ಹೈದರಾಬಾದ್: ಇಲ್ಲಿನ ಕುಕ್ಕಟ್ಪಲ್ಲಿಯ ಪಟೇಲ್ ಕುಂಟಾ ಪಾರ್ಕ್ ಬಳಿಯ ಎಚ್ಡಿಎಫ್ಸಿ ಬ್ಯಾಂಕ್ ಎಟಿಎಂನಲ್ಲಿ ಅಪರಿಚಿತ ಬಂದೂಕುದಾರಿಗಳು ಗುಂಡು ಹಾರಿಸಿ, ದರೋಡೆ ಮಾಡಿ ಪರಾರಿಯಾಗಿದ್ದಾರೆ. ಪರಿಣಾಮ ಬ್ಯಾಂಕ್ ಉದ್ಯೋಗಿ ಸಾವನ್ನಪ್ಪಿದ್ದಾನೆ.
ಎಟಿಎಂ ಕಳ್ಳತನ ಮಾಡುವ ಉದ್ದೇಶದಿಂದ ಶಸ್ತ್ರಸಜ್ಜಿತ ದರೋಡೆಕೋರರು ಇಲ್ಲಿಗೆ ಆಗಮಿಸಿದ್ದಾರೆ. ಈ ವೇಳೆ ಗುಂಡು ಹಾರಿಸಿದ್ದರಿಂದ ಬ್ಯಾಂಕ್ ಉದ್ಯೋಗಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬ್ಯಾಂಕ್ ಸೆಕ್ಯುರಿಟಿ ಗಾರ್ಡ್ ಆಗಿದ್ದ ಮಾಜಿ ಸೈನಿಕ ಅಲಿ ಬೇಗ್ ಸಾವನ್ನಪ್ಪಿದ್ದು, ಮತ್ತೋರ್ವ ಬ್ಯಾಂಕ್ ಉದ್ಯೋಗಿ ಶ್ರೀನಿವಾಸ್ ಗಾಯಗೊಂಡಿದ್ದಾರೆ. ಈ ವೇಳೆ 5 ಲಕ್ಷ ರೂ. ದರೋಡೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ದ್ವಿಚಕ್ರ ವಾಹನದಲ್ಲಿ ಆಗಮಿಸಿರುವ ದರೋಡೆಕೋರರು ಎಟಿಎಂನಲ್ಲಿ ಹಣ ಹಾಕುತ್ತಿದ್ದಾಗ ಬ್ಯಾಂಕ್ ನೌಕರರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಉದ್ಯೋಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ: ಸ್ಕ್ರ್ಯಾಪ್ನಲ್ಲಿ ಜೀಪ್ : ಈ ವಿಶಿಷ್ಟ ವಾಹನ ನೋಡಿದ್ರೆ ನೀವೂ ಬೆರಗಾಗ್ತೀರಿ..!
ಸೈಬರಾಬಾದ್ ಪೊಲೀಸ್ ಆಯುಕ್ತ ವಿ.ಸಿ ಸಜ್ಜನವರ್ ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು. ಈ ವೇಳೆ, ಮಾತನಾಡಿರುವ ಅವರು, ಅಪರಾಧಿಗಳು ನಗರ ತೊರೆಯದಂತೆ ತಡೆಯಲು ಎಲ್ಲ ಚೆಕ್ ಪೋಸ್ಟ್ ಬಂದ್ ಮಾಡಲಾಗಿದೆ ಎಂದಿದ್ದಾರೆ. ಘಟನೆಯಲ್ಲಿ ಅಂತಾರಾಜ್ಯ ಗ್ಯಾಂಗ್ ಭಾಗಿಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದ್ದು, ಹೆಚ್ಚಿನ ಸುಳಿವು ಪಡೆದುಕೊಳ್ಳುವ ಉದ್ದೇಶದಿಂದ ಸಿಸಿಟಿವಿ ದೃಶ್ಯಾವಳಿ ಪರೀಕ್ಷೆ ಮಾಡುತ್ತಿದ್ದಾರೆ.