ETV Bharat / bharat

ಉತ್ತರ ಪ್ರದೇಶದಿಂದ ರಾಜ್ಯಸಭೆಗೆ 10 ಅಭ್ಯರ್ಥಿಗಳ ಅವಿರೋಧ ಆಯ್ಕೆ, ಬಿಜೆಪಿಗೆ 8 ಸ್ಥಾನ - Samajwadi Party

ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಬಿಜೆಪಿಯ 8, ಬಹುಜನ​ ಸಮಾಜ ಪಕ್ಷದ (ಬಿಎಸ್‌ಪಿ) ಒಬ್ಬರು ಹಾಗೂ ಸಮಾಜವಾದಿ ಪಕ್ಷದ (ಎಸ್‌ಪಿ) ಒಬ್ಬರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

All 10 candidates to the RajyaSabha have been elected unopposed
ರಾಜ್ಯಸಭೆ
author img

By

Published : Nov 2, 2020, 6:03 PM IST

ಲಖನೌ: ಉತ್ತರ ಪ್ರದೇಶದಿಂದ ರಾಜ್ಯಸಭೆಗೆ 10 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನವೆಂಬರ್​ 9 ರಂದು ರಾಜ್ಯದಲ್ಲಿ ಒಟ್ಟು 11 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದ್ದು, ಬಿಎಸ್‌ಪಿ ಅಭ್ಯರ್ಥಿಯೊಬ್ಬರು ನಾಮಪತ್ರ ಹಿಂಪಡೆದುಕೊಂಡಿದ್ದರಿಂದ ಉಳಿದ 10 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದೀಗ ಆಯ್ಕೆಯಾದವರಲ್ಲಿ ಬಿಜೆಪಿಯ 8, ಬಹುಜನ​ ಸಮಾಜ ಪಕ್ಷದ (ಬಿಎಸ್‌ಪಿ) ಒಬ್ಬರು ಹಾಗೂ ಸಮಾಜವಾದಿ ಪಕ್ಷದ (ಎಸ್‌ಪಿ) ಒಬ್ಬರು ಅಭ್ಯರ್ಥಿಗಳಿದ್ದಾರೆ.

ಬಿಎಸ್‌ಪಿ ಅಭ್ಯರ್ಥಿ ನಾಮಪತ್ರ ಹಿಂಪಡೆದುಕೊಳ್ಳಲು ಕಾರಣ:

ಚುನಾವಣಾ ಕಣದಲ್ಲಿದ್ದ ಬಿಎಸ್‌ಪಿ ಅಭ್ಯರ್ಥಿ ವಿರುದ್ಧ ಪಕ್ಷದ ಶಾಸಕರೇ ಬಂಡಾಯವೆದ್ದು, ಬೆಂಬಲವನ್ನು ಹಿಂತೆಗೆದುಕೊಂಡಿದ್ದರು. ಹೀಗಾಗಿ ಅವರು ನಾಮಪತ್ರ ಹಿಂಪಡೆದುಕೊಂಡಿದ್ದಾರೆ. ಏಳು ರೆಬೆಲ್​ ಶಾಸಕರನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅಮಾನತುಗೊಳಿಸಿದ್ದು, ಇದರ ಹಿಂದೆ ಸಮಾಜವಾದಿ ಪಕ್ಷದ ಕೈವಾಡವಿದೆ ಎಂದು ದೂರಿದ್ದಾರೆ.

ಲಖನೌ: ಉತ್ತರ ಪ್ರದೇಶದಿಂದ ರಾಜ್ಯಸಭೆಗೆ 10 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನವೆಂಬರ್​ 9 ರಂದು ರಾಜ್ಯದಲ್ಲಿ ಒಟ್ಟು 11 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದ್ದು, ಬಿಎಸ್‌ಪಿ ಅಭ್ಯರ್ಥಿಯೊಬ್ಬರು ನಾಮಪತ್ರ ಹಿಂಪಡೆದುಕೊಂಡಿದ್ದರಿಂದ ಉಳಿದ 10 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದೀಗ ಆಯ್ಕೆಯಾದವರಲ್ಲಿ ಬಿಜೆಪಿಯ 8, ಬಹುಜನ​ ಸಮಾಜ ಪಕ್ಷದ (ಬಿಎಸ್‌ಪಿ) ಒಬ್ಬರು ಹಾಗೂ ಸಮಾಜವಾದಿ ಪಕ್ಷದ (ಎಸ್‌ಪಿ) ಒಬ್ಬರು ಅಭ್ಯರ್ಥಿಗಳಿದ್ದಾರೆ.

ಬಿಎಸ್‌ಪಿ ಅಭ್ಯರ್ಥಿ ನಾಮಪತ್ರ ಹಿಂಪಡೆದುಕೊಳ್ಳಲು ಕಾರಣ:

ಚುನಾವಣಾ ಕಣದಲ್ಲಿದ್ದ ಬಿಎಸ್‌ಪಿ ಅಭ್ಯರ್ಥಿ ವಿರುದ್ಧ ಪಕ್ಷದ ಶಾಸಕರೇ ಬಂಡಾಯವೆದ್ದು, ಬೆಂಬಲವನ್ನು ಹಿಂತೆಗೆದುಕೊಂಡಿದ್ದರು. ಹೀಗಾಗಿ ಅವರು ನಾಮಪತ್ರ ಹಿಂಪಡೆದುಕೊಂಡಿದ್ದಾರೆ. ಏಳು ರೆಬೆಲ್​ ಶಾಸಕರನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅಮಾನತುಗೊಳಿಸಿದ್ದು, ಇದರ ಹಿಂದೆ ಸಮಾಜವಾದಿ ಪಕ್ಷದ ಕೈವಾಡವಿದೆ ಎಂದು ದೂರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.