ETV Bharat / bharat

7 ವರ್ಷಗಳ ಬಳಿಕ ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗುತ್ತಿದೆ: ನಿರ್ಭಯಾ ತಾಯಿ

author img

By

Published : Mar 19, 2020, 7:18 PM IST

ಏಳು ವರ್ಷಗಳ ಬಳಿಕ ನನ್ನ ಮಗಳಿಗೆ ನ್ಯಾಯ ಹಾಗೂ ಅವಳ ಆತ್ಮಕ್ಕೆ ಶಾಂತಿ ಸಿಗುತ್ತಿದೆ ಎಂದು ನಿರ್ಭಯಾ ತಾಯಿ ಆಶಾದೇವಿ ಹೇಳಿದ್ದಾರೆ.

Nirbhaya's mother
ನಿರ್ಭಯಾ ತಾಯಿ ಆಶಾದೇವಿ

ನವದೆಹಲಿ: ದೇಶವನ್ನೇ ಬೆಚ್ಚಿಬೀಳಿಸಿದ್ದ 2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ನಾಳೆ ಮುಂಜಾನೆ ಗಲ್ಲು ಶಿಕ್ಷೆಯಾಗುತ್ತಿದ್ದು, ನಿರ್ಭಯಾ ತಾಯಿ ಆಶಾದೇವಿ ನಿಟ್ಟುಸಿರು ಬಿಟ್ಟಿದ್ದಾರೆ.

ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆಗೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಕೋರ್ಟ್​​ ತಿರಸ್ಕರಿಸಿದ ಬಳಿಕ ಮಾತನಾಡಿದ ಆಶಾದೇವಿ, ಏಳು ವರ್ಷಗಳ ಬಳಿಕ ನನ್ನ ಮಗಳಿಗೆ ನ್ಯಾಯ ಹಾಗೂ ಅವಳ ಆತ್ಮಕ್ಕೆ ಶಾಂತಿ ಸಿಗುತ್ತಿದೆ. ನನಗೆ ಈಗ ನೆಮ್ಮದಿ ಸಿಗಲಿದೆ ಎಂದು ಹೇಳಿದರು.

ಪ್ರಕರಣದ ನಾಲ್ವರು ಅಪರಾಧಿಗಳಾದ ಮುಖೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್​ರ ಕುತ್ತಿಗೆಗೆ ನಾಳೆ ಬೆಳಗ್ಗೆ 5.30ಕ್ಕೆ ಕುಣಿಕೆ ಬೀಳಲಿದೆ.

ನವದೆಹಲಿ: ದೇಶವನ್ನೇ ಬೆಚ್ಚಿಬೀಳಿಸಿದ್ದ 2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ನಾಳೆ ಮುಂಜಾನೆ ಗಲ್ಲು ಶಿಕ್ಷೆಯಾಗುತ್ತಿದ್ದು, ನಿರ್ಭಯಾ ತಾಯಿ ಆಶಾದೇವಿ ನಿಟ್ಟುಸಿರು ಬಿಟ್ಟಿದ್ದಾರೆ.

ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆಗೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಕೋರ್ಟ್​​ ತಿರಸ್ಕರಿಸಿದ ಬಳಿಕ ಮಾತನಾಡಿದ ಆಶಾದೇವಿ, ಏಳು ವರ್ಷಗಳ ಬಳಿಕ ನನ್ನ ಮಗಳಿಗೆ ನ್ಯಾಯ ಹಾಗೂ ಅವಳ ಆತ್ಮಕ್ಕೆ ಶಾಂತಿ ಸಿಗುತ್ತಿದೆ. ನನಗೆ ಈಗ ನೆಮ್ಮದಿ ಸಿಗಲಿದೆ ಎಂದು ಹೇಳಿದರು.

ಪ್ರಕರಣದ ನಾಲ್ವರು ಅಪರಾಧಿಗಳಾದ ಮುಖೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್​ರ ಕುತ್ತಿಗೆಗೆ ನಾಳೆ ಬೆಳಗ್ಗೆ 5.30ಕ್ಕೆ ಕುಣಿಕೆ ಬೀಳಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.