ETV Bharat / bharat

ಪಂಜಾಬ್ ಅಧಿಕಾರಿಗಳೊಂದಿಗೆ ಕೇಜ್ರಿವಾಲ್​ ಸಭೆ: ಸಿಎಂ ಭಗವಂತ್ ಮಾನ್ ಸಮರ್ಥನೆ ಹೀಗಿದೆ..

ಪಂಜಾಬ್ ರಾಜ್ಯದ ಅಧಿಕಾರಿಗಳೊಂದಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಭೆ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಭಗವಂತ್ ಮಾನ್ ಪ್ರತಿಕ್ರಿಯೆ ನೀಡಿದ್ದಾರೆ.

author img

By

Published : Apr 14, 2022, 3:11 PM IST

Bhagwant Mann reaction
Bhagwant Mann reaction

ಚಂಡೀಗಢ(ಪಂಜಾಬ್​): ಕಳೆದೆರಡು ದಿನಗಳ ಹಿಂದೆ ಪಂಜಾಬ್​ ವಿದ್ಯುತ್ ಇಲಾಖೆ ಅಧಿಕಾರಿಗಳೊಂದಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಸಭೆ ನಡೆಸಿದ್ದು, ಇದಕ್ಕೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ವಿಷಯದ ಬಗ್ಗ ಇದೀಗ ಪಂಜಾಬ್​ ಸಿಎಂ ಭಗವಂತ್ ಮಾನ್ ಮಾತನಾಡಿದ್ದಾರೆ.

ನಾನೇ ಖುದ್ದಾಗಿ ಅರವಿಂದ್ ಕೇಜ್ರಿವಾಲ್ ಬಳಿ ನಮ್ಮ ಅಧಿಕಾರಿಗಳನ್ನು ಕಳುಹಿಸಿದ್ದೆ ಎಂದು ಹೇಳಿರುವ ಮಾನ್, ಅಗತ್ಯಬಿದ್ದರೆ ತರಬೇತಿಗಾಗಿ ಅಧಿಕಾರಿಗಳನ್ನು ಗುಜರಾತ್​, ಆಂಧ್ರಪ್ರದೇಶ, ತಮಿಳುನಾಡು ಮತ್ತು ಇಸ್ರೇಲ್​​ಗೂ ಕಳುಹಿಸುತ್ತೇನೆ. ಇದಕ್ಕೆ ಇತರರು ಆಕ್ಷೇಪ ಮಾಡುವ ಅಗತ್ಯವಿಲ್ಲ ಎಂದರು. ಅರವಿಂದ್ ಕೇಜ್ರಿವಾಲ್ ಶಿಕ್ಷಣ, ಆರೋಗ್ಯ ಸೇರಿದಂತೆ ಅನೇಕ ವಿಷಯಗಳಲ್ಲಿ ಪರಿಣಿತರಾಗಿದ್ದಾರೆ. ಹಾಗಾಗಿ, ಅವರ ಬಳಿ ತರಬೇತಿಗೆ ಏಕೆ ಕಳುಹಿಸಬಾರದು ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಮಾಜಿ ಶಾಸಕನ ಮಗಳು ನೇಣಿಗೆ ಶರಣು.. ಎಂಬಿಬಿಎಸ್ ವಿದ್ಯಾರ್ಥಿನಿಯ ಸಾವಿನ ಕಾರಣ ನಿಗೂಢ!

ವಿವಾದವೇನು? ಕಳೆದೆರಡು ದಿನಗಳ ಹಿಂದೆ ಪಂಜಾಬ್​​ನ ವಿದ್ಯುತ್​ ಇಲಾಖೆ ಅಧಿಕಾರಿಗಳೊಂದಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಸಭೆ ನಡೆಸಿದ್ದರು. ಇದಕ್ಕೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್​​ ಗೈರು ಹಾಜರಾಗಿರುವುದು ಚರ್ಚೆಗೆ ಕಾರಣವಾಗಿತ್ತು. ಎಎಪಿ ಮುಖ್ಯಸ್ಥರ ನಡೆಯ ವಿರುದ್ಧ ಪಂಜಾಬ್​, ದೆಹಲಿ ಕಾಂಗ್ರೆಸ್​​ ಸೇರಿದಂತೆ ವಿವಿಧೆಡೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಪಂಜಾಬ್​​ ಸರ್ಕಾರ ಎಎಪಿ ಪಕ್ಷದ ಮುಖ್ಯಸ್ಥರ ರಿಮೋಟ್ ಕಂಟ್ರೋಲ್​​ ಆಗಿದೆ ಎಂದು ವಾಗ್ದಾಳಿ ನಡೆಸಲಾಗಿತ್ತು.

ಇದನ್ನೂ ಓದಿ: ಪಂಜಾಬ್​ ಅಧಿಕಾರಿಗಳೊಂದಿಗೆ ದೆಹಲಿ ಸಿಎಂ ಸಭೆ; ವಿವಾದಕ್ಕೆ ಕಾರಣವಾದ ಕೇಜ್ರಿವಾಲ್​ ನಡೆ

ಚಂಡೀಗಢ(ಪಂಜಾಬ್​): ಕಳೆದೆರಡು ದಿನಗಳ ಹಿಂದೆ ಪಂಜಾಬ್​ ವಿದ್ಯುತ್ ಇಲಾಖೆ ಅಧಿಕಾರಿಗಳೊಂದಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಸಭೆ ನಡೆಸಿದ್ದು, ಇದಕ್ಕೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ವಿಷಯದ ಬಗ್ಗ ಇದೀಗ ಪಂಜಾಬ್​ ಸಿಎಂ ಭಗವಂತ್ ಮಾನ್ ಮಾತನಾಡಿದ್ದಾರೆ.

ನಾನೇ ಖುದ್ದಾಗಿ ಅರವಿಂದ್ ಕೇಜ್ರಿವಾಲ್ ಬಳಿ ನಮ್ಮ ಅಧಿಕಾರಿಗಳನ್ನು ಕಳುಹಿಸಿದ್ದೆ ಎಂದು ಹೇಳಿರುವ ಮಾನ್, ಅಗತ್ಯಬಿದ್ದರೆ ತರಬೇತಿಗಾಗಿ ಅಧಿಕಾರಿಗಳನ್ನು ಗುಜರಾತ್​, ಆಂಧ್ರಪ್ರದೇಶ, ತಮಿಳುನಾಡು ಮತ್ತು ಇಸ್ರೇಲ್​​ಗೂ ಕಳುಹಿಸುತ್ತೇನೆ. ಇದಕ್ಕೆ ಇತರರು ಆಕ್ಷೇಪ ಮಾಡುವ ಅಗತ್ಯವಿಲ್ಲ ಎಂದರು. ಅರವಿಂದ್ ಕೇಜ್ರಿವಾಲ್ ಶಿಕ್ಷಣ, ಆರೋಗ್ಯ ಸೇರಿದಂತೆ ಅನೇಕ ವಿಷಯಗಳಲ್ಲಿ ಪರಿಣಿತರಾಗಿದ್ದಾರೆ. ಹಾಗಾಗಿ, ಅವರ ಬಳಿ ತರಬೇತಿಗೆ ಏಕೆ ಕಳುಹಿಸಬಾರದು ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಮಾಜಿ ಶಾಸಕನ ಮಗಳು ನೇಣಿಗೆ ಶರಣು.. ಎಂಬಿಬಿಎಸ್ ವಿದ್ಯಾರ್ಥಿನಿಯ ಸಾವಿನ ಕಾರಣ ನಿಗೂಢ!

ವಿವಾದವೇನು? ಕಳೆದೆರಡು ದಿನಗಳ ಹಿಂದೆ ಪಂಜಾಬ್​​ನ ವಿದ್ಯುತ್​ ಇಲಾಖೆ ಅಧಿಕಾರಿಗಳೊಂದಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಸಭೆ ನಡೆಸಿದ್ದರು. ಇದಕ್ಕೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್​​ ಗೈರು ಹಾಜರಾಗಿರುವುದು ಚರ್ಚೆಗೆ ಕಾರಣವಾಗಿತ್ತು. ಎಎಪಿ ಮುಖ್ಯಸ್ಥರ ನಡೆಯ ವಿರುದ್ಧ ಪಂಜಾಬ್​, ದೆಹಲಿ ಕಾಂಗ್ರೆಸ್​​ ಸೇರಿದಂತೆ ವಿವಿಧೆಡೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಪಂಜಾಬ್​​ ಸರ್ಕಾರ ಎಎಪಿ ಪಕ್ಷದ ಮುಖ್ಯಸ್ಥರ ರಿಮೋಟ್ ಕಂಟ್ರೋಲ್​​ ಆಗಿದೆ ಎಂದು ವಾಗ್ದಾಳಿ ನಡೆಸಲಾಗಿತ್ತು.

ಇದನ್ನೂ ಓದಿ: ಪಂಜಾಬ್​ ಅಧಿಕಾರಿಗಳೊಂದಿಗೆ ದೆಹಲಿ ಸಿಎಂ ಸಭೆ; ವಿವಾದಕ್ಕೆ ಕಾರಣವಾದ ಕೇಜ್ರಿವಾಲ್​ ನಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.