ETV Bharat / bharat

ಪಕ್ಷಾಂತರಿಗಳಿಗೆ ಬಿಜೆಪಿ ಮಣೆ: ಮೂವರು ಕೈ ಶಾಸಕರಿಗೆ ಮಂತ್ರಿಗಿರಿ

author img

By

Published : Jul 13, 2019, 5:18 PM IST

ಕಳೆದ ಮೂರು ದಿನಗಳ ಹಿಂದೆ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ್ದ 10 ಮಂದಿ ಶಾಸಕರ ಪೈಕಿ ಮೂವರಿಗೆ ಗೋವಾ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಲಾಗಿದೆ.

ಪ್ರಮಾಣ ವಚನ ಸ್ವೀಕಾರ

ಪಣಜಿ (ಗೋವಾ): ಕೆಲ ದಿನಗಳ ಹಿಂದೆ ಗೋವಾದಲ್ಲಿ 10 ಜನ ಕಾಂಗ್ರೆಸ್​ ಶಾಸಕರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಪಕ್ಷಾಂತರವಾದ ಮೂರೇ ದಿನದಲ್ಲಿ ಈ ನಾಯಕರಿಗೆ ಬಿಜೆಪಿ, ಮಂತ್ರಿಪದವಿ ನೀಡಿ ಪುರಸ್ಕರಿಸಿದೆ.

ಕಾಂಗ್ರೆಸ್ ತೊರೆದು ಬಿಜೆಪಿಗೆ ಹಾರಿದ ಶಾಸಕರು ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಇದಾದ ಕೆಲ ಗಂಟೆಗಳಲ್ಲಿ ಗೋವಾ ಸಿಎಂ ಪ್ರಮೋದ್​ ಸಾವಂತ್​ ಆದಷ್ಟು ಬೇಗ ಗೋವಾ ಸಚಿವ ಸಂಪುಟ ವಿಸ್ತರಣೆಗೊಳ್ಳಲಿದೆ ಎಂದು ಹೇಳಿದ್ದರು. ಅದಾದ ಬಳಿಕ ತಮ್ಮ ಪಕ್ಷದ ಮೂವರು ಸಚಿವರಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು.

ಇದೀಗ ಸರಳ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಯಾಗಿ ಚಂದ್ರಕಾಂತ್​​ ಕವಲಿಕಾರ್ ಪ್ರತಿಜ್ಞೆ ಸ್ವೀಕರಿಸಿದ್ರೆ,​ ಜೆನ್ನಿಫರ್ ಮಾನ್‌ಸೆರೇಟ್ ಹಾಗೂ ಫಿಲಿಪೆ ರೊಡ್ರಿಗಸ್, ಮಾಜಿ ಉಪಸಭಾಪತಿ ಮೈಕೆಲ್ ಲೋಬೋ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಬಿಜೆಪಿಯ ವಿಜಯ್​​ ಸರ್ದೇಸಾಯಿ​, ವಿನೋದ್​ ಪಲಿಯೆಂಕಾರ್ ಹಾಗೂ ಜಯೇಶ್ ಸಾಲ್ಗೋಕರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಗೋವಾದ 10 ಮಂದಿ ಕಾಂಗ್ರೆಸ್ ಶಾಸಕರು ಬುಧವಾರ ಬಿಜೆಪಿ ಸೇರಿದ್ದರು. 40 ಸದಸ್ಯರ ಸದನದಲ್ಲಿ ಕಾಂಗ್ರೆಸ್‍ನ ಹತ್ತು ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರಿದ್ದು ಕಮಲ ಪಾಳಯದ ಬಲವನ್ನು 27ಕ್ಕೇರುವಂತೆ ಮಾಡಿದೆ. ಈ ಬೆನ್ನಲ್ಲೇ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂಪುಟ ಪುನಾರಚನೆಗೆ ಮುಂದಾಗಿದ್ದರು. ಇದೀಗ ಗೋವಾ ವಿಧಾನಸಭೆಯಲ್ಲಿ ಬಿಜೆಪಿ 27 ಸದಸ್ಯ ಬಲ ಹೊಂದಿದೆ.

ಪಣಜಿ (ಗೋವಾ): ಕೆಲ ದಿನಗಳ ಹಿಂದೆ ಗೋವಾದಲ್ಲಿ 10 ಜನ ಕಾಂಗ್ರೆಸ್​ ಶಾಸಕರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಪಕ್ಷಾಂತರವಾದ ಮೂರೇ ದಿನದಲ್ಲಿ ಈ ನಾಯಕರಿಗೆ ಬಿಜೆಪಿ, ಮಂತ್ರಿಪದವಿ ನೀಡಿ ಪುರಸ್ಕರಿಸಿದೆ.

ಕಾಂಗ್ರೆಸ್ ತೊರೆದು ಬಿಜೆಪಿಗೆ ಹಾರಿದ ಶಾಸಕರು ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಇದಾದ ಕೆಲ ಗಂಟೆಗಳಲ್ಲಿ ಗೋವಾ ಸಿಎಂ ಪ್ರಮೋದ್​ ಸಾವಂತ್​ ಆದಷ್ಟು ಬೇಗ ಗೋವಾ ಸಚಿವ ಸಂಪುಟ ವಿಸ್ತರಣೆಗೊಳ್ಳಲಿದೆ ಎಂದು ಹೇಳಿದ್ದರು. ಅದಾದ ಬಳಿಕ ತಮ್ಮ ಪಕ್ಷದ ಮೂವರು ಸಚಿವರಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು.

ಇದೀಗ ಸರಳ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಯಾಗಿ ಚಂದ್ರಕಾಂತ್​​ ಕವಲಿಕಾರ್ ಪ್ರತಿಜ್ಞೆ ಸ್ವೀಕರಿಸಿದ್ರೆ,​ ಜೆನ್ನಿಫರ್ ಮಾನ್‌ಸೆರೇಟ್ ಹಾಗೂ ಫಿಲಿಪೆ ರೊಡ್ರಿಗಸ್, ಮಾಜಿ ಉಪಸಭಾಪತಿ ಮೈಕೆಲ್ ಲೋಬೋ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಬಿಜೆಪಿಯ ವಿಜಯ್​​ ಸರ್ದೇಸಾಯಿ​, ವಿನೋದ್​ ಪಲಿಯೆಂಕಾರ್ ಹಾಗೂ ಜಯೇಶ್ ಸಾಲ್ಗೋಕರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಗೋವಾದ 10 ಮಂದಿ ಕಾಂಗ್ರೆಸ್ ಶಾಸಕರು ಬುಧವಾರ ಬಿಜೆಪಿ ಸೇರಿದ್ದರು. 40 ಸದಸ್ಯರ ಸದನದಲ್ಲಿ ಕಾಂಗ್ರೆಸ್‍ನ ಹತ್ತು ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರಿದ್ದು ಕಮಲ ಪಾಳಯದ ಬಲವನ್ನು 27ಕ್ಕೇರುವಂತೆ ಮಾಡಿದೆ. ಈ ಬೆನ್ನಲ್ಲೇ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂಪುಟ ಪುನಾರಚನೆಗೆ ಮುಂದಾಗಿದ್ದರು. ಇದೀಗ ಗೋವಾ ವಿಧಾನಸಭೆಯಲ್ಲಿ ಬಿಜೆಪಿ 27 ಸದಸ್ಯ ಬಲ ಹೊಂದಿದೆ.

Intro:Body:

ಕಾಂಗ್ರೆಸ್​ ಬಿಟ್ಟು ಕಮಲ ಮುಡಿದ ಮೂರೇ ದಿನಕ್ಕೆ ಮಂತ್ರಿಗಿರಿ... ಮೂವರು ಕೈ ಶಾಸಕರಿಗೆ ಸಂಪುಟದಲ್ಲಿ ಸ್ಥಾನ



ಪಣಜಿ: ಕಳೆದ ಮೂರು ದಿನಗಳ ಹಿಂದೆ ಗೋವಾದ 10 ಕಾಂಗ್ರೆಸ್​ ಶಾಸಕರು ಬಿಜೆಪಿ ಸೇರ್ಪಡೆಗೊಂಡಿದ್ದರು. ಪಕ್ಷಾಂತರವಾದ ಮೂರೇ ದಿನದಲ್ಲಿ ಅವರಿಗೆ ಬಿಜೆಪಿ ತನ್ನ ಸಚಿವ ಸಂಪುಟದಲ್ಲಿ ಮಂತ್ರಿಗಿರಿ ನೀಡಿದೆ. 



ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ ಅವರು ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿ ಮಾಡಿದ್ದರು. ಇದಾದ ಕೆಲ ಗಂಟೆಗಳಲ್ಲಿ ಗೋವಾ ಸಿಎಂ ಪ್ರಮೋದ್​ ಸಾವಂತ್​ ಆದಷ್ಟು ಬೇಗ ಗೋವಾ ಸಚಿವ ಸಂಪುಟ ವಿಸ್ತರಣೆಗೊಳ್ಳಲಿದೆ ಎಂಬ ಮಾತನ್ನು ಹೇಳಿದ್ದರು. ಅದಾದ ಬಳಿಕ ತಮ್ಮ ಪಕ್ಷದ ಮೂವರು ಸಚಿವರಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು. 



ಇದೀಗ ಸರಳ ಕಾರ್ಯಕ್ರಮದಲ್ಲಿ ಚಂದ್ರಕಾಂತ್​​ ಕವಲಿಕಾರ್​,ಜೆನ್ನಿಫರ್ ಮಾನ್‌ಸೆರೇಟ್ ಹಾಗೂ ಫಿಲಿಪೆ ರೊಡ್ರಿಗಸ್ ಹೊಸದಾಗಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಬಿಜೆಪಿಯ ವಿಜಯ್​​ ಸರ್​ದೇಸಾಯಿ, ವಿನೋದ್​ ಪಲಿಯೆಂಕಾರ್ ಹಾಗೂ ಜಯೇಶ್ ಸಾಲ್ಗೋಕರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.