ETV Bharat / bharat

ಜೂನ್‌ 8 ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಆಂಧ್ರ ಸರ್ಕಾರ ಅನುಮತಿ - ದೇವರ ದರ್ಶನಕ್ಕೆ ಅನುಮತಿ

ಕಳೆದ ಎರಡೂವರೆ ತಿಂಗಳಿಂದ ಸ್ಥಗಿತವಾಗಿದ್ದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಆಂಧ್ರ ಸರ್ಕಾರ ಅನುಮತಿ ನೀಡಿದೆ. ಜೂನ್‌ 8 ರಿಂದ ಪ್ರಾಯೋಗಿಕವಾಗಿ ಸ್ಥಳೀಯರಿಗೆ ಅವಕಾಶ ಕಲ್ಪಿಸಲಾಗಿದೆ.

ap-governmentstate-permitted-for-darshans-in-tirumala
ಜೂನ್‌ 8 ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಆಂಧ್ರ ಸರ್ಕಾರ ಅನುಮತಿ
author img

By

Published : Jun 2, 2020, 5:26 PM IST

ಅಮರಾವತಿ(ಆಂಧ್ರಪ್ರದೇಶ): ಎರಡೂವರೆ ತಿಂಗಳಿನಿಂದ ಸ್ಥಗಿತವಾಗಿದ್ದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಆಂಧ್ರ ಪ್ರದೇಶ ಸರ್ಕಾರ ಅನುಮತಿ ನೀಡಿದೆ. ಪ್ರಾಯೋಗಿಕವಾಗಿ ಸ್ಥಳೀಯರಿಗೆ ದೇವರ ದರ್ಶನಕ್ಕೆ ಅವಕಾಶ ನೀಡುವ ನಿರ್ಣಯವನ್ನು ಸರ್ಕಾರ ಕೈಗೊಂಡಿದೆ.

ದರ್ಶನದ ವೇಳೆ ಭಕ್ತರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಹೇಳಿದೆ. ಟಿಟಿಡಿ ಇಒ ಬರೆದ ಪತ್ರಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿ ಈ ನಿರ್ಧಾರವನ್ನು ಕೈಗೊಂಡಿದೆ.

ಲಾಕ್‌ಡೌನ್‌ ಸಡಿಲಿಕೆಯ ಭಾಗವಾಗಿ ಜೂನ್ 8 ರಿಂದ ದೇವಸ್ಥಾನ ಹಾಗೂ ಪ್ರಾರ್ಥನಾ ಮಂದಿರಗಳಿಗೆ ಭಕ್ತರ ಪ್ರವೇಶಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಹೀಗಾಗಿ ಮುಂದಿನ ಸೋಮವಾರದಿಂದ ತಿರುಪತಿ ದೇವಸ್ಥಾನದ ಬಾಗಿಲು ತೆರೆಯಲಾಗುತ್ತಿದೆ. ಮೇ 12 ರಂದು ಟಿಟಿಡಿ ಇಒ ಅನಿಲ್‌ ಕುಮಾರ್‌, ಅಲ್ಲಿನ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಅಮರಾವತಿ(ಆಂಧ್ರಪ್ರದೇಶ): ಎರಡೂವರೆ ತಿಂಗಳಿನಿಂದ ಸ್ಥಗಿತವಾಗಿದ್ದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಆಂಧ್ರ ಪ್ರದೇಶ ಸರ್ಕಾರ ಅನುಮತಿ ನೀಡಿದೆ. ಪ್ರಾಯೋಗಿಕವಾಗಿ ಸ್ಥಳೀಯರಿಗೆ ದೇವರ ದರ್ಶನಕ್ಕೆ ಅವಕಾಶ ನೀಡುವ ನಿರ್ಣಯವನ್ನು ಸರ್ಕಾರ ಕೈಗೊಂಡಿದೆ.

ದರ್ಶನದ ವೇಳೆ ಭಕ್ತರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಹೇಳಿದೆ. ಟಿಟಿಡಿ ಇಒ ಬರೆದ ಪತ್ರಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿ ಈ ನಿರ್ಧಾರವನ್ನು ಕೈಗೊಂಡಿದೆ.

ಲಾಕ್‌ಡೌನ್‌ ಸಡಿಲಿಕೆಯ ಭಾಗವಾಗಿ ಜೂನ್ 8 ರಿಂದ ದೇವಸ್ಥಾನ ಹಾಗೂ ಪ್ರಾರ್ಥನಾ ಮಂದಿರಗಳಿಗೆ ಭಕ್ತರ ಪ್ರವೇಶಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಹೀಗಾಗಿ ಮುಂದಿನ ಸೋಮವಾರದಿಂದ ತಿರುಪತಿ ದೇವಸ್ಥಾನದ ಬಾಗಿಲು ತೆರೆಯಲಾಗುತ್ತಿದೆ. ಮೇ 12 ರಂದು ಟಿಟಿಡಿ ಇಒ ಅನಿಲ್‌ ಕುಮಾರ್‌, ಅಲ್ಲಿನ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.