ETV Bharat / bharat

ರಕ್ಷಿಸಲು ಬಾವಿಗೆ ಇಳಿದಿದ್ದ ಐವರ ದುರ್ಮರಣ... ಅಪಾಯಕ್ಕೆ ಸಿಲುಕಿದ್ದ ಕರು ಜೀವಂತ! - ವಿಷಕಾರಿ ಅನಿಲ ಸೇವಿಸಿ ಐವರು ಸಾವು

ಅಪಾಯಕ್ಕೆ ಸಿಲುಕಿದ್ದ ಕರುವನ್ನು ರಕ್ಷಿಸಲು ಬಾವಿಗೆ ಇಳಿದಿದ್ದ ಐವರು ದಾರುಣವಾಗಿ ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಗೋಂಡಾ ಜಿಲ್ಲೆಯಲ್ಲಿ ನಡೆದಿದೆ.

5 die trying to rescue calf from well
ಕರುವನ್ನು ರಕ್ಷಿಸಲು ಬಾವಿಗೆ ಜಿಗಿದ ಐವರ ದುರ್ಮರಣ
author img

By

Published : Sep 9, 2020, 9:07 AM IST

Updated : Sep 9, 2020, 11:42 AM IST

ಗೊಂಡಾ (ಉತ್ತರ ಪ್ರದೇಶ): ಕರುವನ್ನು ರಕ್ಷಿಸಲು ಬಾವಿಗೆ ಇಳಿದಿದ್ದ ಐದು ಮಂದಿ ವಿಷಕಾರಿ ಅನಿಲ ಸೇವಿಸಿದ ಪರಿಣಾಮ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

ಮಹಾರಾಜಗಂಜ್ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಮೃತಪಟ್ಟವರಲ್ಲಿ ಮೂವರು ಒಂದೇ ಕುಟುಂಬಕ್ಕೆ ಸೇರಿದ್ದಾರೆ. ಬಾವಿಗೆ ಬಿದ್ದಿದ್ದ ಕರುವನ್ನು ರಕ್ಷಿಸಲು ಈ ಮೂವರು ವ್ಯಕ್ತಿಗಳು ಬಾವಿಗೆ ಇಳಿದಿದ್ದರು. ಮೂವರು ಮುಳುಗಿದ ನಂತರ ಇವರನ್ನು ರಕ್ಷಿಸಲು ಇನ್ನಿಬ್ಬರು ಬಾವಿಗೆ ಇಳಿದಿದ್ದಾರೆ.

ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳವನ್ನು ಕರೆಸಿ ಮೃತದೇಹಗಳನ್ನು ಹೊರ ತೆಗೆಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ದುರ್ಘಟನೆ ನಡುವೆಯೂ ಕರುವನ್ನು ಜೀವಂತವಾಗಿ ಹೊರ ತರಲಾಗಿದೆ ಎಂದು ಜಿಲ್ಲಾಧಿಕಾರಿ ನಿತಿನ್ ಬನ್ಸಾಲ್ ತಿಳಿಸಿದ್ದಾರೆ.

ಗೊಂಡಾ (ಉತ್ತರ ಪ್ರದೇಶ): ಕರುವನ್ನು ರಕ್ಷಿಸಲು ಬಾವಿಗೆ ಇಳಿದಿದ್ದ ಐದು ಮಂದಿ ವಿಷಕಾರಿ ಅನಿಲ ಸೇವಿಸಿದ ಪರಿಣಾಮ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

ಮಹಾರಾಜಗಂಜ್ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಮೃತಪಟ್ಟವರಲ್ಲಿ ಮೂವರು ಒಂದೇ ಕುಟುಂಬಕ್ಕೆ ಸೇರಿದ್ದಾರೆ. ಬಾವಿಗೆ ಬಿದ್ದಿದ್ದ ಕರುವನ್ನು ರಕ್ಷಿಸಲು ಈ ಮೂವರು ವ್ಯಕ್ತಿಗಳು ಬಾವಿಗೆ ಇಳಿದಿದ್ದರು. ಮೂವರು ಮುಳುಗಿದ ನಂತರ ಇವರನ್ನು ರಕ್ಷಿಸಲು ಇನ್ನಿಬ್ಬರು ಬಾವಿಗೆ ಇಳಿದಿದ್ದಾರೆ.

ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳವನ್ನು ಕರೆಸಿ ಮೃತದೇಹಗಳನ್ನು ಹೊರ ತೆಗೆಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ದುರ್ಘಟನೆ ನಡುವೆಯೂ ಕರುವನ್ನು ಜೀವಂತವಾಗಿ ಹೊರ ತರಲಾಗಿದೆ ಎಂದು ಜಿಲ್ಲಾಧಿಕಾರಿ ನಿತಿನ್ ಬನ್ಸಾಲ್ ತಿಳಿಸಿದ್ದಾರೆ.

Last Updated : Sep 9, 2020, 11:42 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.