿಪಬ್ಲಿಕ್ ಅಲ್ಲ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನಾಗರಿಕತೆ ಮತ್ತು ವಿಧ್ವಂಸಕತೆಯನ್ನು ಸರ್ಕಾರ ನಿಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ತೃಣಮೂಲ ಕಾಂಗ್ರೆಸ್ ನಾಯಕನ ನಿವಾಸದ ಮೇಲೆ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡದ ಮೇಲೆ ದಾಳಿ ನಡೆಸಲಾಗಿದೆ.

ಇಡಿ ಅಧಿಕಾರಿಗಳು ಕೇಂದ್ರ ಪಡೆಗಳ ಕೆಲವು ಸಿಬ್ಬಂದಿಯೊಂದಿಗೆ ಸ್ಥಳೀಯ ತೃಣಮೂಲ ನಾಯಕ ಶಹಜಹಾನ್ ಶೇಖ್ ಅವರ ಮನೆಯ ಮೇಲೆ ದಾಳಿ ನಡೆಸುತ್ತಿದ್ದಾಗ ನೂರಾರು ಸ್ಥಳೀಯರು ಅವರನ್ನು ಬೆನ್ನಟ್ಟಿ ಓಡಿಸಿದರು. ಇಡಿ ತಂಡದ ಸದಸ್ಯರು ಸ್ಥಳೀಯ ತೃಣಮೂಲ ನಾಯಕನ ಮನೆಯ ಗೇಟ್​ಗಳನ್ನು ತೆರೆಯಲು ಪ್ರಯತ್ನಿಸುತ್ತಿದ್ದಾಗ ಗುಂಪು ಹಿಂಸಾತ್ಮಕವಾಗಿ ಮಾರ್ಪಟ್ಟಿತು.

ತಂಡದಲ್ಲಿದ್ದ ಅಧಿಕಾರಿಗಳಿಗೆ ಗಾಯಗಳಾಗಿದ್ದು, ಕೇಂದ್ರ ಪಡೆಗಳನ್ನು ಸಾಗಿಸುತ್ತಿದ್ದ ಹಲವಾರು ವಾಹನಗಳನ್ನು ಲೂಟಿ ಮಾಡಲಾಗಿದೆ. ಇಡಿ ತಂಡದೊಂದಿಗೆ ಇದ್ದ ಮಾಧ್ಯಮದವರ ಮೇಲೆ ಕೂಡ ಹಲ್ಲೆ ನಡೆಸಲಾಯಿತು ಮತ್ತು ಅವರ ಕ್ಯಾಮೆರಾ, ಇತರ ಉಪಕರಣಗಳನ್ನು ಮುರಿದುಹಾಕಲಾಯಿತು. ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ದಾಳಿ ನಡೆಸಿದೆ. ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವೆ ಜ್ಯೋತಿ ಪ್ರಿಯಾ ಮಲ್ಲಿಕ್ ಅವರನ್ನು ಕಳೆದ ವರ್ಷ ಇಡಿ ಬಂಧಿಸಿತ್ತು.

ಇದನ್ನೂ ಓದಿ: ಹುಬ್ಬಳ್ಳಿ: ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು

ಕೋಲ್ಕತಾ: ಟಿಎಂಸಿ ನಾಯಕರೊಬ್ಬರ ಬೆಂಬಲಿಗರು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮೇಲೆ ನಡೆಸಿದ ದಾಳಿಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಡಾ. ಸಿ.ವಿ.ಆನಂದ ಬೋಸ್ ಶುಕ್ರವಾರ ತೀವ್ರವಾಗಿ ಖಂಡಿಸಿದ್ದಾರೆ. ಟಿಎಂಸಿ ನಾಯಕನ ಸಂದೇಶಖಾಲಿ ನಿವಾಸದಲ್ಲಿ ಪರಿಶೀಲನೆಗೆ ತೆರಳಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಹಲ್ಲೆ ನಡೆದಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದರ ಸಂಕೇತವಾಗಿದೆ ಎಂದು ರಾಜ್ಯಪಾಲರು ಕಿಡಿ ಕಾರಿದ್ದಾರೆ.

ರಾಜ್ಯದ ತೃಣಮೂಲ ಕಾಂಗ್ರೆಸ್ ಸರ್ಕಾರಕ್ಕೆ ಕಠಿಣ ಸಂದೇಶ ರವಾನಿಸಿರುವ ಬೋಸ್, ತಮ್ಮ ಸಾಂವಿಧಾನಿಕ ಅಧಿಕಾರಗಳನ್ನು ಅನ್ವೇಷಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

"ಸಂದೇಶಖಾಲಿಯಲ್ಲಿ ನಡೆದ ಘಟನೆ ಆತಂಕಕಾರಿ ಮತ್ತು ಶೋಚನೀಯವಾಗಿದೆ. ಪ್ರಜಾಪ್ರಭುತ್ವದಲ್ಲಿ ಅನಾಗರಿಕತೆ ಮತ್ತು ವಿಧ್ವಂಸಕತೆಯನ್ನು ನಿಲ್ಲಿಸುವುದು ನಾಗರಿಕ ಸರ್ಕಾರದ ಕರ್ತವ್ಯವಾಗಿದೆ. ರಾಜ್ಯಪಾಲರಾಗಿ ಸೂಕ್ತ ರೀತಿಯಲ್ಲಿ ಸೂಕ್ತ ಕ್ರಮಕ್ಕಾಗಿ ನನ್ನ ಎಲ್ಲಾ ಸಾಂವಿಧಾನಿಕ ಆಯ್ಕೆಗಳನ್ನು ನಾನು ಪರಿಶೀಲನೆ ಮಾಡಲಿದ್ದೇನೆ" ಎಂದು ಬೋಸ್ ರಾಜಭವನದಿಂದ ಬಿಡುಗಡೆ ಮಾಡಿದ ಧ್ವನಿ ಸಂದೇಶದಲ್ಲಿ ತಿಳಿಸಿದ್ದಾರೆ. ಬಂಗಾಳವು ಬನಾನಾ ರಿಪಬ್ಲಿಕ್ ಅಲ್ಲ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನಾಗರಿಕತೆ ಮತ್ತು ವಿಧ್ವಂಸಕತೆಯನ್ನು ಸರ್ಕಾರ ನಿಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ತೃಣಮೂಲ ಕಾಂಗ್ರೆಸ್ ನಾಯಕನ ನಿವಾಸದ ಮೇಲೆ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡದ ಮೇಲೆ ದಾಳಿ ನಡೆಸಲಾಗಿದೆ.

ಇಡಿ ಅಧಿಕಾರಿಗಳು ಕೇಂದ್ರ ಪಡೆಗಳ ಕೆಲವು ಸಿಬ್ಬಂದಿಯೊಂದಿಗೆ ಸ್ಥಳೀಯ ತೃಣಮೂಲ ನಾಯಕ ಶಹಜಹಾನ್ ಶೇಖ್ ಅವರ ಮನೆಯ ಮೇಲೆ ದಾಳಿ ನಡೆಸುತ್ತಿದ್ದಾಗ ನೂರಾರು ಸ್ಥಳೀಯರು ಅವರನ್ನು ಬೆನ್ನಟ್ಟಿ ಓಡಿಸಿದರು. ಇಡಿ ತಂಡದ ಸದಸ್ಯರು ಸ್ಥಳೀಯ ತೃಣಮೂಲ ನಾಯಕನ ಮನೆಯ ಗೇಟ್​ಗಳನ್ನು ತೆರೆಯಲು ಪ್ರಯತ್ನಿಸುತ್ತಿದ್ದಾಗ ಗುಂಪು ಹಿಂಸಾತ್ಮಕವಾಗಿ ಮಾರ್ಪಟ್ಟಿತು.

ತಂಡದಲ್ಲಿದ್ದ ಅಧಿಕಾರಿಗಳಿಗೆ ಗಾಯಗಳಾಗಿದ್ದು, ಕೇಂದ್ರ ಪಡೆಗಳನ್ನು ಸಾಗಿಸುತ್ತಿದ್ದ ಹಲವಾರು ವಾಹನಗಳನ್ನು ಲೂಟಿ ಮಾಡಲಾಗಿದೆ. ಇಡಿ ತಂಡದೊಂದಿಗೆ ಇದ್ದ ಮಾಧ್ಯಮದವರ ಮೇಲೆ ಕೂಡ ಹಲ್ಲೆ ನಡೆಸಲಾಯಿತು ಮತ್ತು ಅವರ ಕ್ಯಾಮೆರಾ, ಇತರ ಉಪಕರಣಗಳನ್ನು ಮುರಿದುಹಾಕಲಾಯಿತು. ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ದಾಳಿ ನಡೆಸಿದೆ. ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವೆ ಜ್ಯೋತಿ ಪ್ರಿಯಾ ಮಲ್ಲಿಕ್ ಅವರನ್ನು ಕಳೆದ ವರ್ಷ ಇಡಿ ಬಂಧಿಸಿತ್ತು.

ಇದನ್ನೂ ಓದಿ: ಹುಬ್ಬಳ್ಳಿ: ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.