ನವದೆಹಲಿ: ರಬ್ಬರ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ನವದೆಹಲಿಯಲ್ಲಿ ಇಂದು ನಡೆದಿದೆ.
ಝಿಲ್ಮಿಲ್ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯೊಳಗಿದ್ದ ಇಬ್ಬರು ಮಹಿಳೆಯರು ಸೇರಿ ಮೂರು ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೆಚ್ಚುವರಿ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ವೇದ್ ಪ್ರಕಾಶ್ ಸೂರ್ಯ ಹೇಳಿದರು.
ಘಟನಾ ಸ್ಥಳದಲ್ಲಿ ಸುಮಾರು 30 ಅಗ್ನಿಶಾಮಕ ವಾಹನಗಳಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.