ETV Bharat / bharat

ತಬ್ಲಿಘಿ ಜಮಾತ್​ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 107 ವಿದೇಶಿಯರು ಜೈಲಿಗೆ

author img

By

Published : May 19, 2020, 2:39 PM IST

ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾತ್​ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ನೇಪಾಳ, ಫಿಲಿಪ್ಪೀನ್ಸ್​, ಶ್ರೀಲಂಕಾ, ಬಾಂಗ್ಲಾದೇಶ, ಇಂಡೋನೇಷ್ಯಾ ಮತ್ತು ತಾಯ್ಲೆಂಡ್​ ಮೂಲದವರನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಹೇಳಿದ್ದಾರೆ.

107 foreign nationals attended religious congregation sent to jail; Haryana Home Minister
ತಬ್ಲೀಗ್ ಜಮಾಅತ್​ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದೇಶಿಯರು ಜೈಲಿಗೆ

ಚಂಡೀಗಢ (ಹರಿಯಾಣ) : ನವದೆಹಲಿಯ ತಬ್ಲಿಘಿ​ ಜಮಾತ್​ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 107 ವಿದೇಶಿ ಪ್ರಜೆಗಳನ್ನು ಸೋಮವಾರ ಜೈಲಿಗೆ ಕಳುಹಿಸಲಾಗಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಹೇಳಿದ್ದಾರೆ.

ಮಾರ್ಚ್ 12 ರಿಂದ 15ರ ವರೆಗೆ ನವದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾತ್​ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ನೇಪಾಳ, ಫಿಲಿಪ್ಪೀನ್ಸ್​, ಶ್ರೀಲಂಕಾ, ಬಾಂಗ್ಲಾದೇಶ, ಇಂಡೋನೇಷ್ಯಾ ಮತ್ತು ತಾಯ್ಲೆಂಡ್​ ಮೂಲದವರನ್ನು ಜೈಲಿಗೆ ಕಳುಹಿಸಲಾಗಿದೆ. ಕಾನೂನಿನ ಪ್ರಕಾರ ಶಿಕ್ಷೆಯ ಅವಧಿ ಮುಗಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

ಇನ್ನು ವಲಸೆ ಕಾರ್ಮಿಕರ ಬಗ್ಗೆ ಮಾತನಾಡಿದ ಸಚಿವ ಅನಿಲ್ ವಿಜ್, ವಲಸೆ ಕಾರ್ಮಿಕರ ಮೇಲೆ ಲಾಠಿ ಚಾರ್ಜ್​ ಮಾಡದಂತೆ ರಾಜ್ಯ ಡಿಜಿಪಿ ಮನೋಜ್ ಯಾದವ್​ ಅವರಿಗೆ ಸೂಚಿಸಿದ್ದೇನೆ. ಯುಮುನಾ ನಗರದಂತ ಘಟನೆಗಳು ನಡೆದು ಕಾರ್ಮಿಕರನ್ನು ನಿಯಂತ್ರಿಸಲು ಸಾಧ್ಯವಾಗದಿದ್ದರೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಹೇಳಿದ್ದಾರೆ.

ಪಂಜಾಬ್ ಮತ್ತು ಹರಿಯಾಣದಿಂದ ಉತ್ತರ ಪ್ರದೇಶದ ಕಡೆಗೆ ಕಾಲ್ನಡಿಗೆ ಮತ್ತು ಸೈಕಲ್‌ಗಳಲ್ಲಿ ತೆರಳುತ್ತಿದ್ದ ವಲಸೆ ಕಾರ್ಮಿಕರನ್ನು ಚದುರಿಸಲು ಯಮುನಾನಗರ ಪೊಲೀಸರು ಶನಿವಾರ ಲಾಠಿ ಚಾರ್ಜ್ ನಡೆಸಿದ್ದರು.

ಚಂಡೀಗಢ (ಹರಿಯಾಣ) : ನವದೆಹಲಿಯ ತಬ್ಲಿಘಿ​ ಜಮಾತ್​ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 107 ವಿದೇಶಿ ಪ್ರಜೆಗಳನ್ನು ಸೋಮವಾರ ಜೈಲಿಗೆ ಕಳುಹಿಸಲಾಗಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಹೇಳಿದ್ದಾರೆ.

ಮಾರ್ಚ್ 12 ರಿಂದ 15ರ ವರೆಗೆ ನವದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾತ್​ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ನೇಪಾಳ, ಫಿಲಿಪ್ಪೀನ್ಸ್​, ಶ್ರೀಲಂಕಾ, ಬಾಂಗ್ಲಾದೇಶ, ಇಂಡೋನೇಷ್ಯಾ ಮತ್ತು ತಾಯ್ಲೆಂಡ್​ ಮೂಲದವರನ್ನು ಜೈಲಿಗೆ ಕಳುಹಿಸಲಾಗಿದೆ. ಕಾನೂನಿನ ಪ್ರಕಾರ ಶಿಕ್ಷೆಯ ಅವಧಿ ಮುಗಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

ಇನ್ನು ವಲಸೆ ಕಾರ್ಮಿಕರ ಬಗ್ಗೆ ಮಾತನಾಡಿದ ಸಚಿವ ಅನಿಲ್ ವಿಜ್, ವಲಸೆ ಕಾರ್ಮಿಕರ ಮೇಲೆ ಲಾಠಿ ಚಾರ್ಜ್​ ಮಾಡದಂತೆ ರಾಜ್ಯ ಡಿಜಿಪಿ ಮನೋಜ್ ಯಾದವ್​ ಅವರಿಗೆ ಸೂಚಿಸಿದ್ದೇನೆ. ಯುಮುನಾ ನಗರದಂತ ಘಟನೆಗಳು ನಡೆದು ಕಾರ್ಮಿಕರನ್ನು ನಿಯಂತ್ರಿಸಲು ಸಾಧ್ಯವಾಗದಿದ್ದರೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಹೇಳಿದ್ದಾರೆ.

ಪಂಜಾಬ್ ಮತ್ತು ಹರಿಯಾಣದಿಂದ ಉತ್ತರ ಪ್ರದೇಶದ ಕಡೆಗೆ ಕಾಲ್ನಡಿಗೆ ಮತ್ತು ಸೈಕಲ್‌ಗಳಲ್ಲಿ ತೆರಳುತ್ತಿದ್ದ ವಲಸೆ ಕಾರ್ಮಿಕರನ್ನು ಚದುರಿಸಲು ಯಮುನಾನಗರ ಪೊಲೀಸರು ಶನಿವಾರ ಲಾಠಿ ಚಾರ್ಜ್ ನಡೆಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.