ETV Bharat / bharat

ಕೋರ್ಟ್‌ನಲ್ಲಿ ವಾದ ಮುಗಿಸಿ ಮರಳುತ್ತಿದ್ದ ವಕೀಲನ ಮೇಲೆ ದುಷ್ಕರ್ಮಿಗಳಿಂದ ಮನಬಂದಂತೆ ಹಲ್ಲೆ

author img

By

Published : Jul 19, 2021, 7:20 PM IST

ಕೋರ್ಟ್‌ನಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಾದ ಮಂಡನೆ ಮಾಡಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳ ತಂಡ ಹಲ್ಲೆ ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.

Attack on a lawyer
Attack on a lawyer

ಮುಂಬೈ(ಮಹಾರಾಷ್ಟ್ರ): ನಡುರಸ್ತೆಯಲ್ಲೇ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳು ಕತ್ತಿ ಮತ್ತು ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಮುಂಬೈನ ಬೋರಿವಿಲಿ ಎಂಬಲ್ಲಿ ನಡೆದಿದೆ. ಘಟನೆಯ ವಿಡಿಯೋ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಲಾಯರ್​​ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಕೀಲರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ವೇಳೆ ಅವರನ್ನು ರಕ್ಷಣೆ ಮಾಡಲು ಕೆಲವರು ಮುಂದಾಗಿರುವ ಘಟನೆಯೂ ನಡೆದಿದೆ. ಪ್ರಕರಣದಲ್ಲಿ 12 ಜನರು ಭಾಗಿಯಾಗಿದ್ದಾರೆಂದು ಹೇಳಲಾಗುತ್ತಿದ್ದು, ಈಗಾಗಲೇ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Attack on a lawyer
ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲು

ಇದನ್ನೂ ಓದಿ: ಫೋನ್​ನಲ್ಲಿ ಮಾತನಾಡುತ್ತಾ ಕುಳಿತಿದ್ದ ವ್ಯಕ್ತಿ ಮೇಲೆ ತಲವಾರ್‌ನಿಂದ ಹಲ್ಲೆ!

ಘಟನೆಯ ಕುರಿತಾಗಿ ಪ್ರಕರಣ ದಾಖಲಿಸಿಕೊಂಡಿರುವ MHB ಪೊಲೀಸ್​ ಠಾಣೆ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಮುಂಬೈ(ಮಹಾರಾಷ್ಟ್ರ): ನಡುರಸ್ತೆಯಲ್ಲೇ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳು ಕತ್ತಿ ಮತ್ತು ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಮುಂಬೈನ ಬೋರಿವಿಲಿ ಎಂಬಲ್ಲಿ ನಡೆದಿದೆ. ಘಟನೆಯ ವಿಡಿಯೋ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಲಾಯರ್​​ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಕೀಲರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ವೇಳೆ ಅವರನ್ನು ರಕ್ಷಣೆ ಮಾಡಲು ಕೆಲವರು ಮುಂದಾಗಿರುವ ಘಟನೆಯೂ ನಡೆದಿದೆ. ಪ್ರಕರಣದಲ್ಲಿ 12 ಜನರು ಭಾಗಿಯಾಗಿದ್ದಾರೆಂದು ಹೇಳಲಾಗುತ್ತಿದ್ದು, ಈಗಾಗಲೇ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Attack on a lawyer
ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲು

ಇದನ್ನೂ ಓದಿ: ಫೋನ್​ನಲ್ಲಿ ಮಾತನಾಡುತ್ತಾ ಕುಳಿತಿದ್ದ ವ್ಯಕ್ತಿ ಮೇಲೆ ತಲವಾರ್‌ನಿಂದ ಹಲ್ಲೆ!

ಘಟನೆಯ ಕುರಿತಾಗಿ ಪ್ರಕರಣ ದಾಖಲಿಸಿಕೊಂಡಿರುವ MHB ಪೊಲೀಸ್​ ಠಾಣೆ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.