ETV Bharat / bharat

ಪ್ರಬಲ ಹೋರಾಟಕ್ಕೆ ಸಿದ್ಧರಾಗಿರಿ: ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಕರೆ

author img

By

Published : Mar 28, 2023, 1:33 PM IST

ಬಿಜೆಪಿ ಪಕ್ಷ ಬೆಳೆದಂತೆ ಅದರ ವಿರುದ್ಧ ಎದುರಾಳಿಗಳ ದಾಳಿ ಹೆಚ್ಚಾಗುತ್ತದೆ. ಹೀಗಾಗಿ ಪ್ರಬಲ ಹೋರಾಟಕ್ಕೆ ಸಿದ್ಧರಾಗಿರಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

In BJP parliamentary party meet PM Modi asks leaders to be ready for a strong fight
In BJP parliamentary party meet PM Modi asks leaders to be ready for a strong fight

ನವದೆಹಲಿ : ಪಕ್ಷದ ಮುಖಂಡರು ಪ್ರಬಲ ಹೋರಾಟಕ್ಕೆ ಸಿದ್ಧವಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರಿಗೆ ಕರೆ ನೀಡಿದ್ದಾರೆ. ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ, ಪಕ್ಷ ಎಷ್ಟು ಹೆಚ್ಚು ಎತ್ತರಕ್ಕೆ ಬೆಳೆಯುತ್ತದೆಯೋ ಪ್ರತಿಪಕ್ಷಗಳ ದಾಳಿ ಅಷ್ಟೇ ತೀವ್ರವಾಗುತ್ತದೆ ಎಂದು ಹೇಳಿದರು. ಇಲ್ಲಿನ ಸಂಸತ್‌ ಭವನದ ಸಂಕೀರ್ಣದಲ್ಲಿ ಇಂದು ಬೆಳಗ್ಗೆ ಬಿಜೆಪಿ ಸಂಸದೀಯ ಪಕ್ಷದ ಸಭೆ ನಡೆಯಿತು. ಅಧಿವೇಶನದ ಎರಡನೇ ಹಂತದಲ್ಲಿ ಇದೇ ಮೊದಲ ಬಾರಿಗೆ ಈ ಸಭೆ ನಡೆಯುತ್ತಿದೆ.

ಸಭೆಯ ಆರಂಭದಲ್ಲಿ, ಇತ್ತೀಚೆಗೆ ಮುಕ್ತಾಯಗೊಂಡ ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಮೂರು ದೊಡ್ಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರನ್ನು ಬಿಜೆಪಿ ಸಂಸದರು ಅಭಿನಂದಿಸಿದರು. ಸಮ್ಮಿಶ್ರ ಸರ್ಕಾರ ಹೊಂದಿರುವ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಪಕ್ಷದ ಗೆಲುವಿಗಾಗಿ ಪ್ರಧಾನಿ ಮೋದಿಯವರನ್ನು ಪಕ್ಷದ ನಾಯಕರು ಅಭಿನಂದಿಸಿದರು. ಬಿಜೆಪಿಯ ಯಶಸ್ಸು ಹೆಚ್ಚಾದಂತೆ ಎದುರಾಳಿಗಳ ಕಡೆಯಿಂದ ದಾಳಿಗಳು ಹೆಚ್ಚಾಗುತ್ತವೆ. ಹೀಗಾಗಿ ಎಲ್ಲರೂ ಪ್ರಬಲ ಹೋರಾಟಕ್ಕೆ ಸಿದ್ಧರಾಗಿರಬೇಕು ಎಂದು ಪ್ರಧಾನಿ ಹೇಳಿದರು.

ಅದಾನಿ ಹಿಂಡೆನ್‌ಬರ್ಗ್ ವಿಷಯಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಪ್ರತಿಪಕ್ಷಗಳು ಜೆಪಿಸಿ ಒತ್ತಾಯಿಸುವುದನ್ನು ಮುಂದುವರೆಸಿರುವ ಮಧ್ಯೆ ಪ್ರಧಾನಿ ಮೋದಿಯವರ ಈ ಹೇಳಿಕೆ ಗಮನಾರ್ಹ. ಪ್ರಧಾನಿಯನ್ನು ಅವಮಾನಿಸಿದ್ದಕ್ಕಾಗಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಏತನ್ಮಧ್ಯೆ ಬಿಜೆಪಿ ಒತ್ತಾಯಿಸಿದೆ. ಲೋಕಸಭೆಯ ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಆರೋಪಿಸಿರುವ ಪ್ರತಿಪಕ್ಷಗಳು ಈ ವಿಷಯದಲ್ಲಿ ಪ್ರತಿರೋಧವನ್ನು ಮುಂದುವರೆಸಿವೆ. ಹಾಗೆಯೇ ವೀರ್ ಸಾವರ್ಕರ್ ಮತ್ತು ಒಬಿಸಿ ಸಮುದಾಯವನ್ನು ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಗಾಂಧಿ ಅವಮಾನಿಸಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಎನ್‌ಡಿಎ ಸಂಸದರು ವಾಗ್ದಾಳಿ ನಡೆಸುತ್ತಿದ್ದಾರೆ.

ಪ್ರತಿಪಕ್ಷ ಸದಸ್ಯರು ಸೋಮವಾರ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು ಮತ್ತು ಅದಾನಿ ವಿಷಯಕ್ಕೆ ಸಂಬಂಧಿಸಿದಂತೆ ಜೆಪಿಸಿಗಾಗಿ ಕೇಂದ್ರದ ವಿರುದ್ಧ ಸಂಸತ್ತಿನ ಸಂಕೀರ್ಣದಿಂದ ವಿಜಯ್ ಚೌಕ್‌ಗೆ ಮೆರವಣಿಗೆ ನಡೆಸಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅದಾನಿ ವಿಷಯ ಮತ್ತು ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಬಗ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿರುವುದನ್ನು ಜಗತ್ತಿಗೆ ತೋರಿಸಲು ವಿರೋಧ ಪಕ್ಷದ ನಾಯಕರು ಕಪ್ಪು ಬಟ್ಟೆ ಧರಿಸಿದ್ದಾರೆ ಎಂದು ಹೇಳಿದರು. ಸರ್ಕಾರದ ಮುಂದೆ ತಲೆಬಾಗದವರನ್ನು ಬಗ್ಗಿಸಲು ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡಿದೆ ಎಂದು ಖರ್ಗೆ ಆರೋಪಿಸಿದರು.

ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ನಾನು ವಿರೋಧ ಪಕ್ಷದ ನಾಯಕರಿಗೆ ಧನ್ಯವಾದ ಹೇಳುತ್ತೇನೆ. ಪ್ರಧಾನಿ ಮೋದಿ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸುತ್ತಿದ್ದಾರೆ ಎಂಬುದನ್ನು ಜಗತ್ತಿಗೆ ತೋರಿಸಲು ಬಯಸುತ್ತೇವೆ. ಅವರು ಮೊದಲು ಸ್ವಾಯತ್ತ ಸಂಸ್ಥೆಗಳನ್ನು ಮುಗಿಸಿದರು, ನಂತರ ಅವರು ತಮ್ಮದೇ ಆದ ಸರ್ಕಾರವನ್ನು ಸ್ಥಾಪಿಸಿದರು. ಎಲ್ಲೆಂದರಲ್ಲಿ ಚುನಾವಣೆಯಲ್ಲಿ ಗೆದ್ದವರಿಗೆ ಬೆದರಿಕೆ ಹಾಕಿದರು. ನಂತರ ತಮ್ಮ ಬೆದರಿಕೆಗೆ ಜಗ್ಗದವರನ್ನು ಬಗ್ಗಿಸಲು ಇಡಿ, ಸಿಬಿಐ ಬಳಸಿದರು ಎಂದು ಖರ್ಗೆ ಹೇಳಿದರು.

ಇದನ್ನೂ ಓದಿ : ಶಿಕ್ಷೆ ವಿಧಿಸಿದ್ದು ನ್ಯಾಯಾಲಯವೇ ಹೊರತು, ಮೋದಿ ಸರ್ಕಾರ ಅಲ್ಲ: ಸಚಿವೆ ಸ್ಮೃತಿ ಇರಾನಿ

ನವದೆಹಲಿ : ಪಕ್ಷದ ಮುಖಂಡರು ಪ್ರಬಲ ಹೋರಾಟಕ್ಕೆ ಸಿದ್ಧವಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರಿಗೆ ಕರೆ ನೀಡಿದ್ದಾರೆ. ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ, ಪಕ್ಷ ಎಷ್ಟು ಹೆಚ್ಚು ಎತ್ತರಕ್ಕೆ ಬೆಳೆಯುತ್ತದೆಯೋ ಪ್ರತಿಪಕ್ಷಗಳ ದಾಳಿ ಅಷ್ಟೇ ತೀವ್ರವಾಗುತ್ತದೆ ಎಂದು ಹೇಳಿದರು. ಇಲ್ಲಿನ ಸಂಸತ್‌ ಭವನದ ಸಂಕೀರ್ಣದಲ್ಲಿ ಇಂದು ಬೆಳಗ್ಗೆ ಬಿಜೆಪಿ ಸಂಸದೀಯ ಪಕ್ಷದ ಸಭೆ ನಡೆಯಿತು. ಅಧಿವೇಶನದ ಎರಡನೇ ಹಂತದಲ್ಲಿ ಇದೇ ಮೊದಲ ಬಾರಿಗೆ ಈ ಸಭೆ ನಡೆಯುತ್ತಿದೆ.

ಸಭೆಯ ಆರಂಭದಲ್ಲಿ, ಇತ್ತೀಚೆಗೆ ಮುಕ್ತಾಯಗೊಂಡ ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಮೂರು ದೊಡ್ಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರನ್ನು ಬಿಜೆಪಿ ಸಂಸದರು ಅಭಿನಂದಿಸಿದರು. ಸಮ್ಮಿಶ್ರ ಸರ್ಕಾರ ಹೊಂದಿರುವ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಪಕ್ಷದ ಗೆಲುವಿಗಾಗಿ ಪ್ರಧಾನಿ ಮೋದಿಯವರನ್ನು ಪಕ್ಷದ ನಾಯಕರು ಅಭಿನಂದಿಸಿದರು. ಬಿಜೆಪಿಯ ಯಶಸ್ಸು ಹೆಚ್ಚಾದಂತೆ ಎದುರಾಳಿಗಳ ಕಡೆಯಿಂದ ದಾಳಿಗಳು ಹೆಚ್ಚಾಗುತ್ತವೆ. ಹೀಗಾಗಿ ಎಲ್ಲರೂ ಪ್ರಬಲ ಹೋರಾಟಕ್ಕೆ ಸಿದ್ಧರಾಗಿರಬೇಕು ಎಂದು ಪ್ರಧಾನಿ ಹೇಳಿದರು.

ಅದಾನಿ ಹಿಂಡೆನ್‌ಬರ್ಗ್ ವಿಷಯಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಪ್ರತಿಪಕ್ಷಗಳು ಜೆಪಿಸಿ ಒತ್ತಾಯಿಸುವುದನ್ನು ಮುಂದುವರೆಸಿರುವ ಮಧ್ಯೆ ಪ್ರಧಾನಿ ಮೋದಿಯವರ ಈ ಹೇಳಿಕೆ ಗಮನಾರ್ಹ. ಪ್ರಧಾನಿಯನ್ನು ಅವಮಾನಿಸಿದ್ದಕ್ಕಾಗಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಏತನ್ಮಧ್ಯೆ ಬಿಜೆಪಿ ಒತ್ತಾಯಿಸಿದೆ. ಲೋಕಸಭೆಯ ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಆರೋಪಿಸಿರುವ ಪ್ರತಿಪಕ್ಷಗಳು ಈ ವಿಷಯದಲ್ಲಿ ಪ್ರತಿರೋಧವನ್ನು ಮುಂದುವರೆಸಿವೆ. ಹಾಗೆಯೇ ವೀರ್ ಸಾವರ್ಕರ್ ಮತ್ತು ಒಬಿಸಿ ಸಮುದಾಯವನ್ನು ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಗಾಂಧಿ ಅವಮಾನಿಸಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಎನ್‌ಡಿಎ ಸಂಸದರು ವಾಗ್ದಾಳಿ ನಡೆಸುತ್ತಿದ್ದಾರೆ.

ಪ್ರತಿಪಕ್ಷ ಸದಸ್ಯರು ಸೋಮವಾರ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು ಮತ್ತು ಅದಾನಿ ವಿಷಯಕ್ಕೆ ಸಂಬಂಧಿಸಿದಂತೆ ಜೆಪಿಸಿಗಾಗಿ ಕೇಂದ್ರದ ವಿರುದ್ಧ ಸಂಸತ್ತಿನ ಸಂಕೀರ್ಣದಿಂದ ವಿಜಯ್ ಚೌಕ್‌ಗೆ ಮೆರವಣಿಗೆ ನಡೆಸಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅದಾನಿ ವಿಷಯ ಮತ್ತು ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಬಗ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿರುವುದನ್ನು ಜಗತ್ತಿಗೆ ತೋರಿಸಲು ವಿರೋಧ ಪಕ್ಷದ ನಾಯಕರು ಕಪ್ಪು ಬಟ್ಟೆ ಧರಿಸಿದ್ದಾರೆ ಎಂದು ಹೇಳಿದರು. ಸರ್ಕಾರದ ಮುಂದೆ ತಲೆಬಾಗದವರನ್ನು ಬಗ್ಗಿಸಲು ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡಿದೆ ಎಂದು ಖರ್ಗೆ ಆರೋಪಿಸಿದರು.

ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ನಾನು ವಿರೋಧ ಪಕ್ಷದ ನಾಯಕರಿಗೆ ಧನ್ಯವಾದ ಹೇಳುತ್ತೇನೆ. ಪ್ರಧಾನಿ ಮೋದಿ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸುತ್ತಿದ್ದಾರೆ ಎಂಬುದನ್ನು ಜಗತ್ತಿಗೆ ತೋರಿಸಲು ಬಯಸುತ್ತೇವೆ. ಅವರು ಮೊದಲು ಸ್ವಾಯತ್ತ ಸಂಸ್ಥೆಗಳನ್ನು ಮುಗಿಸಿದರು, ನಂತರ ಅವರು ತಮ್ಮದೇ ಆದ ಸರ್ಕಾರವನ್ನು ಸ್ಥಾಪಿಸಿದರು. ಎಲ್ಲೆಂದರಲ್ಲಿ ಚುನಾವಣೆಯಲ್ಲಿ ಗೆದ್ದವರಿಗೆ ಬೆದರಿಕೆ ಹಾಕಿದರು. ನಂತರ ತಮ್ಮ ಬೆದರಿಕೆಗೆ ಜಗ್ಗದವರನ್ನು ಬಗ್ಗಿಸಲು ಇಡಿ, ಸಿಬಿಐ ಬಳಸಿದರು ಎಂದು ಖರ್ಗೆ ಹೇಳಿದರು.

ಇದನ್ನೂ ಓದಿ : ಶಿಕ್ಷೆ ವಿಧಿಸಿದ್ದು ನ್ಯಾಯಾಲಯವೇ ಹೊರತು, ಮೋದಿ ಸರ್ಕಾರ ಅಲ್ಲ: ಸಚಿವೆ ಸ್ಮೃತಿ ಇರಾನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.