ETV Bharat / bharat

ವೈದ್ಯರಿಗೆ ಹೆಚ್ಚು ಅಂಟುತ್ತಿರುವ ಕೊರೊನಾ: ಆಸ್ಪತ್ರೆ ಭೇಟಿ ತಪ್ಪಿಸುವಂತೆ ಜನರಿಗೆ ತಜ್ಞರ ಸಲಹೆ

ವೇಗವಾಗಿ ಹರಡುತ್ತಿರುವ ಒಮಿಕ್ರಾನ್ ರೂಪಾಂತರದ ನಡುವೆ ದೇಶಾದ್ಯಂತದ ಆಸ್ಪತ್ರೆಗಳಲ್ಲಿನ ವೈದ್ಯರು ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ. ತುರ್ತು ಪರಿಸ್ಥಿತಿ ಇದ್ದರೆ ಮಾತ್ರ ಆಸ್ಪತ್ರೆಗಳಿಗೆ ಭೇಟಿ ನೀಡಿ, ಸಣ್ಣಪುಟ್ಟ ಸಮಸ್ಯೆಗಳಿಗೆ ಆಸ್ಪತ್ರೆಗೆ ಬರುವುದನ್ನು ಆದಷ್ಟು ತಪ್ಪಿಸಿ ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

author img

By

Published : Jan 4, 2022, 8:29 PM IST

more doctors test Covid positive
ವೈದ್ಯರಿಗೆ ಹೆಚ್ಚು ಅಂಟುತ್ತಿರುವ ಕೊರೊನಾ

ನವದೆಹಲಿ: ಹೆಚ್ಚಿನ ಸಂಖ್ಯೆಯ ವೈದ್ಯರಿಗೆ ಕೋವಿಡ್ ತಗುಲುತ್ತಿದೆ ಎಂಬ ವರದಿ ಬಂದಿದ್ದು, ಜನರು ಆಸ್ಪತ್ರೆಗಳಿಗೆ ಭೇಟಿ ನೀಡುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು ಮತ್ತು ಆನ್​ಲೈನ್ ಅಥವಾ ​ದೂರಸಂಪರ್ಕ ಸೇವೆಗಳ ಮೊರೆ ಹೋಗಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

"ವೇಗವಾಗಿ ಹರಡುತ್ತಿರುವ ಒಮಿಕ್ರಾನ್ ರೂಪಾಂತರದ ನಡುವೆ ದೇಶಾದ್ಯಂತದ ಆಸ್ಪತ್ರೆಗಳಲ್ಲಿನ ಮುಂಚೂಣಿ ಆರೋಗ್ಯ ಕಾರ್ಯಕರ್ತರು, ವಿಶೇಷವಾಗಿ ವೈದ್ಯರು ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ. ತುರ್ತು ಪರಿಸ್ಥಿತಿ ಇದ್ದರೆ ಮಾತ್ರ ಆಸ್ಪತ್ರೆಗಳಿಗೆ ಭೇಟಿ ನೀಡಿ, ಸಣ್ಣಪುಟ್ಟ ಸಮಸ್ಯೆಗಳಿಗೆ ಆಸ್ಪತ್ರೆಗೆ ಬರುವುದನ್ನು ಆದಷ್ಟು ತಪ್ಪಿಸಿ. ಸಣ್ಣಪುಟ್ಟ ಸಮಸ್ಯೆಗಳನ್ನು ದೂರಸಂಪರ್ಕ ಸೇವೆಗಳಿಂದ ಬಗೆಹರಿಸಿಕೊಳ್ಳಿ" ಎಂದು ಏಷ್ಯನ್ ಸೊಸೈಟಿ ಫಾರ್ ಎಮರ್ಜೆನ್ಸಿ ಮೆಡಿಸಿನ್ (ASEM) ಅಧ್ಯಕ್ಷ ಡಾ ತಮೋರಿಶ್ ಕೋಲೆ ಹೇಳಿದ್ದಾರೆ.

ದೆಹಲಿಯ ಏಮ್ಸ್ ಮತ್ತು ಸಫ್ದರ್‌ಜಂಗ್ ಆಸ್ಪತ್ರೆಯ ಅನೇಕ ವೈದ್ಯರು, ಬಿಹಾರದ ನಳಂದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 100 ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿ, ತಮಿಳುನಾಡಿನ 60ಕ್ಕೂ ಹೆಚ್ಚು ವೈದ್ಯರು, ದಾದಿಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು, ಕೋಲ್ಕತ್ತಾದಲ್ಲಿ 200ಕ್ಕೂ ಹೆಚ್ಚು ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಕಳೆದ ಕೆಲ ದಿನಗಳಲ್ಲಿ ವೈರಸ್​ ಅಂಟಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ದೇಶದಲ್ಲಿ ಕೋವಿಡ್‌ ಹೆಚ್ಚಳ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ, ಪಂಜಾಬ್‌ನಲ್ಲಿ ನೈಟ್‌ ಕರ್ಫ್ಯೂ, ಮುಂಬೈ ಮತ್ತೆ ಲಾಕ್‌ಡೌನ್‌? ಕಂಪ್ಲೀಟ್‌ ರಿಪೋರ್ಟ್‌

ಇತ್ತ ಕೊರೊನಾ ಸೋಂಕಿಗೆ ಒಳಗಾಗುವ ವೈದ್ಯರು ಲಸಿಕೆಗಳ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ ಹಾಗೂ ಬೂಸ್ಟರ್ ಡೋಸ್‌ಗಳ ಅವಶ್ಯಕತೆಗಳ ಬಗ್ಗೆ ದನಿ ಎತ್ತಿದ್ದಾರೆ ಎಂದು ಹೇಳಲಾಗಿದೆ. "ಲಸಿಕೆಗಳು ಸೋಂಕನ್ನು ತಡೆಯಲು ಸಾಧ್ಯವಿಲ್ಲ, ಆದರೆ ಅವು ಸೋಂಕಿನ ತೀವ್ರತೆಯನ್ನು ಕಡಿಮೆ ಮಾಡಬಹುದು. ಪ್ರಸ್ತುತ ನಮಗೆ ಬೇಕಾಗಿರುವುದು ಬೂಸ್ಟರ್ ಡೋಸ್‌" ಎಂದು ಡಾ.ತಮೋರಿಶ್ ಕೋಲೆ ಹೇಳಿದ್ದಾರೆ.

ಈ ಬಗ್ಗೆ ಈಟಿವಿ ಭಾರತಕ್ಕೆ ಪ್ರತಿಕ್ರಿಯೆ ನೀಡಿರುವ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಅಧ್ಯಕ್ಷ ಡಾ. ಸಹಜಾನಂದ್ ಪಿ. ಸಿಂಗ್, "ಕೋವಿಡ್​ ದೃಢಪಟ್ಟ ವೈದ್ಯಕೀಯ ಸಿಬ್ಬಂದಿ ಕೆಮ್ಮು ಮತ್ತು ಸೌಮ್ಯ ಜ್ವರದ ಲಕ್ಷಣಗಳನ್ನು ಹೊಂದಿದ್ದಾರೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ. ಕೊರೊನಾ ವೈರಸ್​ನ ಹೊಸ ರೂಪಾಂತರಿ ವೇಗವಾಗಿ ಹರಡುತ್ತದೆಯಾದರೂ ಅದರ ತೀವ್ರತೆ ಸೌಮ್ಯವಾಗಿರುತ್ತದೆ" ಎಂದು ತಿಳಿಸಿದ್ದಾರೆ.

ನವದೆಹಲಿ: ಹೆಚ್ಚಿನ ಸಂಖ್ಯೆಯ ವೈದ್ಯರಿಗೆ ಕೋವಿಡ್ ತಗುಲುತ್ತಿದೆ ಎಂಬ ವರದಿ ಬಂದಿದ್ದು, ಜನರು ಆಸ್ಪತ್ರೆಗಳಿಗೆ ಭೇಟಿ ನೀಡುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು ಮತ್ತು ಆನ್​ಲೈನ್ ಅಥವಾ ​ದೂರಸಂಪರ್ಕ ಸೇವೆಗಳ ಮೊರೆ ಹೋಗಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

"ವೇಗವಾಗಿ ಹರಡುತ್ತಿರುವ ಒಮಿಕ್ರಾನ್ ರೂಪಾಂತರದ ನಡುವೆ ದೇಶಾದ್ಯಂತದ ಆಸ್ಪತ್ರೆಗಳಲ್ಲಿನ ಮುಂಚೂಣಿ ಆರೋಗ್ಯ ಕಾರ್ಯಕರ್ತರು, ವಿಶೇಷವಾಗಿ ವೈದ್ಯರು ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ. ತುರ್ತು ಪರಿಸ್ಥಿತಿ ಇದ್ದರೆ ಮಾತ್ರ ಆಸ್ಪತ್ರೆಗಳಿಗೆ ಭೇಟಿ ನೀಡಿ, ಸಣ್ಣಪುಟ್ಟ ಸಮಸ್ಯೆಗಳಿಗೆ ಆಸ್ಪತ್ರೆಗೆ ಬರುವುದನ್ನು ಆದಷ್ಟು ತಪ್ಪಿಸಿ. ಸಣ್ಣಪುಟ್ಟ ಸಮಸ್ಯೆಗಳನ್ನು ದೂರಸಂಪರ್ಕ ಸೇವೆಗಳಿಂದ ಬಗೆಹರಿಸಿಕೊಳ್ಳಿ" ಎಂದು ಏಷ್ಯನ್ ಸೊಸೈಟಿ ಫಾರ್ ಎಮರ್ಜೆನ್ಸಿ ಮೆಡಿಸಿನ್ (ASEM) ಅಧ್ಯಕ್ಷ ಡಾ ತಮೋರಿಶ್ ಕೋಲೆ ಹೇಳಿದ್ದಾರೆ.

ದೆಹಲಿಯ ಏಮ್ಸ್ ಮತ್ತು ಸಫ್ದರ್‌ಜಂಗ್ ಆಸ್ಪತ್ರೆಯ ಅನೇಕ ವೈದ್ಯರು, ಬಿಹಾರದ ನಳಂದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 100 ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿ, ತಮಿಳುನಾಡಿನ 60ಕ್ಕೂ ಹೆಚ್ಚು ವೈದ್ಯರು, ದಾದಿಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು, ಕೋಲ್ಕತ್ತಾದಲ್ಲಿ 200ಕ್ಕೂ ಹೆಚ್ಚು ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಕಳೆದ ಕೆಲ ದಿನಗಳಲ್ಲಿ ವೈರಸ್​ ಅಂಟಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ದೇಶದಲ್ಲಿ ಕೋವಿಡ್‌ ಹೆಚ್ಚಳ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ, ಪಂಜಾಬ್‌ನಲ್ಲಿ ನೈಟ್‌ ಕರ್ಫ್ಯೂ, ಮುಂಬೈ ಮತ್ತೆ ಲಾಕ್‌ಡೌನ್‌? ಕಂಪ್ಲೀಟ್‌ ರಿಪೋರ್ಟ್‌

ಇತ್ತ ಕೊರೊನಾ ಸೋಂಕಿಗೆ ಒಳಗಾಗುವ ವೈದ್ಯರು ಲಸಿಕೆಗಳ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ ಹಾಗೂ ಬೂಸ್ಟರ್ ಡೋಸ್‌ಗಳ ಅವಶ್ಯಕತೆಗಳ ಬಗ್ಗೆ ದನಿ ಎತ್ತಿದ್ದಾರೆ ಎಂದು ಹೇಳಲಾಗಿದೆ. "ಲಸಿಕೆಗಳು ಸೋಂಕನ್ನು ತಡೆಯಲು ಸಾಧ್ಯವಿಲ್ಲ, ಆದರೆ ಅವು ಸೋಂಕಿನ ತೀವ್ರತೆಯನ್ನು ಕಡಿಮೆ ಮಾಡಬಹುದು. ಪ್ರಸ್ತುತ ನಮಗೆ ಬೇಕಾಗಿರುವುದು ಬೂಸ್ಟರ್ ಡೋಸ್‌" ಎಂದು ಡಾ.ತಮೋರಿಶ್ ಕೋಲೆ ಹೇಳಿದ್ದಾರೆ.

ಈ ಬಗ್ಗೆ ಈಟಿವಿ ಭಾರತಕ್ಕೆ ಪ್ರತಿಕ್ರಿಯೆ ನೀಡಿರುವ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಅಧ್ಯಕ್ಷ ಡಾ. ಸಹಜಾನಂದ್ ಪಿ. ಸಿಂಗ್, "ಕೋವಿಡ್​ ದೃಢಪಟ್ಟ ವೈದ್ಯಕೀಯ ಸಿಬ್ಬಂದಿ ಕೆಮ್ಮು ಮತ್ತು ಸೌಮ್ಯ ಜ್ವರದ ಲಕ್ಷಣಗಳನ್ನು ಹೊಂದಿದ್ದಾರೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ. ಕೊರೊನಾ ವೈರಸ್​ನ ಹೊಸ ರೂಪಾಂತರಿ ವೇಗವಾಗಿ ಹರಡುತ್ತದೆಯಾದರೂ ಅದರ ತೀವ್ರತೆ ಸೌಮ್ಯವಾಗಿರುತ್ತದೆ" ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.