ETV Bharat / bharat

ಬಿಯಾಂತ್ ಸಿಂಗ್ ಹತ್ಯೆ ಕೇಸ್​: ಅಪರಾಧಿ ಕ್ಷಮಾದಾನ ಪತ್ರ ಪ್ರಕ್ರಿಯೆ ಶುರು

author img

By

Published : Feb 12, 2021, 5:09 PM IST

ಪಂಜಾಬ್​ ಮಾಜಿ ಸಿಎಂ ಬಿಯಾಂತ್ ಸಿಂಗ್ ಹತ್ಯೆ ಅಪರಾಧಿ ಬಲ್ವಂತ್ ಸಿಂಗ್ ರಾಜೋನಾ ಪರವಾಗಿ ಸಲ್ಲಿಸಲಾದ ಕರುಣೆ ಅರ್ಜಿಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

Balwant Singh Rajaona
ಅಪರಾಧಿ ಬಲ್ವಂತ್ ಸಿಂಗ್ ರಾಜೋವಾನಾ

ನವದೆಹಲಿ: 1995ರಲ್ಲಿ ಅಂದಿನ ಪಂಜಾಬ್ ಮುಖ್ಯಮಂತ್ರಿ ಬಿಯಾಂತ್​ ಸಿಂಗ್ ಅವರ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಬಲ್ವಂತ್ ಸಿಂಗ್ ರಾಜೋನಾ ಪರವಾಗಿ ಸಲ್ಲಿಸಲಾದ ಕ್ಷಮಾದಾನ ಅರ್ಜಿಯನ್ನು ಪರಿಶೀಲಿಸುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

"ಪ್ರಕ್ರಿಯೆ ಪ್ರಾರಂಭವಾಗಿದೆ. ಭಾರತದ ರಾಷ್ಟ್ರಪತಿಗಳು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಖಲಿಸ್ತಾನ್ ವಿಷಯದ ಬಗ್ಗೆ ಪಂಜಾಬ್ ಮಾಜಿ ಮುಖ್ಯಮಂತ್ರಿಯನ್ನು ಹತ್ಯೆ ಮಾಡಿದ ಆರೋಪವನ್ನು ಬಲ್ವಂತ್ ಸಿಂಗ್ ರಾಜೋನಾ ಹೊಂದಿದ್ದಾರೆ" ಎಂದು ಸರ್ಕಾರದ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ತಿಳಿಸಿದರು.

ಆ ನಂತರ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠವು ಆರು ವಾರಗಳ ಕಾಲಾವಕಾಶವನ್ನು ನೀಡಿದೆ. 'ಪ್ರಸ್ತುತ ಪರಿಸ್ಥಿತಿಗಳಲ್ಲಿ' ಕರುಣೆ ಮನವಿಗೆ ಸಂಬಂಧಿಸಿದಂತೆ ರಾಷ್ಟ್ರಪತಿಗಳ ನಿರ್ಧಾರಕ್ಕಾಗಿ ಕಾಯಬೇಕೆಂದು ಸಾಲಿಸಿಟರ್ ಜನರಲ್ ಕೋರಿದ ನಂತರ ರಾಜೋನಾ ಅವರ ಮರಣದಂಡನೆಯನ್ನು ರದ್ದುಗೊಳಿಸುವ ಮನವಿಯ ವಿಚಾರಣೆಯನ್ನು ಆರು ವಾರಗಳವರೆಗೆ ನ್ಯಾಯಪೀಠ ಮುಂದೂಡಿದೆ.

ಇದನ್ನು ಓದಿ: ಮೇವು ಹಗರಣ: ಲಾಲೂ ಜಾಮೀನು ಅರ್ಜಿ ವಿಚಾರಣೆ ಫೆ.19ಕ್ಕೆ ಮುಂದೂಡಿಕೆ

ಆಗಸ್ಟ್ 31, 1995ರಂದು ಚಂಡೀಗಢದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಮೃತಪಟ್ಟಿದ್ದರು. ಇದು ಹತ್ಯೆ ಎಂದು ಸಾಬೀತಾದ ಬಳಿಕ ಅಪರಾಧಿ ಬಲ್ವಂತ್ ಸಿಂಗ್ ರಾಜೋನಾ ಅವರಿಗೆ ಚಂಡೀಗಢ ನ್ಯಾಯಾಲಯವು ಜುಲೈ 27, 2007ರಂದು ಮರಣದಂಡನೆ ವಿಧಿಸಿತ್ತು.

ಗುರುನಾನಕ್ ದೇವ್ ಅವರ 550ನೇ ಜನ್ಮ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ ರಾಜೋನಾ ಅವರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲು ಕೇಂದ್ರವು ಸೆಪ್ಟೆಂಬರ್ 27, 2019ರಂದು ನಿರ್ಧರಿಸಿತು. ಸುಮಾರು ಒಂದು ವರ್ಷ ಕಳೆದರೂ ನಿರ್ಧಾರ ಇನ್ನೂ ಜಾರಿಗೆ ಬರಬೇಕಿದೆ. ಈಗ, ಎಂಟು ವರ್ಷಗಳ ಹಿಂದೆ ಸಲ್ಲಿಸಿದ ಅವರ ಕರುಣೆ ಅರ್ಜಿಯನ್ನು ಕೇಂದ್ರ ಸರ್ಕಾರ ನಿರ್ಧರಿಸುವಲ್ಲಿ ವಿಫಲವಾದ ಕಾರಣ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ಕೋರಿ ಅವರು ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ.

ನವದೆಹಲಿ: 1995ರಲ್ಲಿ ಅಂದಿನ ಪಂಜಾಬ್ ಮುಖ್ಯಮಂತ್ರಿ ಬಿಯಾಂತ್​ ಸಿಂಗ್ ಅವರ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಬಲ್ವಂತ್ ಸಿಂಗ್ ರಾಜೋನಾ ಪರವಾಗಿ ಸಲ್ಲಿಸಲಾದ ಕ್ಷಮಾದಾನ ಅರ್ಜಿಯನ್ನು ಪರಿಶೀಲಿಸುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

"ಪ್ರಕ್ರಿಯೆ ಪ್ರಾರಂಭವಾಗಿದೆ. ಭಾರತದ ರಾಷ್ಟ್ರಪತಿಗಳು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಖಲಿಸ್ತಾನ್ ವಿಷಯದ ಬಗ್ಗೆ ಪಂಜಾಬ್ ಮಾಜಿ ಮುಖ್ಯಮಂತ್ರಿಯನ್ನು ಹತ್ಯೆ ಮಾಡಿದ ಆರೋಪವನ್ನು ಬಲ್ವಂತ್ ಸಿಂಗ್ ರಾಜೋನಾ ಹೊಂದಿದ್ದಾರೆ" ಎಂದು ಸರ್ಕಾರದ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ತಿಳಿಸಿದರು.

ಆ ನಂತರ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠವು ಆರು ವಾರಗಳ ಕಾಲಾವಕಾಶವನ್ನು ನೀಡಿದೆ. 'ಪ್ರಸ್ತುತ ಪರಿಸ್ಥಿತಿಗಳಲ್ಲಿ' ಕರುಣೆ ಮನವಿಗೆ ಸಂಬಂಧಿಸಿದಂತೆ ರಾಷ್ಟ್ರಪತಿಗಳ ನಿರ್ಧಾರಕ್ಕಾಗಿ ಕಾಯಬೇಕೆಂದು ಸಾಲಿಸಿಟರ್ ಜನರಲ್ ಕೋರಿದ ನಂತರ ರಾಜೋನಾ ಅವರ ಮರಣದಂಡನೆಯನ್ನು ರದ್ದುಗೊಳಿಸುವ ಮನವಿಯ ವಿಚಾರಣೆಯನ್ನು ಆರು ವಾರಗಳವರೆಗೆ ನ್ಯಾಯಪೀಠ ಮುಂದೂಡಿದೆ.

ಇದನ್ನು ಓದಿ: ಮೇವು ಹಗರಣ: ಲಾಲೂ ಜಾಮೀನು ಅರ್ಜಿ ವಿಚಾರಣೆ ಫೆ.19ಕ್ಕೆ ಮುಂದೂಡಿಕೆ

ಆಗಸ್ಟ್ 31, 1995ರಂದು ಚಂಡೀಗಢದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಮೃತಪಟ್ಟಿದ್ದರು. ಇದು ಹತ್ಯೆ ಎಂದು ಸಾಬೀತಾದ ಬಳಿಕ ಅಪರಾಧಿ ಬಲ್ವಂತ್ ಸಿಂಗ್ ರಾಜೋನಾ ಅವರಿಗೆ ಚಂಡೀಗಢ ನ್ಯಾಯಾಲಯವು ಜುಲೈ 27, 2007ರಂದು ಮರಣದಂಡನೆ ವಿಧಿಸಿತ್ತು.

ಗುರುನಾನಕ್ ದೇವ್ ಅವರ 550ನೇ ಜನ್ಮ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ ರಾಜೋನಾ ಅವರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲು ಕೇಂದ್ರವು ಸೆಪ್ಟೆಂಬರ್ 27, 2019ರಂದು ನಿರ್ಧರಿಸಿತು. ಸುಮಾರು ಒಂದು ವರ್ಷ ಕಳೆದರೂ ನಿರ್ಧಾರ ಇನ್ನೂ ಜಾರಿಗೆ ಬರಬೇಕಿದೆ. ಈಗ, ಎಂಟು ವರ್ಷಗಳ ಹಿಂದೆ ಸಲ್ಲಿಸಿದ ಅವರ ಕರುಣೆ ಅರ್ಜಿಯನ್ನು ಕೇಂದ್ರ ಸರ್ಕಾರ ನಿರ್ಧರಿಸುವಲ್ಲಿ ವಿಫಲವಾದ ಕಾರಣ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ಕೋರಿ ಅವರು ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.