ETV Bharat / bharat

ಬಿಹಾರದಲ್ಲಿ ಸಿಡಿಲು ಬಡಿದು 18 ಮಂದಿ ಸಾವು... 4 ಲಕ್ಷ ರೂ. ಪರಿಹಾರ ಘೋಷಣೆ

author img

By

Published : Sep 16, 2020, 4:31 AM IST

ಬಿಹಾರದ 10 ಜಿಲ್ಲೆಗಳಲ್ಲಿ ಸಿಡಿಲು ಬಡಿದು ಬರೋಬ್ಬರಿ 18 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

18 persons killed in lightning
18 persons killed in lightning

ಪಾಟ್ನಾ(ಬಿಹಾರ): ಸಿಡಿಲು ಬಡಿದು 18 ಮಂದಿ ಒಂದೇ ದಿನ ಸಾವನ್ನಪ್ಪಿರುವ ಘಟನೆ ಬಿಹಾರದ ವಿವಿಧ ಜಿಲ್ಲೆಗಳಲ್ಲಿ ನಡೆದಿದ್ದು, ಮುಖ್ಯಮಂತ್ರಿ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

10 ಜಿಲ್ಲೆಗಳಲ್ಲಿ ಕೇವಲ 24 ಗಂಟೆಗಳಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅವರ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯಿಂದ 4 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ.

ಸಿಡಿಲು ಬಡಿದು ಒಂದೇ ಕುಟುಂಬದ ಆರು ಮಂದಿ ಸಾವು, ನಾಲ್ವರ ಸ್ಥಿತಿ ಗಂಭೀರ!

ಕಳೆದ ಕೆಲ ದಿನಗಳ ಹಿಂದೆ ಕೆಲವರು ಸಿಡಿಲು ಬಡಿದು ಸಾವನ್ನಪ್ಪಿದ್ದರು. ಈ ವೇಳೆ ಮುಖ್ಯಮಂತ್ರಿ ನಿತೀಶ್​ ಕುಮಾರ್​​ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು. ಬಿಹಾರದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಇನ್ನು ಕಳೆದು ತಿಂಗಳು ಮಧ್ಯಪ್ರದೇಶದಲ್ಲಿ ಒಂದೇ ಕುಟುಂಬದ 6 ಮಂದಿ ಸಿಡಿಲು ಬಡಿದು ದುರ್ಮರಣಕ್ಕೀಡಾಗಿದ್ದರು.

ಪಾಟ್ನಾ(ಬಿಹಾರ): ಸಿಡಿಲು ಬಡಿದು 18 ಮಂದಿ ಒಂದೇ ದಿನ ಸಾವನ್ನಪ್ಪಿರುವ ಘಟನೆ ಬಿಹಾರದ ವಿವಿಧ ಜಿಲ್ಲೆಗಳಲ್ಲಿ ನಡೆದಿದ್ದು, ಮುಖ್ಯಮಂತ್ರಿ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

10 ಜಿಲ್ಲೆಗಳಲ್ಲಿ ಕೇವಲ 24 ಗಂಟೆಗಳಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅವರ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯಿಂದ 4 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ.

ಸಿಡಿಲು ಬಡಿದು ಒಂದೇ ಕುಟುಂಬದ ಆರು ಮಂದಿ ಸಾವು, ನಾಲ್ವರ ಸ್ಥಿತಿ ಗಂಭೀರ!

ಕಳೆದ ಕೆಲ ದಿನಗಳ ಹಿಂದೆ ಕೆಲವರು ಸಿಡಿಲು ಬಡಿದು ಸಾವನ್ನಪ್ಪಿದ್ದರು. ಈ ವೇಳೆ ಮುಖ್ಯಮಂತ್ರಿ ನಿತೀಶ್​ ಕುಮಾರ್​​ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು. ಬಿಹಾರದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಇನ್ನು ಕಳೆದು ತಿಂಗಳು ಮಧ್ಯಪ್ರದೇಶದಲ್ಲಿ ಒಂದೇ ಕುಟುಂಬದ 6 ಮಂದಿ ಸಿಡಿಲು ಬಡಿದು ದುರ್ಮರಣಕ್ಕೀಡಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.