ETV Bharat / bharat

ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ: ಪ.ಬಂ ಡಿಜಿಪಿಗೆ ಕೇಂದ್ರದಿಂದ ಸಮನ್ಸ್​​ - ತೃಣಮೂಲ ಕಾಂಗ್ರೆಸ್

ನಿನ್ನೆ ಡೈಮಂಡ್ ಹಾರ್ಬರ್‌ನಲ್ಲಿ ನಡೆದ ಘಟನೆ ಸಂಬಂಧ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ಗೃಹ ಸಚಿವ ಅಮಿತ್​ ಶಾ ಸಮನ್ಸ್ ನೀಡಿ, ದೆಹಲಿಗೆ ಬರಲು ಹೇಳಿದ್ದಾರೆ.

Home Minister Amit Shah
ಗೃಹ ಸಚಿವ ಅಮಿತ್​ ಶಾ
author img

By

Published : Dec 11, 2020, 1:42 PM IST

Updated : Dec 11, 2020, 2:50 PM IST

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ (ಸಿಎಸ್​) ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಕೇಂದ್ರ ಗೃಹ ಸಚಿವಾಲಯ ಸಮನ್ಸ್​​ ನೀಡಿದೆ.

ನಿನ್ನೆ ಡೈಮಂಡ್ ಹಾರ್ಬರ್‌ನಲ್ಲಿ ನಡೆದ ಘಟನೆ ಕುರಿತು ವರದಿ ನೀಡುವಂತೆ ಪಶ್ಚಿಮ ಬಂಗಾಳದ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್​ಗೆ (ಟಿಎಂಸಿ) ಗೃಹ ಸಚಿವಾಲಯ ಕೇಳಿತ್ತು. ಇಂದು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧಂಕರ್​ ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ. ಇತ್ತ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ಗೃಹ ಸಚಿವ ಅಮಿತ್​ ಶಾ ಸಮನ್ಸ್ ನೀಡಿ, ದೆಹಲಿಗೆ ಬರಲು ಹೇಳಿದ್ದಾರೆ.

ಓದಿ: ಜೆಪಿ ನಡ್ಡಾ ವಾಹನ ಮೇಲೆ ದಾಳಿ: ತನಿಖೆಗೆ ಆದೇಶಿಸುವಂತೆ ಸಿಎಂ ದೀದಿಗೆ ಬಿಎಸ್​ವೈ ಒತ್ತಾಯ

ಗುರುವಾರ ಮಧ್ಯಾಹ್ನ ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಶೇಕ್ ಬ್ಯಾನರ್ಜಿ ಅವರ ಲೋಕಸಭಾ ಕ್ಷೇತ್ರವಾದ ಡೈಮಂಡ್ ಹಾರ್ಬರ್​ಗೆ ತೆರಳುತ್ತಿದ್ದ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿತ್ತು. ಘಟನೆಯಲ್ಲಿ ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗಿಯಾ ಸೇರಿದಂತೆ ಪಕ್ಷದ ಹಲವಾರು ನಾಯಕರು ಗಾಯಗೊಂಡಿದ್ದರು. ಈ ಕೃತ್ಯವನ್ನು ಟಿಎಂಸಿ ಕಾರ್ಯಕರ್ತರು ಎಸಗಿದ್ದಾರೆ ಎಂದು ಬಿಜೆಪಿ ಆರೋಪಿಸಿ ಪ್ರತಿಭಟನೆ ನಡೆಸಿತ್ತು.

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ (ಸಿಎಸ್​) ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಕೇಂದ್ರ ಗೃಹ ಸಚಿವಾಲಯ ಸಮನ್ಸ್​​ ನೀಡಿದೆ.

ನಿನ್ನೆ ಡೈಮಂಡ್ ಹಾರ್ಬರ್‌ನಲ್ಲಿ ನಡೆದ ಘಟನೆ ಕುರಿತು ವರದಿ ನೀಡುವಂತೆ ಪಶ್ಚಿಮ ಬಂಗಾಳದ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್​ಗೆ (ಟಿಎಂಸಿ) ಗೃಹ ಸಚಿವಾಲಯ ಕೇಳಿತ್ತು. ಇಂದು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧಂಕರ್​ ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ. ಇತ್ತ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ಗೃಹ ಸಚಿವ ಅಮಿತ್​ ಶಾ ಸಮನ್ಸ್ ನೀಡಿ, ದೆಹಲಿಗೆ ಬರಲು ಹೇಳಿದ್ದಾರೆ.

ಓದಿ: ಜೆಪಿ ನಡ್ಡಾ ವಾಹನ ಮೇಲೆ ದಾಳಿ: ತನಿಖೆಗೆ ಆದೇಶಿಸುವಂತೆ ಸಿಎಂ ದೀದಿಗೆ ಬಿಎಸ್​ವೈ ಒತ್ತಾಯ

ಗುರುವಾರ ಮಧ್ಯಾಹ್ನ ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಶೇಕ್ ಬ್ಯಾನರ್ಜಿ ಅವರ ಲೋಕಸಭಾ ಕ್ಷೇತ್ರವಾದ ಡೈಮಂಡ್ ಹಾರ್ಬರ್​ಗೆ ತೆರಳುತ್ತಿದ್ದ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿತ್ತು. ಘಟನೆಯಲ್ಲಿ ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗಿಯಾ ಸೇರಿದಂತೆ ಪಕ್ಷದ ಹಲವಾರು ನಾಯಕರು ಗಾಯಗೊಂಡಿದ್ದರು. ಈ ಕೃತ್ಯವನ್ನು ಟಿಎಂಸಿ ಕಾರ್ಯಕರ್ತರು ಎಸಗಿದ್ದಾರೆ ಎಂದು ಬಿಜೆಪಿ ಆರೋಪಿಸಿ ಪ್ರತಿಭಟನೆ ನಡೆಸಿತ್ತು.

Last Updated : Dec 11, 2020, 2:50 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.