ETV Bharat / bharat

ಬೆಂಗಳೂರಿನಿಂದ ಕೇರಳಕ್ಕೆ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್​ ಅಪಘಾತ: 20 ಮಂದಿ ಸಾವು

author img

By

Published : Feb 20, 2020, 7:54 AM IST

Updated : Feb 20, 2020, 1:27 PM IST

ಬೆಂಗಳೂರಿನಿಂದ ಎರ್ನಾಕುಲಂಗೆ ಹೊರಟಿದ್ದ ಕೇರಳ ರಾಜ್ಯ ಸಾರಿಗೆ ಬಸ್​​ವೊಂದು ತಿರ್ಪೂರ್​ ಜಿಲ್ಲೆಯ ಅವಿನಾಶಿ ಪಟ್ಟಣದ ಬಳಿ ಟ್ರಕ್​ಗೆ ಗುದ್ದಿದ ಪರಿಣಾಮ ಭಾರಿ ಪ್ರಮಾಣದ ಸಾವು ನೋವು ಸಂಭವಿಸಿದೆ.

thiruppur bus and container lorry accident
ಕೆಎಸ್​ಆರ್​ಟಿಸಿ ಬಸ್​ ಅಪಘಾತ

ತಿರ್ಪೂರ್: ಬೆಂಗಳೂರಿನಿಂದ ಕೇರಳದ ಎರ್ನಾಕುಲಂಗೆ ಹೊರಟಿದ್ದ ಕೇರಳ ರಾಜ್ಯ ಸಾರಿಗೆ ಬಸ್​​ವೊಂದು ತಿರ್ಪೂರ್​ ಜಿಲ್ಲೆಯ ಅವಿನಾಶಿ ಪಟ್ಟಣದ ಬಳಿ ಟ್ರಕ್​ಗೆ ಗುದ್ದಿದ ಪರಿಣಾಮ 20 ಮಂದಿ ಸಾವಿಗೀಡಾಗಿದ್ದಾರೆ.

ಬೆಂಗಳೂರಿನಿಂದ ಕೇರಳಕ್ಕೆ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್​ ಅಪಘಾತ: 20 ಮಂದಿ ಸಾವು

ಇಂದು ನಸುಕಿನ ಜಾವ 3 ಗಂಟೆಗೆ ದುರ್ಘಟನೆ ಸಂಭವಿಸಿದ್ದು, ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್​ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಅಪಘಾತ ಸಂಭವಿಸಿದ ಬೆನ್ನಿಗೇ ಲಾರಿ ಡ್ರೈವರ್ ಸ್ಥಳದಿಂದ ಪರಾರಿಯಾಗಿದ್ದು, ಘಟನೆಯಲ್ಲಿ ಕ್ಲೀನರ್​ ಸಾವಿಗೀಡಾಗಿದ್ದಾನೆ ಎಂದು ತಿಳಿದುಬಂದಿದೆ.

ಜಿಲ್ಲಾಧಿಕಾರಿ ವಿಜಯ ಕಾರ್ತಿಕೇಯನ್​ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಕೇರಳ ಸರ್ಕಾರಕ್ಕೆ ಸಾವಿಗೀಡಾದವರ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

ಘಟನೆಯಲ್ಲಿ 31 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಕೊಯಮತ್ತೂರು ಮೆಡಿಕಲ್​ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ತಿರ್ಪೂರ್‌ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ವಿವರವನ್ನು ನಿರೀಕ್ಷಿಸಲಾಗುತ್ತಿದೆ.

ಕೇರಳ ಸಿಎಂ ಪರಿಹಾರದ ಭರವಸೆ...

  • Chief Minister's Office (CMO) Kerala on bus-truck collision in Tamil Nadu's Tirupur dist: CM Pinarayi Vijayan has instructed Dist Collector of Palakkad to provide emergency medical care to the victims of the accident. Procedures to identify the deceased are in progress.(file pic) pic.twitter.com/e8RHfuAy1D

    — ANI (@ANI) February 20, 2020 " class="align-text-top noRightClick twitterSection" data=" ">

ಕೇರಳದ ಸಾರಿಗೆ ಬಸ್‌ ತಮಿಳುನಾಡಿನಲ್ಲಿ ಅಪಘಾತಕ್ಕೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸಿಎಂ ಪಿಣರಾಯಿ ವಿಜಯನ್​ ಪ್ರತಿಕ್ರಿಯೆ ನೀಡಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲು ಪಲಕ್ಕಾಡ್‌ ಡಿಸಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಎಲ್ಲ ಪರಿಹಾರ ಕ್ರಮಗಳನ್ನು ತಮಿಳುನಾಡು ಸರ್ಕಾರ ಮತ್ತು ತಿರ್ಪೂರ್ ಜಿಲ್ಲಾಧಿಕಾರಿಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು ಎಂದಿದ್ದಾರೆ.

ತಿರ್ಪೂರ್: ಬೆಂಗಳೂರಿನಿಂದ ಕೇರಳದ ಎರ್ನಾಕುಲಂಗೆ ಹೊರಟಿದ್ದ ಕೇರಳ ರಾಜ್ಯ ಸಾರಿಗೆ ಬಸ್​​ವೊಂದು ತಿರ್ಪೂರ್​ ಜಿಲ್ಲೆಯ ಅವಿನಾಶಿ ಪಟ್ಟಣದ ಬಳಿ ಟ್ರಕ್​ಗೆ ಗುದ್ದಿದ ಪರಿಣಾಮ 20 ಮಂದಿ ಸಾವಿಗೀಡಾಗಿದ್ದಾರೆ.

ಬೆಂಗಳೂರಿನಿಂದ ಕೇರಳಕ್ಕೆ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್​ ಅಪಘಾತ: 20 ಮಂದಿ ಸಾವು

ಇಂದು ನಸುಕಿನ ಜಾವ 3 ಗಂಟೆಗೆ ದುರ್ಘಟನೆ ಸಂಭವಿಸಿದ್ದು, ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್​ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಅಪಘಾತ ಸಂಭವಿಸಿದ ಬೆನ್ನಿಗೇ ಲಾರಿ ಡ್ರೈವರ್ ಸ್ಥಳದಿಂದ ಪರಾರಿಯಾಗಿದ್ದು, ಘಟನೆಯಲ್ಲಿ ಕ್ಲೀನರ್​ ಸಾವಿಗೀಡಾಗಿದ್ದಾನೆ ಎಂದು ತಿಳಿದುಬಂದಿದೆ.

ಜಿಲ್ಲಾಧಿಕಾರಿ ವಿಜಯ ಕಾರ್ತಿಕೇಯನ್​ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಕೇರಳ ಸರ್ಕಾರಕ್ಕೆ ಸಾವಿಗೀಡಾದವರ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

ಘಟನೆಯಲ್ಲಿ 31 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಕೊಯಮತ್ತೂರು ಮೆಡಿಕಲ್​ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ತಿರ್ಪೂರ್‌ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ವಿವರವನ್ನು ನಿರೀಕ್ಷಿಸಲಾಗುತ್ತಿದೆ.

ಕೇರಳ ಸಿಎಂ ಪರಿಹಾರದ ಭರವಸೆ...

  • Chief Minister's Office (CMO) Kerala on bus-truck collision in Tamil Nadu's Tirupur dist: CM Pinarayi Vijayan has instructed Dist Collector of Palakkad to provide emergency medical care to the victims of the accident. Procedures to identify the deceased are in progress.(file pic) pic.twitter.com/e8RHfuAy1D

    — ANI (@ANI) February 20, 2020 " class="align-text-top noRightClick twitterSection" data=" ">

ಕೇರಳದ ಸಾರಿಗೆ ಬಸ್‌ ತಮಿಳುನಾಡಿನಲ್ಲಿ ಅಪಘಾತಕ್ಕೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸಿಎಂ ಪಿಣರಾಯಿ ವಿಜಯನ್​ ಪ್ರತಿಕ್ರಿಯೆ ನೀಡಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲು ಪಲಕ್ಕಾಡ್‌ ಡಿಸಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಎಲ್ಲ ಪರಿಹಾರ ಕ್ರಮಗಳನ್ನು ತಮಿಳುನಾಡು ಸರ್ಕಾರ ಮತ್ತು ತಿರ್ಪೂರ್ ಜಿಲ್ಲಾಧಿಕಾರಿಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು ಎಂದಿದ್ದಾರೆ.

Last Updated : Feb 20, 2020, 1:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.