ETV Bharat / bharat

ಪುಲ್ವಾಮಾದಲ್ಲಿ ನಾಲ್ವರು ಜೈಷೆ ಉಗ್ರರನ್ನು ಸಂಹರಿಸಿದ ಭದ್ರತಾಪಡೆ.. - undefined

ದಕ್ಷಿಣ ಕಾಶ್ಮೀರದ ಪುಲ್ವಾಮಾದ ಲಸ್ಸಿಪೊರಾದಲ್ಲಿ ನಿನ್ನೆ ಸಂಜೆಯಿಂದಲೇ ಭಾರತೀಯ ಸೇನೆ, ಪೊಲೀಸರು ಹಾಗೂ ಸಿಆರ್​​ಪಿಎಫ್​ ಪಡೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತು. ಇಂದು ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ.

Pulwama
author img

By

Published : Jun 7, 2019, 9:34 AM IST

ಶ್ರೀನಗರ: ಜಮ್ಮು-ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಗಿಳಿದ ಭದ್ರತಾ ಪಡೆ, ನಾಲ್ವರನ್ನು ಹೊಡೆದುರುಳಿಸಿದೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾದ ಲಸ್ಸಿಪೊರಾದಲ್ಲಿ ನಿನ್ನೆ ಸಂಜೆಯಿಂದಲೇ ಭಾರತೀಯ ಸೇನೆ, ಪೊಲೀಸರು ಹಾಗೂ ಸಿಆರ್​​ಪಿಎಫ್​ ಪಡೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತು. ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆ ದಾಳಿ ನಡೆಸಿದೆ. ಉಗ್ರರು ಹಾಗೂ ಭದ್ರತಾ ಪಡೆ ನಡುವೆ ನಿರಂತರವಾಗಿ ಗುಂಡಿನ ಕಾಳಗ ನಡೆದಿದೆ. ಇಂದು ಮೃತಪಟ್ಟ ಉಗ್ರರು ಜೈಷೆ ಮೊಹಮ್ಮದ್​ ಸಂಘಟನೆಗೆ ಸೇರಿದವರು ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಮೂರು 3 AK ರೈಫಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಕಾರ್ಯಾಚರಣೆ ಮುಂದುವರೆದಿದೆ.

ನಿನ್ನೆ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಆರ್ಮಿ ಜವಾನ್ ಮಂಜೂರ್​ ಅಹ್ಮದ್​ ಬೇಗ್ ಕೊನೆಯುಸಿರೆಳೆದಿದ್ದರು. ಇದಾದ ನಂತರ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿ, ಉಗ್ರರನ್ನು ಮಟ್ಟ ಹಾಕಿದೆ.

ಶ್ರೀನಗರ: ಜಮ್ಮು-ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಗಿಳಿದ ಭದ್ರತಾ ಪಡೆ, ನಾಲ್ವರನ್ನು ಹೊಡೆದುರುಳಿಸಿದೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾದ ಲಸ್ಸಿಪೊರಾದಲ್ಲಿ ನಿನ್ನೆ ಸಂಜೆಯಿಂದಲೇ ಭಾರತೀಯ ಸೇನೆ, ಪೊಲೀಸರು ಹಾಗೂ ಸಿಆರ್​​ಪಿಎಫ್​ ಪಡೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತು. ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆ ದಾಳಿ ನಡೆಸಿದೆ. ಉಗ್ರರು ಹಾಗೂ ಭದ್ರತಾ ಪಡೆ ನಡುವೆ ನಿರಂತರವಾಗಿ ಗುಂಡಿನ ಕಾಳಗ ನಡೆದಿದೆ. ಇಂದು ಮೃತಪಟ್ಟ ಉಗ್ರರು ಜೈಷೆ ಮೊಹಮ್ಮದ್​ ಸಂಘಟನೆಗೆ ಸೇರಿದವರು ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಮೂರು 3 AK ರೈಫಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಕಾರ್ಯಾಚರಣೆ ಮುಂದುವರೆದಿದೆ.

ನಿನ್ನೆ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಆರ್ಮಿ ಜವಾನ್ ಮಂಜೂರ್​ ಅಹ್ಮದ್​ ಬೇಗ್ ಕೊನೆಯುಸಿರೆಳೆದಿದ್ದರು. ಇದಾದ ನಂತರ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿ, ಉಗ್ರರನ್ನು ಮಟ್ಟ ಹಾಕಿದೆ.

Intro:Body:

Pulwama


Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.