ಮುಂಬೈ: ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ಅವರು ನಟಿ ಕಂಗನಾ ರನೌತ್ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಇಂದು ಮುಂಬೈ ಕೋರ್ಟ್ ಅವರಿಗೆ ಸಮನ್ಸ್ ನೀಡಿದೆ.
ಜಾವೇದ್ ಅಖ್ತರ್ ಅವರು ಈ ಹಿಂದೆ ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಬಗ್ಗೆ ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಹೆಚ್ಚಿನ ತನಿಖೆ ಅಗತ್ಯವಿದೆ ಎಂದು ಹೇಳಿದ ಹಿನ್ನೆಲೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಈ ಪ್ರಕರಣದ ತನಿಖೆ ನಡೆಸುವಂತೆ ಡಿಸೆಂಬರ್ನಲ್ಲಿ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ರವರು ಜುಹೂ ಪೊಲೀಸರಿಗೆ ನಿರ್ದೇಶನ ನೀಡಿದ್ದರು. ಬಳಿಕ ನ್ಯಾಯಾಲಯಕ್ಕೆ ವರದಿ ಸಲ್ಲಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುವ ಅವಶ್ಯಕತೆ ಇದೆ ಎಂದು ಹೇಳಿದ್ದರು.
ಓದಿ: ಶೂಟಿಂಗ್ನಿಂದ ಬ್ರೇಕ್ ಪಡೆದು ಗೆಳತಿಯರೊಂದಿಗೆ ಟ್ರಿಪ್ ಹೊರಟ ಮೋಕ್ಷಿತಾ
ಈ ವರದಿಯನ್ನು ಪರಿಶೀಲಿಸಿದ ಮ್ಯಾಜಿಸ್ಟ್ರೇಟ್ ಆರ್.ಆರ್ ಖಾನ್ ಅವರು, ಕಂಗನಾ ರಣಾವತ್ಗೆ ಸಮನ್ಸ್ ಜಾರಿ ಮಾಡಿದ್ದಾರೆ. ಮುಂದಿನ ವಿಚಾರಣೆಯ ದಿನಾಂಕವನ್ನು ಮಾರ್ಚ್ 1 ಕ್ಕೆ ನಿಗದಿ ಪಡಿಸಲಾಗಿದೆ.